Friday, October 4, 2024
Friday, October 4, 2024

ಶಿವಮೊಗ್ಗಕ್ಕೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಳ ಪರಿಶೀಲನೆ

Date:

ಸಮುದಾಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಸದುದ್ದೇಶದಿಂದ ಕೇಂದ್ರ ಸರ್ಕಾರದ ನೆರವಿನೊಂದಿಗೆ ನಗರಕ್ಕೆ ಹತ್ತಿರದಲ್ಲಿ ಸ್ಥಳವನ್ನು ಗುರುತಿಸಿ, ದ್ವಿತೀಯ ಹಂತದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಆರಂಭಿಸಲು ಉದ್ಧೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಈ ಸಂಬಂಧ ಮಾಧ್ಯಮದವರಿಗೆ ವಿವರ ನೀಡಿದರು. ಉದ್ಯಮ ಮತ್ತು ಮಾನವ ಅಭಿವೃದ್ಧಿಗಾಗಿ ಕೈಗೊಳ್ಳುವ ಎಲ್ಲಾ ಚಟುವಟಿಕೆಗಳಲ್ಲಿ ವಿಜ್ಞಾನವನ್ನು ಅನ್ವಯಗೊಳಿಸಲು, ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಹಿನ್ನೆಲೆಯಲ್ಲಿ ಹಾಗೂ ಜನಸಾಮಾನ್ಯರಲ್ಲಿ ಅದರ ಅರಿವನ್ನು ಉಳಿಸಿ ಬೆಳೆಸಲು ಪ್ರಾದೇಶಿಕ ವಿಜ್ಞಾನ ಕೇಂದ್ರ ಸಹಕಾರಿಯಾಗಲಿದೆ ಎಂದವರು ನುಡಿದರು.

ಸದರಿ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ವಿಷಯಗಳ ಪ್ರದರ್ಶನಗಳು, ವಿಚಾರಸಂಕಿರಣಗಳು, ಉಪನ್ಯಾಸಗಳು, ವಿಜ್ಞಾನ ಶಿಬಿರಗಳು ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಜನರಲ್ಲಿ ವಿಜ್ಞಾನ ವಿಷಯಗಳಲ್ಲಿ ಅಭಿರುಚಿ ಉಂಟು ಮಾಡಲಾಗುವುದು ಎಂದರು.

ಶಾಲಾ-ಕಾಲೇಜುಗಳಲ್ಲಿ ನೀಡುವ ವಿಜ್ಞಾನ ಶಿಕ್ಷಣಕ್ಕೆ ಪೂರಕವಾಗಿ ವೈಜ್ಞಾನಿಕ ಮತ್ತು ಸೃಜನಶೀಲ ಚಿಂತನೆಯನ್ನು ಬೆಳೆಸಲು ಶಾಲೆಯಿಂದ ಹೊರಗೆ ಹಲವು ಶೈಕ್ಷಣಿಕ ಚಟುವಟಿಕೆಗಳನ್ನು ಆಯೋಜಿಸುವಲ್ಲಿ ಈ ಕೇಂದ್ರ ಸಕ್ರಿಯವಾಗಿರಲಿದೆ. ಅಲ್ಲದೇ ವಿಜ್ಞಾನ ಶಿಕ್ಷಣ ಮತ್ತು ಅದರ ಜನಪ್ರಿಯತೆಗಾಗಿ ವಿಜ್ಞಾನ ಸಂಗ್ರಹಾಲಯ, ಪ್ರದರ್ಶನ ಉಪಕರಣಗಳು ಮತ್ತು ವೈಜ್ಞಾನಿಕ ಬೋಧನಾ ಸಾಧನಗಳನ್ನು ಅಭಿವೃದ್ಧಿಪಡಿಸಲು ಮತ್ತು ತಯಾರಿಸುವಲ್ಲಿ ಈ ಕೇಂದ್ರ ಕಾರ್ಯನಿರ್ವಹಿಸಲಿದೆ ಎಂದರು.

ವಿಶೇಷವಾಗಿ ವಿಜ್ಞಾನ ಶಿಕ್ಷಕರು, ವಿದ್ಯಾರ್ಥಿಗಳು, ಯುವ ಉದ್ಯಮಿಗಳು, ತಂತ್ರಜ್ಞರು, ದೈಹಿಕ ವಿಕಲಚೇತನರು, ಗೃಹಣಿಯರು ಮತ್ತು ಆಸಕ್ತರಿಗಾಗಿ ಕೆಲವು ನಿರ್ಧಿಷ್ಟ ವಿಷಯಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದ ಅವರು ಈ ಕೇಂದ್ರದ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರದ ಮೂಲಕ 15-20ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಿದೆ ಎಂದರು.

ಮಂಗಳೂರು, ಧಾರವಾಡ, ಬೆಂಗಳೂರು ನಂತರ ಶಿವಮೊಗ್ಗ ರಾಜ್ಯದ ನಾಲ್ಕನೇ ವಿಜ್ಞಾನ ಕೇಂದ್ರವಾಗಿರಲಿದ್ದು, ಶಿವಮೊಗ್ಗ ಮತ್ತು ನೆರೆಯ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮತ್ತು ಆಸಕ್ತ ನಾಗರೀಕರಿಗೆ ವಿಜ್ಞಾನದ ಬಗ್ಗೆ ಹೆಚ್ಚಿನ ವಿಷಯ ತಿಳಿದುಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಸ್ಥಳ ಪರಿಶೀಲನಾಗಿ ಆಗಮಿಸಿದ್ದ ತಜ್ಞರ ತಂಡದವರು ನವುಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸಿ.ಎಸ್.ಐ. ಆಸ್ಪತ್ರೆಗೆ ಹೊಂದಿಕೊಂಡಂತೆ ಗುರುತಿಸಲಾಗಿದ್ದ ನಿವೇಶನ ಮತ್ತು ಸಹ್ಯಾದ್ರಿ ಕಾಲೇಜಿನ ಆವರಣದ ಪ್ರದೇಶಗಳನ್ನು ವೀಕ್ಷಿಸಿ, ಭೂಮಿಗೆ ಸಂಬಂಧಿಸಿದಂತ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ತಂಡದಲ್ಲಿ ತಜ್ಞ ಎಸ್.ಕುಮಾರ್, ಕೊಲ್ಕತ್ತಾ, ಶ್ರೀಮತಿ ಕೆ.ಎ.ಸಾಧನ ಬೆಂಗಳೂರು, ಎಸ್.ಸಿಕಾದಾರ್ ಕೊಲ್ಕತ್ತಾ, ಡಾ|| ಎಮ್.ಎಸ್.ರವಿಕುಮಾರ್ ಮತ್ತು ವಿಶ್ವಕೀರ್ತಿ, ಇವರೊಂದಿಗೆ ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಕೈಗಾರಿಕಾ ಅಭಿವೃದ್ಧಿ ನಿಗಮದ ರಾಜ್ಯ ಉಪಾಧ್ಯಕ್ಷ ದತ್ತಾತ್ರಿ, ಸೂಡಾ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ್, ಜಗದೀಶ್, ಕುವೆಂಪು ವಿವಿ ರಿಜಿಸ್ಟ್ರಾರ್ ಶ್ರೀಮತಿ ಜಿ.ಅನುರಾಧ, ಅಪರ ಜಿಲ್ಲಾಧಿಕಾರಿ ಡಾ||ನಾಗೇಂದ್ರ ಎಫ್.ಹೊನ್ನಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ರಮೇಶ್, ಉಮಾಮಹೇಶ್, ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...