Friday, March 14, 2025
Friday, March 14, 2025

ಗೋಮಾಳ, ಕಾನು ಇತ್ಯಾದಿಗಳ ಮೇಲೆ ಅರಣ್ಯ ಇಲಾಖೆ ಹಕ್ಕು ಸ್ಥಾಪನೆ ಸರಿಯಲ್ಲ

Date:

ತಲತಲಾಂತರದಿಂದ ಸಾಗುವಳಿ ಪ್ರದೇಶದ ಮೇಲೆ ಹಕ್ಕು ಸ್ಥಾಪಿಸಲು ಅರಣ್ಯ ಇಲಾಖೆ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ ನಿಲ್ಲಿಸದಿದ್ದರೆ ಶಿವಮೊಗ್ಗ ಸಿಸಿಎಫ್ ಕಛೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಮಲೆನಾಡು ಸಂಘರ್ಷ ಸಮಿತಿ ಎಚ್ಚರಿಕೆ ನೀಡಿದೆ.

ತೀರ್ಥಹಳ್ಳಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗೆ ತಹಶೀಲ್ದಾರ್ ರ ಮೂಲಕ ಸಮಿತಿ ಮನವಿ ಸಲ್ಲಿಸಿತು. ಪ್ರತಿ ಹಳ್ಳಿಯಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ದೌರ್ಜನ್ಯಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಆಲೂರು ಹೊಸಕೊಪ್ಪ, ಚಿಕ್ಕ ಮತ್ತೀಗ, ಮಾವಿನ ಗದ್ದೆ, ತೊರೆ ಬೈಲು, ಹುಲ್ಲತ್ತಿ, ಬಿಳಗಿ ಮನೆ ಮುಂತಾದ ಗ್ರಾಮದಲ್ಲಿ ರೈತರ ಸ್ವಾಧೀನಾನುಭವ ಸಾಗುವಳಿ ಜಾಗಕ್ಕೆ ಅರಣ್ಯ ಇಲಾಖೆ ಬಲವಂತವಾಗಿ ಗಡಿ ಕಾಲುವೆ ಮಾಡುತ್ತಿದ್ದು ಇದನ್ನು ತಡೆಯಬೇಕು ಎಂದು ಆಗ್ರಹಿಸಿದೆ.

ಅಡಿಕೆ ಸಸಿ, ಮರ, ಬೇಲಿಯನ್ನು ದ್ವಂಸ ಮಾಡುತ್ತಿರುವುದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅರಣ್ಯ ಇಲಾಖೆ ರೈತರಿಗೆ ನಷ್ಟದ ಹಣವನ್ನು ಪಾವತಿಸಬೇಕು. ಗೋಮಾಳ, ಸೊಪ್ಪಿನಬೆಟ್ಟ, ಕಾನು, ಗ್ರಾಮಠಾಣಾ, ಪೂರ್ವಜರಿಂದ ಬಳಕೆಯಲ್ಲಿರುವ ಅರಣ್ಯ ಪ್ರದೇಶದ ಮೇಲೆ ಅರಣ್ಯ ಇಲಾಖೆ ಹಕ್ಕು ಸ್ಥಾಪಿಸಲು ಮುಂದಾಗಿರುವುದು ಮಾನವ ಹಕ್ಕುಗಳ ಉಲ್ಲಂಘನೆ.

ಅರಣ್ಯ, ಕಂದಾಯ, ಇತರೆ ಪ್ರದೇಶಗಳ ಕುರಿತು ಜಂಟಿ ಸರ್ವೆ ನಡೆಯದ ಹಿಂದೆ ದೊಡ್ಡ ಹುನ್ನಾರ ನಡೆದಿದೆ. ಕಾನೂನು, ನಿಯಮಗಳಲ್ಲಿ ಗೊಂದಲವನ್ನೇ ಬಂಡವಾಳ ಮಾಡಿಕೊಂಡು ಮಲೆನಾಡ ಭೂಪ್ರದೇಶದ ಮೇಲೆ ಅಧಿಪತ್ಯ ಸಾಧಿಸುವ ಪ್ರಯತ್ನವನ್ನು ಅರಣ್ಯ ಇಲಾಖೆ ಮಾಡುತ್ತಿದೆ.
ಅರಣ್ಯ ಸಂರಕ್ಷಣೆ, ಸಸಿ ಬೆಳೆಸುವ ಯೋಜನೆಯಡಿ ಭಾರಿ ಹಗರಣ ನಡೆದಿದೆ. ಸರ್ಕಾರ ತಕ್ಷಣ ಅರಣ್ಯ ಇಲಾಖೆ ವಿರುದ್ಧ ತನಿಖೆ ನಡೆಸಬೇಕು. ಸರ್ಕಾರಕ್ಕೆ ರೈತರ ಪರ ಕಾಳಜಿ ಇದ್ದರೆ ಅರಣ್ಯ ಇಲಾಖೆ ವಿರುದ್ಧ ಕ್ರಮ ಜರುಗಿಸಲಿ ಎಂದು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸುಂದರೇಶ್, ಸಂಚಾಲಕ ನೆಂಪೆ ದೇವರಾಜ್, ಹಸಿರುಮನೆ ತಾಲೂಕು ಅಧ್ಯಕ್ಷ ಜಾದುಗಾರ್ ನಿಶ್ಚಲ್ ಶೆಟ್ಟಿ, ತಾಲೂಕು ರೈತ ಸಂಘದ ಅಧ್ಯಕ್ಷ ಕೋಡ್ಲು ವೆಂಕಟೇಶ್, ಹೊಸಕೇರಿ ಈಶ್ವರಪ್ಪ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...