Friday, August 21, 2026
Friday, August 21, 2026

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

Date:

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು ನೀರು ಕುಡಿಯುವುದರಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪರಿಪೂರ್ಣ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಸತೀಶ್ ಚಂದ್ರ ಹೇಳಿದರು.

ಪರಿಪೂರ್ಣ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿಕ್ಕೋನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೀರಿನ ಬಾಟಲಿಗಳನ್ನು ವಿತರಿಸಿ ಮಾತನಾಡಿ, ಶಾಲೆಗೆ ಮಕ್ಕಳು ನೀರು ತೆಗೆದುಕೊಂಡು ಬರುವ ಅಭ್ಯಾಸದಿಂದ ಸ್ವಚ್ಛತೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳು ದಿನವಿಡೀ ಚುರುಕಾಗಿ ಇರಲು, ಓದಿನಲ್ಲೂ ಗಮನ ಕೇಂದ್ರೀಕರಿಸಲು ನೀರು ಕುಡಿಯುವ ಅಭ್ಯಾಸ ಮುಖ್ಯವಾಗಿದೆ ಎಂದು ತಿಳಿಸಿದರು.

ಟ್ರಸ್ಟ್ ವತಿಯಿಂದ ವಿವಿಧ ಶಾಲೆಗಳ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ತಲುಪಿಸುವ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ನೀರಿನ ಬಾಟಲಿಗಳನ್ನು ವಿತರಿಸಲಾಗುತ್ತಿದೆ. ಇಂತಹ ಸಣ್ಣ ಸಹಾಯವೂ ಮಕ್ಕಳಿಗೆ ಉಪಯೋಗವಾಗಬೇಕು ಎಂಬುದೇ ಟ್ರಸ್ಟ್ ನ ಉದ್ದೇಶ ಎಂದು ಹೇಳಿದರು.

ಪರಿಪೂರ್ಣ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ. ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಸಮಾಜಮುಖಿ ಕೆಲಸಗಳನ್ನು ಟ್ರಸ್ಟ್ ಮೂಲಕ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ನಿವೃತ್ತ ಮುಖ್ಯ ಶಿಕ್ಷಕ ಬಸವರಾಜ ಹಿರೇಮಠ ಮಾತನಾಡಿ, ಶಾಲೆಯಲ್ಲಿ 1ರಿಂದ 5ನೇ ತರಗತಿಯವರೆಗೆ ಮಕ್ಕಳು ಇದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗೆ ಹೆಚ್ಚಿನ ಶಿಕ್ಷಕರನ್ನು ನಿಯೋಜಿಸುವ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ರೋಹಿಣಿ, ಗ್ರಾಮದ ಮುಖಂಡ ಮಂಜಪ್ಪ ಹಾಗೂ ಗಣ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...