ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 191 ನೇ ಸ್ಮರಣೋತ್ಸವ ಅಂಗವಾಗಿ ಅವರ ಪುತ್ತಳಿಕೆಗೆ ಸಿಎಂ ಬೊಮ್ಮಾಯಿಯವರು ಮಾಲಾರ್ಪಣೆ ಮಾಡಿದರು.
ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ ವೆಚ್ಚದ ಬೃಹತ್ ಮಿಲಿಟರಿ ಶಾಲೆಯ ಪ್ರಾರಂಭಿಸಲಿದೆ ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದ್ದಾರೆ.
“ಬೃಹತ್ ಮಿಲಿಟರಿ ಶಾಲೆ ಪ್ರಾರಂಭಿಸಲು 55 ಕೋಟಿ ರೂಗಳನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ ಈ ವರ್ಷ ಶಾಲೆಯ ಕಾಮಗಾರಿ ಪೂರ್ಣಗೊಳ್ಳಲಿದೆ ಸಂಪೂರ್ಣ ಇಲಾಖೆ ಶಾಲೆಯ ಉಸ್ತುವಾರಿ ವಹಿಸಿಕೊಳ್ಳಲು ಮಾತುಕತೆ ನಡೆದಿದೆ. ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುತ್ತದೆ” ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದರು.
ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಂಗೊಳ್ಳಿರಾಯಣ್ಣನ ಭಾವಚಿತ್ರ ಹಾಕಿಸಲು ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ರಸ್ತೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡುವ ಸಂಸದ ಪಿ.ಸಿ.ಮೋಹನ್ ಅವರ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ದಿಲ್ಲಿಯಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗಿದೆ. ಬೆಳಗಾವಿ ಸುವರ್ಣ ಸೌಧದ ಮುಂದೆ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಕಾಗಿನೆಲೆ ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಅಶೋಕ್ ಸಂಸದ ಪಿಸಿ ಮೋಹನ್ ಮಾಜಿ ಶಾಸಕರಾದ ವಾಟಾಳ್ ನಾಗರಾಜ್ ಇದ್ದಂತೆ ಹಲವು ನಾಯಕರು ಉಪಸ್ಥಿತರಿದ್ದರು.