Sunday, August 23, 2026
Sunday, August 23, 2026

ಜಿಗಿದ ರೇಷ್ಮೆಗೂಡಿನ ದರ: ಕೃಷಿಕರಿಗೆ ವರ

Date:

ರೇಷ್ಮೆಗೂಡಿಗೆ ಚಿನ್ನದ ಮೌಲ್ಯ ಬಂದಿದೆ. ರೇಷ್ಮೆ ಮಾರುಕಟ್ಟೆಗಳಲ್ಲಿ ರೇಷ್ಮೆಗೂಡಿಗೆ ಹೆಚ್ಚಿನ ದರ ಸಿಗದಂತೆ ನಿಯಂತ್ರಿಸುತ್ತಿದ್ದ ದಲ್ಲಾಳಿಗಳಿಗೆ ಕಡಿವಾಣ ಹಾಕಲಾಗಿದೆ. ಮಾರುಕಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಿ ರೇಷ್ಮೆ ಬೆಳೆಗಾರರಿಗೆ ಆಗುತ್ತಿದ್ದ ಕಿರುಕುಳವನ್ನು ತಪ್ಪಿಸಲಾಗಿದೆ. ರೇಷ್ಮೆ ಗೂಡು ಕದಿಯುತ್ತಿದ್ದವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ, ಇ-ಪೇಮೆಂಟ್ ವ್ಯವಸ್ಥೆ ಜಾರಿ ಸೇರಿದಂತೆ ರೇಷ್ಮೆ ಸಚಿವ ಡಾ. ನಾರಾಯಣಗೌಡ ಅವರು ತೆಗೆದುಕೊಂಡ ಹಲವು ಕ್ರಮಗಳ ಪರಿಣಾಮವಾಗಿ ರೇಷ್ಮೆಗೂಡಿಗೆ ಉತ್ತಮ ಬೆಲೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆನ ದಿನಗಳಲ್ಲಿ ರೇಷ್ಮೆ ಗೂಡು ಗರಿಷ್ಠ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ. ಅದರಲ್ಲೂ ಕೇಂದ್ರ ಸರ್ಕಾರವು ಆಮದು ಗೂಡಿಗೆ ತೆರಿಗೆ ಹೆಚ್ಚಿಸಿದ ಬಳಿಕ ದೇಶಿಯ ಗೂಡಿಗೆ ಎಲ್ಲೆಡೆ ಬೇಡಿಕೆ ಸೃಷ್ಟಿಯಾಗಿದೆ. ರಾಮನಗರವು ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆ ಹುಳು ವಹಿವಾಟು ನಡೆಯುವ ಸ್ಥಳ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.

ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೇಷ್ಮೆಗೂಡು ದರವು ನಾಲ್ಕು ಅಂಕಿ ದಾಟಿದೆ. ಕೆ.ಜಿ. ರೇಷ್ಮೆ ಗೂಡಿಗೆ 1,043 ರೂಪಾಯಿಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...