ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 14ರಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿರುವ “ಸ್ವದೇಶಿ ಮಂತ್ರ – 2026” ವಿಶೇಷ ದೇಶಭಕ್ತಿ ಕಾರ್ಯಕ್ರಮದ ಯಶಸ್ವಿ ಆಯೋಜನೆ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ, ಸಿದ್ಧತೆಗಳು, ಸಂಘಟನೆಗಳ ಸಮನ್ವಯ ಹಾಗೂ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ಆಯೋಜಿಸುವ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಯುವಶಕ್ತಿಯಲ್ಲಿ ದೇಶಭಾವನೆ ಮೂಡಿಸುವುದು, ಸ್ವದೇಶಿ ಉತ್ಪನ್ನಗಳ ಬಳಕೆಗೆ ಉತ್ತೇಜನ ನೀಡುವುದು ಹಾಗೂ ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರ ಪಾತ್ರ ಮತ್ತು ಜವಾಬ್ದಾರಿಯ ಅರಿವು ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಆಶಯವಾಗಿದೆ.
ಈ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ. ಎಸ್. ಷಡಾಕ್ಷರಿ, ಕ್ರಾಂತಿದೀಪ ಮಂಜುನಾಥ್, ಸತೀಶ್ ಶೆಟ್ರು, ನಮ್ಮನಾಡು ಶಿವಕುಮಾರ್, ವೈದ್ಯನಾಥ್, ಶ್ರೀಪಾಲ್, ಮಂಜುನಾಥ್, ಆರ್. ಮೋಹನ್ ಕುಮಾರ್, ಬಳ್ಳೇಕೆರೆ ಸಂತೋಷ್, ವಸಂತ್, ವನ್ನಪ ಸಮನ್ವಯ ಕಾಶಿ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
