Thursday, August 20, 2026
Thursday, August 20, 2026

Shivamogga District Consumer Disputes Redressal Commission ಗ್ರಾಹಕರ ಅನುಮತಿಯಿಲ್ಲದೇ ಖಾತೆಯಿಂದ ಹಣ ಕಟಾವಣೆ : ಸೇವಾ ನ್ಯೂನತೆ ಪರಿಗಣಿಸಿ ಬ್ಯಾಂಕಿಗೆ ದಂಡ ವಿಧಿಸಿ ತೀರ್ಪು

Date:

Shivamogga District Consumer Disputes Redressal Commission ಗ್ರಾಹಕರ ಅನುಮತಿಯಿಲ್ಲದೆ ಖಾತೆಯಿಂದ ಹಣ ಕಡಿತಗೊಂಡು, ದೂರು ನೀಡಿದರೂ ಬಾಕಿ ಹಣ ಹಿಂತಿರುಗಿಸದೆ ಸೇವಾ ನ್ಯೂನತೆ ಎಸಗಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವಿರುದ್ಧ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪು ನೀಡಿದ್ದು, ಬಡ್ಡಿ ಸಮೇತ ಹಣ ಪಾವತಿಸಲು ಮತ್ತು ದಂಡ ವಿಧಿಸಿ ಆದೇಶಿಸಿದೆ.

ಪ್ರಕರಣದ ವಿವರ:
ಶಿವಮೊಗ್ಗ ನಗರದ ನಂದಿನಿ ಬಡಾವಣೆಯ ನಿವಾಸಿ ಶ್ರೀಮತಿ ಜೂಲಿ ಎಸ್.ಪಿ. ಅವರು ವಿನೋಬನಗರದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಉಳಿತಾಯ ಖಾತೆ ಹೊಂದಿದ್ದರು. 2024 ರ ಮೇ 3, ರಂದು ಅವರ ಖಾತೆಯಿಂದ ಮೂರು ಬಾರಿ ವ್ಯವಹಾರ ನಡೆದು ಒಟ್ಟು ರೂ.7,00,000 ಕಡಿತವಾಗಿರುವ ಬಗ್ಗೆ ಮೊಬೈಲ್‌ಗೆ ಸಂದೇಶ ಬಂದಿತ್ತು. ತಾವು ಯಾವುದೇ ಒಟಿಪಿ ಹಂಚಿಕೊಳ್ಳದಿದ್ದರೂ ಹಾಗೂ ಯಾವುದೇ ವ್ಯವಹಾರ ಮಾಡದಿದ್ದರೂ ಹಣ ಕಡಿತವಾಗಿದ್ದರಿಂದ, ದೂರುದಾರರು ತಕ್ಷಣವೇ ಬ್ಯಾಂಕ್ ವ್ಯವಸ್ಥಾಪಕರನ್ನು ಸಂಪರ್ಕಿಸಿ ಹಣ ಮರುಜಮೆ ಮಾಡುವಂತೆ ಮನವಿ ಮಾಡಿದ್ದರು.

ಬ್ಯಾಂಕ್‌ ಕಡೆಯಿಂದ ಸೂಕ್ತ ಸ್ಪಂದನೆ ಸಿಗದಿದ್ದಾಗ, ಅವರು 2024 ರ ಅಕ್ಟೋಬರ್ 25 ರಂದು ಕಾನೂನು ನೋಟೀಸ್ ನೀಡಿದ್ದರು. ತದನಂತರ ಬ್ಯಾಂಕ್ 2024 ರ ನವೆಂಬರ್ 30 ರಂದು ರೂ.2,33,333 ಗಳನ್ನು ಮಾತ್ರ ದೂರುದಾರರ ಖಾತೆಗೆ ಜಮಾ ಮಾಡಿ, ಉಳಿದ ಮೊತ್ತವನ್ನು ಹಿಂತಿರುಗಿಸಿರಲಿಲ್ಲ. ಈ ಕುರಿತು ಗ್ರಾಹಕರು ಶಿವಮೊಗ್ಗ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಆಯೋಗದ ತೀರ್ಪು;
ದೂರುದಾರರು ಸಲ್ಲಿಸಿದ ಪ್ರಮಾಣಪತ್ರ, ದಾಖಲೆಗಳು ಹಾಗೂ ಉಭಯ ಪಕ್ಷಗಳ ವಾದ-ವಿವಾದಗಳನ್ನು ಆಲಿಸಿದ ಆಯೋಗವು ಬ್ಯಾಂಕ್ ಕಡೆಯಿಂದ ಸೇವಾ ನ್ಯೂನತೆಯಾಗಿದೆ ಎಂದು ತೀರ್ಮಾನಿಸಿ, ಭಾಗಶಃ ದೂರು ಪುರಸ್ಕರಿಸಿ ಆ. 14 ರಂದು ಆದೇಶ ಹೊರಡಿಸಿದೆ.
Shivamogga District Consumer Disputes Redressal Commission ಬ್ಯಾಂಕ್‌ನಿಂದ ಗ್ರಾಹಕರಿಗೆ ಬರಬೇಕಾದ ಬಾಕಿ ಮೊತ್ತ ರೂ.4,66,667 ಗಳನ್ನು 2024 ರ ಅಕ್ಟೋಬರ್ 25 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ. 8 ರಷ್ಟು ಬಡ್ಡಿಯೊಂದಿಗೆ 45 ದಿನಗಳ ಒಳಗೆ ಪಾವತಿಸಬೇಕು.
ನಷ್ಟ ಪರಿಹಾರ: ಮಾನಸಿಕ ಕಿರುಕುಳ ಮತ್ತು ವೇದನೆಗಾಗಿ ರೂ.25,000 ಹಾಗೂ ವ್ಯಾಜ್ಯದ ವೆಚ್ಚವಾಗಿ ರೂ.10,000 ಗಳನ್ನು 45 ದಿನಗಳ ಒಳಗೆ ಪಾವತಿಸತಕ್ಕದ್ದು.

ನಿಗದಿತ 45 ದಿನಗಳ ಒಳಗೆ ಮೊತ್ತ ಪಾವತಿಸಲು ವಿಫಲವಾದಲ್ಲಿ, ಸಂಪೂರ್ಣ ಮೊತ್ತಕ್ಕೆ ವಾರ್ಷಿಕ ಶೇ. 10 ರಷ್ಟು ಬಡ್ಡಿ ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವುದು ಕಡ್ಡಾಯ.
ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ. ಯೋಗಾನಂದ ಭಾಂಡ್ಯ ಅವರಿದ್ದ ಪೀಠವು ಈ ಆದೇಶ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...