Tuesday, August 25, 2026
Tuesday, August 25, 2026

ಈದ್ ಮಿಲಾದ್ ಆಚರಣೆ ವೇಳೆ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 26 ರಂದು ಜಿಲ್ಲಾದ್ಯಂತ ಈದ್ ಮಿಲಾದ್ ಹಬ್ಬ ನಡೆಯಲಿದ್ದು, ಮೆರವಣಿಗೆಯ ಸಮಯದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಸಿಡಿಮದ್ದುಗಳನ್ನು ಬಳಸುವುದರಿಂದ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಹಾಗೂ ಇತರ ಧರ್ಮೀಯರ ಭಾವನೆಗಳಿಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ.
ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಆಗಸ್ಟ್ 25 ರಿಂದ ಆಗಸ್ಟ್ 28 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...