Monday, August 24, 2026
Monday, August 24, 2026

ಭಾರತ ಆರ್ಥಿಕ ಪ್ರಗತಿಯ ಹಾದಿಯಲ್ಲಿದೆ

Date:

ಭಾರತದ ಆರ್ಥಿಕತೆ ಬೆಳವಣಿಗೆಯ ಹಾದಿಯಲ್ಲಿದೆ ಎಂದು ವೇದಾಂತ ಸಮೂಹದ ಅಧ್ಯಕ್ಷ ಅನಿಲ್ ಅಗರ್ವಾಲ್ ತಿಳಿಸಿದ್ದಾರೆ.
2300 ವರ್ಷಗಳ ಹಿಂದೆ ಚಾಣಕ್ಯ ಆರ್ಥಿಕ ಪ್ರಗತಿಯು ದೇಶಕ್ಕೆ ಅಭ್ಯುದಯ ತರುತ್ತದೆ ಎಂದಿದ್ದ. ಇವತ್ತು ಭಾರತ ಸಂಶೋಧನೆ ಮತ್ತು ಡಿಜಿಟಲೀಕರಣದ ಬಲದಿಂದ ಅಭಿವೃದ್ಧಿಪಥದಲ್ಲಿ ಮುನ್ನಡೆಯುತ್ತಿದೆ ಎಂದರು.
ಸಂಶೋಧನೆ ಮತ್ತು ಡಿಜಿಟಲೀಕರಣ ಮತ್ತು ಸರ್ಕಾರದ ಸುಧಾರಣೆ ಕ್ರಮಗಳ ಪರಿಣಾಮದ ಬೆಳವಣಿಗೆಗೆ ಪೂರಕ ಸಂಪನ್ಮೂಲ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.
ಹಾಲಿ ಉತ್ಪಾದಕ ವಲಯದ ಕಂಪನಿಗಳು ಹಾಗೂ ಸರ್ಕಾರಿ ಕಂಪನಿಗಳು ಪೂರ್ಣಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಇದರಿಂದ ಒಟ್ಟಾರೆ ಉತ್ಪಾದನೆಯನ್ನು 2-3 ಪಟ್ಟು ವೃದ್ದಿಸಬಹುದು. ಇದು ಉದ್ಯೋಗವಕಾಶ ಹೆಚ್ಚಿಸಬಲ್ಲದು ಎಂದರು.
ಇಡೀ ಜಗತ್ತು ಭಾರತಕ್ಕೆ ಭೇಟಿನೀಡಲು ಬಯಸುತ್ತಿದೆ. ಹೀಗಾಗಿ ಪ್ರವಾಸೋದ್ಯಮ ಹತ್ತುಪಟ್ಟು ಬೆಳೆಯುವ ನಿರೀಕ್ಷೆ ಇದೆ. ದೇಶಕ್ಕೆ 10,000 ವರ್ಷಗಳ ಇತಿಹಾಸ ಇದೆ ಎಂದು ಅವರು ಹೇಳಿದರು. ಮೂಲಸೌಕರ್ಯ ಮತ್ತು ರಿಯಲ್ ಎಸ್ಟೇಟ್ ವಲಯಕ್ಕೆ ಉತ್ತೇಜನ ನೀಡಬೇಕು. ಸಂಸ್ಕೃತಿ, ಕಲೆ ಮತ್ತು ಕರಕುಶಲ ಕ್ಷೇತ್ರಗಳಿಗೂ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...