Monday, February 16, 2026
Monday, February 16, 2026

ಹುತಾತ್ಮರ ಸಚ್ಚಾರಿತ್ರ್ಯ ಸನ್ನಡತೆ ಪಾಲಿಸೋಣ

Date:

ಭಾರತದ ಸ್ವಾತಂತ್ರಕ್ಕಾಗಿ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್ ಇನ್ನು ಮುಂತಾದ ಮಹನೀಯರು ಬಲಿದಾನ ನೀಡಿದ್ದಾರೆ. ಆ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳು ಸದಾ ನಮ್ಮನ್ನು ಜಾಗ್ರತ ಸ್ಥಿತಿಯಲ್ಲಿಡಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ” ದೇಶಕ್ಕಾಗಿ ನಾವಿಂದು ಪ್ರಾಣವನ್ನು ಕೊಡಬೇಕಾಗಿಲ್ಲ. ಆದರೆ, ಸಚ್ಚಾರಿತ್ರೆ ಹಾಗೂ ಸನ್ನಡತೆಯಿಂದ ತಮ್ಮ ಕ್ಷೇತ್ರಗಳಲ್ಲಿ ನಿಷ್ಠೆಯಿಂದ ದುಡಿಯಬೇಕು. ಸದೃಢ ದೇಶ ಕಟ್ಟಲು ನೆರವಾಗಬೇಕಿದೆ ಎಂದು ತ್ಯಾಗರಾಜ್ ಅವರು ತಿಳಿಸಿದ್ದಾರೆ.

ಭಾರತದ ಸರ್ವಜನಾಂಗದ ಕಲ್ಯಾಣದ ಬಗ್ಗೆ ಸದಾ ಚಿಂತಿಸುತ್ತಿದ್ದ ಗಾಂಧೀಜಿ, ಜಾತಿ ಮತದಿಂದಾಚೆಗೆ ಎಲ್ಲರಿಗೂ ಸಮಪಾಲು ಮತ್ತು ಸಮಾನ ಅವಕಾಶ ನೀಡುವಂತೆ ಬಲವಾಗಿ ಪ್ರತಿಪಾದಿಸಿದರು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್.ಡಿ. ವಿರುಪಾಕ್ಷ, ಡಾ. ಗಜಾನನ ಪ್ರಭು, ಮತ್ತು ಡಾ. ರವೀಂದ್ರಗೌಡ ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...