Saturday, October 5, 2024
Saturday, October 5, 2024

ಯಾವುದೇ ಅಕ್ರಮ ಕಂಡುಬಂದಿಲ್ಲ- ನ್ಯಾ.ವೀರಪ್ಪ

Date:

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳಿಗೆ ಸಂಬಂಧಿಸಿದ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಹೈಕೋರ್ಟ್ ನ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ನೇತೃತ್ವದ ತಂಡವು ಕಾರಾಗೃಹಕ್ಕೆ ಧಿಡೀರ್ ಭೇಟಿ ನೀಡಿ ಪರಿಶೀಲಿಸಿದರು.

ಭೇಟಿ ನೀಡಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ನ್ಯಾಯಮೂರ್ತಿ ಬಿ. ವೀರಪ್ಪ ಅವರು, “ಭೇಟಿ ನೀಡಿದ ಸಂದರ್ಭದಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲ. ಜೈಲಿನಲ್ಲಿ ವ್ಯವಸ್ಥೆಯ ಲೋಪಗಳು ಕಾಣಿಸಲಿಲ್ಲ. ಆಹಾರದ ಗುಣಮಟ್ಟ ಸಹ ಉತ್ತಮವಾಗಿದೆ ಎಂದು ಬಿ. ವೀರಪ್ಪ ಅವರು ಹೇಳಿದರು.

ಜೈಲು ಅಧಿಕಾರಿಗಳ ಧೋರಣೆ ಬಗ್ಗೆ ಕೆಲ ಕೈದಿಗಳಿಂದ ದೂರು ಕೇಳಿಬಂದಿದೆ. ತಪ್ಪು ಮಾಡಿ ಬಂದಿರುವ ಕೈದಿಗಳಿಗೆ ಅಂತಹ ಧೋರಣೆ ಸಾಮಾನ್ಯ ಎಂದು ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರು ಆಗಿರುವಂತಹ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಿಳಿಸಿದ್ದಾರೆ.

9ರಿಂದ 10 ವರ್ಷ ಜೈಲುವಾಸ ಅನುಭವಿಸಿದರ ಪಟ್ಟಿ ಮಾಡಲು ಸೂಚಿಸಲಾಗಿದೆ. ಅಂಥವರ ಕ್ರಿಮಿನಲ್ ಮೇಲ್ಮನವಿ ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದರೆ ಅವುಗಳನ್ನು ಆದ್ಯತೆ ಮೇರೆಗೆ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಮೂರ್ತಿ ವೀರಪ್ಪ ಅವರು ತಿಳಿಸಿದ್ದಾರೆ.
ಬ್ಯಾರಕ್ ಗಳಿಗ, ಅಡುಗೆ ಮನೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ ತಂಡ ಕೈದಿಗಳೊಂದಿಗೆ ಸಂವಾದ ನಡೆಸಿತು. ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಕೈದಿಗಳಿಗೆ ಲಭ್ಯವಿರುವ ಹಕ್ಕುಗಳು, ಕಾನೂನು ಸೇವಾ ಪ್ರಾಧಿಕಾರದಿಂದ ಹೇಗೆ ನೆರವು ಪಡೆದುಕೊಳ್ಳಬಹುದೆಂಬ ಬಗ್ಗೆ ವಿವರಿಸಿದ್ದಾರೆ.

ಈ ಸಂದರ್ಭದಲ್ಲಿ ನ್ಯಾ. ಪಿ. ಎಸ್. ದಿನೇಶ್ ಕುಮಾರ್, ಹೈಕೋರ್ಟ್ ರಿಜಿಸ್ಟರ್ ಜನರಲ್ ಶಿವ ಶಂಕರೇಗೌಡ, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್ ಶಶಿಧರ್ ಶೆಟ್ಟಿ ಹಾಗೂ ಇನ್ನಿತರರು ಪರಿಶೀಲನಾ ತಂಡದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...