Monday, February 16, 2026
Monday, February 16, 2026

ಗಾಯಕ ಎಂ ವೆಂಕಟೇಶ್ ಕುಮಾರ್ ಅವರಿಗೆ ಕಾಳಿದಾಸ ಸಮ್ಮಾನ್

Date:

ಮಧ್ಯಪ್ರದೇಶ ಸರ್ಕಾರವು ನೀಡುವ ಪ್ರತಿಷ್ಠಿತ ‘ಕಾಳಿದಾಸ ಸಮ್ಮಾನ್’ ಪ್ರಶಸ್ತಿಗೆ ಖ್ಯಾತ ಹಿಂದೂಸ್ತಾನಿ ಸಂಗೀತ ಗಾಯಕ ಪಂ. ವೆಂಕಟೇಶ್ ಕುಮಾರ್ ಅವರು ಭಾಜನರಾಗಿದ್ದಾರೆ.

ಪಂ. ವೆಂಕಟೇಶ್ ಕುಮಾರ್ ಅವರು ಹಿಂದೂಸ್ತಾನಿ ಗಾಯನ ಮಾತ್ರವಲ್ಲದೆ, ಭಜನೆಗಳು ಕೀರ್ತನೆಗಳು ಹಾಗೂ ವಿಶೇಷವಾಗಿ ದಾಸರಪದ ಮತ್ತು ವಚನಗಳನ್ನು ಹಾಡುವ ಮೂಲಕ ಜನರಿಂದ ಸೈ ಎನಿಸಿಕೊಂಡಿದ್ದಾರೆ.

ಧಾರವಾಡದ ವಿಶ್ವವಿದ್ಯಾಲಯದಲ್ಲಿ ಸಂಗೀತ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ವೆಂಕಟೇಶ್ ಕುಮಾರ್ ಅವರು ಆಕಾಶವಾಣಿಯ ‘ಎ’ ಶ್ರೇಣಿಯ ಕಲಾವಿದರು ಆಗಿದ್ದಾರೆ. ದೇಶ ಮತ್ತು ವಿದೇಶಗಳಲ್ಲಿ ಪ್ರತಿಷ್ಠಿತ ಸಂಗೀತ ಮೇಳಗಳಲ್ಲಿ ಭಾಗವಹಿಸಿದ ಹೆಗ್ಗಳಿಕೆ ಇವರದ್ದು.

ವೆಂಕಟೇಶ್ ಕುಮಾರ್ ಅವರ ಸಂಗೀತ ಸಾಧನೆಗೆ ಪದ್ಮಶ್ರೀ, ಸಂಗೀತ ಅಕಾಡೆಮಿ ಪುರಸ್ಕಾರಗಳು, ಕರ್ನಾಟಕ ರಾಜ್ಯೋತ್ಸವ ಸೇರಿದಂತೆ ಹಲವಾರು ಪುರಸ್ಕಾರಗಳು ಲಭಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...