Saturday, December 6, 2025
Saturday, December 6, 2025
Home Blog

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

0

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು ಎಂದು ಉಷಾ ನರ್ಸಿಂಗ್ ಹೋಂ ವೈದ್ಯೆ ಡಾ. ರಕ್ಷಾ ರಾವ್ ಹೇಳಿದರು.
ಶಿವಮೊಗ್ಗ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ದೈವಜ್ಞ ಮಹಿಳಾ ಮಂಡಳಿ ವತಿಯಿಂದ ಭಾರತೀಯ ವೈದ್ಯಕೀಯ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಮತ್ತು ಜೀವ ಸುರಕ್ಷತೆ ತಿಳವಳಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು ಮೂರು ವರ್ಷಕ್ಕೆ ಒಂದು ಬಾರಿ ಮಾಡಿಸಿಕೊಳ್ಳಬೇಕು ಹಾಗೂ ಮ್ಯಾಮೊಗ್ರಫಿ ಟೆಸ್ಟ್ ಅನ್ನು ಎರಡು ವರ್ಷಗಳಿಗೆ ಒಂದು ಬಾರಿ ಮಾಡಿಸಬೇಕು ಎಂದು ತಿಳಿಸಿದರು.
Indian Medical Association ದೈವಜ್ಞ ಮಹಿಳಾ ಮಂಡಳಿ ಶಿವಮೊಗ್ಗ ಅಧ್ಯಕ್ಷೆ ಸೀಮಾ ಸದಾನಂದ್ ಮಾತನಾಡಿ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಅದರ ಬಗ್ಗೆ ಮುಂಚಿತವಾಗಿ ಜಾಗ್ರತೆ ವಹಿಸಲು ಅದಕ್ಕೆ ಸಂಬಂಧಿಸಿದ ತಪಾಸಣೆ ಪ್ಯಾಪ್ಸ್ ಮಿಯರ್ ಮತ್ತು ಮ್ಯಾಮೋಗ್ರಫಿ ತಪಾಸಣೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
117 ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಕೊಂಡರು. ಮಹಿಳೆಯರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಲು ಡಾ. ರಕ್ಷಾ ರಾವ್ ಅಗತ್ಯ ಮಾರ್ಗದರ್ಶನ ನೀಡಿ ಕ್ಯಾನ್ಸರ್ ಬಗ್ಗೆ ವಿವರಿಸಿದರು.
ದೈವಜ್ಞ ಮಹಿಳಾ ಮಂಡಳಿ ಶಿವಮೊಗ್ಗ ಕಾರ್ಯದರ್ಶಿ ವಾಣಿ ಪ್ರವೀಣ್, ಉಪಾಧ್ಯಕ್ಷೆ ಪ್ರೇಮ ರಮೇಶ್, ಅರ್ಚನಾ ಅಣ್ಣಪ್ಪ, ಸಹ ಕಾರ್ಯದರ್ಶಿ ಸುಧಾ ಸುರೇಶ್, ಚೇತನಾ ವಾದಿರಾಜ್, ಖಜಾಂಚಿ ರೂಪ ರವಿ, ನಿರ್ದೇಶಕರು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

ಡಿಸೆಂಬರ್ 6. ಗೃಹರಕ್ಷಕ ದಳ ದಿನಾಚರಣೆ ಸರ್ವ ಸಿದ್ಧತೆ

0

ಶಿವಮೊಗ್ಗ ಜಿಲ್ಲಾ ಗೃಹ ರಕ್ಷಕದಳವು ಡಿ. 06 ರಂದು ಸಂಜೆ 4.00ಕ್ಕೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆಯನ್ನು ಆಯೋಜಿಸಿದೆ.
ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವಿಶೇಷ ಆಹ್ವಾನಿತರು. ಜಿಲ್ಲಾ ಸಮಾದೇಷ್ಟರು ಡಾ. ಚೇತನ್ ಹೆಚ್.ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್. ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕ ಮಂಜುನಾಥ ಎಸ್. ಆರ್. ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಪ ಸಮಾದೇಷ್ಟರು ಹಾಲಪ್ಪ ಷ ಡಾವಣಗೇರಿ, ಜಿಲ್ಲೆಯ ಎಲ್ಲಾ ಅಧಿಕಾರಿ ವರ್ಗ, ಕಚೇರಿ ಸಿಬ್ಬಂದಿವರ್ಗ, ಘಟಕಾಧಿಕಾರಿಗಳು ಹಾಗೂ ಸಮಸ್ತ ಗೃಹರಕ್ಷಕ ಸದಸ್ಯರು, ಗೃಹರಕ್ಷಕದಳ ಉಪಸ್ಥಿತರಿರಲಿದ್ದಾರೆ.

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

0

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್ದು, ಈ ಉಪವಿಭಾಗ ವ್ಯಾಪ್ತಿಯ ಗ್ರಾಹಕರು ಈ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಮೆಸ್ಕಾಂ ತಿಳಿಸಿದೆ.

ಡಿಸೆಂಬರ್ 15 ರಿಂದ ತ್ಯಾಗರಾಜ ಪಂಚರತ್ನ ಕೃತಿಗಳ ಕಲಿಕಾ ಶಿಬಿರ

0

ಶಿವಮೊಗ್ಗ ನಗರದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಶಿಕ್ಷಣ ಮುಗಿಸಿರುವ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ದೊರೆಯುತ್ತಿದೆ.

ಶ್ರೀ ತ್ಯಾಗರಾಜ ಸ್ವಾಮಿಗಳ ಆರಾಧನೋತ್ಸವದ ಅಂಗವಾಗಿ, ಶ್ರೀ ಗುರುಗುಹ ಸಂಸ್ಥೆ ತನ್ನ 50 ನೇ ವರ್ಷದ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ, 15-12-2025 , ಶ್ರೀ ತ್ಯಾಗರಾಜ ಪಂಚರತ್ನ ಕೃತಿಗಳ ಉಚಿತ ಒಂದು ತಿಂಗಳ ಕಲಿಕಾ ಶಿಬಿರವನನ್ನು ನಡೆಸಲಾಗುತ್ತಿದೆ.

ಆಸಕ್ತರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 94482-41149, 9480915777 ಅನ್ನು ಸಂಪರ್ಕಿಸಬಹುದು.

Bangalore International Film Festival ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡ, ಭಾರತೀಯ ಮತ್ತು ಏಷಿಯನ್ ವಿಭಾಗಕ್ಕೆ ಚಲನಚಿತ್ರಗಳ ಪ್ರವೇಶಕ್ಕೆ ಪ್ರಕಟಣೆ

0

Bangalore International Film Festival FIAPF ಸಂಸ್ಥೆಯ ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿರುವ, ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು, ಕರ್ನಾಟಕ ರಾಜ್ಯದ ಮತ್ತು ಬೆಂಗಳೂರು ಮಹಾನಗರದ ಮಹತ್ವದ ಸಾಂಸ್ಕೃತಿಕ ಹಬ್ಬ. ಕರ್ನಾಟಕ ಸರ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಗಳ ಮೂಲಕ ಜನವರಿ 29 ರಿಂದ ಫೆಬ್ರವರಿ 6, 2026 ವರೆಗೆ ಹಮ್ಮಿಕೊಂಡಿರುವ 17ನೇt ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಿದ್ಧತೆಗಳು ಪ್ರಾರಂಭವಾಗಿವೆ.

ಎಂದಿನಂತೆ ಈ ಬಾರಿಯೂ “ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ”, ಭಾರತೀಯ ಚಲನಚಿತ್ರಗಳನ್ನು ಪ್ರತಿನಿಧಿಸುವ ‘ಚಿತ್ರಭಾರತಿ” ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗ ಮತ್ತು “ಏಷಿಯನ್ ಸಿನಿಮಾ” ಸ್ಪರ್ಧಾ ವಿಭಾಗಗಳಿಗೆ, ಆಯ್ಕೆಗಾಗಿ ಅರ್ಹ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ.

“ಕನ್ನಡ ಸಿನಿಮಾ ಸ್ಪರ್ಧಾ” ವಿಭಾಗದಲ್ಲಿ ಆಯ್ಕೆಗಾಗಿ ಸಲ್ಲಿಸಬೇಕಾದ ಕಥಾ ಚಿತ್ರಗಳು ಕನಿಷ್ಠ 70 ನಿಮಿಷದ ಅವಧಿಯಾಗಿದ್ದು, ಜನವರಿ 1, 2025 ರಿಂದ ಡಿಸೆಂಬರ್ 31, 2025 ರ ಒಳಗೆ ಎರಡೂ ದಿನಗಳನ್ನು ಒಳಗೊಂಡಂತೆ) ನಿರ್ಮಾಣಗೊಂಡಿರಬೇಕು. ಕನ್ನಡ ಮತ್ತು ಕರ್ನಾಟಕ ರಾಜ್ಯದ ಯಾವುದೇ ಉಪಭಾಷೆಯಲ್ಲಿ ತಯಾರಾಗಿರುವ ಕಥಾ ಚಿತ್ರಗಳು, ಸ್ಪರ್ಧಾ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತವೆ.

‘ಚಿತ್ರಭಾರತಿ’ -ಭಾರತೀಯ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ಆಯ್ಕೆಗಾಗಿ ಸಲ್ಲಿಸಲಿರುವ ಚಿತ್ರಗಳು ಜನವರಿ 1, 2025 ರಿಂದ ಡಿಸೆಂಬರ್ 31. 2025ರ ಒಳಗೆ (ಎರಡೂ ದಿನಗಳನ್ನು ಒಳಗೊಂಡಂತೆ) ನಿರ್ಮಾಣಗೊಂಡಿರಬೇಕು. ಹಾಗೂ ಭಾರತದ ಯಾವುದೇ ಭಾಷೆಯ ಕಥಾ ಚಿತ್ರವಾಗಿದ್ದು, ಕನಿಷ್ಠ 70 ನಿಮಿಷಗಳ ಅವಧಿಯ ಚಿತ್ರಗಳು ಸ್ಪರ್ಧಾ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತದೆ.

‘ಏಷಿಯಾ ಸಿನಿಮಾ ಸ್ಪರ್ಧಾ ವಿಭಾಗ”ದಲ್ಲಿ ಏಷಿಯಾದ ಯಾವುದೇ ದೇಶದಲ್ಲಿ, ಜನವರಿ 1, 2025 ರಿಂದ ಡಿಸೆಂಬರ್ 31, 2025ರ ಒಳಗೆ ಎರಡೂ ದಿನಗಳನ್ನು ಒಳಗೊಂಡಂತೆ) ತಯಾರಾದ, ಕನಿಷ್ಠ 70 ನಿಮಿಷಗಳ ಅವಧಿಯ ಚಿತ್ರಗಳು ಸರ್ಧಾತ್ಮಕ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತದೆ.

‘ಕನ್ನಡ ಚಲನಚಿತ್ರ’, ‘ಚಿತ್ರಭಾರತಿ’ – ಭಾರತೀಯ ಚಲನಚಿತ್ರ” ಮತ್ತು “ಏಷಿಯನ್ ಚಲನಚಿತ್ರ” ಸ್ಪರ್ಧಾ ವಿಭಾಗಕ್ಕೆ ಪ್ರವೇಶ ಬಯಸುವ ಕನ್ನಡ ಮತ್ತು ಭಾರತೀಯ ಭಾಷಾ ಚಲನಚಿತ್ರಗಳಿಗೆ, ಕೇಂದ್ರೀಯ ಚಲನಚಿತ್ರ ಪ್ರಮಾಣೀಕೃತ ಮಂಡಳಿ (CBFC), ನೀಡುವ ಪ್ರಮಾಣ ಪತ್ರದಲ್ಲಿ ನಮೂದಾಗುವ ದಿನಾಂಕವೇ, ಚಲನಚಿತ್ರ ನಿರ್ಮಾಣ ದಿನಾಂಕದ ಮಾನದಂಡವಾಗುತ್ತದೆ.

Bangalore International Film Festival 17 ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗಗಳಲ್ಲಿ ಆಯ್ಕೆಗಾಗಿ ಚಲನಚಿತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ದಿನಾಂಕ: ಡಿಸೆಂಬರ್ 06.12.2025 ರಿಂದ ಪ್ರಾರಂಭವಾಗಲಿದ್ದು, ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಸಲು www.biffes.org ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಸಿನಿಮಾಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳನ್ನೂ ನೀಡಬೇಕು, “ಕನ್ನಡ ಸಿನಿಮಾ’, ‘ಚಿತ್ರಭಾರತಿ – ಭಾರತೀಯ ಸಿನಿಮಾ’ ಹಾಗೂ ‘ಏಷಿಯನ್ ಸಿನಿಮಾ ಸ್ಪರ್ಧಾ ವಿಭಾಗಕ್ಕೆ ಅರ್ಜಿ ಸಲ್ಲಿಸುವ ಕರ್ನಾಟಕದ ಹಾಗೂ ಭಾರತದ ಪ್ರತಿ ಚಿತ್ರದ ಪ್ರತಿ ಅರ್ಜಿಗೂ ರೂ.3,000/- ಪ್ರವೇಶ ಶುಲ್ಕವಿರುತ್ತದೆ. ಇಂಗ್ಲಿಷ್ ಉಪ ಶೀರ್ಷಿಕೆಗಳನ್ನೊಳಗೊಂಡ ಚಲನಚಿತ್ರದ ಆನ್‌ಲೈನ್ ಸ್ಪೀನರ್‌ನೊಂದಿಗೆ, ಆನ್‌ಲೈನ್‌ನಲ್ಲಿ, ಪ್ರವೇಶ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.12.2025 (ಡಿಸೆಂಬರ್ 31, 2025)

ಹೆಚ್ಚಿನ ಮಾಹಿತಿಗೆ +91 8904645529 biffesbir@gmail.com & www.biffes.org ಸಂಪರ್ಕಿಸಬಹುದು.

DC Shivamogga ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ” ಮುಜರಾಯಿ ದೇವಾಲಯ” ನಾಮಫಲಕ & ಸಿಸಿಟಿವಿ ಅಳವಡಿಕೆ ಕಡ್ಡಾಯ -‘ ಡೀಸಿ’ ಗುರುದತ್ತ ಹೆಗಡೆ

0

DC Shivamogga ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ಧಾರ್ಮಿಕ ದತ್ತಿ ಇಲಾಖೆ ಮುಜರಾಯಿ ದೇವಾಲಯ ಕರ್ನಾಟಕ ಸರ್ಕಾರ ಎಂದು ನಾಮಫಲಕ ಅಳವಡಿಸಲು ಕ್ರಮ ವಹಿಸಬೇಕೆಂದು ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು.
ದಿನಾಂಕ:02.12.2025 ರಂದು ಜಿಲ್ಲಾ ವ್ಯಾಪ್ತಿಯ ಮುಜರಾಯಿ “ಸಿ” ವರ್ಗದ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆ, ಜೀರ್ಣೋದ್ದಾರ ಹಾಗೂ ಅರ್ಚಕರ ನೇಮಕಾತಿ ಹಾಗೂ ಇತರೆ ವಿಚಾರಗಳ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ಮುಜರಾಯಿ ದೇವಾಲಯಗಳಿಗೆ ಕಡ್ಡಾಯವಾಗಿ ಸಿ.ಸಿ ಟಿ.ವಿ ಅಳವಡಿಸುವಂತೆ, ಅಧಿಸೂಚಿತ ದೇವಾಲಯಗಳಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್ ನಿಷೇದಿತ ದೇವಾಲಯದ ಎಂದು ನಾಮಫಲಕ ಅಳವಡಿಸುಂತೆ ಸೂಚಿಸಿದರು.
ಶ್ರೀ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯ ಮುಜರಾಯಿ ಅಧಿಸೂಚಿತ ಸಂಸ್ಥೆಯಾಗಿದ್ದು, ದೇವಾಲಯದ ಅರ್ಚಕರು / ನೌಕರರು ಇಲಾಖಾ ಹೆಸರನ್ನು ಹೊರತು ಪಡಿಸಿ ಸ್ವ-ಇಚ್ಛೆಯ ಅನುಸಾರ ಸೇವಾದರಗಳನ್ನು ಮುದ್ರಿಸಿ ಭಕ್ತಾಧಿಗಳು / ಸಾರ್ವಜನಿಕರಿಗೆ ಹಂಚಿಕೆ ಮಾಡಿದ್ದು, ಈ ಬಗ್ಗೆ ತಹಶೀಲ್ದಾರ್ ರವರಿಗೆ ಸೂಕ್ತ ಕ್ರಮ ಜರುಗಿಸಲು ಸೂಚಿಸಿದ ಅವರು ಅಧಿಸೂಚಿತ ದೇವಾಲಯಗಳು/ದೇವಾಲಗಳ ಆಸ್ತಿಯನ್ನು ಸರ್ವೆ ಮಾಡಿಸಿ ವರದಿಯನ್ನು ಸಲ್ಲಿಸುವಂತೆ ತಹಶೀಲ್ದಾರಿಗೆ ತಿಳಿಸಿದರು.
DC Shivamogga ಭದ್ರಾವತಿ ತಾಲ್ಲೂಕು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವೈಕುಂಟ ಏಕಾದಶಿಯ ಕಾರ್ಯಕ್ರಮದಲ್ಲಿ ನಡೆದ ಹಣ ದುರುಪಯೋಗದ ಕುರಿತು ತಕ್ಷಣದಲ್ಲಿ ವರದಿಯನ್ನು ಸಲ್ಲಿಸಲು ತಹಶೀಲ್ದಾರ್, ಭದ್ರಾವತಿ ಇವರಿಗೆ ಸೂಚಿಸಿದರು.
ಶ್ರೀ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರು ಸೇವಾದರ ಪಟ್ಟಿಯನ್ನು ಅಳವಡಿಸದೇ ಸಕ್ಷಮ ಪ್ರಾಧಿಕಾರದಿಂದ ಅನುಮತಿಯನ್ನು ಪಡೆಯದೇ ಭಕ್ತಾಧಿಗಳಿಗೆ ರಶೀದಿಯನ್ನು ನೀಡದೇ ದೇವಾಲಯದ ಆದಾಯಕ್ಕೆ ಕುಂಟಿತರಾಗಿರುತ್ತಾರೆ. ದೇವಸ್ಥಾನದ ರಥೋತ್ಸವದ ಆಮಂತ್ರಣ ಪತ್ರಿಕೆಯನ್ನು ಅನುಮತಿ ಇಲ್ಲದೆ ಮುದ್ರಿಸಿದ್ದು, ಹಾಗೂ ಪತ್ರಿಕೆಯಲ್ಲಿ ಸೇವಾವಿವರದ ಮೊತ್ತವನ್ನು ಸ್ವ- ಇಚ್ಛೆಯಿಂದ ಮುದ್ರಿಸಿರುತ್ತಾರೆ ಈ ರೀತಿಯಾಗಿ ಸಾರ್ವಜನಿಕರಿಂದ ಸಾಕಷ್ಟು ಹಣ ಪಡೆಯುತ್ತಿದ್ದು, ದೇವಸ್ಥಾನದ ಖಾತೆ ಜಮಾ ಮಾಡದೇ ಇರುವ ಕುರಿತು ಗಮನಕ್ಕೆ ಬಂದಿರುವುದಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯಲ್ಲಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ವಿವರವಾದ ವರದಿಯನ್ನು ನೀಡಲು ತಹಶೀಲ್ದಾರ್, ಶಿವಮೊಗ್ಗ ಇವರಿಗೆ ಸೂಚಿಸಿದರು.
ಸೊರಬ ತಾಲ್ಲೂಕಿನ ಶ್ರೀ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಭ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗಳು ದೇವಾಲಯಕ್ಕೆ ಹರಿಕೆ ರೂಪದಲ್ಲಿ ಬಂದಂತಹ ಸೀರೆಗಳನ್ನು ಶಿಷ್ಠಾಚಾರದ ನೆಪದಲ್ಲಿ ಮನಬಂದಂತೆ ಹಂಚಿಕೆ ಮಾಡುತ್ತಿರುವುದು ಹಾಗೂ ಹರಕೆ ರೂಪದಲ್ಲಿ ಸ್ವೀಕೃತವಾದ ಸೀರೆ, ಅಕ್ಕಿ, ಎಣ್ಣೆ ಇತರೆ ವಸ್ತುಗಳ ಬಗ್ಗೆ ಯಾವುದೇ ರಿಜಿಸ್ಟರ್‌ಗಳ ನಿರ್ವಹಣೆ ಇಲ್ಲದೇ ಇರುವ ಬಗ್ಗೆ ದೇವಾಲಯದಲ್ಲಿ ಬರುವಂತಹ ಭಕ್ತಾಧಿಗಳಿಗೆ ತುಂಬಾ ವರಟಾಗಿ ವರ್ತಿಸುತ್ತಿರುತ್ತಾರೆ. ಎಂಬ ಕುರಿತು ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ವಿವರವಾದ ವರದಿಯನ್ನು ನೀಡುವಂತೆ ಸೊರಬದ ತಹಶೀಲ್ದಾರಿಗೆ ಸೂಚಿಸಿದರು.
ಸಾಗರ ತಾಲ್ಲೂಕಿನ ಮಹಾಗಣಪತಿ ದೇವಾಲಯದ 2024-25ನೇ ಸಾಲಿನ ಜಾತ್ರಾ ಹೆಚ್ಚುವರಿ ಖರ್ಚು ಕುರಿತು ಹಾಗೂ 2025-26ನೇ ಸಾಲಿನಲ್ಲಿ ಸ್ಪಾಲ್ ಹರಾಜಿನಿಂದ ಸಂಗ್ರಹವಾದ ಮೊತ್ತವನ್ನು ವಿಳಂಬವಾಗಿ ದೇವಾಲಯದ ಖಾತೆಗೆ ಜಮಾ ಮಾಡಿರುವ ಕುರಿತು ವಿವರವಾದ ವರದಿಯನ್ನು ಸಲ್ಲಿಸುವ ಬಗ್ಗೆ ಸೂಚನೆ ನೀಡಿದರು.
ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿ ‘ಸಿ’ ವರ್ಗದ ದೇವಸ್ಥಾನಗಳ ಸುಗಮ ಆಡಳಿತ ನಿರ್ವಹಣೆಗೆ ವ್ಯವಸ್ಥಾಪನಾ ಸಮಿತಿಯನ್ನು ರಚನೆ ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಶ್ರೀ ಜೇನುಕಲ್ಲಮ್ಮ ದೇವಸ್ಥಾನ, ಹಾಗೂ “ಸಿ” ವರ್ಗದ 27 ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಯನ್ನ ರಚಿಸಲಾಯಿತು.
ಸಭೆಯಲ್ಲಿ ಧಾರ್ಮಿಕ ಪರಿಷತ್ ಸದಸ್ಯರಾದ ಸೆಲ್ವಕುಮಾರ್.ಸಿ, ನಿವೃತ್ತ ನ್ಯಾಯಾದೀಶರು, ವಿಧೂಶಿ ಗೀತಾದಾತಾರ್, ಎಂ.ಶಿವಲಿಂಗಪ್ಪ, ವರಲಕ್ಷ್ಮೀ, ಎನ್. ಉಮಾಪತಿ, ಎಸ್.ಡಿ ಪ್ರವೀಣ್ ಕುಮಾರ್, ಮುಜರಾಯಿ ತಹಶೀಲ್ದಾರರು ಹಾಜರಿದ್ದರು.

Consumer Disputes Redressal Commission ಕ್ರೆಡಿಟ್ ಕಾರ್ಡಿನಿಂದ ಅನಧಿಕೃತ ಹಣ ಕಡಿತ, ಸೇವಾನ್ಯೂನತೆ ಎಸಗಿದ ಸಂಸ್ಥೆಗೆ ದಂಡ

0

Consumer Disputes Redressal Commission ಕ್ರೆಡಿಟ್ ಕಾರ್ಡಿನಿಂದ ಅನಧಿಕೃತವಾಗಿ ಕಡಿತವಾದ ಮೊತ್ತಗಳ ಬಗ್ಗೆ ಆರ್‌ಬಿಐ ಮಾರ್ಗಸೂಚಿಗಳನ್ನು ಪರಿಗಣಿಸದೆ ಹಾಗೂ ಸರಿಯಾದ ರೀತಿಯಲ್ಲಿ ತನಿಖೆಯನ್ನು ಮಾಡದೇ, ಕಟಾವಣೆಗೊಂಡ ಮೊತ್ತವನ್ನು ಕ್ರೆಡಿಟ್ ಕಾರ್ಡ್ಗೆ ಮರುಜಮೆ ಮಾಡದೇ ಎಸ್‌ಬಿಐ ಕಾರ್ಡ್ಸ್ ಮತ್ತು ಪೇಮೆಂಟ್ ಸರ್ವಿಸ್ ಲಿ.ಬೆಂಗಳೂರು ಇವರು ಸೇವಾನ್ಯೂನ್ಯತೆ ಎಸಗಿದ್ದು ದೂರುದಾರರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಜ ಆದೇಶಿಸಿದೆ.
ದೂರುದಾರರಾದ ಮಂಜುನಾಥ ಜಿ. ತಿಲಕ್‌ನಗರ ಶಿವಮೊಗ್ಗ ಇವರು ಎಸ್.ಬಿ.ಐ ಕಾರ್ಡ್ಸ್ ಮತ್ತು ಪೇಮೆಂಟ್ ಸರ್ವೀಸ್ ಲಿ.. ಬೆಂಗಳೂರು ಇವರ ವಿರುದ್ಧ ದೂರನ್ನು ಸಲ್ಲಿಸಿರುತ್ತಾರೆ. ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ದೂರುದಾರರು ಎಸ್.ಬಿ.ಐ ಬ್ಯಾಂಕ್, ತಿಲಕ್ ನಗರ ಶಾಖೆ, ಶಿವಮೊಗ್ಗ, ಇಲ್ಲಿ ವೇತನ ಖಾತೆಯನ್ನು ಹೊಂದಿದ್ದು,ಈ ಬ್ಯಾಂಕಿನವರು ಎಸ್.ಬಿ.ಐ. ಕ್ರೆಡಿಟ್ ಕಾರ್ಡ್ನ್ನು ನೀಡಿರುತ್ತಾರೆ. ಕ್ರೆಡಿಟ್ ಕಾರ್ಡ್ನ್ನು ಅವಶ್ಯಕತೆಗೆ ತಕ್ಕಂತೆ ಉಪಯೋಗಿಸುತ್ತಾ ಬಂದಿದ್ದು, ವಾರ್ಷಿಕ ಶುಲ್ಕವನ್ನು ಪಾವತಿಸುತ್ತಿದ್ದರೂ ದಿ:21/05/2024 ರಂದು ರೂ.40,000/-, ರೂ.50,000/- ಮತ್ತು ರೂ.1,01,940/-ಗಳು ಕ್ರೆಡಿಟ್ ಕಾರ್ಡ್ನಲ್ಲಿ ಕಟಾವಣೆಯಾಗಿರುವುದಾಗಿ ಸಂದೇಶ ಬಂದಿರುತ್ತದೆ. (ಮೂರು ಕಟಾವಣೆ ಪ್ರತ್ಯೇಕವಾಗಿರುತ್ತವೆ).
ತದನಂತರ ಎದುರುದಾರರ ಕನ್ಸೂಮರ್-ಕೇರ್ ನಿಂದ ಬಂದ ದೂರವಾಣಿ ಕರೆ ಮೂಲಕ ವಿಚಾರಿಸಲಾಗಿ, ದೂರುದಾರರು ಯಾವುದೇ ವ್ಯವಹಾರವನ್ನು ಮಾಡಿರುವುದಿಲ್ಲ ಎಂದು ತಿಳಿಸಿ, ಸರ್ವೀಸ್ ರಿಕ್ವೆಸ್ಟ್ ಮಾಡಿ ಈ ವ್ಯವಹಾರಗಳ ಕುರಿತು ತನಿಖೆಯನ್ನು ಮಾಡಲು ಕೋರಿರುತ್ತಾರೆ. ಹಾಗೂ ಆನ್‌ಲೈನ್ ಮೂಲಕ ಪೊಲೀಸ್ ಠಾಣೆಯಲ್ಲಿ ದೂರುನ್ನು ಸಲ್ಲಿಸಿರುತ್ತಾರೆ.
Consumer Disputes Redressal Commission ಸದರಿ ವ್ಯವಹಾರಗಳನ್ನು ಮಾಡಲು ಸಿವಿವಿ ಮತ್ತು ಓಟಿಪಿ ಯನ್ನು ನಮೂದಿಸದೇ ಹೇಗೆ ವ್ಯವಹಾರ ಸಾಧ್ಯವಾಯಿತು ಎಂದು ಇ-ಮೇಲ್ ಮೂಲಕ ದೂರನ್ನು ನೀಡಿದಾಗ, ಎದುರುದಾರರು ದಿ: 16/08/2024 ತನಿಖೆ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ, ತದನಂತರ ಎದುರುದಾರರು ದಿ:19/11/2024 ರಂದು ದೂರುದಾರರಿಗೆ ಇ-ಮೇಲ್ ಮಾಡಿ ತಮ್ಮ ದೂರನ್ನು ಮುಕ್ತಾಯಗೊಳಿಸಿರುವುದಾಗಿ ತಿಳಿಸಿರುತ್ತಾರೆ. ದೂರುದಾರರ ಕ್ರೆಡಿಟ್ ಕಾರ್ಡಿನಿಂದ ಅನಧಿಕೃತವಾಗಿ ಕಡಿತವಾದ ಮೊತ್ತಗಳ ಬಗ್ಗೆ ಎದುರುದಾರರು ಆರ್‌ಬಿಐ ಗೈಡ್‌ಲೈನ್ಸ್/ರೆಗ್ಯೂಲೇಶನ್‌ಗಳನ್ನು ಪರಿಗಣಿಸದೆ ಹಾಗೂ ಸರಿಯಾದ ರೀತಿಯಲ್ಲಿ ತನಿಖೆಯನ್ನು ಮಾಡದೇ, ಕಟಾವಣೆಗೊಂಡ ಮೊತ್ತವನ್ನು ಕ್ರೆಡಿಟ್ ಕಾರ್ಡ್ಗೆ ಮರುಜಮೆ ಮಾಡದೇ, ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ದೂರನ್ನು ಸಲ್ಲಿಸಿರುತ್ತಾರೆ.
ದೂರುದಾರರು ಸಲ್ಲಿಸಿರುವ ದಾಖಲಾತಿಗಳನ್ನು ಪರಿಶೀಲಿಸಿ, ದೂರುದಾರರ ವಾದವನ್ನು ಆಲಿಸಿ, ಎದುರುದಾರರು ಆರ್‌ಬಿಐ ಸುತ್ತೋಲೆಯಂತೆ ಸರಿಯಾದ ರೀತಿಯಲ್ಲಿ ತನಿಖೆಯನ್ನು ಮಾಡದೇ ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ತೀರ್ಮಾನಿಸಿ, ದೂರನ್ನು ಪುರಸ್ಕರಿಸಿ, ಎದುರುದಾರರು ರೂ.1,01,940/-ಗಳನ್ನು ದೂರುದಾರರ ಕ್ರೆಡಿಟ್ ಕಾರ್ಡ್ ಖಾತೆಗೆ 45 ದಿನಗಳ ಒಳಗೆ ಜಮಾ ಮಾಡುವುದು ಮತ್ತು ಎದುರುದಾರರು ರೂ.25,000/- ಗಳನ್ನು ಮತ್ತು ರೂ.10,000/-ಗಳನ್ನು ಮಾನಸಿಕ ಹಿಂಸೆಗೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ 45 ದಿನಗಳ ಒಳಗಾಗಿ ಪಾವತಿಸುವುದು, ತಪ್ಪಿದ್ದಲ್ಲಿ ವಾರ್ಷಿಕ ಶೇ.10ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ನೀಡುವವರೆಗೆ ನೀಡತಕ್ಕದ್ದು ಎಂದು ಆಯೋಗದ ಅಧ್ಯಕ್ಷರಾದ ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯರವರನ್ನು ಒಳಗೊಂಡ ಪೀಠವು ದಿನಾಂಕ:29/11/2025ರಂದು ಆದೇಶಿಸಿದೆ.

Minority Welfare Department 2025-26 ನೇ ಸಾಲಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖಾ ವತಿಯಂದ ಬಿಎಡ್ ವ್ಯಾಸಂಗ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಇಲಾಖೆ ಪ್ರಕಟಣೆ

0

Minority Welfare Department 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ರೂ.25000/-ಗಳ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ವಿಶೇಷ ಪ್ರೋತ್ಸಾಹಧನವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮಾ ಮಾಡಲಾಗುವುದು.

ಅರ್ಜಿ ಸಲ್ಲಿಸಲು ದಿ: 31.12.2025 ಕಡೆಯ ದಿನಾಂಕವಾಗಿದ್ದು, ಅರ್ಜಿಯನ್ನು sevasindhu.karnataka.gov.in ಮೂಲಕ ಸಲ್ಲಿಸಿ ನಂತರ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ಮೊಹರು ಮತ್ತು ಸಹಿ/ದೃಢೀಕರಣ ಪಡೆದು, ಅರ್ಜಿಯೊಂದಿಗೆ ನಿವಾಸಿ ದೃಢೀಕರಣ ಪತ್ರ.

Minority Welfare Department ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಸೀದಿ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಿ.ಯು.ಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿಳಿಗೆ ಪ್ರಾಂಶುಪಾಲರಿಂದ ದೃಢೀಕರಿಸಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-220206 ಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Rotary Shimoga ಆರೋಗ್ಯ, ಶಿಕ್ಷಣ ಕ್ಷೇತ್ರದ ಸೇವೆಯಲ್ಲಿ ತೊಡಗಿರುವ ರೋಟರಿ ಸೇವೆ ಶ್ಲಾಘನೀಯ- ಕೆ.ಇ.ಕಾಂತೇಶ್

0

Rotary Shimoga ರೋಟರಿ ಜ್ಯೂಬಿಲಿ ಸಂಸ್ಥೆಯು ಪಾರದರ್ಶಕವಾಗಿ ಸೇವೆಯಲ್ಲಿ ತೊಡಗಿಸಿಕೊಂಡಿ ದ್ದು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಒತ್ತು ನೀಡಿ ಗ್ರಾಮಾಂತರ ಶಾಲೆಗಳಿಗೆ ಅನೇಕ ಸೌಲಭ್ಯ ಒದಗಿಸುತ್ತಿರುವುದು ಶ್ಲಾಘನೀಯ ಎಂದು ರೋಟರಿ ಶಿವಮೊಗ್ಗ ಜ್ಯುಬಿಲಿ ಕ್ಲಬ್ ವಾರದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಪೋಲಿಯೊ ಲಸಿಕೆ ಅಭಿಯಾನದಿಂದ ಈ ಮಾರಕ ಕಾಯಿಲೆಯನ್ನು ಪ್ರಪಂಚದದಂತ್ಯ ನಿರ್ಮೂಲ ಮಾಡಿದ ಹೆಗ್ಗಳಿಕೆ ರೋಟರಿ ಸಂಸ್ಥೆಗೆ ಸಲ್ಲಬೇಕು. ಸ್ವಾಹಿತ ಮೀರಿದ ಸೇವೆಯಿಂದ ಇಂದು ವಿಶ್ವದಲ್ಲಿ ಶಾಂತಿ ನೆಲೆಸಲು ಶ್ರಮಿಸುತ್ತಿದೆ, ಎಂದು ತಿಳಿಸುತ್ತಾ ರೋಟರಿ ಮಿತ್ರರು ಒಂದು ಶಕ್ತಿ ಎಂದು ಅಬಿಪ್ರಾಯ ಪಟ್ಟರು.
ರೋಟರಿ ಜ್ಯುಬಿಲಿ ಕ್ಲಬ್ ಅಧ್ಯಕ್ಷ ರೊ ಬಿ.ಎಸ್.ಅಶ್ವಥ್ ರವರು ಮಾತನಾಡಿ ಶ್ರೀಗಂಧ ಸಂಸ್ಥೆಯನ್ನು ಸ್ಥಾಪಿಸಿ ಅನೇಕ ಧಾರ್ಮಿಕ ಮತ್ತು ಸಮಾಜಮುಖಿ ಕಾರ್ಯಗಳನ್ನು ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕೆ.ಇ.ಕಾಂತೇಶ್ ರವರು ಸಮಾಜ ಸೇವೆಗೆ ಮನ್ನಣೆಗೆ ಪಾತ್ರರಾಗಿದ್ದು ನಗರದ ಮನೆ ಮಾತಾಗಿದ್ದಾರೆ ಎಂದು ತಿಳಿಸುತ್ತಾ, ಗೋಸಂರಕ್ಷಣೆ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು ಗೋವರ್ಧನ ಟ್ರಸ್ಟ್ ಮೂಲಕ ಸಹಾಯ ಗೋಶಾಲೆಗಳಿಗೆ ಸಹಾಯ ನೀಡುವುದಲ್ಲದೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರಶಂಸಿದರು. ಸಮಾಜದ ಮಠಾಧಿಪತಿಗಳ ಮೂಲಕ ಅನೇಕ ಧಾರ್ಮಿಕ ಕಾರ್ಯಗಳನ್ನು ನಡೆಸುತ್ತಿದ್ದು ಅವರ ಸಮಾಜ ಸೇವೆ ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು ಆಶಿಸುತ್ತಾ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದರು.

Rotary Shimoga ಉಮಾದೇವಿ ಸ್ವಾಗತಿಸಿದರು, ಕಾರ್ಯದರ್ಶಿ ರೊ. ರೇವಣಸಿದ್ದಪ್ಪರವರು ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಸಭೆಯಲ್ಲಿ ನವೀನ್, ಉಮೇಶ್, ರಾಜಶೇಖರ್, ನವೀನ್ ಕುಮಾರ್, ಪ್ರಶಾಂತ್ ಜವಳಿ, ಅವಿನಾಶ್ ಲಕ್ಷ್ಮೀನಾರಾಯಣ,ಶ್ರೀಪತಿ, ಹರ್ಷ ಪಟೇಲ್ ಹಾಜರಿದ್ದರು

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸ್ವ ಉದ್ಯೋಗ ಯೋಜನೆ ಪ್ರಕಟಣೆ

0

Canara Bank Rural Self Employment Training Institute ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ ತಿಂಗಳ ಡಿ.22 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ ಡಿ 15 ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು.

ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಡಿ.15 ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ 8970476050, 9591514154, 9686248369, 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.