Saturday, October 5, 2024
Saturday, October 5, 2024

ಭಾರತ ಆರ್ಥಿಕ ಪ್ರಗತಿಯ ಹಾದಿಯಲ್ಲಿದೆ

Date:

ಭಾರತದ ಆರ್ಥಿಕತೆ ಬೆಳವಣಿಗೆಯ ಹಾದಿಯಲ್ಲಿದೆ ಎಂದು ವೇದಾಂತ ಸಮೂಹದ ಅಧ್ಯಕ್ಷ ಅನಿಲ್ ಅಗರ್ವಾಲ್ ತಿಳಿಸಿದ್ದಾರೆ.
2300 ವರ್ಷಗಳ ಹಿಂದೆ ಚಾಣಕ್ಯ ಆರ್ಥಿಕ ಪ್ರಗತಿಯು ದೇಶಕ್ಕೆ ಅಭ್ಯುದಯ ತರುತ್ತದೆ ಎಂದಿದ್ದ. ಇವತ್ತು ಭಾರತ ಸಂಶೋಧನೆ ಮತ್ತು ಡಿಜಿಟಲೀಕರಣದ ಬಲದಿಂದ ಅಭಿವೃದ್ಧಿಪಥದಲ್ಲಿ ಮುನ್ನಡೆಯುತ್ತಿದೆ ಎಂದರು.
ಸಂಶೋಧನೆ ಮತ್ತು ಡಿಜಿಟಲೀಕರಣ ಮತ್ತು ಸರ್ಕಾರದ ಸುಧಾರಣೆ ಕ್ರಮಗಳ ಪರಿಣಾಮದ ಬೆಳವಣಿಗೆಗೆ ಪೂರಕ ಸಂಪನ್ಮೂಲ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.
ಹಾಲಿ ಉತ್ಪಾದಕ ವಲಯದ ಕಂಪನಿಗಳು ಹಾಗೂ ಸರ್ಕಾರಿ ಕಂಪನಿಗಳು ಪೂರ್ಣಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಇದರಿಂದ ಒಟ್ಟಾರೆ ಉತ್ಪಾದನೆಯನ್ನು 2-3 ಪಟ್ಟು ವೃದ್ದಿಸಬಹುದು. ಇದು ಉದ್ಯೋಗವಕಾಶ ಹೆಚ್ಚಿಸಬಲ್ಲದು ಎಂದರು.
ಇಡೀ ಜಗತ್ತು ಭಾರತಕ್ಕೆ ಭೇಟಿನೀಡಲು ಬಯಸುತ್ತಿದೆ. ಹೀಗಾಗಿ ಪ್ರವಾಸೋದ್ಯಮ ಹತ್ತುಪಟ್ಟು ಬೆಳೆಯುವ ನಿರೀಕ್ಷೆ ಇದೆ. ದೇಶಕ್ಕೆ 10,000 ವರ್ಷಗಳ ಇತಿಹಾಸ ಇದೆ ಎಂದು ಅವರು ಹೇಳಿದರು. ಮೂಲಸೌಕರ್ಯ ಮತ್ತು ರಿಯಲ್ ಎಸ್ಟೇಟ್ ವಲಯಕ್ಕೆ ಉತ್ತೇಜನ ನೀಡಬೇಕು. ಸಂಸ್ಕೃತಿ, ಕಲೆ ಮತ್ತು ಕರಕುಶಲ ಕ್ಷೇತ್ರಗಳಿಗೂ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...