Monday, February 2, 2026
Monday, February 2, 2026
Home Blog

Rajana Foundation Trust ಭಾರತವನ್ನು ತಿಳಿಯಿರಿ – ಪ್ರೌಢಶಾಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ

0

Rajana Foundation Trust ರಜನಾ ಫೌಂಡೇಶನ್ ಟ್ರಸ್ಟ್, ಹೊಸಪೇಟೆ ಇವರು ಕನ್ನಡ, ಸಂಸ್ಕೃತಿ, ಸಂಸ್ಕಾರ ಮತ್ತು ರಾಷ್ಟ್ರೀಯತೆಯ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಶಿಕ್ಷಣ ಕ್ಷೇತ್ರ ಹಾಗೂ ಕುಟುಂಬ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ವಿವಿಧ ಚಟುವಟಿಕೆಗಳ ಮೂಲಕ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಕಾರ್ಯಕ್ರಮದ ಅಂಗವಾಗಿ, ಹೊಸಪೇಟೆಯ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ “ಭಾರತವನ್ನು ತಿಳಿಯಿರಿ” ಎಂಬ ವಿಷಯದ ಮೇಲೆ ದಿನಾಂಕ 10-01-2026 ರಂದು ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಪ್ರಥಮ ಹಂತದ ಸ್ಪರ್ಧೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಮೂರು ಶಾಲೆಗಳ ವಿದ್ಯಾರ್ಥಿಗಳಿಗೆ ದಿನಾಂಕ 22-01-2026 ರಂದು ಹೊಸಪೇಟೆಯ ಶ್ರೀ ನರ್ಬಾದಬಾಯಿ ಪ್ರೌಢಶಾಲೆಯಲ್ಲಿ ಎರಡನೇ ಹಂತದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಈ ಅಂತಿಮ ಸ್ಪರ್ಧೆಯಲ್ಲಿ
ಹೊಸಪೇಟೆ ನೆಹರು ಕಾಲೋನಿಯ ಸರ್ಕಾರಿ ಪ್ರೌಢಶಾಲೆ – ಪ್ರಥಮ ಸ್ಥಾನ
ಶ್ರೀ ನರ್ಬಾದಬಾಯಿ ಪ್ರೌಢಶಾಲೆ – ದ್ವಿತೀಯ ಸ್ಥಾನ
ಕೆ.ಎಸ್.ಪಿ.ಎಲ್. ಪ್ರೌಢಶಾಲೆ – ತೃತೀಯ ಸ್ಥಾನ ಪಡೆದಿರುತ್ತವೆ.

ಕಾರ್ಯಕ್ರಮದಲ್ಲಿ ಕಿರ್ಲೋಸ್ಕರ್ ಆಫೀಸರ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಕಮಲಾ ಗುಮಾಸ್ತೆ ಹಾಗೂ ಹೊಸಪೇಟೆಯ ಖಜಾನೆಯ ನಿವೃತ್ತ ಅಧಿಕಾರಿಗಳಾದ ಶ್ರೀ ವೆಂಕಟೇಶ್ ಮೂರ್ತಿ ಅವರು ಬಹುಮಾನ ಗಳಿಸಿದ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳು ಮತ್ತು ಪದಕಗಳನ್ನು ಪ್ರದಾನ ಮಾಡಿದರು. ಅತಿಥಿಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೋತ್ಸಾಹಕಾರಿ ಮಾತುಗಳನ್ನು ಆಡಿದರು.

ಈ ಕಾರ್ಯಕ್ರಮದ ಮುಖ್ಯ ರೂವಾರಿಯಾಗಿದ್ದ ರಚನಾ ಫೌಂಡೇಶನ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಅವರು ರಸಪ್ರಶ್ನೆ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಿಕೊಟ್ಟರು.

ಅಚ್ಚುಕಟ್ಟಾಗಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿ ಪೂರ್ಣಗೊಳಿಸುವಲ್ಲಿ ಹೊಸಪೇಟೆಯ ರಚನಾ ಫೌಂಡೇಶನ್ ಸಂಚಾಲಕರು ಹಾಗೂ ಕಿರ್ಲೋಸ್ಕರ್ ಕಾರ್ಖಾನೆಯ ಸುರಕ್ಷತಾ ವಿಭಾಗದ ಮ್ಯಾನೇಜರ್ ಶ್ರೀ ಮುರುಳೀಧರ್ ನಾಡಿಗೇರ್ ಅವರು ಕಳೆದ ಒಂದು ತಿಂಗಳಿನಿಂದ ಶ್ರಮವಹಿಸಿ ಪ್ರಮುಖ ಪಾತ್ರವಹಿಸಿದರು.

Rajana Foundation Trust ಕಾರ್ಯಕ್ರಮವು ಭಾರತಮಾತೆಗೆ ಪೂಜೆ ಸಲ್ಲಿಸುವುದರೊಂದಿಗೆ ಪ್ರಾರಂಭವಾಗಿ ರಾಷ್ಟ್ರಗೀತೆಯೊಂದಿಗೆ ಸಮಾಪ್ತಿಯಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಕಮಲಾ ಗುಮಾಸ್ತೆ, ಶ್ರೀ ವೆಂಕಟೇಶ್ ಮೂರ್ತಿ ಹಾಗೂ ಈ ಕಾರ್ಯಕ್ರಮ ಆಯೋಜನೆಗೆ ನೇರ ಸಹಕಾರ ನೀಡಿದ ನರ್ಬಾದಬಾಯಿ ಪ್ರೌಢಶಾಲೆಯ ಉಪಾಧ್ಯಾಯಿನಿ ಶ್ರೀಮತಿ ರೀಥಾ ಇವರನ್ನು ಸನ್ಮಾನಿಸಿ ಧನ್ಯವಾದಗಳನ್ನು ಸಲ್ಲಿಸಲಾಯಿತು.

ವರಧಿ

ಮುರುಳೀಧರ್ ನಾಡಿಗೇರ್

ಸಿನಿಮಾಗೆ ಮಾನವ ಸಂವೇದನೆಯೇ ಜೀವಾಳ: ಕೃತಕ ಬುದ್ಧಿಮತ್ತೆಯಿಂದ (AI) ‘ಸಂಪಾದಕನ ದೃಷ್ಟಿ’ ಬದಲಿಸಲು ಸಾಧ್ಯವಿಲ್ಲ – ಶ್ರೀಕರ್ ಪ್ರಸಾದ್

0

“ತಂತ್ರಜ್ಞಾನ ಎಷ್ಟೇ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಬೇಕಾದ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ (AI) ನೀಡಲು ಸಾಧ್ಯವಿಲ್ಲ,” ಎಂದು ಹಿರಿಯ ಚಲನಚಿತ್ರ ಸಂಕಲನಕಾರ ಶ್ರೀಕರ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. ಸಂಶೋಧನೆ ಮತ್ತು ದಕ್ಷತೆಯ ದೃಷ್ಟಿಯಿಂದ AI ಉಪಯುಕ್ತ ಸಾಧನವಾಗಿದ್ದರೂ, ಸಂಕಲನವು ಮೂಲಭೂತವಾಗಿ ಮಾನವನ ಸಹಜ ಪ್ರವೃತ್ತಿ, ಅನುಭವ ಮತ್ತು ಭಾವನೆಗಳ ಆಧಾರದ ಮೇಲೆ ನಡೆಯುವ ಪ್ರಕ್ರಿಯೆ ಎಂದು ಪ್ರಸಾದ್ ಪ್ರತಿಪಾದಿಸಿದರು.

“ಸಿನಿಮಾ ಎನ್ನುವುದು ಕೇವಲ ದೃಶ್ಯಗಳ ಜೋಡಣೆಯಲ್ಲ; ಅದು ಕಥೆ ಹೇಳುವ ಕಲೆ. ಭಾವನೆಗಳು ಪ್ರೇಕ್ಷಕರನ್ನು ತಲುಪುವಂತೆ ಮಾಡುವುದು ಮತ್ತು ಚಿತ್ರದ ಲಯವನ್ನು (Rhythm) ಕಾಯ್ದುಕೊಳ್ಳುವುದು ಸಂಕಲನಕಾರನ ಜವಾಬ್ದಾರಿ,” ಎಂದು ಅವರು ವಿವರಿಸಿದರು. 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯೋಜಿಸಲಾಗಿದ್ದ ‘ದಿ ಇನ್ವಿಸಿಬಲ್ ಆರ್ಟ್ ಆಫ್ ಎಡಿಟಿಂಗ್’ (The Invisible Art of Editing) ಸಂವಾದದಲ್ಲಿ ಅವರು ಮಾತನಾಡಿದರು. ನಿರ್ಮಾಪಕ ಸಂದೀಪ್ ವಿಶ್ವನಾಥ್ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಚಿತ್ರೀಕರಣ ಆರಂಭವಾಗುವ ಮೊದಲೇ ಸಂಕಲನಕಾರನ ಕೆಲಸ ಶುರುವಾಗುತ್ತದೆ ಎಂಬುದು ಅವರ ನಂಬಿಕೆ. ಚಿತ್ರಕಥೆಯ ಮೊದಲ ಕರಡು ಸಿದ್ಧವಾದಾಗಲೇ ನಿರ್ದೇಶಕರೊಂದಿಗೆ ಚರ್ಚಿಸುವುದರಿಂದ, ಚಿತ್ರಕ್ಕೆ ದೃಶ್ಯ ಸ್ಪಷ್ಟತೆ ಮತ್ತು ನಿರೂಪಣೆಯ ಲಯವನ್ನು ನೀಡಲು ಸಾಧ್ಯವಾಗುತ್ತದೆ. “ಚಿತ್ರೀಕರಣದ ಸಮಯದಲ್ಲಿ ಸ್ಥಳ, ಬಜೆಟ್ ಮತ್ತು ಕಲಾವಿದರ ನಟನೆಯ ಆಧಾರದ ಮೇಲೆ ಚಿತ್ರಕಥೆ ಬದಲಾಗುತ್ತಾ ಹೋಗುತ್ತದೆ. ಅಂತಿಮವಾಗಿ ಎಡಿಟಿಂಗ್ ಟೇಬಲ್ ಮೇಲೆಯೇ ಸಿನಿಮಾ ಹೊಸ ರೂಪ ಪಡೆಯುತ್ತದೆ,” ಎಂದು ಅವರು ಹೇಳಿದರು.
ತಮ್ಮ ಕೆಲಸದಲ್ಲಿ ವಸ್ತುನಿಷ್ಠತೆಯನ್ನು ಕಾಪಾಡಿಕೊಳ್ಳಲು ಚಿತ್ರೀಕರಣ ನಡೆಯುವ ಸ್ಥಳಕ್ಕೆ (Set) ಭೇಟಿ ನೀಡುವುದಿಲ್ಲ ಎಂದು ಹೇಳಿದ ಶ್ರೀಕರ್ ಪ್ರಸಾದ್ ಬಹಿರಂಗಪಡಿಸಿದರು, ʼಸೆಟ್‌ನಲ್ಲಿನ ಕಷ್ಟಗಳು ಅಥವಾ ವಾತಾವರಣದ ಪ್ರಭಾವವಿಲ್ಲದೆ, ಒಬ್ಬ ಸಾಮಾನ್ಯ ಪ್ರೇಕ್ಷಕನಂತೆ ದೃಶ್ಯಗಳನ್ನು ನೋಡಿ ಅವುಗಳ ಸಿನಿಮಾ ನಿರ್ಧರಿಸಲು ಇದು ಸಹಕಾರಿ. ಆದರೆ, ಶೂಟಿಂಗ್ ಆರಂಭವಾದ ಮೊದಲ ಹತ್ತು ದಿನಗಳಲ್ಲೇ ಎಡಿಟಿಂಗ್ ಪ್ರಕ್ರಿಯೆ ನಡೆಸುವುದರಿಂದ ಚಿತ್ರದ ಧಾಟಿ ಅಥವಾ ನಟನೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಸಾಧ್ಯವಾಗುತ್ತದೆʼ ಎಂದು ಹೇಳಿದರು.
ಸಂಕಲನದಲ್ಲಿ ಮೈಕ್ರೋ ಮತ್ತು ಮಾಕ್ರೊ ಎಡಿಟಿಂಗ್‌ ಹಂತಗಳನ್ನು ವಿವರಿಸಿದ ಅವರು, ʼಕೆಲವೊಮ್ಮೆ ಪ್ರತ್ಯೇಕವಾಗಿ ನೋಡಿದಾಗ ಅದ್ಭುತವೆನಿಸುವ ದೃಶ್ಯಗಳು, ಇಡೀ ಸಿನಿಮಾದ ವೇಗಕ್ಕೆ ಅಡ್ಡಿಯಾಗಬಹುದು. ಅಂತಹ ಸಂದರ್ಭದಲ್ಲಿ ಆ ದೃಶ್ಯಗಳನ್ನು ತೆಗೆಯುವ ಧೈರ್ಯ ಮಾಡಬೇಕು. ಒಂದು ಸಣ್ಣ ತಪ್ಪು ದೃಶ್ಯವೂ ಪ್ರೇಕ್ಷಕ ಮತ್ತು ಸಿನಿಮಾದ ನಡುವಿನ ಭಾವನಾತ್ಮಕ ಸಂಬಂಧವನ್ನು ಕಡಿದುಹಾಕಬಲ್ಲದುʼ ಎಂದು ಎಚ್ಚರಿಸಿದರು.
ದೃಶ್ಯ ಪರಿಣಾಮಗಳ (VFX) ಬಗ್ಗೆ ಮಾತನಾಡುತ್ತಾ, ʼತಂತ್ರಜ್ಞಾನವು ಕಥೆಯನ್ನು ಮೀರಿಸಬಾರದು; ಬದಲಿಗೆ ಕಥೆಯನ್ನು ಪೂರಕವಾಗಿ ಬೆಂಬಲಿಸಬೇಕು. ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಹೊಂದಿಕೊಳ್ಳದಿದ್ದರೆ ಪ್ರಸ್ತುತತೆಯನ್ನು ಕಳೆದುಕೊಳ್ಳಬೇಕಾಗುತ್ತದೆ. ಏನೇ ಬದಲಾದರೂ ಸಿನಿಮಾ ಮಾತ್ರ ಎಂದಿಗೂ ಮಾನವ ಸಂವೇದನೆಯ ಕಲಾಪ್ರಕಾರವಾಗಿಯೇ ಉಳಿಯಲಿದೆʼ ಎಂದರು.

CM Siddharamaiah ಪರಸರ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಯಾಗಲಿ : ಸಿಎಂ ಸಿದ್ದರಾಮಯ್ಯ

0

CM Siddharamaiah ಮಲೆನಾಡು, ಕರಾವಳಿ ಹಾಗೂ ಪಶ್ಚಿಮ ಘಟ್ಟಗಳು ಪರಿಸರ ಸೂಕ್ಷ್ಮ ವಲಯಗಳಾಗಿವೆ. ಅವು ಇಡೀ ಭಾರತದ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಬಹುದೊಡ್ಡ ಪಾತ್ರ ವಹಿಸುತ್ತಿವೆ. ಅಲ್ಲಿನ ಕೃಷಿಕರ ಬದುಕು ಸಂಕಷ್ಟದಲ್ಲಿದೆ. ಅದಕ್ಕಾಗಿ ವಿಶೇಷ ಅನುದಾನಗಳನ್ನು ಒದಗಿಸಬೇಕು. ಅಲ್ಲದೆ, ರಾಜಸ್ಥಾನದ ನಂತರ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಒಣ ಭೂಮಿಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ. ಅದಕ್ಕೆ ಅನುದಾನಗಳನ್ನು ಕೊಡಬೇಕು ಎನ್ನುವುದು ಕರ್ನಾಟಕದ ಒತ್ತಾಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಅನಿಸಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

0

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ “ತರಳಬಾಳು ಹುಣ್ಣಿಮೆ ಮಹೋತ್ಸವ-2026″ ರ ಧರ್ಮಸಭೆಯಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಾಲ್ಗೊಂಡು, ಸಿರಿಗೆರೆಯ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು..

“ಸದ್ಧರ್ಮ ನ್ಯಾಯಪೀಠ”ದ ಮೂಲಕ ನ್ಯಾಯದ ಹಾದಿ ತೋರಿಸುವ, “ಅಕ್ಷರ ಮತ್ತು ಅನ್ನ ದಾಸೋಹ”ದ ಮೂಲಕ ಬದುಕು ಕಟ್ಟಿಕೊಡುವ ಜೊತೆಗೆ 12ನೇ ಶತಮಾನದ ಶರಣ ಸಂಸ್ಕೃತಿಯನ್ನು ಇಂದಿನ ಆಧುನಿಕ ಕಾಲದ ಅಗತ್ಯಕ್ಕೆ ತಕ್ಕಂತೆ ಮುನ್ನಡೆಸುತ್ತಿರುವ ಶ್ರೀಮಠದ ಕಾರ್ಯವೈಖರಿ ಇಡೀ ಜಗತ್ತಿಗೇ ಮಾದರಿಯಾಗಿದೆ‌ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ , ಧರ್ಮಸಭೆಯಲ್ಲಿ ಹೇಳಿದರು.

Madhu Bangarappa ಶ್ರೀಗಳ ದೂರದೃಷ್ಟಿ ನಮಗೆಲ್ಲರಿಗೂ ಸ್ಫೂರ್ತಿ. ನನ್ನ ತಂದೆ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಎಸ್. ಬಂಗಾರಪ್ಪಾಜಿಯವರು ಶ್ರೀಮಠದೊಂದಿಗೆ ಹೊಂದಿದ್ದ ಅವಿನಾಭಾವ ಸಂಬಂಧವನ್ನು ಸ್ಮರಿಸುತ್ತಾ, ನಾನು ಕೂಡ ಪೂಜ್ಯ ಶ್ರೀಗಳ ಮಾರ್ಗದರ್ಶನದಲ್ಲಿ ಅವರ ಆಶೀರ್ವಾದದೊಂದಿಗೆ ಜನರ ಸೇವೆಯಲ್ಲಿ ಸದಾ ತೊಡಗಿಸಿಕೊಳ್ಳುವುದಕ್ಕೆ ಬದ್ಧನಾಗಿರುತ್ತೇನೆ ಎಂದು ಸಚಿವರು ತಿಳಿಸಿದರು.

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

0

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ ಕ್ರಿಕೆಟ್ ಕ್ಲಬ್‌ನ ಶ್ರೀ ನಾಗೇಂದ್ರ ಕೆ. ಪಂಡಿತ್ ಅವರನ್ನು ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲಾಗಿದೆ.

ಶ್ರೀ ನಾಗೇಂದ್ರ ಪಂಡಿತ್ ಅವರು ಸುಮಾರು 50 ವರ್ಷಗಳ ಕ್ರಿಕೆಟ್ ಅನುಭವ ಹೊಂದಿರುವ ಅತ್ಯಂತ ಉತ್ಸಾಹಿ ಕ್ರಿಕೆಟಿಗ ಹಾಗೂ ಅನುಭವಿ ಕ್ರಿಕೆಟ್ ನಿರ್ವಹಣಾಧಿಕಾರಿ ಆಗಿದ್ದಾರೆ. ಅವರು ಕ್ರಿಕೆಟಿಗರಾಗಿಯೂ ಹಾಗೂ ಆಡಳಿತಗಾರರಾಗಿಯೂ ಸೇವೆ ಸಲ್ಲಿಸಿದ್ದು, ಕೆನರಾ ಬ್ಯಾಂಕ್‌ನ ಮಾಜಿ ನೌಕರರಾಗಿದ್ದಾರೆ. ಕೆನರಾ ಬ್ಯಾಂಕ್ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದು, ತಂಡದ ನಾಯಕನಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅವರು ಸಾಗರದಲ್ಲಿರುವ ನಾಗೇಂದ್ರ ಪಂಡಿತ್ ಕ್ರಿಕೆಟ್ ಅಕಾಡೆಮಿಯ ಸ್ಥಾಪಕ ಅಧ್ಯಕ್ಷರಾಗಿದ್ದು, ಯುವ ಪ್ರತಿಭೆಗಳ ಪೋಷಣೆ ಹಾಗೂ ಮೂಲ ಮಟ್ಟದ ಕ್ರಿಕೆಟ್ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿರುವ ಪ್ರಸಿದ್ಧ ಸಂಸ್ಥೆಯಾಗಿದೆ.

Karnataka State Cricket Association ಶ್ರೀ ನಾಗೇಂದ್ರ ಕೆ. ಪಂಡಿತ್ ಅವರಿಗೆ ಅವರ ಹೊಸ ಜವಾಬ್ದಾರಿಗೆ ಹಾರ್ದಿಕ ಶುಭಾಶಯಗಳನ್ನು
ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ. ಅರ್ . ಜಯಂತ್, ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು , ಅಭಿನಂದಿಸಿದ್ದಾರೆ ಸಲ್ಲಿಸುತ್ತಿದ್ದು, ಅವರ ನೇತೃತ್ವದಲ್ಲಿ ಶಿವಮೊಗ್ಗ ವಲಯದ ಕ್ರಿಕೆಟಿಗರು ಹಾಗೂ ಕ್ರಿಕೆಟ್ ಚಟುವಟಿಕೆಗಳ ಸಮಗ್ರ ಬೆಳವಣಿಗೆಯನ್ನು ನಿರೀಕ್ಷಿಸಬಹುದು.

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

0

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

0

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿದ್ದ ಮೂವರಿಗೆ ಜಿಲ್ಲಾ 1 ನೇ ಹೆಚ್ಚುವರಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾವಾಸ ಮತ್ತು 12,000 ರೂ ದಂಡವನ್ನು ವಿಧಿಸಿದೆ. ಕೆಲಸ ಮಾಡಿದ ಹಣವನ್ನು ಪಡೆದುಕೊಂಡು ವಾಪಸ್ ಮನೆಗೆ ಬರುತ್ತಿರುವಾಗ ಕಿರಣ್ ಎಂಬಾತನ್ನ ಮೇಲೆ ಮೂವರು ಮಾರಣಾಂತಿಕ ಹಲ್ಲೆ ನಡೆಸಿದರು. ಹಲ್ಲೆ ನಡೆಸಿದ
ಮಂಜುನಾಥ ಬಡಾವಣೆಯ ವಾಸಿಗಳಾದ ಸಂತೋಷ್ ಅಲಿಯಾಸ್ ಸಂತು (27), ಶರತ್ (24) ಮತ್ತು ಬುದ್ಧ್ದನಗರದ ಪ್ರಶಾಂತ್ ಎಂ (24) ಶಿಕ್ಷೆ ನೀಡಿ ಕೋರ್ಟ್ ತೀರ್ಪು ನೀಡಿದೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿ ಪಿ ಎಸ್‌ಐ ತಿಮ್ಮಪ್ಪ ಪ್ರಕರಣದ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.
ನಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಬಿ.ಎಸ್.ಮಮತಾ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಅಭಯ್ ಧನಪಾಲ್ ಚೌಗಲಾ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Bangalore International Film Festival ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನವೀನ್ ಶಂಕರ್ ಅಭಿನಯದ “ನೋಡಿದವರು ಏನಂತಾರೆ” ಚಿತ್ರ ಪ್ರದರ್ಶನ

0

Bangalore International Film Festival ನಟ ನವೀನ್ ಶಂಕರ್ ನಾಯಕನಾಗಿ ನಟಿಸಿರುವ ಹಾಗೂ ಕುಲದೀಪ್ ಕಾರಿಯಪ್ಪ ನಿರ್ದೇಶಿಸಿರುವ “ನೋಡಿದವರು ಏನಂತಾರೆ” ಚಿತ್ರ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಜನಪ್ರಿಯ ಕನ್ನಡ ಸಿನಿಮಾ ವಿಭಾಗದಲ್ಲಿ ಪ್ರದರ್ಶನವಾಯಿತು. ಪ್ರದರ್ಶನದ ನಂತರ ಚಿತ್ರತಂಡದವರು ಮಾತನಾಡಿದರು.

ಚಿತ್ರಮಂದಿರದಲ್ಲಿ ನಮ್ಮ ಚಿತ್ರ ನೋಡಿದವರು ಮೆಚ್ಚಿಕೊಂಡಿದ್ದರು. ಈಗ ಚಿತ್ರೋತ್ಸವದಲ್ಲೂ ನಮ್ಮ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು ನಿರ್ದೇಶಕ ಕುಲದೀಪ್ ಕಾರಿಯಪ್ಪ.

ನಮ್ಮ ಚಿತ್ರ ಈ ಬಾರಿಯ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ. ಸಿನಿಮಾಗಳ ಹಬ್ಬವೆಂದೆ ಕರೆಯಲ್ಪಡುವ ಚಿತ್ರೋತ್ಸವದಲ್ಲಿ ನಮ್ಮ “ನೋಡಿದವರು ಏನಂತಾರೆ” ಚಿತ್ರವನ್ನು ನೋಡಿದವರು ಮೆಚ್ಚಿಕೊಂಡರು ಎಂದು ನಾಯಕ ನವೀನ್ ಶಂಕರ್ ತಿಳಿಸಿದರು.

ನಾನು ಈ ಹಿಂದೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸಿದ್ದೆ. ಈ ಬಾರಿ ನಾನು ನಾಯಕಿಯಾಗಿ ನಟಿಸಿರುವ “ನೋಡಿದವರು ಏನಂತಾರೆ” ಚಿತ್ರ ಬೆಂಗಳೂರು ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿರುವುದಕ್ಕೆ ಸಂತಸವಾಗಿದೆ ಎಂದು ನಾಯಕಿ ಅಪೂರ್ವ ಭಾರದ್ವಾಜ್ ಹೇಳಿದರು.

ಮರಗಳ ಹತ್ಯೆಗೆ ಮೊದಲು ನನಗೆ ದಯಾಮರಣ ನೀಡಿ : ವಿಶುಕುಮಾರ್

0

ಶ್ರೀಗಂಧ ಮರಗಳನ್ನು ಕಡಿತಲೆ ಮಾಡುವುದಕ್ಕಿಂತ ಮೊದಲು ನನಗೆ ದಯಾಮರಣ ದಯಪಾಲಿಸಿ” ಎಂದು ರಾಷ್ಟ್ರಪತಿ, ಪ್ರಧಾನಿ ಹಾಗೂ ಮುಖ್ಯಮಂತ್ರಿ ಅವರಿಗೆ ಭೂಸ್ವಾಧೀನ ಪ್ರಾಧಿಕಾರದ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಫೆ.2ಕ್ಕೆ ಶ್ರೀಗಂಧ ಮರಗಳನ್ನು ಕಡಿತಲೆ ಮಾಡಲಾಗುವುದು ಎಂದು ಜ.27ಕ್ಕೆ ನೋಟಿಸ್ ನೀಡುತ್ತಾರೆ. ಆದರೆ ಈ ವಿಷಯ ಈಗಾಗಲೇ ನ್ಯಾಯಾಲಯದ ವಿಚಾರಣೆಯಲ್ಲಿರುವ ಸಂದರ್ಭದಲ್ಲಿ ಅಧಿಕಾರಿಗಳು ಮರ ಕಡಿತಲೆ ಮುಂದಾಗಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ತಾವು ಸುಮಾರು 30 ವರ್ಷಗಳಿಂದ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಶ್ರೀಗಂಧ ಬೆಳೆ ಬೆಳೆಸಿಕೊಂಡು ಬಂದಿರುವುದಾಗಿ ತಿಳಿಸಿದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಜಾಹೀರಾತು ನೀಡಿ ಶ್ರೀಗಂಧ ಬೆಳೆಸಲು ರೈತರನ್ನು ಪ್ರೋತ್ಸಾಹಿಸಿತ್ತು. ಸರ್ಕಾರದ ಪ್ರೇರಣೆಯ ಮೇರೆಗೆ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ ಶ್ರೀಗಂಧ ಮರಗಳನ್ನು ಬೆಳೆಸಿದ್ದೇವೆ. ಆದರೆ ಈಗ ಅದಕ್ಕೆ ತಕ್ಕಂತೆ ಬೆಲೆ ನೀಡಿದೆ ಕಡಿತಲೆ ಮಾಡುವುದಕ್ಕೆ ಮುಂದಾಗಿರುವುದು ಅನ್ಯಾಯ ಎಂದು ಆರೋಪಿಸಿದರು.
ಅಧಿಕಾರಿಗಳ ಲಂಚಗುಳಿತನ ಹಾಗೂ ದೌರ್ಜನ್ಯದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಈಗಾಗಲೇ ಎರಡು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದೇನೆ ಎಂದರು. “ಆದರೆ ಈಗ ಆತ್ಮಹತ್ಯೆ ಮಾಡಿಕೊಳ್ಳಲು ಧೈರ್ಯ ಬರುತ್ತಿಲ್ಲ. ಆದ್ದರಿಂದ ಸರ್ಕಾರವೇ ಹೇಳಿದಂತೆ ಶ್ರೀಗಂಧ ಮರಗಳಿಗೆ ವೈಜ್ಞಾನಿಕವಾಗಿ ಯೋಗ್ಯ ಬೆಲೆ ನಿಗದಿ ಮಾಡಿ ಪರಿಹಾರ ನೀಡಿ. ಇಲ್ಲವಾದಲ್ಲಿ ನನ್ನ ಮರಗಳನ್ನು ಉಚಿತವಾಗಿ ತೆಗೆದುಕೊಳ್ಳಿ. ಆದರೆ ಅದಕ್ಕಿಂತ ಮೊದಲು ನನಗೆ ದಯಾಮರಣ ನೀಡಿ” ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕೆಲವು ಅಧಿಕಾರಿಗಳು ಶ್ರೀಗಂಧಕ್ಕೆ ಹಾಗೂ ಭೂತಾಯಿಗೆ ಅಪಮೌಲ್ಯ ಮಾಡುತ್ತಿರುವುದನ್ನು ನಾನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಕಿಡಿಕಾರಿದರು. ಶ್ರೀಗಂಧವು ರಾಷ್ಟ್ರದ ಅಮೂಲ್ಯ ಸಂಪತ್ತು. ಅದನ್ನು ಬೆಳೆಸಿದ ರೈತನಿಗೆ ಗೌರವ ನೀಡದೆ ದೌರ್ಜನ್ಯ ನಡೆಸುತ್ತಿರುವುದು ನೋವಿನ ಸಂಗತಿ ಎಂದು ಹೇಳಿದರು.
ಸಂದರ್ಭದಲ್ಲಿ ಕುಟುಂಬದ ಸದಸ್ಯರು, ಸ್ಥಳೀಯರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.

B.Y.Raghavendra ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಜಿಲ್ಲಾ ಜಾಗೃತಿ ಸಮಾವೇಶ

0

B.Y.Raghavendra ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಜನತಾ ಪಾರ್ಟಿ, ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ “ಜಿಲ್ಲಾ ಜಾಗೃತಿ ಸಮಾವೇಶ”ದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು.

ಗ್ರಾಮೀಣ ಭಾಗದ ಜನತೆಯ ಆರ್ಥಿಕ ಸಬಲೀಕರಣ, ಉದ್ಯೋಗ ಹಾಗೂ ಆಜೀವಿಕಾವಕಾಶಗಳ ವೃದ್ಧಿ ಗುರಿಯಾಗಿಟ್ಟುಕೊಂಡು, ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ “ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಮಿಷನ್ – ಗ್ರಾಮೀಣ (VB-G RAM G)” ಯೋಜನೆಯ ಕುರಿತು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಸಮಗ್ರ ಮಾಹಿತಿಯನ್ನ ಸಂಸದರು ನೀಡಿದರು.

B.Y.Raghavendra ಈ ಸಮಾವೇಶದಲ್ಲಿ ಉಡುಪಿ–ಚಿಕ್ಕಮಗಳೂರು ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ನಗರದ ಶಾಸಕರಾದ ಶ್ರೀ ಚನ್ನಬಸಪ್ಪ, ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಅಶೋಕ್ ನಾಯ್ಕ್, ಜಿಲ್ಲಾ ಬಿಜೆಪಿ ಅಧ್ಯಕ್ಷರು ಶ್ರೀ ಜಗದೀಶ ಎನ್, ಜಿಲ್ಲಾ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು