Monday, February 16, 2026
Monday, February 16, 2026

ಪಂಚರಾಜ್ಯ ಚುನಾವಣೆ ಬಳಿಕ ಎಂಎಸ್ ಪಿ ಚರ್ಚೆ

Date:

ಪಂಚ ರಾಜ್ಯ ಚುನಾವಣೆ ಮುಗಿದ ಬಳಿಕ ಕನಿಷ್ಠ ಬೆಂಬಲ ಬೆಲೆ ಕುರಿತು ಚರ್ಚಿಸಲು ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ತೋಮರ್, ಎಂಎಸ್ ಪಿಗೆ ಕಾನೂನು ಮಾನ್ಯತೆ ನೀಡುವ ಸಂಬಂಧ ಸಮಿತಿ ರಚಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಭರವಸೆ ನೀಡಿರುವುದು ಇಡೀ ದೇಶಕ್ಕೇ ಗೊತ್ತಿದೆ. ಸಮಿತಿ ರಚನೆ ಪ್ರಕ್ರಿಯೆಯನ್ನು ಕೃಷಿ ಸಚಿವಾಲಯ ಕೈಗೆತ್ತಿಕೊಂಡಿದೆ.
ಈ ಸಂಬಂಧ ಸಚಿವಾಲಯವು ಚುನಾವಣಾ ಆಯೋಗದ ಸ್ಪಷ್ಟನೆ ಕೋರಿತ್ತು.

ಪಂಚರಾಜ್ಯ ಚುನಾವಣೆ ಮುಗಿದ ಬಳಿಕ ಸಮಿತಿ ರಚಿಸುವಂತೆ ಆಯೋಗ ಸೂಚನೆ ನೀಡಿದೆ ಎಂದು ತಿಳಿಸಿದರು. ದೇಶದ ಅಗತ್ಯಕ್ಕೆ ಅನುಗುಣವಾಗಿ ಬೆಳೆ ಪದ್ಧತಿಯಲ್ಲಿ ಬದಲಾವಣೆ ತರುವುದು, ಎಂಎಸ್ ಪಿಯನ್ನು ಮತ್ತಷ್ಟು ಪರಿಣಾಮಕಾರಿ ಹಾಗೂ ಪಾರದರ್ಶಕವಾಗಿಸುವುದು, ಸಹಜ ಕೃಷಿಗೆ ಉತ್ತೇಜನ ನೀಡುವುದು ಈ ಮೂರು ವಿಷಯಗಳ ಕುರಿತು ಸಮಿತಿಯು ಸರ್ಕಾರಕ್ಕೆ ಶಿಫಾರಸು ನೀಡಲಿದೆ.

ಉತ್ಪಾದನಾ ವೆಚ್ಚಕ್ಕಿಂತ ಶೇ.50ರಷ್ಟು ಅಧಿಕ ಎಂಎಸ್ ಪಿ ಘೋಷಿಸಬೇಕೆಂಬ ಡಾ. ಸ್ವಾಮಿನಾಥನ್ ಆಯೋಗವು ಮಾಡಿದ್ದ ಶಿಫಾರಸನ್ನು ಅಂದಿನ ಸರಕಾರದ ಅಂತರ್ ಸಚಿವಾಲಯ ಸಮಿತಿ ತಿರಸ್ಕರಿಸಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...