Friday, April 3, 2026
Friday, April 3, 2026

ಕಾರೆಹೊಂಡ ಗ್ರಾಮಕ್ಕೆ ಕಾಡಾನೆ ಹಾವಳಿ

Date:

ಮುಗುಡ್ತಿ ಅರಣ್ಯ ಜೀವಿ ವಲಯ ವ್ಯಾಪ್ತಿಯ ತಳಲೆ ಗ್ರಾಮದ ಕಾರೆಹೊಂಡದ ರೈತರ ತೋಟಕ್ಕೆ ರಾತ್ರಿ ನುಗ್ಗಿದ ಕಾಡಾನೆ ಅಡಿಕೆ ಮರಗಳಿಗೆ ಹಾನಿಗೊಳಿಸಿದೆ.

ಇದುವರೆಗೆ ಈ ಭಾಗದಲ್ಲಿ ಆನೆ ಬಂದಿರುವ ನಿದರ್ಶನ ಇರಲಿಲ್ಲ. ಆದರೆ ಈಗ ಏಕಾಏಕಿ ರಾತ್ರಿ ವೇಳೆಯಲ್ಲಿ ರೈತರ ಜಮೀನುಗಳಿಗೆ ದಾಳಿ ಮಾಡಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಕಾರೆಹೊಂಡ ಗ್ರಾಮದ ರೈತ ಪರಶುರಾಮ ಅವರ ಅಡಿಕೆ ತೋಟಕ್ಕೆ ಕಾಡಾನೆ ದಾಳಿ ಮಾಡಿದ್ದು, ತೆಂಗು ಹಾಗೂ ಅಡಿಕೆ ಮರಗಳನ್ನು ಕಿತ್ತು ಮುರಿದು ಹಾನಿಗೊಳಿಸಿ ಅಪಾರ ನಷ್ಟವನ್ನು ಉಂಟುಮಾಡಿದೆ.
ಘಟನಾ ಸ್ಥಳಕ್ಕೆ ವನ್ಯಜೀವಿ ಅರಣ್ಯಾಧಿಕಾರಿ ರಾಜ ಅಹ್ಮದ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಆನೆ ಬಂದಿರುವ ಬಗ್ಗೆ ಖಾತ್ರಿಪಡಿಸಿಕೊಂಡರು.
ರೈತರು ಹೊಲಗದ್ದೆಗಳಿಗೆ ತೆರಳುವಾಗ ಮುಂಜಾಗ್ರತೆ ವಹಿಸಬೇಕೆಂದು ತಿಳಿಸಿದರು.
ಕಾಡಾನೆ ಭಾಗದಲ್ಲಿ ಮತ್ತೆ ಕಾಣಿಸಿಕೊಂಡರೆ ತಕ್ಷಣ ಅರಣ್ಯ ಇಲಾಖೆಗೆ ತಿಳಿಸಬೇಕೆಂದು ಮನವಿ ಮಾಡಿದರು.

ಟಿ.ಜೆ.ರವಿಕುಮಾರ್,ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ ವಿಭಾಗ)

ಶಿವಮೊಗ್ಗದ ಸಕ್ರೆಬೈಲು ಏರಿಯಾ ವನ್ಯಜೀವಿ ವಿಭಾಗದಲ್ಲಿ ಒಟ್ಟು 6500 ಹೆಕ್ಟೆರ್ ಅರಣ್ಯಭೂಮಿ ಇದೆ. ಅದರಲ್ಲಿ ಶಿವಮೊಗ್ಗದಲ್ಲಿ ಮೂರು ಗಂಡಾನೆಗಳಿವೆ. ಅದರಲ್ಲಿ ಒಂದು ಆನೆ ಕಾರೆಹೊಂಡದ ಕಡೆ ಸಂಚರಿಸಿರಬಹುದು.
ಇಲ್ಲವೆ, ಆಗುಂಬೆ ಭಾಗದಲ್ಲಿ ಒಂದು ಆನೆಯಿದೆ. ಅದು ಎನ್.ಆರ್ ಪುರ , ಕೊಪ್ಪ, ಶೃಂಗೇರಿ, ಆಗುಂಬೆ, ನಾಗರಹೊಂಡ, ಹೊಸನಗರ, ಲಿಂಗನಮಕ್ಕಿ ಡ್ಯಾಮ್ ಹೊರವಲಯದ ಮಾರ್ಗದಿಂದ ಬಂದಿರಬಹುದು. ಆದರೆ, ಈ ಆನೆಯು ಇಲ್ಲಿಯವರೆಗೆ ವರ್ಷದಲ್ಲಿ ಒಂದೇ ಬಾರಿಗೆ ಕಾಣಿಸಿತ್ತು. ಇಲ್ಲಿಯವರೆಗೂ ಯಾರಿಗೂ ತೊಂದರೆ ಏನೂ ಕೊಟ್ಟಿಲ್ಲ ಎಂದು
ಕಾಡಾನೆಗಳ ವಿಷಯವಾಗಿ ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಟಿ.ಜೆ. ರವಿಕುಮಾರ್ ಅವರು ಕೆ ಲೈವ್ ನ್ಯೂಸ್ ಮಾಧ್ಯಮದೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...