ತೀರ್ಥಹಳ್ಳಿ ನಗರ ಭಾಗದಿಂದ ತೀರ್ಥಹಳ್ಳಿಗೆ ಆಗಮಿಸುವ ಬಸ್ ವ್ಯವಸ್ಥೆ ಸರಿ ಇಲ್ಲದೆ ಇರುವುದರಿಂದ ಸರ್ಕಾರಿ ಬಸ್ ವ್ಯವಸ್ಥೆ ಮಾಡಲಾಗಿತ್ತು ಆದರೆ ಅದು ಸಹ ಸರಿಯಾದ ಸಮಯಕ್ಕೆ ಬರುತ್ತಿಲ್ಲ ನಮಗೆ ಶಾಲೆಗೆ ಹೋಗಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ರಸ್ತೆ ಮಧ್ಯದಲ್ಲೇ ಕುಳಿತು ಪ್ರತಿಭಟನೆ ನಡೆಸಿದಂತಹ ಘಟನೆ ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಬಳಿ ನಡೆದಿದೆ..
ನಗರದಿಂದ ಸರಿ ಸುಮಾರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀರ್ಥಹಳ್ಳಿಯ ಬೇರೆ ಬೇರೆ ಶಾಲೆ -ಕಾಲೇಜುಗಳಿಗೆ ಬರುತ್ತಿದ್ದು
ನಗರದಿಂದ ಹೊರಡುವ ಬಸ್ ತೀರ್ಥಹಳ್ಳಿಗೆ 10:30 ಕ್ಕೆ ಬರುತ್ತಿದೆ. ಇದರಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗುತ್ತಿದೆ.. ನಗರದಿಂದ 8:30 ಕ್ಕೆ ಹೊರಟು ತೀರ್ಥಹಳ್ಳಿಗೆ 9:30ಕ್ಕೆ ಬರುವ ರೀತಿಯಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ..
ಪ್ರತಿಭಟನೆಯಲ್ಲಿ ಮಾತನಾಡಿದ ವಿದ್ಯಾರ್ಥಿನಿಯೊಬ್ಬರು ಈಗ ಬರುತ್ತಿರುವ ಬಸ್ ಸಮಯದಲ್ಲಿ ಶಾಲೆಗೆ ತೆರಳಲು ತೊಂದರೆಯಾಗುತ್ತಿದೆ.. ಬಸ್ ಸಮಯದಲ್ಲಿ ಸರಿಯಾದ ಬದಲಾವಣೆ ಮಾಡಿ ಎಲ್ಲಾ ವಿದ್ಯಾರ್ಥಿಗಳಿಗೂ ತೊಂದರೆಯಾಗದ ರೀತಿಯಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಜೊತೆಗೆ ಮತ್ತೊಂದು ಬಸ್ ಓಡಾಡುವ ರೀತಿ ಮಾಡಿದರೆ ಅನುಕೂಲ ಆಗುತ್ತದೆ ಎಂದು ತಿಳಿಸಿದ್ದಾರೆ..
ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಜೊತೆಗೆ ಪೋಷಕರು ಸೇರಿದಂತೆ ಶಿಕ್ಷಕರು ಇದ್ದರು.
