Saturday, October 5, 2024
Saturday, October 5, 2024

ಕೋವಿಡ್ ಹಿನ್ನೆಲೆ:ಕೆಲವು ನಿರ್ಬಂಧ ಸಡಿಲ-ರಾತ್ರಿ ಕರ್ಫ್ಯೂ ಇಲ್ಲ‌

Date:

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣ ಕಡಿಮೆಯಾದ ಹಿನ್ನೆಲೆಯಲ್ಲಿ ಸರ್ಕಾರ ನಿರ್ಬಂಧಗಳನ್ನು ಇನ್ನಷ್ಟು ಸಡಿಲಗೊಳಿಸಿದೆ.
ಸೋಮವಾರದಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಅಂತ್ಯಗೊಳ್ಳಲಿದೆ.

ಬಾರ್, ಪಬ್, ಕ್ಲಬ್, ಮತ್ತು ಹೋಟೆಲ್ ಗಳಲ್ಲಿ ಶೇ. 100 ರಷ್ಟು ಆಸನ ಭರ್ತಿಗೆ ಅವಕಾಶ ಕಲ್ಪಿಸಿದೆ. ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲಾ ಕಾಲೇಜುಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗಿದೆ.

ಚಿತ್ರಮಂದಿರ, ರಂಗಮಂದಿರ, ಮಲ್ಟಿಪ್ಲೆಕ್ಸ್, ಸಿನಿಮಾ ಹಾಲ್, ಮತ್ತು ಸಭಾಂಗಣಗಳ ಸಾಮರ್ಥ್ಯದ ಶೇ. 50ರಷ್ಟು ನಿರ್ಬಂಧ ಮುಂದುವರೆದಿದೆ. ಖಾಸಗಿ ಆಸ್ಪತ್ರೆಗಳು, ಖಾಸಗಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಆಯ್ದು ಶ್ರೇಣಿಯ ಶೇ.10 ರಷ್ಟು ಹಾಸಿಗೆಗಳನ್ನು ಕೊರೋನಾ ಚಿಕಿತ್ಸೆಗೆ ಕಾಯ್ದಿರಿಸಿಕೊಳ್ಳುವಂತೆಯೂ ಸೂಚಿಸಿದೆ. ಆಯ್ದ ನಿರ್ಬಂಧಗಳನ್ನು ಫೆಬ್ರವರಿ 15ರವರೆಗೆ ವಿಸ್ತರಿಸಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರಾದ ಆರ್. ಅಶೋಕ್, ಬಿ. ಸಿ. ನಾಗೇಶ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹೀಗೆ ಮುಂತಾದ ಗಣ್ಯರೊಂದಿಗೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕೊರೋನಾ ಸ್ಥಿತಿಗತಿ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ್ದಾರೆ. ತಂದಿರ ಬರೆದಿ ಆಧರಿಸಿ ಆಯ್ದ ನಿರ್ಬಂಧ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದರಂತೆ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಅವರು ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...