Wednesday, September 16, 2026
Wednesday, September 16, 2026

ವಿದ್ಯಾರ್ಥಿಗಳು ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದರಿಂದ ಬೌದ್ಧಿಕ ಸಾಮರ್ಥ್ಯ ವೃದ್ಧಿಸುತ್ತದೆ: ಬಿ.ಗೋಪಿನಾಥ್

Date:

ವಿದ್ಯಾರ್ಥಿಗಳು ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದರಿಂದ ಬೌದ್ಧಿಕ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಸರ್ ಎಂ.ವಿಶ್ವೇಶ್ವರಯ್ಯ ದಿನಾಚರಣೇ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ರಸಪ್ರಶ್ನೆ ಹಾಗೂ ಭಾಷಣ ಕಲೆ ಸ್ಪರ್ಧೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಸಪ್ರಶ್ನೆ ಹಾಗೂ ಭಾಷಣದ ಕಲೆ ವಿದ್ಯಾರ್ಥಿಗಳ ಭೌತಿಕ ಸಾಮರ್ಥ್ಯ ಹೆಚ್ಚಿಸುತ್ತವೆ. ವಿದ್ಯಾಭ್ಯಾಸದ ಜೊತೆಗೆ ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿವೆ. ಇದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಡಿವಿಎಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಭಾಸ್ಕರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪುಸ್ತಕ ಜ್ಞಾನದ ಜೊತೆಗೆ ಮಸ್ತಕದ ಜ್ಞಾನವೂ ಬೇಕು. ಈ ರೀತಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡಾಗ ಅಪಾರವಾದ ಜ್ಞಾನ ವೃದ್ಧಿಯಾಗುತ್ತದೆ. ಮುಂಬರುವ ಪರೀಕ್ಷೆಗಳಿಗೆ ಸಹಕಾರಿಯಾಗುತ್ತದೆ. ಇದರಿಂದ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ತಿಳಿಸಿದರು.

ಶಿವಮೊಗ್ಗ ನಗರದ 40 ಪ್ರೌಢಶಾಲೆಗಳಿಂದ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ಅಂತಿಮವಾಗಿ ಎಂಟು ಜನ ವಿದ್ಯಾರ್ಥಿಗಳು ಅಂತಿಮ ಸುತ್ತಿಗೆ ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ನಿರ್ದೇಶಕ ಗಣೇಶ್ ಎಂ.ಅಂಗಡಿ, ಡಿವಿಎಸ್ ಪ್ರಾಧ್ಯಾಪಕ ರಾಜೇಶ್, ಸರ್ ಎಂ ವಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...