Sunday, August 23, 2026
Sunday, August 23, 2026

ಅತಿಥಿ ಉಪನ್ಯಾಸಕರ ನೇಮಕಾತಿ: ಆನ್ ಲೈನ್ ಕೌನ್ಸಿಲಿಂಗ್ ಆರಂಭ

Date:

ಜುಲೈ 27 ರಿಂದ ಜನವರಿ 30ರ ವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಆನ್ಲೈನ್ ಕೌನ್ಸಿಲಿಂಗ್ ಅನ್ನು ಕಾಲೇಜು ಶಿಕ್ಷಣ ಇಲಾಖೆ ಆಯೋಜಿಸಿದೆ. ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಿಗೆ ಒಟ್ಟು 10,636 ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಹೇಳಿದ್ದಾರೆ.

ಅಭ್ಯರ್ಥಿಗಳ ಜೇಷ್ಠತೆ ಆಧಾರದ ಮೇಲೆ ತಮಗೆ ಬೇಕಾದ ಕಾಲೇಜನ್ನು ಕೌನ್ಸಿಲಿಂಗ್ ನಲ್ಲಿ ಆಯ್ಕೆಮಾಡಿಕೊಳ್ಳಬಹುದು ಬಳಿಕ ತಮ್ಮ ಕಚೇರಿಯಿಂದ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಪಿ.ಪ್ರದೀಪ್ ಹೇಳಿದ್ದಾರೆ.

ಕೌನ್ಸಿಲಿಂಗ್ ಮುಗಿದ ಎರಡು ದಿನಗಳಲ್ಲಿ ತಮಗೆ ಸೂಚಿಸಿದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ವರದಿ ಮಾಡಿಕೊಳ್ಳಬೇಕಾಗುತ್ತದೆ ಈ ವೇಳೆ ಮೂಲ ದಾಖಲೆಗಳನ್ನು ಪರಿಶೀಲನೆ ಒಪ್ಪಿಸಿ ಕರ್ತವ್ಯಕ್ಕೆ ಹಾಜರಾಗಬೇಕು. ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದರೆ ಅಂತಹವರನ್ನು ಬಿಡಲಾಗುವುದು ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದರು.

“ಒಟ್ಟು 47 ವಿಷಯಗಳಲ್ಲಿ ವಾರಕ್ಕೆ 15 ಗಂಟೆಗಳ ಬೋಧನೆಯ ಪೂರ್ಣ ಕಾರ್ಯಭಾರವಿರುವ 7,225 ಮತ್ತು ಭಾಗಶಃ ಕಾರ್ಯಭಾರವಿರುವ 3,411 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

“ವಾಣಿಜ್ಯ ವಿಷಯ ಬೋಧನೆಗೆ 1,830 ಮಂದಿ, ಕನ್ನಡ 1,008, ಇತಿಹಾಸ 675, ಇಂಗ್ಲಿಷ್ 736, ಸಮಾಜಶಾಸ್ತ್ರ 526, ಅರ್ಥಶಾಸ್ತ್ರ 620, ಬಿಸಿನೆಸ್ ಮ್ಯಾನೇಜ್ಮೆಂಟ್ 490, ಕಂಪ್ಯೂಟರ್ ಸೈನ್ಸ್ 910, ಭೌತಶಾಸ್ತ್ರ 562, ರಾಜ್ಯಶಾಸ್ತ್ರ 602, ರಸಾಯನಶಾಸ್ತ್ರ 663, ಗಣಿತ 492, ಪ್ರಾಣಿಶಾಸ್ತ್ರ 198, ಸಸ್ಯಶಾಸ್ತ್ರ 212, ಮನೋವಿಜ್ಞಾನ 54, ಪರಿಸರವಿಜ್ಞಾನ 53, ಸಮಾಜಕಾರ್ಯ 80, ಉರ್ದು ಭಾಷಾ ವಿಷಯಗಳಿಗೆ ಸಂಬಂಧಿಸಿದ 78 ಹುದ್ದೆಗಳು ಲಭ್ಯವಿದೆ” ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...