Monday, April 6, 2026
Monday, April 6, 2026

ನಮ್ಮ ನೆಚ್ಚಿನ ವರಕವಿ ದ.ರಾ. ಬೇಂದ್ರೆಯವರ ಜನ್ಮದಿನ

Date:

ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು 31/01/1896ರಲ್ಲಿ ಧಾರವಾಡದ ಶಿರಹಟ್ಟಿಯಲ್ಲಿ ಜನಿಸಿದರು.
ಅವರ ಕಾಲೇಜು ಶಿಕ್ಷಣವು ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ಮುಗಿಸಿದರು. 1918ರಲ್ಲಿ ಬಿ.ಎ.ಪದವಿಯನ್ನು ಪಡೆದರು.
ಕೆಲವು ಕಾಲ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, 1935ರಲ್ಲಿ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು.

ಅವಧೂತ ಕವಿ, ರಸಋಷಿ, ವರಕವಿ ಶ್ರೇಷ್ಠ ಕವಿ ಹೀಗೆ ಗೌರವಿಸಲ್ಪಟ್ಟ ಬೇಂದ್ರೆಯವರ ಕಾವ್ಯ ಕನ್ನಡ ಭಾಷೆ ಹಾಗೂ ಸಾಹಿತ್ಯವನ್ನು ಶ್ರೀಮಂತಗೊಳಿಸಿವೆ. ಪ್ರೀತಿ, ಪ್ರಣಯ, ಪ್ರೇಮದ ವಿವಿಧ ಮುಖಗಳನ್ನು ಪರಿಚಯಿಸುವ ಅವರ ಕವಿತೆಗಳು ಎಲ್ಲರನ್ನೂ ತಮ್ಮತ್ತ ಸೆಳೆಯುತ್ತವೆ. ಬೇಂದ್ರೆಯವರ ಕವಿತೆಗಳು ಇಂದಿಗೂ ಕಾವ್ಯ ದೃಷ್ಟಿಯಿಂದ ಗಮನಾರ್ಹವಾಗಿಯೇ ಇವೆ.

ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿಯೂ ಅನನ್ಯ ಸೇವೆ ಸಲ್ಲಿಸಿದ್ದರು.
ಅವರು 1942ರಲ್ಲಿ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲಿನಲ್ಲಿ ಒಪ್ಪೊತ್ತಿನ ಶಿಕ್ಷಕರಾದರು.
1944ರಲ್ಲಿ ಸೊಲ್ಲಾಪುರದ ಡಿಎವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ನೇಮಕಗೊಂಡರು.
1956ರಲ್ಲಿ ನಿವೃತ್ತರಾದ ಮೇಲೆ ಧಾರವಾಡದ ಆಕಾಶವಾಣಿ ಕೇಂದ್ರದಲ್ಲಿ ಸಲಹೆಗಾರರಾಗಿ ಕೆಲಸ ಮಾಡಿದರು.

ಮುಂಬಯಿಯಲ್ಲಿ ನಡೆದ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಅಧ್ಯಕ್ಷರಾಗಿ ಆಯ್ಕೆಯಾದರು.
1930ರಲ್ಲಿ ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೇಖಕ ಗೋಷ್ಠಿಯನ್ನು ನಿರ್ವಹಿಸಿದರು. ಕೆಲವು ಕಾಲ ಜೀವನ ಮಾಸಪತ್ರಿಕೆ ಮತ್ತು ಜಯಕರ್ನಾಟಕ ಪತ್ರಿಕೆ ಸಂಪಾದಕರಾಗಿ ಸೇವೆ ಸಲ್ಲಿಸಿದರು.

ಬೇಂದ್ರೆ ಅವರಿಗೆ 1968ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು.
1976ರಲ್ಲಿ ಕಾಶಿಯ ವಿದ್ಯಾಪೀಠವೂ ಗೌರವ ಡಾಕ್ಟರೇಟ್ ನೀಡಿತು. ಕೇಂದ್ರ ಸರ್ಕಾರ 1968ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತು. ಕೇಂದ್ರದ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ಇವರಿಗೆ ಸಂದಿದೆ.
1943ರಲ್ಲಿ ಶಿವಮೊಗ್ಗದಲ್ಲಿ ನಡೆದ 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಪಟ್ಟ ಇವರಿಗೆ ನೀಡಲಾಯಿತು.
ಇವರ ಅರಳು ಮರಳು ಕವನಸಂಗ್ರಹಕ್ಕೆ ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತರೆ, ನಾಕುತಂತಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು.

ಬೇಂದ್ರೆಯವರ ಕವನಗಳು, ಕನ್ನಡದ ಜನರನ್ನು ಮಂತ್ರಮುಗ್ಧರನ್ನಾಗಿಸಿವೆ.

ಕೃಷ್ಣಕುಮಾರಿ, ಸಖೀಗೀತ, ಉಯ್ಯಾಲೆ, ಗರಿ, ನಾದಲೀಲೆ, ಅರುಳುಮರುಳು ಇತ್ಯಾದಿ 25 ಕವನ ಸಂಕಲನಗಳು. ಸಾಹಿತ್ಯ ಮತ್ತು ವಿಮರ್ಶೆ, ಕಾವ್ಯೋದ್ಯೋಗ, ಸಾಹಿತ್ಯ ವಿರಾಟ ಸ್ವರೂಪ, ನಾಕುತಂತಿ, ನಿರಾಭರಣ ಸುಂದರಿ, ಶಾಂತಲಾ (ಅನುವಾದ), ನರಬಲಿ, ತುತ್ತಿನ ಚೀಲ, 33 ಕೋಟಿ , ಮಾಯಾ ಕಿನ್ನರಿ, ಇವೆಲ್ಲವೂ ಬೇಂದ್ರೆಯವರ ಪ್ರಮುಖ ಕೃತಿಗಳಾಗಿವೆ. ಗಂಗಾವತರಣ ಕವಿತೆ “ಇಳಿದು ಬಾ ತಾಯಿ” ಇವರ ಸುಪ್ರಸಿದ್ಧ ಕವಿತೆಗಳಲ್ಲಿ ಒಂದಾಗಿದೆ. ಗೆಳೆಯ ಶಂಕರದೇವ, ಗುರು ದೇವರಂತ ಕವಿತೆಗಳು ಶ್ರೇಷ್ಠ ವ್ಯಕ್ತಿತ್ವ ಪರಿಚಯಿಸುವಂಥವು.+

ಅಂಬಿಕಾತನಯದತ್ತ ಕಾವ್ಯನಾಮದಿಂದ ಪ್ರಸಿದ್ಧರಾದ ಬೇಂದ್ರೆಯವರು 26-10-1982ರಲ್ಲಿ ಮುಂಬಯಿನಲ್ಲಿ ನಿಧನರಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...