- Rajana Foundation Trust ಭಾರತವನ್ನು ತಿಳಿಯಿರಿ – ಪ್ರೌಢಶಾಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆRajana Foundation Trust ರಜನಾ ಫೌಂಡೇಶನ್ ಟ್ರಸ್ಟ್, ಹೊಸಪೇಟೆ ಇವರು ಕನ್ನಡ, ಸಂಸ್ಕೃತಿ, ಸಂಸ್ಕಾರ ಮತ್ತು ರಾಷ್ಟ್ರೀಯತೆಯ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಶಿಕ್ಷಣ ಕ್ಷೇತ್ರ ಹಾಗೂ ಕುಟುಂಬ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ವಿವಿಧ ಚಟುವಟಿಕೆಗಳ ಮೂಲಕ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಾರ್ಯಕ್ರಮದ ಅಂಗವಾಗಿ, ಹೊಸಪೇಟೆಯ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ “ಭಾರತವನ್ನು ತಿಳಿಯಿರಿ” ಎಂಬ ವಿಷಯದ ಮೇಲೆ ದಿನಾಂಕ 10-01-2026 ರಂದು ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಪ್ರಥಮ ಹಂತದ ಸ್ಪರ್ಧೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಮೂರು… Read more: Rajana Foundation Trust ಭಾರತವನ್ನು ತಿಳಿಯಿರಿ – ಪ್ರೌಢಶಾಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ
- ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (AI) ‘ಸಂಪಾದಕನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ – ಶ್ರೀಕರ್ ಪ್ರಸಾದ್“ತಂತ್ರಜ್ಞಾನ ಎಷ್ಟೇ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಬೇಕಾದ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ (AI) ನೀಡಲು ಸಾಧ್ಯವಿಲ್ಲ,” ಎಂದು ಹಿರಿಯ ಚಲನಚಿತ್ರ ಸಂಕಲನಕಾರ ಶ್ರೀಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. ಸಂಶೋಧನೆ ಮತ್ತು ದಕ್ಷತೆಯ ದೃಷ್ಟಿಯಿಂದ AI ಉಪಯುಕ್ತ ಸಾಧನವಾಗಿದ್ದರೂ, ಸಂಕಲನವು ಮೂಲಭೂತವಾಗಿ ಮಾನವನ ಸಹಜ ಪ್ರವೃತ್ತಿ, ಅನುಭವ ಮತ್ತು ಭಾವನೆಗಳ ಆಧಾರದ ಮೇಲೆ ನಡೆಯುವ ಪ್ರಕ್ರಿಯೆ ಎಂದು ಪ್ರಸಾದ್ ಪ್ರತಿಪಾದಿಸಿದರು. “ಸಿನಿಮಾ ಎನ್ನುವುದು ಕೇವಲ ದೃಶ್ಯಗಳ ಜೋಡಣೆಯಲ್ಲ; ಅದು ಕಥೆ ಹೇಳುವ ಕಲೆ. ಭಾವನೆಗಳು… Read more: ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (AI) ‘ಸಂಪಾದಕನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ – ಶ್ರೀಕರ್ ಪ್ರಸಾದ್
- CM Siddharamaiah ಪರಸರ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಯಾಗಲಿ : ಸಿಎಂ ಸಿದ್ದರಾಮಯ್ಯCM Siddharamaiah ಮಲೆನಾಡು, ಕರಾವಳಿ ಹಾಗೂ ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯಗಳಾಗಿವೆ. ಅವು ಇಡೀ ಭಾರತದ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿವೆ. ಅಲ್ಲಿನ ಕೃಷಿಕರ ಬದುಕು ಸಂಕಷ್ಟದಲ್ಲಿದೆ. ಅದಕ್ಕಾಗಿ ವಿಶೇಷ ಅನುದಾನಗಳನ್ನು ಒದಗಿಸಬೇಕು. ಅಲ್ಲದೆ, ರಾಜಸ್ಥಾನದ ನಂತರ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಒಣ ಭೂಮಿಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಅದಕ್ಕೆ ಅನುದಾನಗಳನ್ನು ಕೊಡಬೇಕು ಎನ್ನುವುದು ಕರ್ನಾಟಕದ ಒತ್ತಾಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ… Read more: CM Siddharamaiah ಪರಸರ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಯಾಗಲಿ : ಸಿಎಂ ಸಿದ್ದರಾಮಯ್ಯ
- Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪMadhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ “ತರಳಬಾಳು ಹುಣ್ಣಿಮೆ ಮಹೋತ್ಸವ-2026″ ರ ಧರ್ಮಸಭೆಯಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಾಲ್ಗೊಂಡು, ಸಿರಿಗೆರೆಯ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು.. “ಸದ್ಧರ್ಮ ನ್ಯಾಯಪೀಠ”ದ ಮೂಲಕ ನ್ಯಾಯದ ಹಾದಿ ತೋರಿಸುವ, “ಅಕ್ಷರ ಮತ್ತು ಅನ್ನ ದಾಸೋಹ”ದ ಮೂಲಕ ಬದುಕು ಕಟ್ಟಿಕೊಡುವ ಜೊತೆಗೆ 12ನೇ ಶತಮಾನದ ಶರಣ ಸಂಸ್ಕೃತಿಯನ್ನು ಇಂದಿನ ಆಧುನಿಕ ಕಾಲದ ಅಗತ್ಯಕ್ಕೆ ತಕ್ಕಂತೆ ಮುನ್ನಡೆಸುತ್ತಿರುವ ಶ್ರೀಮಠದ ಕಾರ್ಯವೈಖರಿ ಇಡೀ ಜಗತ್ತಿಗೇ… Read more: Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ
- Karnataka State Cricket Association ಕೆಎಸ್ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕKarnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ ಕ್ರಿಕೆಟ್ ಕ್ಲಬ್ನ ಶ್ರೀ ನಾಗೇಂದ್ರ ಕೆ. ಪಂಡಿತ್ ಅವರನ್ನು ಕೆಎಸ್ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲಾಗಿದೆ. ಶ್ರೀ ನಾಗೇಂದ್ರ ಪಂಡಿತ್ ಅವರು ಸುಮಾರು 50 ವರ್ಷಗಳ ಕ್ರಿಕೆಟ್ ಅನುಭವ ಹೊಂದಿರುವ ಅತ್ಯಂತ ಉತ್ಸಾಹಿ ಕ್ರಿಕೆಟಿಗ ಹಾಗೂ ಅನುಭವಿ ಕ್ರಿಕೆಟ್ ನಿರ್ವಹಣಾಧಿಕಾರಿ ಆಗಿದ್ದಾರೆ. ಅವರು ಕ್ರಿಕೆಟಿಗರಾಗಿಯೂ ಹಾಗೂ ಆಡಳಿತಗಾರರಾಗಿಯೂ ಸೇವೆ ಸಲ್ಲಿಸಿದ್ದು, ಕೆನರಾ ಬ್ಯಾಂಕ್ನ ಮಾಜಿ ನೌಕರರಾಗಿದ್ದಾರೆ. ಕೆನರಾ ಬ್ಯಾಂಕ್ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದು,… Read more: Karnataka State Cricket Association ಕೆಎಸ್ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ
- MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆMESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
- Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆShivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿದ್ದ ಮೂವರಿಗೆ ಜಿಲ್ಲಾ 1 ನೇ ಹೆಚ್ಚುವರಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾವಾಸ ಮತ್ತು 12,000 ರೂ ದಂಡವನ್ನು ವಿಧಿಸಿದೆ. ಕೆಲಸ ಮಾಡಿದ ಹಣವನ್ನು ಪಡೆದುಕೊಂಡು ವಾಪಸ್ ಮನೆಗೆ ಬರುತ್ತಿರುವಾಗ ಕಿರಣ್ ಎಂಬಾತನ್ನ ಮೇಲೆ ಮೂವರು ಮಾರಣಾಂತಿಕ ಹಲ್ಲೆ ನಡೆಸಿದರು. ಹಲ್ಲೆ ನಡೆಸಿದಮಂಜುನಾಥ ಬಡಾವಣೆಯ ವಾಸಿಗಳಾದ ಸಂತೋಷ್ ಅಲಿಯಾಸ್ ಸಂತು (27), ಶರತ್ (24)… Read more: Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ
- Bangalore International Film Festival ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನವೀನ್ ಶಂಕರ್ ಅಭಿನಯದ “ನೋಡಿದವರು ಏನಂತಾರೆ” ಚಿತ್ರ ಪ್ರದರ್ಶನBangalore International Film Festival ನಟ ನವೀನ್ ಶಂಕರ್ ನಾಯಕನಾಗಿ ನಟಿಸಿರುವ ಹಾಗೂ ಕುಲದೀಪ್ ಕಾರಿಯಪ್ಪ ನಿರ್ದೇಶಿಸಿರುವ “ನೋಡಿದವರು ಏನಂತಾರೆ” ಚಿತ್ರ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಜನಪ್ರಿಯ ಕನ್ನಡ ಸಿನಿಮಾ ವಿಭಾಗದಲ್ಲಿ ಪ್ರದರ್ಶನವಾಯಿತು. ಪ್ರದರ್ಶನದ ನಂತರ ಚಿತ್ರತಂಡದವರು ಮಾತನಾಡಿದರು. ಚಿತ್ರಮಂದಿರದಲ್ಲಿ ನಮ್ಮ ಚಿತ್ರ ನೋಡಿದವರು ಮೆಚ್ಚಿಕೊಂಡಿದ್ದರು. ಈಗ ಚಿತ್ರೋತ್ಸವದಲ್ಲೂ ನಮ್ಮ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು ನಿರ್ದೇಶಕ ಕುಲದೀಪ್ ಕಾರಿಯಪ್ಪ. ನಮ್ಮ ಚಿತ್ರ ಈ ಬಾರಿಯ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ. ಸಿನಿಮಾಗಳ… Read more: Bangalore International Film Festival ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನವೀನ್ ಶಂಕರ್ ಅಭಿನಯದ “ನೋಡಿದವರು ಏನಂತಾರೆ” ಚಿತ್ರ ಪ್ರದರ್ಶನ
- ಮರಗಳ ಹತ್ಯೆಗೆ ಮೊದಲು ನನಗೆ ದಯಾಮರಣ ನೀಡಿ : ವಿಶುಕುಮಾರ್ಶ್ರೀಗಂಧ ಮರಗಳನ್ನು ಕಡಿತಲೆ ಮಾಡುವುದಕ್ಕಿಂತ ಮೊದಲು ನನಗೆ ದಯಾಮರಣ ದಯಪಾಲಿಸಿ” ಎಂದು ರಾಷ್ಟ್ರಪತಿ, ಪ್ರಧಾನಿ ಹಾಗೂ ಮುಖ್ಯಮಂತ್ರಿ ಅವರಿಗೆ ಭೂಸ್ವಾಧೀನ ಪ್ರಾಧಿಕಾರದ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಫೆ.2ಕ್ಕೆ ಶ್ರೀಗಂಧ ಮರಗಳನ್ನು ಕಡಿತಲೆ ಮಾಡಲಾಗುವುದು ಎಂದು ಜ.27ಕ್ಕೆ ನೋಟಿಸ್ ನೀಡುತ್ತಾರೆ. ಆದರೆ ಈ ವಿಷಯ ಈಗಾಗಲೇ ನ್ಯಾಯಾಲಯದ ವಿಚಾರಣೆಯಲ್ಲಿರುವ ಸಂದರ್ಭದಲ್ಲಿ ಅಧಿಕಾರಿಗಳು ಮರ ಕಡಿತಲೆ ಮುಂದಾಗಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.ತಾವು ಸುಮಾರು 30 ವರ್ಷಗಳಿಂದ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಶ್ರೀಗಂಧ… Read more: ಮರಗಳ ಹತ್ಯೆಗೆ ಮೊದಲು ನನಗೆ ದಯಾಮರಣ ನೀಡಿ : ವಿಶುಕುಮಾರ್
- B.Y.Raghavendra ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಜಿಲ್ಲಾ ಜಾಗೃತಿ ಸಮಾವೇಶB.Y.Raghavendra ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಜನತಾ ಪಾರ್ಟಿ, ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ “ಜಿಲ್ಲಾ ಜಾಗೃತಿ ಸಮಾವೇಶ”ದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು. ಗ್ರಾಮೀಣ ಭಾಗದ ಜನತೆಯ ಆರ್ಥಿಕ ಸಬಲೀಕರಣ, ಉದ್ಯೋಗ ಹಾಗೂ ಆಜೀವಿಕಾವಕಾಶಗಳ ವೃದ್ಧಿ ಗುರಿಯಾಗಿಟ್ಟುಕೊಂಡು, ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ “ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಮಿಷನ್ – ಗ್ರಾಮೀಣ (VB-G RAM G)” ಯೋಜನೆಯ ಕುರಿತು, ಪಕ್ಷದ… Read more: B.Y.Raghavendra ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಜಿಲ್ಲಾ ಜಾಗೃತಿ ಸಮಾವೇಶ
Book Your Advertisement Now in Shimoga News.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Shimoga News ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App

KLIVE Android App on Google Play Store

Download the most loved Klive App for your Android phone or tablet.
