Monday, September 21, 2026
Monday, September 21, 2026

ಅಂಜನಾಪುರ ಜಲಾಶಯಕ್ಕೆ ಮತ್ತೆ ಜೀವಕಳೆ

Date:

ಶಿವಮೊಗ್ಗ ಜಿಲ್ಲೆಯ ನಿರಂತರ ವರ್ಷಧಾರೆಯಿಂದ ಶಿಕಾರಿಪುರ ತಾಲೂಕಿನ ಪ್ರಮುಖ ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ಸುಮಾರು 1.80 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಜಲಾಶಯಕ್ಕೆ ಹೊಸನಗರ ತಾಲೂಕಿನಲ್ಲಿ ಹುಟ್ಟುವ ಕುಮದ್ವತಿ ನದಿಯಿಂದ ಸಾಕಷ್ಟು ನೀರು ಹರಿದು ಬಂದಿದೆ.

ಶಿಕಾರಿಪುರ ಪಟ್ಟಣಕ್ಕೆ ಕುಡಿಯುವ ನೀರಿನ ಪ್ರಮುಖ ಮೂಲವಾಗಿರುವ ಅಂಜನಾಪುರ ಜಲಾಶಯ, ತಾಲೂಕಿನ ಸಾವಿರಾರು ಎಕರೆ ಕೃಷಿ ಭೂಮಿಗೂ ಜೀವದಾಯಿನಿಯಾಗಿದೆ. ಜಲಾಶಯ ಭರ್ತಿಯಾಗಿರುವುದು ರೈತರಿಗೆ ಹೊಸ ಆಶಾಕಿರಣ ಮೂಡಿಸಿದ್ದು, ಈ ಬಾರಿಯ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಡ್ಯಾಂನ ಗೇಟ್‌ಗಳಿಂದ ನೀರು ಧುಮ್ಮಿಕ್ಕಿ ಹರಿಯುತ್ತಿದ್ದು, ಮನಮೋಹಕ ದೃಶ್ಯವನ್ನು ಸೃಷ್ಟಿಸಿದೆ.

ಶಿಕಾರಿಪುರ ತಾಲೂಕಿನ ಮೂಲಕ ಹರಿದು ಹಾವೇರಿ ಜಿಲ್ಲೆಯ ಮದಗದ ಕೆರೆಗೆ ಸೇರುವ ಈ ಜಲಾಶಯ ಇದೀಗ ಸಂಪೂರ್ಣ ಭರ್ತಿಯಾಗಿರುವುದು ಸಾರ್ವಜನಿಕರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.

ಇದೇ ವೇಳೆ, ಇಂದು ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅಂಜನಾಪುರ ಜಲಾಶಯಕ್ಕೆ ಭೇಟಿ ನೀಡಿ, ಬಾಗೀನ ಅರ್ಪಿಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...