Karnataka Janapada Academy ಕರ್ನಾಟಕ ಜಾನಪದ ಅಕಾಡೆಮಿಯು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗಾಗಿ “ಜಾನಪದ ಸಂಗಮ” ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದು, ಜಾನಪದ ಕಲಾಪ್ರಕಾರದ ಉಚಿತ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಜನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು ಮತ್ತು ಬುಡಕಟ್ಟು ಜನರನ್ನು ಒಳಗೊಂಡ ಈ ಕಾರ್ಯಕ್ರಮವನ್ನು ರಾಜ್ಯದ 4 ವಿಭಾಗಗಳಲ್ಲಿ ಆಯೋಜಿಸಲಾಗುತ್ತಿದೆ.
16 ರಿಂದ 40 ವರ್ಷ ವಯೋಮಾನದ ಪರಿಶಿಷ್ಟ ಪಂಗಡದ (ST) ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.16-09-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು
ಅರ್ಜಿ ನಮೂನೆಯನ್ನು ಅಕಾಡೆಮಿಯ ಅಧಿಕೃತ ವೆಬ್ಸೈಟ್ https://janapada.karnataka.gov.in ನಿಂದ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು “ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು – 560002” ಈ ವಿಳಾಸಕ್ಕೆ 16-09-2026 ರೊಳಗಾಗಿ ತಲುಪಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಇ-ಮೇಲ್ registrar.janapada@gmail.com ಅಥವಾ ದೂರವಾಣಿ ಸಂಖ್ಯೆ 080-22215509 ಅನ್ನು ಸಂಪರ್ಕಿಸಬಹುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ಎನ್ ನಮ್ರತಾ ತಿಳಿಸಿದ್ದಾರೆ.
Karnataka Janapada Academy “ಜಾನಪದ ಸಂಗಮ” ಯೋಜನೆಯಡಿ ಪರಿಶಿಷ್ಟ ಪಂಗಡದ ಜನಪದ ಕಲಾವಿದರು, ವಿದ್ವಾಂಸರು,ಗಾಯಕರಾಗಲು ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನ
Date:
