Sunday, August 9, 2026
Sunday, August 9, 2026

ಆಗಸ್ಟ್ 10 ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಹಕ್ಕೊತ್ತಾಯ,ಬೃಹತ್ ಪ್ರತಿಭಟನೆ

Date:

ಶಿವಮೊಗ್ಗ ನಗರದ ವಿವಿಧ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ತೀವ್ರ ಪ್ರತಿಭಟನೆಗೆ ಕರೆ ನೀಡಿದೆ.

ಆಗಸ್ಟ್ 10ರಂದು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗದ ನೆಹರು ರಸ್ತೆಯಲ್ಲಿರುವ ಶಾಸಕರ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸುವಂತೆ ಒಕ್ಕೂಟ ಮನವಿ ಮಾಡಿದೆ.

ಶಿವಮೊಗ್ಗ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು ಪ್ರತಿಭಟನೆಯ ಪ್ರಮುಖ ಆಗ್ರಹವಾಗಿದೆ. ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಅಭಾವ ಮತ್ತು ಕಲುಷಿತ ನೀರಿನ ಸಮಸ್ಯೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ನಗರದ ಅಗತ್ಯಕ್ಕೆ ತಕ್ಕಂತೆ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ಕುಡಿಯುವ ಶುದ್ಧ ನೀರು ನಾಗರಿಕರ ಮೂಲಭೂತ ಹಕ್ಕಾಗಿದ್ದು, ಈ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಿ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಜಲಮಂಡಳಿಯನ್ನು ಒತ್ತಾಯಿಸಲಾಗಿದೆ.

ಇದರ ಜೊತೆಗೆ, ಸುಮಾರು 300 ಕೋಟಿ ರೂಪಾಯಿ ವೆಚ್ಚದಲ್ಲಿ ಯುಜಿ ಕೇಬಲ್ ಅಳವಡಿಕೆ ಪೂರ್ಣಗೊಂಡಿದ್ದರೂ, ಸ್ಮಾರ್ಟ್ ಸಿಟಿ ವ್ಯಾಪ್ತಿಯಲ್ಲಿ ಉಳಿದಿರುವ ಹಳೆಯ ಮತ್ತು ಅಪಾಯಕಾರಿಯಾದ ವಿದ್ಯುತ್ ಕಂಬಗಳನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಇ-ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ತಕ್ಷಣ ಮುಕ್ತಗೊಳಿಸಬೇಕು ಎಂಬುದು ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ.

ಅದೇ ರೀತಿ, ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಕಾಮಗಾರಿಗಳಲ್ಲಿ ಕಂಡುಬಂದಿರುವ ಲೋಪ-ದೋಷಗಳನ್ನು ಪತ್ತೆಹಚ್ಚಿ, ತಕ್ಷಣ ಸೂಕ್ತ ರೀತಿಯಲ್ಲಿ ದುರಸ್ತಿ ಮಾಡಿ ಸರಿಪಡಿಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ಖಾತೆ ಬದಲಾವಣೆ ಶುಲ್ಕವನ್ನೂ ನಿಯಮಬದ್ಧಗೊಳಿಸಬೇಕು ಎಂದು ಆಗ್ರಹಿಸಲಾಗಿದೆ. ಸರ್ಕಾರದ ಸುತ್ತೋಲೆಯ ಪ್ರಕಾರವೇ ಪಾಲಿಕೆಯಲ್ಲಿ ಶುಲ್ಕ ವಸೂಲಿ ಮಾಡಬೇಕು ಹಾಗೂ ಸಾರ್ವಜನಿಕರಿಂದ ಹೆಚ್ಚುವರಿಯಾಗಿ ವಸೂಲಿ ಮಾಡಿರುವ ಹಣವನ್ನು ತಕ್ಷಣವೇ ವಾಪಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಇನ್ನು, ಸಾರ್ವಜನಿಕ ರಸ್ತೆಯಲ್ಲಿ ಎಸ್‌ಯುಡಿಎ ನಿರ್ಮಿಸಿರುವ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗಿದೆ.

ಈ ಎಲ್ಲ ಸಮಸ್ಯೆಗಳ ಕುರಿತು ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಶಾಸಕರು ಹಾಗೂ ಜಿಲ್ಲಾಡಳಿತದಿಂದ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿರುವ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ, ಸರ್ಕಾರ ಮತ್ತು ಜಿಲ್ಲಾಡಳಿತದ ಗಮನ ಸೆಳೆಯಲು ಪ್ರತಿಭಟನೆ ನಡೆಸುತ್ತಿದೆ.

“ಈ ಹೋರಾಟ ನಮ್ಮಿಗಾಗಿ, ನಮ್ಮ ನಗರದಿಗಾಗಿ ಎಂದು ಕರೆ ನೀಡಿರುವ ನಾಗರಿಕ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್, ಪ್ರಜ್ಞಾವಂತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...