ವಾಣಿಜ್ಯೋದ್ಯಮಿಗಳ ತೆರಿಗೆ ಸಂಬಂಧಿತ ವಿಚಾರಗಳ ಕುರಿತು ಜಿಲ್ಲಾ ಮಾಲಿನ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ತೆರಿಗೆ ಕಾಯ್ದೆಗಳ ಮತ್ತು ಅದರಿಂದ ಉಂಟಾಗುವ ಸಮಸ್ಯೆಗಳನ್ನು ಕೂಲಂಕಶವಾಗಿ ಅಧಿಕಾರಿಗಳ ಮುಂದಿಟ್ಟ ವಾಣಿಜ್ಯೋದ್ಯಮಿಗಳು ,ಜಿಎಸ್ ಟಿ ರಿಟರ್ನ್ಸ್ ನ ಪೋರ್ಟಲ್ ನಲ್ಲಿರುವ ತಾಂತ್ರಿಕ ದೋಷಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.
ಇ-ವೇ ಬಿಲ್ ನ ವಿಚಾರವಾಗಿರುವ ಲೋಪದೋಷಗಳನ್ನು ಸರಿಪಡಿಸಲು ಕೇಳಿಕೊಳ್ಳಲಾಯಿತು. ಮುಂದಿನ ದಿನಗಳಲ್ಲಿ ವಾಣಿಜ್ಯೋದ್ಯಮಿಗಳಿಗೆ ಸಂಬಂಧಿತ ಅದರಲ್ಲೂ ಮುಖ್ಯವಾಗಿ ಜಿಎಸ್ ಟಿಯಂತಹ ತೆರಿಗೆಗಳ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಹಿತಾಸಕ್ತಿಯಲ್ಲಿ ಆಗಾಗ ಕಾರ್ಯಾಗಾರಗಳನ್ನು ಸಂಘದಲ್ಲಿ ನಡೆಸಲು ತಿಳಿಸಲಾಯಿತು.
ಸಂಘದ ಅಧ್ಯಕ್ಷ ಎನ್. ಗೋಪಿನಾಥ್, ತೆರಿಗೆ ಸಲಹಾ ಸಮಿತಿ ಚೇರ್ಮನ್ ಇ. ಪರಮೇಶ್ವರ, ಪ್ರದೀಪ್ ವಿ. ಉದಯ್ ಕುಮಾರ್, ಸಂತೋಷ್, ಜಗದೀಶ್, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಎಂ.ಎ. ರಮೇಶ್ ಹೆಗಡೆ ಮತ್ತು ಇನ್ನಿತರರು ಉಪಸ್ಥಿತರಿದ್ದರು.