Monday, August 3, 2026
Monday, August 3, 2026

ಅಂಜನಾಪುರ ಜಲಾಶಯಕ್ಕೆ ಮತ್ತೆ ಜೀವಕಳೆ

Date:

ಶಿವಮೊಗ್ಗ ಜಿಲ್ಲೆಯ ನಿರಂತರ ವರ್ಷಧಾರೆಯಿಂದ ಶಿಕಾರಿಪುರ ತಾಲೂಕಿನ ಪ್ರಮುಖ ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ಸುಮಾರು 1.80 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಈ ಜಲಾಶಯಕ್ಕೆ ಹೊಸನಗರ ತಾಲೂಕಿನಲ್ಲಿ ಹುಟ್ಟುವ ಕುಮದ್ವತಿ ನದಿಯಿಂದ ಸಾಕಷ್ಟು ನೀರು ಹರಿದು ಬಂದಿದೆ.

ಶಿಕಾರಿಪುರ ಪಟ್ಟಣಕ್ಕೆ ಕುಡಿಯುವ ನೀರಿನ ಪ್ರಮುಖ ಮೂಲವಾಗಿರುವ ಅಂಜನಾಪುರ ಜಲಾಶಯ, ತಾಲೂಕಿನ ಸಾವಿರಾರು ಎಕರೆ ಕೃಷಿ ಭೂಮಿಗೂ ಜೀವದಾಯಿನಿಯಾಗಿದೆ. ಜಲಾಶಯ ಭರ್ತಿಯಾಗಿರುವುದು ರೈತರಿಗೆ ಹೊಸ ಆಶಾಕಿರಣ ಮೂಡಿಸಿದ್ದು, ಈ ಬಾರಿಯ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಡ್ಯಾಂನ ಗೇಟ್‌ಗಳಿಂದ ನೀರು ಧುಮ್ಮಿಕ್ಕಿ ಹರಿಯುತ್ತಿದ್ದು, ಮನಮೋಹಕ ದೃಶ್ಯವನ್ನು ಸೃಷ್ಟಿಸಿದೆ.

ಶಿಕಾರಿಪುರ ತಾಲೂಕಿನ ಮೂಲಕ ಹರಿದು ಹಾವೇರಿ ಜಿಲ್ಲೆಯ ಮದಗದ ಕೆರೆಗೆ ಸೇರುವ ಈ ಜಲಾಶಯ ಇದೀಗ ಸಂಪೂರ್ಣ ಭರ್ತಿಯಾಗಿರುವುದು ಸಾರ್ವಜನಿಕರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.

ಇದೇ ವೇಳೆ, ಇಂದು ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅಂಜನಾಪುರ ಜಲಾಶಯಕ್ಕೆ ಭೇಟಿ ನೀಡಿ, ಬಾಗೀನ ಅರ್ಪಿಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...