Sunday, December 7, 2025
Sunday, December 7, 2025

ಜಾಮೀನು ರಹಿತ ಬಂಧನ ವಾರಂಟ್ ಇದ್ದಾಗ ನಿರೀಕ್ಷಣಾ ಜಾಮೀನು ಅವಕಾಶವಿಲ್ಲ

Date:

ಆರೋಪಿ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾದ ಬಳಿಕ, ನಿರೀಕ್ಷಣಾ ಜಾಮೀನು ಸಲ್ಲಿಕೆಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಆರೋಪಿಯು ಒಮ್ಮೆ ಕೋರ್ಟ್ ಮುಂದೆ ಹಾಜರಿದ್ದರೆ, ನಂತರ ಆತ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಸೆಕ್ಷನ್ 438 ರ ಅನ್ವಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಗೌರಿಬಿದನೂರಿನ ರಮೇಶ್ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಶೀಲಿಸಿದ ನ್ಯಾ. ಎಚ್. ಪಿ. ಸಂದೇಶ್ ಅವರಿದ್ದ ಪೀಠ ಈ ಆದೇಶ ನೀಡಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಎಸ್. ಆರ್. ನಾಗರಾಜ್ ಮತ್ತು ರಾಜ್ಯ ಸರ್ಕಾರದ ನಡುವಿನ ಪ್ರಕರಣಗಳಲ್ಲಿ ಆರೋಪಿಗೆ ಜಾಮೀನನ್ನು ನಿರಾಕರಿಸಲಾಗಿದೆ. ಆರೋಪಿಯು ಒಮ್ಮೆ ವಿಚಾರ ಕೋರ್ಟ್ ಮುಂದೆ ಖುದ್ದಾಗಿ ಅಥವಾ ವಕೀಲರ ಮುಖಾಂತರ ಹಾಜರಾಗಿ, ನಂತರದ ದಿನಗಳಲ್ಲಿ ವಿಚಾರಣೆಗೆ ಗೈರಾದ ಕಾರಣಕ್ಕೆ ವಾರೆಂಟ್ ಜಾರಿಯಾದರೆ, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ. ಅದರಂತೆ ಈ ಪ್ರಕರಣದಲ್ಲೂ ಜಾಮೀನು ನೀಡಲಾಗದು ಎಂದು ನ್ಯಾಯಾಲಯ ಹೇಳಿದೆ.

2020ರ ಜುಲೈ 8ರಂದು ಗೌರಿಬಿದನೂರಿನ ಅರಣ್ಯ ವಲಯಾಧಿಕಾರಿಯು ರಮೇಶ್ ಮನೆಯಲ್ಲಿದ್ದ ಮೂರು ಉಡಗಳು ಮತ್ತು ಮೂರು ಗೌಜಲಹಕ್ಕಿ ಗಳನ್ನು ವಶಪಡಿಸಿಕೊಂಡಿದ್ದರು. ಈ ಸಂಬಂಧ ವಿಚಾರಣಾ ನ್ಯಾಯಾಲಯವು, ಪ್ರಕರಣ ದಾಖಲಿಸಿಕೊಂಡು ಆರೋಪಿಗೆ 2021ರ ಅಕ್ಟೋಬರ್ 5ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿತ್ತು. ಒಂದು ವಕೀಲರ ಮೂಲಕ ಆರೋಪಿಯು ಒಂದು ದಿನದ ವಿಚಾರಣೆಗೆ ವಿನಾಯಿತಿ ಕೋರಿದ್ದರು. ಬಳಿಕ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ರಮೇಶ್ 2021ರ ಅಕ್ಟೋಬರ್ 6ರಂದು ಎನ್ ಬಿಡಬ್ಲ್ಯೂ ಜಾರಿಗೊಳಿಸಲಾಗಿತ್ತು. ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೇಷನ್ಸ್ ಕೋರ್ಟ್ ವಜಾಗೊಳಿಸಿತ್ತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...