Sunday, August 23, 2026
Sunday, August 23, 2026

B.Y. Raghavendra ಭ್ರಷ್ಠಾಚಾರ ಆರೋಪಿ ಸಚಿವ‌ ನಾಗೇಂದ್ರ ಅವರನ್ನ ವಜಾ ಮಾಡಿ – ಸಂಸದ ಬಿ.ವೈ.ರಾಘವೇಂದ್ರ

Date:

B.Y. Raghavendra ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಬೃಹತ್‌ ಹಣ ದುರುಪಯೋಗ ಹಾಗೂ ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ, ಭಾರತೀಯ ಜನತಾ ಪಾರ್ಟಿ – ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾದ ಅನಿರ್ದಿಷ್ಟಾವಧಿ ನಿರಂತರ ಧರಣಿ ಸತ್ಯಾಗ್ರಹದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.

​ಸಾಮಾಜಿಕ ನ್ಯಾಯಕ್ಕೆ ಮಾರಕವಾಗಿರುವ ಮತ್ತು ಸಾರ್ವಜನಿಕರ ಹಣವನ್ನು ಕೊಳ್ಳೆ ಹೊಡೆದಿರುವ ಭ್ರಷ್ಟರಿಗೆ ರಾಜಕೀಯ ರಕ್ಷಣೆ ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ರಾಘವೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನ ಟೀಕಿಸಿದರು .
ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ಪಾರದರ್ಶಕ ತನಿಖೆಯಾಗಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವವರೆಗೆ ಮತ್ತು ಭ್ರಷ್ಟ ಸಚಿವರ ವಜಾ ಆಗುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿ.ವೈ.ರಾಘವೇಂದ್ರ ಘೋಷಿಸಿದರು.

​ಈ ಧರಣಿ ಸತ್ಯಾಗ್ರಹದಲ್ಲಿ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...