Friday, September 11, 2026
Friday, September 11, 2026

ಅರಣ್ಯ ಇಲಾಖೆಯ ಹುತಾತ್ಮ ಸಿಬ್ಬಂದಿಗಳ ತ್ಯಾಗ ಮರೆಯಲಾಗದು- ನ್ಯಾ.ಜಿ.ಎ.ಮಂಜುನಾಥ

Date:

ಅರಣ್ಯ, ವನ್ಯಜೀವಿ ಮತ್ತು ನೈಸರ್ಗಿಕ ಸಂಪತ್ತನ್ನು ಸಂರಕ್ಷಿಸುವ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಾ ಹುತಾತ್ಮರಾದ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರ ತ್ಯಾಗವನ್ನು ಮರೆಯಲಾಗದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಮಂಜುನಾಥ ಜಿ.ಎ. ಅವರು ಹೇಳಿದರು.
ಅವರು ಇಂದು ಅರಣ್ಯ ಇಲಾಖೆಯು ನಗರದ ಶ್ರೀಗಂಧದ ಕೋಠಿಯಲ್ಲಿರುವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವುದು ಸಾಮಾನ್ಯ ವಿಷಯವೇನಲ್ಲ. ಅನೇಕ ಸಂಘರ್ಷಗಳು ಕಾಣುತ್ತವೆ. ಅರಣ್ಯದಲ್ಲಿನ ಕೆಲಸ ಕಚೇರಿಯಲ್ಲಿನ ಕೆಲಸಕ್ಕಿಂತ ಭಿನ್ನವಾದುದು. ಕಾರ್ಯಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆ-ಸವಾಲುಗಳನ್ನು ಎದುರಿಸಲು ಚಾಣಾಕ್ಷತೆ, ಕಠಿಣ ನಿರ್ಧಾರ, ಗಟ್ಟಿ ಗುಂಡಿಗೆ ಇರಬೇಕು ಎಂದ ಅವರು, ನಾಲ್ಕು ಗೋಡೆಗಳ ನಡುವಿನ ಸಮಸ್ಯೆಯನ್ನು ಎದುರಿಸಬಹುದು. ಆದರೆ, ಹೊರಗಿನ ಸಮಸ್ಯೆಗಳ ಇತ್ಯರ್ಥಕ್ಕೆ ಕೌಶಲ್ಯ, ವೃತ್ತಿಪರತೆ ಇರಬೇಕು. ಇವೆಲ್ಲವೂ ಅರಿತಿದ್ದು, ಸಾವು-ನೋವುಗಳು ನಡೆಯುವುದು ಮನುಷ್ಯನ ಬದುಕನ್ನು ಆತಂಕಕ್ಕೆ ತಳ್ಳುತ್ತದೆ. ನೆಮ್ಮದಿ ಕಳೆದು ಹೋಗುತ್ತದೆ ಎಂದವರು ನುಡಿದರು.
ಎಲ್ಲಾ ವಾಸ್ತವ ಸತ್ಯಗಳನ್ನು ಅರಿತ ನಾವು ಮೌಲಿಕವಾದ ವನ ಸಂಪತ್ತನ್ನು ಉಳಿಸಿ, ಬೆಳೆಸದೆ ಹೋದರೆ ಅದೊಂದು ಸಾಮಾಜಿಕ ದುರಂತವಲ್ಲದೇ ಮತ್ತೇನೂ ಅಲ್ಲ. ಅರಣ್ಯದ ನಾಶ ಎಂದರೆ ಅದು ಮನುಕುಲದ ವಿನಾಶವೇ ಸರಿ ಎಂದ ಅವರು, ಅರಣ್ಯ ರಕ್ಷಣೆಯಲ್ಲಿ ಕಾರ್ಯನಿರತ 65ಸಿಬ್ಬಂದಿಗಳು ಹುತಾತ್ಮರಾಗಿದ್ದು, ಅತ್ಯಂತ ನೋವಿನ ಸಂಗತಿ. ಅವರೆಲ್ಲರನ್ನು ಸ್ಮರಿಸಿಕೊಂಡು ಶ್ರದ್ಧಾಂಜಲಿ ಅರ್ಪಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ.ಹನುಮಂತಪ್ಪ ಅವರು ಮಾತನಾಡಿ, ಅರಣ್ಯ ಹುತಾತ್ಮರ ತ್ಯಾಗವು ಕೇವಲ ಇಲಾಖೆಯ ಕರ್ತವ್ಯನಿಷ್ಠೆಯ ಸಂಕೇತವಲ್ಲ; ಅದು ಪರಿಸರ ಸಂರಕ್ಷಣೆ, ಜೀವವೈವಿಧ್ಯ ರಕ್ಷಣೆ ಮತ್ತು ಭವಿಷ್ಯದ ಪೀಳಿಗೆಯ ಹಿತಕ್ಕಾಗಿ ಮಾಡಿದ ಸೇವೆಯ ಪ್ರತೀಕವಾಗಿದೆ ಎಂದರು.
ಅರಣ್ಯ ಸಂರಕ್ಷಣೆಯಲ್ಲಿ ಎದುರಾಗುವ ಅಪಾಯಗಳು, ಕಾಡುಗಳ ಮಹತ್ವ ಹಾಗೂ ವನ್ಯಜೀವಿಗಳ ರಕ್ಷಣೆಯ ಅಗತ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದುದು ಇಂದಿನ ತುರ್ತು ಅಗತ್ಯ. ಅರಣ್ಯ ಸಂಪತ್ತು ಮಾನವನಿಗೆ ಶುದ್ಧ ಗಾಳಿ, ನೀರು, ಮಳೆ, ಔಷಧೀಯ ಸಸ್ಯಗಳು ಹಾಗೂ ಜೀವವೈವಿಧ್ಯವನ್ನು ಒದಗಿಸುವ ಅರಣ್ಯವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದರು.
ಅರಣ್ಯ ಹುತಾತ್ಮರನ್ನು ಸ್ಮರಿಸುವ ಈ ಸಂದರ್ಭದಲ್ಲಿ ಅವರ ಧೈರ್ಯ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಮತ್ತು ತ್ಯಾಗದ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಬೇಕು. ಅರಣ್ಯ ಸಿಬ್ಬಂದಿಯ ಸೇವೆಗೆ ಗೌರವ ಸಲ್ಲಿಸುವುದರ ಜೊತೆಗೆ, ಅರಣ್ಯ ನಾಶ, ಅಕ್ರಮ ಬೇಟೆ ಮತ್ತು ಅವ್ಯಾಹತವಾಗಿ ಅಕ್ರಮವಾಗಿ ಮರಗಳ ಹನನ ಮಾಡುವುದರ ವಿರುದ್ಧ ಸಮಾಜ ಜಾಗೃತವಾಗಬೇಕು ಎಂದ ಅವರು, ಹುತಾತ್ಮರ ಕುಟುಂಬಕ್ಕೆ ಇಲಾಖೆ ನೆರವಾಗಿದೆ. ಸರ್ಕಾರವೂ ಕೂಡ ಕಾನೂನು ಬದ್ಧವಾಗಿ ನೆರವಿಗೆ ಬರಲಿದೆ. ಅಂತೆಯೇ ಜಿಲ್ಲಾಡಳಿತ ಮತ್ತು ಪೊಲೀಸ್ಇಲಾಖೆಯ ಸಹಕಾರ ನಿರಂತರವಾಗಿದ್ದು, ಅಧಿಕಾರಿ-ಸಿಬ್ಬಂಧಿಗಳಲ್ಲಿ ಆತ್ಮವಿಶ್ವಾಸ ಮತ್ತು ಬಲತುಂಬುವ ಮೂಲಕ ಪ್ರಕೃತಿ ನೈಜ ರಕ್ಷಣೆಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನಕೃಷ್ಣ ಪಟಗಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಹುತಾತ್ಮ ಹೆಸರನ್ನು ವಾಚಿಸಿ ಸ್ಮರಿಸಿದರು. ಮೂರು ವಿಶಾಲ ತೋಪುಗಳನ್ನು ಹಾರಿಸುವ ಮೂಲಕ ಹಾಗೂ ಪುಷ್ಪಗುಚ್ಛ ಅರ್ಪಿಸುವ ಮೂಲಕ ಹುತಾತ್ಮ ಅರಣ್ಯ ಸಿಬ್ಬಂಧಿಗಳಿಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಯ ಯೋಜನೆ ಮತ್ತು ಭೂ-ಮಾಪನ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಬಿ.ನಿಖಿಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಸೇರಿದಂತೆ ಅರಣ್ಯ ಇಲಾಖೆಯ ವಿವಿಧ ವೃಂದದ ಅಧಿಕಾರಿ-ಸಿಬ್ಬಂಧಿಗಳು, ಹುತಾತ್ಮರ ಕುಟುಂಬದ ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.
.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...