Friday, October 4, 2024
Friday, October 4, 2024

ಅತಿಥಿ ಉಪನ್ಯಾಸಕರ ನೇಮಕಾತಿ: ಆನ್ ಲೈನ್ ಕೌನ್ಸಿಲಿಂಗ್ ಆರಂಭ

Date:

ಜುಲೈ 27 ರಿಂದ ಜನವರಿ 30ರ ವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಆನ್ಲೈನ್ ಕೌನ್ಸಿಲಿಂಗ್ ಅನ್ನು ಕಾಲೇಜು ಶಿಕ್ಷಣ ಇಲಾಖೆ ಆಯೋಜಿಸಿದೆ. ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಿಗೆ ಒಟ್ಟು 10,636 ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಹೇಳಿದ್ದಾರೆ.

ಅಭ್ಯರ್ಥಿಗಳ ಜೇಷ್ಠತೆ ಆಧಾರದ ಮೇಲೆ ತಮಗೆ ಬೇಕಾದ ಕಾಲೇಜನ್ನು ಕೌನ್ಸಿಲಿಂಗ್ ನಲ್ಲಿ ಆಯ್ಕೆಮಾಡಿಕೊಳ್ಳಬಹುದು ಬಳಿಕ ತಮ್ಮ ಕಚೇರಿಯಿಂದ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಪಿ.ಪ್ರದೀಪ್ ಹೇಳಿದ್ದಾರೆ.

ಕೌನ್ಸಿಲಿಂಗ್ ಮುಗಿದ ಎರಡು ದಿನಗಳಲ್ಲಿ ತಮಗೆ ಸೂಚಿಸಿದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ವರದಿ ಮಾಡಿಕೊಳ್ಳಬೇಕಾಗುತ್ತದೆ ಈ ವೇಳೆ ಮೂಲ ದಾಖಲೆಗಳನ್ನು ಪರಿಶೀಲನೆ ಒಪ್ಪಿಸಿ ಕರ್ತವ್ಯಕ್ಕೆ ಹಾಜರಾಗಬೇಕು. ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದರೆ ಅಂತಹವರನ್ನು ಬಿಡಲಾಗುವುದು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದರು.

“ಒಟ್ಟು 47 ವಿಷಯಗಳಲ್ಲಿ ವಾರಕ್ಕೆ 15 ಗಂಟೆಗಳ ಬೋಧನೆಯ ಪೂರ್ಣ ಕಾರ್ಯಭಾರವಿರುವ 7,225 ಮತ್ತು ಭಾಗಶಃ ಕಾರ್ಯಭಾರವಿರುವ 3,411 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

“ವಾಣಿಜ್ಯ ವಿಷಯ ಬೋಧನೆಗೆ 1,830 ಮಂದಿ, ಕನ್ನಡ 1,008, ಇತಿಹಾಸ 675, ಇಂಗ್ಲಿಷ್ 736, ಸಮಾಜಶಾಸ್ತ್ರ 526, ಅರ್ಥಶಾಸ್ತ್ರ 620, ಬಿಸಿನೆಸ್ ಮ್ಯಾನೇಜ್ಮೆಂಟ್ 490, ಕಂಪ್ಯೂಟರ್ ಸೈನ್ಸ್ 910, ಭೌತಶಾಸ್ತ್ರ 562, ರಾಜ್ಯಶಾಸ್ತ್ರ 602, ರಸಾಯನಶಾಸ್ತ್ರ 663, ಗಣಿತ 492, ಪ್ರಾಣಿಶಾಸ್ತ್ರ 198, ಸಸ್ಯಶಾಸ್ತ್ರ 212, ಮನೋವಿಜ್ಞಾನ 54, ಪರಿಸರವಿಜ್ಞಾನ 53, ಸಮಾಜಕಾರ್ಯ 80, ಉರ್ದು ಭಾಷಾ ವಿಷಯಗಳಿಗೆ ಸಂಬಂಧಿಸಿದ 78 ಹುದ್ದೆಗಳು ಲಭ್ಯವಿದೆ” ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...