Tuesday, December 9, 2025
Tuesday, December 9, 2025

ಶಿವಮೊಗ್ಗದಲ್ಲಿ ನೀರಿನ ಕಂದಾಯ ಅವೈಜ್ಞಾನಿಕ ಏರಿಕೆ – ಗೋಪಿನಾಥ್

Date:

ನಗರ ನೀರು ಸರಬರಾಜು ಮಂಡಳಿ 2021-22ನೇ ಸಾಲಿನ ನೀರಿನ ಕಂದಾಯವನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡಿದ್ದನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್‌. ಗೋಪಿನಾಥ್ ಅವರು ವಿರೋಧಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪ್ರದೇಶವಾರು ಕೆಲವು ವಾರ್ಡ್ ಗಳಿಗೆ 4ರಿಂದ 8 ಸಾವಿರದವರೆಗೆ ಕಂದಾಯ ದರ ಏರಿಸಲಾಗಿದೆ.
ಸಾರ್ವಜನಿಕರಿಗೆ ಅವಶ್ಯಕವಾಗಿ ಬೇಕಾಗಿರುವ ನೀರಿನ ಮೇಲೆ ಈ ರೀತಿ ಕಂದಾಯವನ್ನು ಹೆಚ್ಚಿಸಿರುವುದು ಜನಸಾಮಾನ್ಯರ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಕೊರೊನಾದಿಂದ ಜನ ಸಂಕಷ್ಟದಲ್ಲಿದ್ದಾರೆ. ಪರಿಸ್ಥಿತಿ ಹೀಗಿರುವಾಗ, ಕಂದಾಯ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೀಗಾಗಿ ನೀರಿನ ಕಂದಾಯವನ್ನು ಇಳಿಸಿ ಗ್ರಾಹಕರ ಮೇಲೆ ಹಾಕುವ ಭಾರವನ್ನು ಕಡಿಮೆ ಮಾಡಬೇಕು. ತಪ್ಪಿದರೆ ಸಾರ್ವಜನಿಕವಾಗಿ ಪ್ರತಿರೋಧಕ್ಕೆ ಗುರಿಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ ನಗರದ ಪ್ರತಿ ವಾರ್ಡಿನ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳ ಸಭೆ ಕರೆದು ದರ ಪರಿಷ್ಕರಣೆ ಮಾಡುವುದು ಸೂಕ್ತ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

L.B. Colleges ಸಾಗರದ ಎಲ್ .ಬಿ‌.ಕಾಲೇಜಿನ ಮುಖ್ಯದ್ವಾರಕ್ಕೆ ಶಿಲಾನ್ಯಾಸ.

L.B. Colleges ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ನೆಡೆಸುತ್ತಿರುವ ಲಾಲ್ ಬಹದ್ದೂರ್ ಕಲಾ,...

Shimoga News ಮಕ್ಕಳು ಉತ್ಸಾಹದ ಚಿಲುಮೆಗಳು.ಉತ್ತಮ ಊಟ ಆಟ ಪಾಠದೊಂದಿಗೆ ಸಮಾಜದ ಅಭಿವೃದ್ಧಿ- ನ್ಯಾ.ಎಂ.ಎಸ್.ಸಂತೋಷ್

Shimoga News ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ...

YADAV School Of Chess ಆನ್ ಲೈನ್ ಮೂಲಕಹಿಂದುಳಿದ & ಬಡಮಕ್ಕಳಿಗೆಒಂದು ತಿಂಗಳ ಚೆಸ್ ಕ್ರೀಡಾ ತರಬೇತಿ

YADAV School Of Chess ರಾಜೇಂದ್ರ ನಗರದಲ್ಲಿರುವ ಪ್ರತಿಷ್ಠಿತ ಯಾದವ ಸ್ಕೂಲ್...

Vallabhbhai Patel ಭ್ರಷ್ಟಾಚಾರವು ದೇಶದ ಆಂತರಿಕ ಶತ್ರು.- ಡಾ.ಹೆಚ್.ಬಿ.ಮಂಜುನಾಥ್

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಸ್ಮರಣೆಯಲ್ಲಿ ಹಿರಿಯ ಪತ್ರಕರ್ತ ಡಾ ಎಚ್...