Monday, April 6, 2026
Monday, April 6, 2026

ಸ್ಮಾರ್ಟ್ ಸಿಟಿ ಕಾಮಗಾರಿ:ವಿಶೇಷ ಚೇತನ ವ್ಯಕ್ತಿಗೆ ಕಾಲು ಮುರಿತ

Date:

ಸ್ಮಾರ್ಟ್ ಸಿಟಿ ಇಂದಾಗಿ ಶಿವಮೊಗ್ಗ ನಗರದ ಎಲ್ಲೆಡೆ ರಸ್ತೆಗಳಲ್ಲಿ ಗುಂಡಿ ಕಾಣುತ್ತಿದೆ. ಅಲ್ಲದೆ ಈ ಗುಂಡಿಗಳಿಂದ ನಗರದಲ್ಲಿ ಅಪಘಾತಗಳ ಸಂಖ್ಯೆ ಕೂಡ ಅಧಿಕವಾಗಿದೆ. ಇದೀಗ ಸ್ಮಾರ್ಟ್ ಸಿಟಿ ಗುತ್ತಿಗೆದಾರರ ನಿರ್ಲಕ್ಷಕ್ಕೆ ಅಂಧನೊಬ್ಬ ಕಾಲು ಮುರಿದುಕೊಂಡು ಆಸ್ಪತ್ರೆಗೆ ಸೇರಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇಮಾಂಸಾಬ್ ಇನಾಂದಾರ್ ಎಂಬುವವರು ಹುಟ್ಟಿನಿಂದ ಅಂಧರಾಗಿದ್ದು, ಐದು ವರ್ಷದಿಂದ ಶಿವಮೊಗ್ಗ ನ್ಯಾಯಾಲಯದಲ್ಲಿ ಎರಡನೇ ಡಿವಿಜನ್ ಅಸಿಸ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದಿನಂತೆ ಕುವೆಂಪು ರಂಗಮಂದಿರದ ಬಳಿ ತೆರಳುತ್ತಿದ್ದ ವೇಳೆ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ.

ಇಮಾಮ್ ಸಾಬ್ ಇನಾಂದಾರ್ ಅವರು ಮಾತನಾಡಿ “ನಾನು ಪ್ರತಿದಿನ ಓಡಾಡುವ ರಸ್ತೆ ಅದು ಹೊಸದಾಗಿ ಗುಂಡಿ ತೆಗೆದಿದ್ದಾರೆ. ನಾನು ಸ್ಟಿಕ್ ಇಟ್ಟು, ಎಡಗಾಲು ಮುಂದಿಟ್ಟು ನೇರವಾಗಿ ಗುಂಡಿಯೊಳಗೆ ಬಿದ್ದು ತೊಡೆ ಭಾಗದಲ್ಲಿ ಭಾರಿ ನೋವಾಯಿತು” ಎಂದು ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭದಿಂದಲೂ ಸಾರ್ವಜನಿಕರಿಗೆ ದಿನನಿತ್ಯ ಒಂದಲ್ಲಾ ಒಂದು ಕಿರಿಕಿರಿ ಯಿಂದಾಗಿ ಜನರು ರೋಸಿಹೋಗಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ಇನ್ನಾದರೂ ಇತ್ತ ಗಮನಹರಿಸುವರೇ ಕಾದುನೋಡಬೇಕಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರಿದೀಪ- ಎಸ್.ಎನ್.ಚನ್ನಬಸಪ್ಪ

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...