ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರತಿ ವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳ-2026 ರಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಿದ್ದು, ವಿಶ್ವವಿದ್ಯಾಲಯದ ವ್ಯಾಪ್ತಿಯ ಆರು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳ ಪ್ರಗತಿಪರ ರೈತ/ರೈತ ಮಹಿಳೆಯರು ಅರ್ಜಿ ಆಹ್ವಾನಿಲಾಗಿದೆ.
ಅರ್ಜಿಸಲ್ಲಿಸಿದ ರೈತ/ರೈತ ಮಹಿಳೆಯರಲ್ಲಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಮತ್ತು ಒಬ್ಬ ರೈತಮಹಿಳೆಯನ್ನು ಆಯ್ಕೆಮಾಡಿ, ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು, ಈ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪ್ರದಾನ ಮಾಡಲಾಗುವುದು.
ಆಸಕ್ತ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ಕೃಷಿ ವಿಜ್ಞಾನಕೇಂದ್ರಗಳು ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅರ್ಜಿ ಪಡೆಯಬಹುದು ಅಥವಾ https://www.uahs.edu.in/ ನಲ್ಲಿ ಲಭ್ಯವಿರುವ ಅರ್ಜಿ ತೆಗೆದುಕೊಂಡು ಭರ್ತಿಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ:10/09/2026 ರ ಒಳಗೆ ತಲುಪುವಂತೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆಗಳಾದ ಶಿವಮೊಗ್ಗ- 94808 38976, ದಾವಣಗೆರೆ 94808 38209, ಚಿಕ್ಕಮಗಳೂರು 94808 38203, ಉಡುಪಿ 94808 38202, ಚಿತ್ರದುರ್ಗ 94808 38201, ದಕ್ಷಿಣಕನ್ನಡ 87947 06468 ಗಳನ್ನು ಸಂಪರ್ಕಿಸುವಂತೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ತಿಳಿಸಿರುತ್ತಾರೆ.
ಶಿವಮೊಗ್ಗ ಜಿಲ್ಲಾ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
Date:
