Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಶೆಡ್ ನಲ್ಲಿ ವಾಸಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇನ್ನೂ ಕೆಲವರು ಗಂಭೀರ ಗಾಯಗೊಂಡಿರುವ ವಿಚಾರ ತಿಳಿದು ಆಘಾತವಾಯಿತು. ಕೂಲಿ ಅರಸಿ ದೂರದ ಊರಿನಿಂದ ಬಂದು ನೆಲೆಸಿದ್ದ ಬಡಕುಟುಂಬವೊಂದು ಹೀಗೆ ದುರಂತ ಅಂತ್ಯ ಕಂಡಿದ್ದು ದುರದೃಷ್ಟಕರ.
ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಪರಿಹಾರ ಕಾರ್ಯ ಕೈಗೊಳ್ಳುವ ಜೊತೆಗೆ ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವನ್ನು ಒದಗಿಸುವಂತೆ ಸೂಚನೆ ನೀಡಿದ್ದೇನೆ.
Breaking News ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬದವರ ಜೊತೆ ಸರ್ಕಾರ ನಿಲ್ಲಲಿದೆ ಎಂದು ಉಪಮುಖ್ಯಮಂತ್ರಿಗಳೂ ಹಾಗು ರಾಜ್ಯದ ಕಂದಾಯ ಇಲಾಖಾ ಸಚಿವರಾಗಿರುವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
