News Week
Magazine PRO

Company

Friday, May 2, 2025
Home Blog

SSLC Examination Board ಮೇ 2 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

0
ಮೇ 2 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ
ಮೇ 2 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

SSLC Examination Board 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳ ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಗಿದೆ .

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯ ಎಂದು ಎಸ್ ಎಸ್ ಎಲ್ ಸಿ ಬೋರ್ಡ್ ಮಾಹಿತಿ ನೀಡಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ 2ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಪ್ರೆಸ್ ಮೀಟ್ ನಡೆಸಿ ಮಾಹಿತಿ ನೀಡಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.

SSLC Examination Board ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಮೇ 02ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದು.

pahalgam attack ಕನ್ನಡಿಗರ ಆಟೋ ಚಾಲಕರ ಸಂಘದ ವತಿಯಿಂದ ಪೆಹಲ್ಗಾವ್ ನಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಮರ್ಪಣೆ

0
ಕನ್ನಡಿಗರ ಆಟೋ ಚಾಲಕರ ಸಂಘದ ವತಿಯಿಂದ ಪೆಹಲ್ಗಾವ್ ನಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಮರ್ಪಣೆ
ಕನ್ನಡಿಗರ ಆಟೋ ಚಾಲಕರ ಸಂಘದ ವತಿಯಿಂದ ಪೆಹಲ್ಗಾವ್ ನಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಮರ್ಪಣೆ

pahalgam attack ಕನ್ನಡಿಗರ ಆಟೋ ಚಾಲಕರ ಸಂಘ ನೊಂದಣಿ ಇವರ ವತಿಯಿಂದ ಕಾಶ್ಮೀರದ ಪೆಹಲ್ಗಾವ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಮೃತಪಟ್ಟ ಶಿವಮೊಗ್ಗದ ದಿವಂಗತ ಶ್ರೀ ಮಂಜುನಾಥ ರಾವ್ ಬೆಂಗಳೂರಿನ ದಿವಂಗತ ಶ್ರೀ ಭರತ್ ಭೂಷಣ್ ಹಾಗೂ ಶ್ರೀ ಮಧುಸೂಧನ್ ರಾವ್ ಹಾಗೂ ಅವರೊಂದಿಗೆ ಮಡಿದ ಎಲ್ಲಾ 26 ಮೃತರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ನೇತಾಜಿ ವೃತ್ತ ಶಿವಮೊಗ್ಗದಲ್ಲಿ ಮೌನಚರಣೆ ಹಾಗೂ ಕ್ಯಾಂಡಲ್ ಬೆಳಗುವ ಮೂಲಕ ವೃತರ ಆತ್ಮಕ್ಕೆ ಶಾಂತಿ ಸಭೆಯನ್ನ ಈ ದಿನ ಸಂಜೆ 7 ಗಂಟೆಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಮುಖರಾದ ಗೌರವಾಧ್ಯಕ್ಷರಾದ ಪಂಚಾಕ್ಷರಿ ಅಧ್ಯಕ್ಷರು ಜಯಪ್ಪ , ಪ್ರಧಾನ ಕಾರ್ಯದರ್ಶಿಯಾದ ಪ್ರಫುಲ್ಲಚಂದ್ರ ಎಚ್. ಮಂಜುನಾಥ್ ಗೌಡ, ಶ್ರೀನಿವಾಸ್. ಕುಳುವ ಯುವಸೇನೆ ಜಿಲ್ಲಾಧ್ಯಕ್ಷರಾದ ಲೋಕೇಶ್ ಪೈಲ್ವಾನ್ , ರಂಗನಾಥ್ ಶಿಲ್ಪಿ ಹಾಗೂ ನರಸಿಂಹಣ್ಣ, ಕಲಾವಿದ ರಾಮಣ್ಣ, ನಾಗಣ್ಣ ಶಾಮ್ ಭೋವಿ, ಚಿನ್ಮಯ್ ಪಿ. ಹಾಗೂ ಸ್ಥಳೀಯರೊಂದಿಗೆ ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲಾಯಿತು.

Basava Jayanti ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣ– ಕೇಂದ್ರ ಸಚಿವ ವಿ.ಸೋಮಣ್ಣ

0
ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣ– ಕೇಂದ್ರ ಸಚಿವ ವಿ.ಸೋಮಣ್ಣ
ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣ– ಕೇಂದ್ರ ಸಚಿವ ವಿ.ಸೋಮಣ್ಣ

Basava Jayanti ನವದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ ೮೯೪ನೇ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣನವರು ತಮ್ಮ ಇಲಾಖೆಯ ಮುಖೇನ ಆಯೋಜಸಿ, ಅತ್ಯಂತ ಯಶಸ್ವಿಯಾಗಿ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಬಸವ ಜಯಂತಿಯನ್ನು ಆಯೋಜಿಸುವಲ್ಲಿ ಸಫಲರಾಗಿದ್ದಾರೆ. ಕಾರ್ಯಕ್ರಮಕ್ಕೆ ಕೇಂದ್ರದ ಸಚಿವರುಗಳನ್ನು, ರಾಜ್ಯದ ಸಂಸದರುಗಳನ್ನು, ಮಠಾಧೀಶರುಗಳನ್ನು ಮತ್ತು ಬಸವಾಭಿಮಾನಿಗಳನ್ನು, ದೆಹಲಿ ಕನ್ನಡಿಗರನ್ನು ವಿ.ಸೋಮಣ್ಣನವರು ಆಹ್ವಾನಿಸಿದ್ದರು.

ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಕಿರಣ ರಿಜಿಜು, ರೇಲ್ವ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಮತ್ತು ನೂತನ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಸಚಿವ ಶ್ರೀ ಪ್ರಹ್ಹಾದ್ ಜೋಶಿ, ಕಾರ್ಮಿಕ ಮತ್ತು ಉದ್ಯೋಗ ಖಾತೆಯ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ, ರೇಲ್ವೆ ರಾಜ್ಯ ಖಾತೆಯ ಸಚಿವ ಶ್ರೀ ರವನೀತ ಸಿಂಗ್, ಜಲಶಕ್ತಿ ರಾಜ್ಯ ಖಾತೆಯ ಸಚಿವ ಶ್ರೀ ರಾಜಬೂಷಣ್ ಚೌಧರಿ, ಸಂಸದರಾದ ಪಿ.ಸಿ.ಗದ್ದಿಗೌಡರ, ಶ್ರೀ ತೇಜಸ್ವಿ ಸೂರ್ಯ, ಮಾಜಿ ಸಂಸದರಾದ ಡಾ. ಉಮೇಶ್ ಜಾದವ್, ಶ್ರೀ ಅಣ್ಣಾ ಸಾಹೆಬ್ ಜೊಲ್ಲೆ, ಶಾಸಕರಾದ ಶ್ರೀ ಬಿ. ಪಿ. ಹರೀಶ್, ವಿಧಾನ ಪರಿಷತ್ ಸದಸ್ಯ ಡಾ.ಎಮ್. ಜಿ. ಮೂಳೆ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಶ್ರೀ ಬಸವ ಮೃತ್ಯುಂಜಯ ಸ್ವಾಮಿಗಳು, ಡಾ. ಬಸವ ಪ್ರಕಾಶ ಸ್ವಾಮಿ, ಶ್ರೀ ಬಸವಕುಮಾರ್ ಸ್ವಾಮಿ ಹಾಗೂ ಮತ್ತು ಅಸಂಖ್ಯಾತ ಕನ್ನಡಿಗರು ಇಂದು ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಬಸವ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಿದ್ದಾರೆ.

ಕಾರ್ಯಕ್ರಮದ ಆಯೋಜನೆಗೆ ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾರವರು ಅನುಮತಿ ನೀಡಿ ಬಸವೇಶ್ವರರ ಪುತ್ಥಳಿಗೆ ಅಪಾರ ಗೌರವ ಸಲ್ಲಿಸಲು ಕಾರಣಿಕರ್ತರಾಗಿದ್ದಾರೆಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣನವರು, ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣನವರು, ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ಆರೋಗ್ಯವಂತ ಸಮಾಜಕ್ಕೆ ಅಡಿಪಾಯ ಹಾಕಿದವರು ಶ್ರೀ ಬಸವೇಶ್ವರರು ಎಂದಿದ್ದಾರೆ.

ಬಸವಣ್ಣನವರ ಸಾರಥ್ಯದಲ್ಲಿ ನಡೆದ ಸುಧಾರಣೆಯ ಪ್ರಯತ್ನ ಒಂದು ಸಾಮಾಜಿಕ ಚಳವಳಿಯಾಗಿ ರೂಪುಗೊಂಡಿತ್ತು. ಸಾಮಾನ್ಯ ಬದುಕಿನ ಎಲ್ಲಾ ಸ್ಥರಗಳು ಆ ಚಳುವಳಿಯ ಒಂದು ಭಾಗವಾದ್ದದ್ದು ಶರಣರ ಪೂರ್ಣ ದೃಷ್ಟಿಯ ಸಂಕೇತ ಎಂದು ಮಾದ್ಯಮಕ್ಕೆ ತಿಳಿಸಿದ್ದಾರೆ.

ಬಸವಣ್ಣನವರು ವಿದ್ಯೆಯೆಂಬ ಆಯುಧವನ್ನು ಸಮಾಜದ ಎಲ್ಲಾ ವರ್ಗದ ಹಿಂದುಳಿದವರ, ಶೋಷಿತ ವರ್ಗದ ಹಾಗೂ ಮಹಿಳೆಯರ ಉದ್ಧಾರಕ್ಕಾಗಿ ತೊಡಗಿಸಿಕೊಂಡಿದ್ದರು. ಜೀವನದ ಸತ್ಯತೆಗಳನ್ನು ಸಾಮಾನ್ಯರಿಗೆ ತಲುಪಿಸುವಲ್ಲಿ ಬಸವಣ್ಣನವರ ವಚನಗಳು ಬಹು ಮುಖ್ಯ ಪಾತ್ರ ವಹಿಸಿದೆ ಎಂದು ಸೋಮಣ್ಣ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಇಂದು ಮಾತನಾಡಿದ್ದಾರೆ.

Basava Jayanti ಬಸವಣ್ಣನವರ ಅನುಭವ ಮಂಟಪ ಸಮಾಜದ ಎಲ್ಲಾ ವರ್ಗಗಳ ಪ್ರತಿನಿಧಿತ್ವದೊಂದಿಗೆ ಲಿಂಗಬೇದ ರಹಿತ ಸಮಾನತೆಯೊಂದಿಗೆ ಅಭಿವ್ಯಕ್ತಿ ಸ್ವಾತಂತ್ಯದ ವೇದಿಕೆಯಾಗಿತ್ತು. ಅನುಭವ ಮಂಟಪದ ಆ ವೇದಿಕೆಯೆ ಇಂದಿನ ನಮ್ಮ ಮುಂದಿರುವ ಸಂಸತ್ತು ಎಂದು ವಿ. ಸೋಮಣ್ಣ ಪುನರುಚ್ಚರಿಸಿದ್ದಾರೆ.

ಇಂಗ್ಲೆಂಡ್ನಲ್ಲಿ ಮ್ಯಾಗ್ನಾ ಕಾರ್ಟರ ಪರಿಕಲ್ಪನೆಯ ಸಂಸತ್ತು ಜಾರಿಗೆ ಬರುವ ಮೊದಲೇ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಬಸವಣ್ಣನವರು ಸಂಸತ್ತಿನ ಪರಿಕಲ್ಪನೆ ಸೃಷ್ಟಿಸಿದ್ದು – ಅನುಭವ ಮಂಟಪ ರೂವಾರಿಯಾಗಿದ್ದರು ಎಂದು ಅನುಭವ ಮಂಟಪದ ಹಿರಿಮೆ ಗರಿಮೆಯನ್ನು ಇಂದು ಸೋಮಣ್ಣ ಸಂಸತ್ತಿನಲ್ಲಿ ಆವರಣದಲ್ಲಿ ಕೊಂಡಾಡಿದ್ದಾರೆ.

ಶ್ರೀ ಬಸವಣ್ಣನವರ ಕಾಯಕ ತತ್ವದ ಪ್ರತಿಪಾದನೆಯಲ್ಲಿಯೇ ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರಮೋದಿಯವರು ಈ ದೇಶವನ್ನು ಮುನ್ನೆಡಿಸುತ್ತಿದ್ದಾರೆ. ಬಸವಣ್ಣನವರು ೧೨ನೇ ಶತಮಾನದಲ್ಲಿ; ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ – ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ, ನಿಮ್ಮ ಮನೆಯ ಮಗನೆಂದೆನಿಸಯ್ಯಾ ಎಂಬ ಸೂತ್ರವನ್ನು ಜಗಜ್ಯೋತಿ ಬಸವಣ್ಣನವರು ಜಗತ್ತಿಗೆ ಪರಿಚಯಿಸಿದ್ರು.

ಇಂದು ೨೧ನೇ ಶತಮಾನದಲ್ಲಿ ಇದೇ ತತ್ವದಡಿಯಲ್ಲಿ ಕಾಯಕ ಮಾಡುತ್ತಿದ್ದಾರೆ ಆಧುನಿಕ ಜಗತ್ತಿನ ಅಭಿವೃದ್ದಿಯ ಹರಿಕಾರ, ಕಾಯಕಯೋಗಿ ಪ್ರದಾನಿ ಮೋದಿಯವರು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತ ದೇಶ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಪ್ರಬಲ ರಾಷ್ಟ್ರವಾಗಬೇಕೆಂಬ ಹಂಬಲದಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್, ಎಂಬ ಧ್ಯೇಯ ಮಂತ್ರದೊಂದಿಗೆ ಪ್ರಧಾನಿ ಮೋದಿಯವರು ಈ ದೇಶವನ್ನು ಮುನ್ನೇಡುಸುತ್ತಿದ್ದಾರೆ ಮೋದಿಯವರು ಆಧುನಿಕ ಭಾರತದ “ಕಾಯಕಯೋಗಿ ಬಸವಣ್ಣ” ಎಂದರೆ ತಪ್ಪಾಗಲಾರದು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ನವದೆಹಲಿಯಲ್ಲಿ ಬಸವಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಜಗಜ್ಯೋತಿ ಬಸವಣ್ಣನವರ ೮೯೪ನೇ ಜಯಂತಿಯನ್ನು ಸಂಸತ್ತಿನ ಆವರಣದಲ್ಲಿ ಅಚರಿಸಲು ಸನ್ಮಾನ್ಯ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಮತ್ತು ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರು ಅನುಮತಿಯನ್ನು ನೀಡಿದ್ದಾರೆ.
ಬಸವಮೂರ್ತಿ ಸಂಸತ್ತಿನ ಆವರಣದಲ್ಲಿ ಸ್ಥಾಪನೆಯಾಗಿ ಸುಮಾರು 22 ವರ್ಷಗಳ ನಂತರ ಇಂತಹ ಜಯಂತಿಯ ಕಾರ್ಯಕ್ರಮವನ್ನು ಆಯೋಜಿಸಿಲು ಅವಕಾಶ ಸಿಕ್ಕಿದೆ. ಇದು ಕನ್ನಡ ನಾಡಿನ ಸಮಸ್ತ ಜನತೆಗೆ ಸಂಸತ್ತಿನ ಮುಖೇನ ಭಾರತ ಸರ್ಕಾರ ನೀಡಿದ ಮಹಾ ಗೌರವ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

Basava Jayanti ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಪಾಠ ಕಲಿಸಿಕೊಟ್ಟ ಬಸವಣ್ಣನವರು ಯಾವುದೇ ಜಾತಿಗೆ ಸೀಮಿತರಲ್ಲ: ಗುರುಕುಮಾರ ಪಾಟೀಲ್

0
ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಪಾಠ ಕಲಿಸಿಕೊಟ್ಟ ಬಸವಣ್ಣನವರು ಯಾವುದೇ ಜಾತಿಗೆ ಸೀಮಿತರಲ್ಲ: ಗುರುಕುಮಾರ ಪಾಟೀಲ್
ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಪಾಠ ಕಲಿಸಿಕೊಟ್ಟ ಬಸವಣ್ಣನವರು ಯಾವುದೇ ಜಾತಿಗೆ ಸೀಮಿತರಲ್ಲ: ಗುರುಕುಮಾರ ಪಾಟೀಲ್

Basava Jayanti ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಠ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲಘಟ್ಟದಲ್ಲಿ ಸರಳ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆ ತಂದವರು ವಚನಕಾರ ಬಸವಣ್ಣನವರು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಗುರುಕುಮಾರ ಪಾಟೀಲ್ ಹೇಳಿದರು.
ಸೊರಬ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಟೌನ್ ವೀರಶೈವ ಸಮಾಜದ ವತಿಯಿಂದ ಹಮ್ಮಿಕೊಂಡ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಪಾಠ ಕಲಿಸಿಕೊಟ್ಟ ಬಸವಣ್ಣನವರು ಯಾವುದೇ ಜಾತಿಗೆ ಸೀಮಿತರಲ್ಲ. ದಯವೇ ಧರ್ಮದ ಮೂಲವಯ್ಯ ಎನ್ನುತ್ತಾ ಜಗತ್ತಿಗೆ ಮಾನವೀಯತೆಯ ಸಂದೇಶವನ್ನು ಸಾರಿದರು. ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಅನುಭವ ಮಂಟಪವನ್ನು ಸ್ಥಾಪಿಸಿದರು. ಈ ಮೂಲಕ ೧೨ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವದ ಮಹತ್ವ ತಿಳಿಸಿದರು. ಬಸವಣ್ಣನವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಕೆ. ಜಯಶೀಲಗೌಡ ಮಾತನಾಡಿ, ಬಸವಣ್ಣನವರನ್ನು ಜಾತಿಗೆ ಸೀಮಿತಗೊಳಿಸುವುದು ಸಲ್ಲದು. ಜಗತ್ತಿನಲ್ಲಿಯೇ ಮೊದಲು ಸ್ತ್ರೀಯರಿಗೆ ಸ್ಥಾನಮಾನ ದೊರೆಕಿಸಿಕೊಟ್ಟು ಹಾಗೂ ಸಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದರು. ಪ್ರಸ್ತುತ ಇಂದಿಗೂ ಸಮಾಜದಲ್ಲಿ ಜಾತಿಯತೆ, ಕಂದಾಚಾರ, ಮೌಢ್ಯಗಳು ಜೀವಂತವಾಗಿರುವುದು ದುರ್ಧೈವದ ಸಂಗತಿ ಎಂದರು.
Basava Jayanti ಇದಕ್ಕೂ ಮೊದಲು ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿಂದ ಮುಖ್ಯರಸ್ತೆ ಮಾರ್ಗವಾಗಿ ತಾಲೂಕು ಕಚೇರಿ ವರೆಗೆ ಬಸವಣ್ಣನವರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಗೆ ಡೊಳ್ಳು ಕುಣಿತ ಮೆರಗು ತಂದಿತು.
ಬಸವಣ್ಣನವರ ಕುರಿತು ಮಹಾಂತೇಶ್ ಕಳ್ಳಿಕೋನೆ ಉಪನ್ಯಾಸ ನೀಡಿದರು. ಸಾಮಾಜಿಕ ಚಿಂತಕ ರಾಜಪ್ಪ ಮಾಸ್ತರ್ ಮಾತನಾಡಿದರು. ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ ಕೆಎಂಎಫ್ ನಿರ್ದೇಶಕ ದಯಾನಂದಗೌಡ ತ್ಯಾವಗೋಡು, ಪಿಎಸ್‌ಐ ನಾಗರಾಜ್, ಟೌನ್ ವೀರಶೈವ ಸಮಾಜದ ಅಧ್ಯಕ್ಷ ವಿಶ್ವನಾಥ ಗೌಡ, ವೀರಶೈವ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ಕುಸುಮಾ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಉಮೇಶ್ ಪಾಟೀಲ್, ತಾಲೂಕು ಅಧ್ಯಕ್ಷ ಈಶ್ವರಪ್ಪ, ಜಿಲ್ಲಾ ಸಂಚಾಲಕ ಮಂಜುನಾಥ ಆರೇಕೊಪ್ಪ, ಪಶು ಇಲಾಖೆಯ ಆಡಳಿತಾಧಿಕಾರಿ ಡಾ.ಎನ್‌ಆರ್. ಪ್ರದೀಪ್ ಕುಮಾರ್, ವೀರಶೈವ ಯುವ ವೇದಿಕೆ ಮಾಜಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ, ವಿಜೇಂದ್ರಸ್ವಾಮಿ ಎಣ್ಣೆಕೊಪ್ಪ, ಚಂದ್ರಪ್ಪ ಗಂಗೊಳ್ಳಿ, ಶರತ್‌ಸ್ವಾಮಿ ಸೇರಿದಂತೆ ಇತರರಿದ್ದರು.

Basava Jayanti ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ ರಾಜಭೀದಿ ಉತ್ಸವ

0
ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ ರಾಜಭೀದಿ ಉತ್ಸವ
ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ ರಾಜಭೀದಿ ಉತ್ಸವ

Basava Jayanti ಬಸವ ಜಯಂತಿ ಅಂಗವಾಗಿ ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾ ಸಂಘ ಹಾಗೂ ಜಿಲ್ಲಾಡಳಿತ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ವತಿಯಿಂದ ಶಿವಮೊಗ್ಗ ನಗರದ ಗಾಂಧಿ ಬಜಾರ್ ಬಸವೇಶ್ವರ ದೇವಸ್ಥಾನ ದೇವಸ್ಥಾನ ದಿಂದ ವಿಜೃಂಭಣೆಯಿಂದ ಪೂಜೆ ಸಲ್ಲಿಸಿ ಬಸವೇಶ್ವರ ಭಾವಚಿತ್ರದೊಂದಿಗೆ ಗಾಂಧಿ ಬಜಾರ್ ನೆಹರು ರಸ್ತೆ ಮುಖಾಂತರ ಕುವೆಂಪುರ ರಂಗಮಂದಿರಕ್ಕೆ ಮೆರವಣಿಗೆ ತಲುಪಿತು. Basava Jayanti ವೀರಗಾಸೆ ಡೊಳ್ಳು ಕುಣಿತ. ಕರಡಿಮಜಲು ಹಾಗೂ ಭಜನಾ ತಂಡಗಳೊಂದಿಗೆ ರಾಜಭೀದಿ ಉತ್ಸವವು ವಿಜೃಂಭಣೆಯಿಂದ ನೆರವೇರಿತು
ಸಮಾಜದ ಅಧ್ಯಕ್ಷರಾದ ಎಸ್ ಎಸ್ ಜ್ಯೋತಿ ಪ್ರಕಾಶ್. ಕಾರ್ಯದರ್ಶಿ ಎಸ್ಪಿ ದಿನೇಶ್. ಹೆಚ್.ಸಿ ಯೋಗೀಶ್.. ಡಿಎಂ ಶಂಕರಪ್ಪ. ಟಿಬಿ ಜಗದೀಶ್. ಬಾಳೆಕಾಯಿ ಮೋಹನ್. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಚ್ ಎಮ್ ಮಹಾರುದ್ರ. ಶ್ರೀ ವಿಜಯ ಕುಮಾರ್. ಶಾಂತ ಆನಂದ. ಮಹೇಶ್ ಮೂರ್ತಿ ಅನಿತಾ ರವಿಶಂಕರ್ ಪೀ ರುದ್ರೇಶ್. ವೈ ಹೆಚ್ ನಾಗರಾಜ್. ಕಿರಣ್ ದೇಸಾಯಿ. ಕಾಯಕಯೋಗಿ ಚೆನ್ನಬಸಪ್ಪ ಉಪಸ್ಥಿತರಿದ್ದರು.

Red Cross Organization ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ರೆಡ್ ಕ್ರಾಸ್ ವತಿಯಿಂದ ಶ್ರವಣ ಸಾಧನ ವಿತರಣೆ

0
ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ರೆಡ್ ಕ್ರಾಸ್ ವತಿಯಿಂದ ಶ್ರವಣ ಸಾಧನ ವಿತರಣೆ
ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ರೆಡ್ ಕ್ರಾಸ್ ವತಿಯಿಂದ ಶ್ರವಣ ಸಾಧನ ವಿತರಣೆ

Red Cross Organization ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ರೆಡ್ ಕ್ರಾಸ್ ವತಿಯಿಂದ 25 ಶ್ರಾವಣ ಸಾಧನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರ ಹಸ್ತದಿಂದ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ರೆಡ್ ಕ್ರಾಸ್ ಸಂಸ್ಥೆಯ ಸೇವೆಗಳನ್ನ ಗುರುತಿಸಿ ಅಭಿನಂದಿಸಿದರು. ಸಮಾಜದಲ್ಲಿ ನೂರಾರು ವರ್ಷಗಳಿಂದ ಮಾನವೀಯ ಸೇವೆಯನ್ನು ಮಾಡುತ್ತಿರುವ ರೆಡ್ ಕ್ರಾಸ್ ಸಂಸ್ಥೆ ಇಂದಿಗೂ ಸಹ ತನ್ನ ವಿಶೇಷ ಸೇವೆಗಳಿಂದ ಗುರುತಿಸಿಕೊಂಡಿದೆ ಎಂದು ನುಡಿದರು.

ಕಾರ್ಯದರ್ಶಿ ಡಾ. ದಿನೇಶ್ ಮಾತನಾಡಿ, ಈಗ 25 ಶ್ರವಣ ಸಾಧನ ನೀಡಿದ್ದು, ಬರುವ ದಿನಗಳಲ್ಲಿ ಇನ್ನೂ 25 ಶ್ರವಣ ಸಾಧನಗಳಿಗೆ ಬೇಡಿಕೆ ಇದೆ. ಅದನ್ನು ಕೂಡಲೇ ವಿತರಿಸಲಾಗುವುದು ಎಂದು ನುಡಿದರು.

Red Cross Organization ಹಾಗೆ ಈಗಾಗಲೇ ವೀಲ್ ಚೇರ್ ಗಳನ್ನು ಮತ್ತು ಅಂಗವಿಕಲರ ಸಾಧನ ಸಾಮಗ್ರಿಗಳನ್ನು, ಕರೋನಾ ಸಂದರ್ಭದಲ್ಲಿ ಫುಡ್ ಕಿಟ್ ಗಳನ್ನು ವಿತರಣೆ ಮಾಡಿರುವುದನ್ನು ನೆನಪಿಸಿದರು.

ಸಮಾರಂಭದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ರೆಡ್ ರೆಡ್ ಕ್ರಾಸ್ ಮಾಜಿ ಸಭಾಪತಿಗಳಾದ ಅಶ್ವತ್ ನಾರಾಯಣ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಬಲ್ಕಿಶ್ ಬಾನು, ಭಾರತಿ ಚಂದ್ರಶೇಖರ್, ಭಾರತೀ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ರೆಡ್ ಕ್ರಾಸ್ ನಿರ್ದೇಶಕರಾದ ನವೀನ್ ಹಾಗೂ ಎಸ್ ಪಿ ಮಿಥುನ್ ಕುಮಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Klive Special Article ಅಕ್ಷಯ ಫಲ ನೀಡುವ ಅಕ್ಷಯ ತೃತೀಯ

0
ಅಕ್ಷಯ ಫಲಕ ನೀಡುವ ಅಕ್ಷಯ ತೃತೀಯ
ಅಕ್ಷಯ ಫಲಕ ನೀಡುವ ಅಕ್ಷಯ ತೃತೀಯ

ಲೇ: ಎನ್.ಜಯ ಭೀಮಜೊಯಿಸ್ ಶಿವಮೊಗ್ಗ

Klive Special Article ವೈಶಾಖ ಮಾಸದ ಶುಕ್ಲಪಕ್ಷದ ಮೂರನೆಯ ದಿನವನ್ನು “ಅಕ್ಷಯತೃತೀಯ”ಎಂದು ಕರೆಯುತ್ತಾರೆ.ಅಕ್ಷಯ ಎಂದರೆ ಹೆಚ್ಚುತ್ತಾ ಹೋಗುವುದು,ಸದಾ ವೃದ್ಧಿಯಾಗುವುದು ಎಂದರ್ಥ.ಇಂದಿನ ದಿನ ಒಳ್ಳೆಯ ಕೆಲಸಗಳನ್ನು ಮಾಡುವುದರ ಮೂಲಕ ಪುಣ್ಯವನ್ನು ಅಕ್ಷಯ ಮಾಡಿಕೊಳ್ಳಬಹುದಾದಂತಹ ದಿನ. ಎಲ್ಲರ ಬಾಳಿನಲ್ಲಿ ಸಂತೋಷ,ನೆಮ್ಮದಿ,ಶಾಂತಿ ಮತ್ತು ಆರೋಗ್ಯಭಾಗ್ಯ ಅಕ್ಷಯವಾಗಲಿ ಎಂಬ ಸದುದ್ದೇಶ ಹೊಂದಿರುವ ದಿನ ಅಕ್ಷಯತೃತೀಯ.
ಅಕ್ಷಯತೃತೀಯದದಿನದವಸ-ಧಾನ್ಯ,ಹಣ,ಹಸಿದವರಿಗೆ ಊಟ ಹೀಗೆಯಾವುದನ್ನು ದಾನವಾಗಿ ನೀಡಿದರೂ ಅದರಿಂದಬರುವ ಪುಣ್ಯದ ಫಲ ಬಹಳವಾಗಿರುತ್ತದೆ. ಇಂದು ಬೆಳ್ಳಿ ಬಂಗಾರದ ಆಭರಣಗಳನ್ನು ಖರೀದಿಸಿದರೆ ಸಂಪತ್ತು ಅಕ್ಷಯವಾಗುತ್ತದೆ ಎಂಬ
ನಂಬಿಕೆಯಿದೆ. ಸಂಪತ್ತು ಅಕ್ಷಯವಾಗುತ್ತದೆ ಎಂದು ಬೆಳ್ಳಿ ಬಂಗಾರ
ವನ್ನು ಸಾಲಮಾಡಿ ತೆಗೆದುಕೊಳ್ಳುವುದು ಅಷ್ಟು ಸೂಕ್ತವಾದ ಯೋಚನೆಯಲ್ಲ.,ಏಕೆಂದರೆ ಸಾಲ
ಮಾಡಿ ಸಂಕಷ್ಟವನ್ನೂಅನುಭವಿಸಬಹುದು.ಹಣದ ಅನುಕೂಲವಿದ್ದವರು ಬೆಳ್ಳಿಬಂಗಾರವನ್ನು ಖರೀದಿಸಬಹುದು.
ವಿದ್ಯಾದಾನವೂ ಬಹಳ ಶ್ರೇಷ್ಠವಾದ ದಾನವಾಗಿ ರುತ್ತದೆ.ಎಲ್ಲಕ್ಕಿಂತ ಅನ್ನದಾನ ಬಹಳ ಮಹತ್ವ
ಪಡೆದಿರುವ ದಾನವಾಗಿರುತ್ತದೆ.ಹಸಿದ ಹೊಟ್ಟೆಗೆ ಅನ್ನ ಉಣಬಡಿಸಿದರೆ ಅಗಾಧವಾದ ಪುಣ್ಯವನ್ನು
ಪಡೆಯಬಹುದು.ಮನುಷ್ಯನಿಗೆಯಾವುದರಿಂದಲೂ ತೃಪ್ತಿಪಡಿಸಲಾಗುವುದಿಲ್ಲ.ಊಟವೊಂದೇ ತೃಪ್ತಿಯಾಗಿಸಾಕೆನಿಸುವುದು.ಅಕ್ಷಯ ತೃತೀಯ ಬರುವ ವೈಶಾಖಮಾಸದಲ್ಲಿ ಬಿಸಿಲಿನ ತಾಪ ಬಹಳ ವಾಗಿರುತ್ತದೆ.ನಿಂಬೆಹಣ್ಣಿನಪಾನಕ,ಮಜ್ಜಿಗೆ,ಒಳ್ಳೆಯ ಕುಡಿಯುವನೀರುಇವುಗಳನ್ನುಬಿಸಿಲಿನಬೇಗೆಯಲ್ಲಿ ಬಳಲಿದವರಿಗೆ ಕೊಟ್ಟರೂ ಅದರಿಂದಲೂ ಪುಣ್ಯದ ಫಲ ಸಂಚಯವಾಗುತ್ತದೆ.
ಈ ದಿನ ಯಾವುದೇ ಶುಭದ ಕೆಲಸವನ್ನು ಪ್ರಾರಂಭ ಮಾಡಿದರೆ ಅದು ಯಾವುದೇ ಅಡೆತಡೆಗಳಿಲ್ಲದೇ
ನಡೆಯುವುದು ಎಂಬ ದೃಢ ನಂಬಿಕೆಯೂ ಇದೆ. ದಶಾವತಾರದ ವಿಷ್ಣುವಿನ ಆರನೇ ಅವತಾರವಾದ
ಪರಶುರಾಮಾವತಾರವಾದ ದಿನ ಮತ್ತು ಮಹಾ ಪುರುಷರಾದ ಶ್ರೀ ಬಸವಣ್ಣನವರು ಜನಿಸಿದ್ದು ಅಕ್ಷಯ ತೃತೀಯದಂದೇ.ಶ್ರೀ ಶಂಕರಾಚಾರ್ಯರು ಕನಕಧಾರಾ ಸ್ತೋತ್ರವನ್ನು ರಚಿಸಿದ್ದೂ ಅಕ್ಷಯ ತದಿಗೆಯಂದೇ.ಬಾಲ್ಯದ ಗೆಳೆಯರಾಗಿದ್ದ ಶ್ರೀಕೃಷ್ಣ ಸುಧಾಮರು ಭೇಟಿಯಾಗಿತಮ್ಮ ಬಾಲ್ಯದ ದಿನಗಳನ್ನುಮೆಲುಕುಹಾಕಿದದಿನವೂಇಂದೇ.
ಶ್ರೀವೇದವ್ಯಾಸರುಗಣೇಶನಿಂದಮಹಾಭಾರತವನ್ನು ಬರೆಸಿದ ದಿನವೂ ಅಕ್ಷಯತೃತೀಯ ದಿನವಾಗಿದೆ.
ಯುಧಿಷ್ಠಿರನಿಗೆ ಅಕ್ಷಯ ಪಾತ್ರೆ ದೊರೆತಿದ್ದು ಈ ದಿನದಂದೇ ಆಗಿದೆ.ಅಕ್ಷಯಪಾತ್ರೆಯು ಸುಭಿಕ್ಷವಾಗಿ ಆಹಾರವನ್ನುನೀಡುವಪಾತ್ರೆಯಾಗಿದೆ.ಅಕ್ಷಯಪಾತ್ರೆಯಲ್ಲಿ ಆಹಾರ ಎಂದಿಗೂ ಬರಿದಾಗುವುದೇ ಇಲ್ಲ.
ಈ ದಿನ ಜೈನಬಂಧುಗಳಿಗೂ ಅತ್ಯಂತ ಪವಿತ್ರವಾದ ದಿನವಾಗಿರುತ್ತದೆ. ಏಕೆಂದರೆ ಜೈನ ತೀರ್ಥಂಕರರಾದ ಋಷಭದೇವ ಉಪವಾಸವ್ರತವನ್ನುಸಂಪೂರ್ಣಗೊಳಿಸಿದ ದಿನವಾಗಿರುತ್ತದೆ. ಚಾರ್ ಧಾಮಗಳಲ್ಲಿ ಒಂದಾದಬದರೀಕ್ಷೇತ್ರದಲ್ಲಿಶ್ರೀಬದರಿನಾರಾಯಣನ ದರ್ಶನಕ್ಕೆ ದೇವಸ್ಥಾನದ ಬಾಗಿಲು ತೆಗೆಯುವುದು ಅಕ್ಷಯತೃತೀಯ ದಿವಸದಂದೇ.
ಇಂದು ವಿವಾಹಮುಂತಾದಮಂಗಳಕಾರ್ಯಗಳನ್ನು ಮಾಡುವುದರಿಂದ ಮುಂದಿನ ದಿನಗಳಲ್ಲಿ ಅವರಿಗೆ ಜೀವನದಲ್ಲಿಯಾವುದೇ ರೀತಿಯ ತೊಂದರೆಗಳು ಬರುವುದಿಲ್ಲವೆಂಬದೃಢವಾದ ನಂಬಿಕೆ ಇದೆ.
ಜ್ಞಾನವನ್ನು ಹೆಚ್ಚು ಮಾಡಿಕೊಳ್ಳಲು ಒಳ್ಳೆಯ ಪುಸ್ತಕಗಳನ್ನು ಖರೀದಿಸಿ ಜ್ಞಾನ ಸಂಪಾದನೆಯನ್ನು
ವೃದ್ಧಿಸಿಕೊಳ್ಳ ಬಹುದು. ಸಹಾಯದ ಅಗತ್ಯವಿರುವವರಿಗೆ ಕೈಲಾದ ಸಹಾಯ ಮಾಡಿ ಪುಣ್ಯಸಂಪಾದಿಸಿಕೊಳ್ಳಬಹುದು.
ಈ ಅಕ್ಷಯ ತೃತೀಯ ಶುಭದಿನದಂದು ಒಳ್ಳೆಯ ಕೆಲಸಗಳನ್ನು ಮಾಡುವ ಸಂಕಲ್ಪ ಮಾಡಿ ಅದರಂತೆ
ನಡೆದರೆ ಅಕ್ಷಯ ತೃತೀಯ ಹಬ್ಬದ ಆಚರಣೆ ಅರ್ಥ ಪೂರ್ಣವಾಗುವುದರಲ್ಲಿ ಸಂದೇಹವಿಲ್ಲ.

Sri Adichunchanagiri Education Trust ಬಿಜಿಎಸ್ ಪಿಯು ವಾಣಿಜ್ಯ ಕಾಲೇಜಿಗೆ ಶೇ 100 ಫಲಿತಾಂಶ

0
ಬಿಜಿಎಸ್ ಪಿಯು ವಾಣಿಜ್ಯ ಕಾಲೇಜಿಗೆ ಶೇ 100 ಫಲಿತಾಂಶ
ಬಿಜಿಎಸ್ ಪಿಯು ವಾಣಿಜ್ಯ ಕಾಲೇಜಿಗೆ ಶೇ 100 ಫಲಿತಾಂಶ

Sri Adichunchanagiri Education Trust ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ) ಶಿವಮೊಗ್ಗ ಶಾಖೆಯ ಗುರುಪುರದಲ್ಲಿರುವ ಬಿಜಿಎಸ್ ಗುರುಕುಲ ಸ್ವತಂತ್ರ ಪ. ಪೂ.ವಾಣಿಜ್ಯ ಕಾಲೇಜು ಗ್ರಾಮೀಣ ಭಾಗದ ಮಕ್ಕಳನ್ನೊಳಗೊಂಡ ಕಾಲೇಜಿಗೆ ಶೇ100 ಫಲಿತಾಂಶ ಲಭಿಸಿರುವುದು ಹಿರಿಮೆಯ ಸಂಗತಿ.
ಪರೀಕ್ಷೆಗೆ ಕುಳಿತ 45 ವಿದ್ಯಾರ್ಥಿಗಳಲ್ಲಿ 08 ಅತ್ಯುತ್ತಮ ಶ್ರೇಣಿ, ಪ್ರಥಮ ಶ್ರೇಣಿ, 36 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಒಬ್ಬ ವಿದ್ಯಾರ್ಥಿ ತೇರ್ಗಡೆಯಾಗಿದ್ದು,ಉತ್ತಮ ಸಾಧನೆ ಮಾಡಿದ್ದಾರೆ.
Sri Adichunchanagiri Education Trust ಪ್ರಜ್ವಲ್ ಹೆಚ್. ಎನ್.ಪಿಯುಸಿ ವಾರ್ಷಿಕ ಪರೀಕ್ಷೆಯ ಪಲಿತಾಂಶ ದಲ್ಲಿ ಈ ವಿದ್ಯಾರ್ಥಿಗೆ ಬಿಜಿನೆಸ್ ಸ್ಟಡೀಸ್ ನಲ್ಲಿ 36ಅಂಕಗಳು ಬಂದಿದ್ದು, ನಂತರ ಮರು ಮೌಲ್ಯ ಮಾಪನದಲ್ಲಿ 13 ಅಂಕಗಳು ಪಡೆಯುವ ಮೂಲಕ ಪಾಸಾಗಿರುತ್ತಾನೆ.
ವಿದ್ಯಾರ್ಥಿಗಳ ಸಾಧನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ಸಾಯಿನಾಥ ಸ್ವಾಮೀಜಿ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Department of Science and Technology ಹೊಳಲೂರು ಏತ ನೀರಾವರಿಗೆ ₹ 4.8 ಕೋಟಿ ಬಜೆಟ್ ನಿಗದಿಮಾಡಿದ ಸಚಿವರ ಕ್ರಮಕ್ಕೆ ರೈತರ ಕೃತಜ್ಞತೆ

0
ಹೊಳಲೂರು ಏತ ನೀರಾವರಿಗೆ ₹ 4.8 ಕೋಟಿ ಬಜೆಟ್ ನಿಗದಿಮಾಡಿದ ಸಚಿವರ ಕ್ರಮಕ್ಕೆ ರೈತರ ಕೃತಜ್ಞತೆ
ಹೊಳಲೂರು ಏತ ನೀರಾವರಿಗೆ ₹ 4.8 ಕೋಟಿ ಬಜೆಟ್ ನಿಗದಿಮಾಡಿದ ಸಚಿವರ ಕ್ರಮಕ್ಕೆ ರೈತರ ಕೃತಜ್ಞತೆ

Department of Science and Technology ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಯ ಹೊಳಲೂರು ಏತನೀರಾವರಿ ಯೋಜನೆಯ ಪುನಃಶ್ಚೇತನ ಕಾಮಗಾರಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅನುಮೋದನೆ ನೀಡಿದ್ದು, 4.80 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಯನ್ನು ತಕ್ಷಣವೇ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ತುಂಗಭದ್ರಾ ನದಿಯಿಂದ ನಾರಾಯಣ ಕೆರೆ, ಸೀಗೆಹಳ್ಳಿ, ಬೂದಿಗೆರೆ ಕೆರೆ, ಸುತ್ತುಕೋಟೆ ಕೆರೆಗಳಿಗೆ ಏತ ನೀರಾವರಿ ಯೋಜನೆಯಡಿ ನೀರೆತ್ತುವ ವ್ಯವಸ್ಥೆಯನ್ನು ದುರಸ್ತಿ, ನವೀಕರಣಗೊಳಿಸುವ, ಪಂಪ್ ಮೋಟಾರ್ ಗಳ ರಿಪೇರಿ, ಹರಮಘಟ್ಟ ಕೆರೆ ಪಾತ್ರದ ಹೊಸ ಪ್ರದೇಶಗಳಿಗೆ ಮೋಟಾರು ಪರಿಕರಗಳನ್ನು ಸಾಗಿಸುವ, ಸೀಗೆ ಕೆರೆ ಬಳಿ ಹೊಸದಾಗಿ ಪೈಪ್ ಲೈನ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡುವಂತೆ ಸೂಚಿಸಿದ್ದಾರೆ.

ಕಳೆದ ವರ್ಷ ಸೊರಬಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರೈತರು ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದರು. ಮಾರ್ಚ್ 8 ರಂದು ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಿಲ್ಲೆಗೆ ಭೇಟಿ ನೀಡಿದ್ದ ಸಚಿವರು ಸ್ಥಳ ಪರಿಶೀಲನೆ ಮಾಡಿದ್ದರು. ಇದಾದ ಒಂದೂವರೆ ತಿಂಗಳಲ್ಲಿ ಪುನಃಶ್ಚೇತನ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

Department of Science and Technology ಸಚಿವ ಎನ್.ಎಸ್. ಬೋಸರಾಜು ಅವರು ಸ್ವತಃ ಮುತುವರ್ಜಿ ವಹಿಸಿ ಕಾಮಗಾರಿ ಕೈಗೆತ್ತಿಕೊಳ್ಳಲು ಆದೇಶ ಜಾರಿ ಮಾಡಿರುವ ಬಗ್ಗೆ ಕೊಮ್ಮನಹಾಳು, ಹರಮಗಟ್ಟೆ ಸೋಮಿನ ಕೊಪ್ಪ ಮತ್ತಿತರೆ ಗ್ರಾಮಗಳ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಬಹಳಷ್ಟು ವರ್ಷಗಳಿಂದ ದುರಸ್ತಿಗಾಗಿ ಪ್ರಯತ್ನ ನಡೆಸಿದ್ದೇವು. ಬೆಂಗಳೂರಿಗೆ ಹಲವು ಬಾರಿ ಅಲೆದಾಡಿದರೂ ಪ್ರಯೋಜನವಾಗಿರಲಿಲ್ಲ. ಆದರೆ ಸಚಿವರು ಬೇರೆಯವಂತೆ ಆಶ್ವಾಸನೆ ನೀಡಿಲ್ಲ. ನೀಡಿದ ವಾಗ್ದಾನದಂತೆ ತ್ವರಿತವಾಗಿ ಸ್ಪಂದಿಸಿದ್ದಾರೆ. ಇದು ಸಣ್ಣ ನೀರಾವರಿ ಯೋಜನೆಗಳ ಬಗ್ಗೆ ಸಚಿವರಿಗಿರುವ ಬದ್ಧತೆಯ ಪ್ರತೀಕವಾಗಿದೆ. ಸರ್ಕಾರಿ ಆದೇಶದ ಪ್ರತಿಯನ್ನು ನಮ್ಮ ಊರಿನ ಹಳ್ಳಿಗಳ ಜನರಿಗೆ ವಾಟ್ಸ್ ಅಪ್ ಮೂಲಕ ರವಾನಿಸಿದ್ದಾರೆ. ಸಚಿವರು ಏತ ನೀರಾವರಿ ಯೋಜನೆಯ ದುರಸ್ತಿಗೆ ಒತ್ತು ನೀಡುವ ಮೂಲಕ ಇಲ್ಲಿನ ಜನರ ಕನಸನ್ನು ನನಸು ಮಾಡಿದ ಹರಿಕಾರ ಎಂದು ಅಭಿನಂದನೆ ಸಲ್ಲಿಸಿದ್ದಾರೆ.

Sri Shankaracharya Jayanti ಮೇ 2. ಭಕ್ತಿಪೂರ್ವಕ ಶಂಕರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸರ್ವ ಸಿದ್ಧತೆ

0
ಮೇ 2. ಭಕ್ತಿಪೂರ್ವಕ ಶಂಕರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸರ್ವ ಸಿದ್ಧತೆ
ಮೇ 2. ಭಕ್ತಿಪೂರ್ವಕ ಶಂಕರ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸರ್ವ ಸಿದ್ಧತೆ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮೇ 02 ರ ಬೆಳಗ್ಗೆ 11.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
Sri Shankaracharya Jayanti ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಿವಮೊಗ್ಗದ ಪ್ರವಚನಕಾರರಾದ ಜಿ.ಎಸ್. ನಟೇಶ್‌ರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.