Saturday, August 29, 2026
Saturday, August 29, 2026

ಗ್ರಾಮೀಣ ಅಂಚೆ ಪಾಲಕ – ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Date:

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ ಒಟ್ಟು 55 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು18 ರಿಂದ 40 ವರ್ಷ (ಮೀಸಲಾತಿ ವರ್ಗಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ)ದೊಳಗಿನವರಾಗಿದ್ದು, 10 ನೇ ತರಗತಿ ಉತ್ತೀರ್ಣರಾಗಿರಬೇಕು. ಗಣಿತ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು ಹಾಗೂ 10ನೇ ತರಗತಿಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು.
10ನೇ ತರಗತಿಯ ಅಂಕಗಳ ಆಧಾರದ ಮೇಲೆ ಆನ್‌ಲೈನ್ ಮೂಲಕವೇ ನೇಮಕಾತಿ ನಡೆಯಲಿದೆ.
ಅರ್ಜಿ ನೋಂದಣಿಗೆ ಕೊನೆಯ ದಿನಾಂಕ: 21.09.2026 ಆಗಿದ್ದು, ಅರ್ಜಿ ತಿದ್ದುಪಡಿ ಹಾಗೂ ಶುಲ್ಕ ಪಾವತಿಗೆ ದಿನಾಂಕ: 23.09.2026 ರಿಂದ 24.09.2026 ಅವಕಾಶವಿರುತ್ತದೆ.
ಅರ್ಹ ಅಭ್ಯರ್ಥಿಗಳು https://indiapost.gov.in/gdsonlineengagement ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಅಥವಾ ಶಿವಮೊಗ್ಗ ವಿಭಾಗದ ಅಂಚೆ ಕಚೇರಿ ಹಾಗೂಸಂಪರ್ಕ ಸಂಖ್ಯೆ: 08182-222835 / 222516 ಸಂಪರ್ಕಿಸಬಹುದು ಎಂದು‌ ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರ

B.Y. Vijayendra ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ನಾನು...

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...