Sunday, August 2, 2026
Sunday, August 2, 2026
Home Blog

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಶೆಡ್ ನಲ್ಲಿ ವಾಸಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇನ್ನೂ ಕೆಲವರು ಗಂಭೀರ ಗಾಯಗೊಂಡಿರುವ ವಿಚಾರ ತಿಳಿದು ಆಘಾತವಾಯಿತು. ಕೂಲಿ ಅರಸಿ ದೂರದ ಊರಿನಿಂದ ಬಂದು ನೆಲೆಸಿದ್ದ ಬಡಕುಟುಂಬವೊಂದು ಹೀಗೆ ದುರಂತ ಅಂತ್ಯ ಕಂಡಿದ್ದು ದುರದೃಷ್ಟಕರ.

ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಪರಿಹಾರ ಕಾರ್ಯ ಕೈಗೊಳ್ಳುವ ಜೊತೆಗೆ ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವನ್ನು ಒದಗಿಸುವಂತೆ ಸೂಚನೆ ನೀಡಿದ್ದೇನೆ.

Breaking News ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬದವರ ಜೊತೆ ಸರ್ಕಾರ ನಿಲ್ಲಲಿದೆ ಎಂದು ಉಪಮುಖ್ಯಮಂತ್ರಿಗಳೂ ಹಾಗು ರಾಜ್ಯದ ಕಂದಾಯ ಇಲಾಖಾ ಸಚಿವರಾಗಿರುವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

Karnataka State Open University ಕರಾಮು ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಪ್ರಕಟಣೆ

0

Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‌ಗಳ ಪ್ರವೇಶಾತಿಯು ದಿನಾಂಕ 25-06-2026 ರಿಂದ ಪ್ರಾರಂಭವಾಗಿದೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.
ಆಸಕ್ತ ವಿದ್ಯಾರ್ಥಿಗಳು ಕರಾಮುವು ಅಧಿಕೃತ ವೆಬ್‌ಸೈಟ್ www.ksoumysuru.ac.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರವೇಶಾತಿಯನ್ನು ಆಲ್ಕೋಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವು ಪ್ರಾದೇಶಿಕ ಕೇಂದ್ರ, ಶಿವಮೊಗ್ಗ ಇಲ್ಲಿಗೆ ಭೇಟಿ ನೀಡಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ
ದೂರವಾಣಿ ಸಂಖ್ಯೆ 08182-250367, 9900667916, 9480765905 ನ್ನು ಸಂಪರ್ಕಿಸಬಹುದೆಂದು ತಿಳಿಸಿದೆ.

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

0

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ ವಿಚಾರದೊಂದಿಗೆ ನಾವೆಲ್ಲರೂ ಬೆಳೆದಿದ್ದೇವೆ. ರಾಜ್ಯದ ಹಿತಾಸಕ್ತಿ ವಿಚಾರ ಬಂದಾಗ ರಾಜಕೀಯವನ್ನು ಪಕ್ಕಕ್ಕಿಟ್ಟು, ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ರಾಜ್ಯದ ಪರ ನಿಂತಿರುವ ಹೆಮ್ಮೆಯ ಪರಂಪರೆ ನಮ್ಮ ರಾಜ್ಯಕ್ಕಿದೆ.
ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಾನ್ಯಮುಖ್ಯಮಂತ್ರಿಗಳು ಈಗಷ್ಠೇ
ಕಾವೇರಿ ನೀರಿನ ವಿಚಾರವಾಗಿ ನಡೆದ ಸರ್ವಪಕ್ಷ ಸಭೆಯಲ್ಲಿ ಪ್ರಾಸ್ತಾವಿಕ ನುಡಿಗಳಲ್ಲಿ ಈ ಅಭಿಪ್ರಾಯ. ನಿವೇದಿಸಿದರು

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎಂಬುದು ನಮ್ಮ ಸರ್ಕಾರದ ಸ್ಪಷ್ಟ ನಿಲುವಾಗಿದೆ. ಈ ವಿಚಾರದಲ್ಲಿ ತಾವೆಲ್ಲರೂ ಸಂಪೂರ್ಣ ಸಹಮತ ಹೊಂದಿದ್ದೀರಿ ಎಂಬ ವಿಶ್ವಾಸ ನನಗಿದೆ.

D.K.Shivakumar ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಸಭೆಗಳಿಗೂ ಮುನ್ನವೇ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಸಿ.ಆರ್. ಪಾಟೀಲ್, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಹಾಗೂ ಶ್ರೀ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಮತ್ತು ಶ್ರೀ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ರಾಜ್ಯದ ನಿಲುವನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಪಕ್ಷಭೇದ ಮರೆತು ರಾಜ್ಯದ ಪರವಾಗಿ ಕೇಂದ್ರದ ಮಟ್ಟದಲ್ಲಿ ಧ್ವನಿಯೆತ್ತಿದ ಎಲ್ಲ ನಾಯಕರಿಗೂ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ದೆಹಲಿಯಲ್ಲಿ ನಡೆದ ಕರ್ನಾಟಕದ ಸಂಸತ್ ಸದಸ್ಯರ ಸಭೆಯಲ್ಲಿ ಎಲ್ಲ ಪಕ್ಷಗಳ ಸಂಸದರು ರಾಜ್ಯದ ಹಿತಾಸಕ್ತಿಗಾಗಿ ಒಗ್ಗಟ್ಟಾಗಿ ನಿಲ್ಲುವ ಭರವಸೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಅವರಿಗೂ ನನ್ನ ಕೃತಜ್ಞತೆಗಳು ಎಂದು ಡಿ.ಕೆ.ಶಿವಕುಮಾರ್ ನುಡಿದರು.

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

0

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್ ಆಫ್ ಪ್ರೊಟೆಸ್ಟ್’ ಇಂಗ್ಲಿಷ್ ಕೃತಿಯ ಕನ್ನಡ ಅನುವಾದಿತ ಕೃತಿ ‘ಪ್ರತಿಭಟನೆಯ ಧ್ವನಿಗಳು’ ಪುಸ್ತಕ ಬಿಡುಗಡೆ ಸಮಾರಂಭ ಶುಕ್ರವಾರ ಸಂಜೆ ಆಲ್ಕೊಳದ ರೋಟರಿ ಸೆಂ ಟ್ರಲ್ ಭವನದಲ್ಲಿ ನಡೆಯಿತು.

ವಾಲೆಮನೆ ಬಳಗದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಅನುವಾದಿತ ಕೃತಿ ಬಿಡುಗಡೆ ಜೊತೆಗೆ ಚನ್ನಪ್ಪ ಅವರ 62ನೇ ಜನ್ಮ ದಿನಾಚರಣೆ ಮತ್ತು ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿ ಹಾಗೂ ಗೆಳೆಯರು ಮತ್ತು ಬಂಧುಗಳಿಂದ ಸನ್ಮಾನ ಕೂಡ ನಡೆಯಿತು.

ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ ಮಾಡಿ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ ಶಾಸಕ ಎಸ್.ಎನ್. ಚನ್ನಬಸಪ್ಪ, ನಿವೃತ್ತಿ ಪ್ರವೃತ್ತಿಯನ್ನು ಹೆಚ್ಚಿಸುತ್ತದೆ. ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ.

ಇಂತಹ ಸಂದರ್ಭದಲ್ಲಿ ಅವರ ಕೃತಿ ಹೆಚ್ಚು ಮಹತ್ವ ಪಡೆಯಲಿ. ಅವರು ಮತ್ತಷ್ಟು ಬರೆಯಲಿ. ನಿವೃತ್ತಿ ಬದುಕು ಕ್ರಿಯಾಶೀಲವಾಗಿರಲಿ ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಪ್ರತಿಭಟನೆಗಳೇ ನಮ್ಮ ಹಕ್ಕುಗಳನ್ನು ಪಡೆಯುವ ಅಸ್ತ್ರವಾಗಿದೆ. ಈ ನಿಟ್ಟಿನಲ್ಲಿ ಅವರ ಕೃತಿ ಹೆಚ್ಚು ಮನ್ನಣೆ ಪಡೆದು ಯುವಕರ ತಲುಪಲಿ. ನಿವೃತ್ತಿ ಎಂದರೆ ಕೇವಲ ಹಾರ ಹಾಕಿ ಅವರನ್ನು ಅಭಿನಂದಿಸುವುದಲ್ಲ, ಅದು ಜ್ಞಾನ ಮತ್ತು ಸೇವೆಯನ್ನು ಗುರುತಿಸುವ ಕೆಲಸವೂ ಹೌದು ಎಂದರು.

ಕೃತಿಯ ಅನುವಾದಕ ಹಾಗೂ ಚಿಂತಕ ಡಾ.ಹೆಚ್.ಎಸ್. ನಾಗಭೂಷಣ್ ಮಾತನಾಡಿ, ಬರೆಯುವುದು ಕೂಡ ಸಾಮಾಜಿಕ ಹೊಣೆಗಾರಿಕೆ. ಸಾಹಿತ್ಯ ಎನ್ನುವುದು ಸಮಾಜದ ಕನ್ನಡಿ. ಹೂವು ಅರಳುವುದು, ಮಳೆ ಸುರಿಯುವುದು, ಹಕ್ಕಿ ಹಾಡುವುದು, ಹೇಗೆ ಸಹಜ ಕ್ರಿಯೆಯೋ ಹಾಗೆ ಬರೆಯುವುದು ಕೂಡ ಲೇಖಕನ ಸಹಜ ಕ್ರಿಯೆ ಎಂದರು.

ಕೀನ್ಯಾದ ಪ್ರಸಿದ್ಧ ಲೇಖಕ ನ್ಗೊಗಿ ಅವರು ಜಗತ್ತಿನ ನೋವುಗಳ ಕುರಿತು ಬರೆದ ಕೃತಿಯನ್ನು ಡಾ. ಸಿ. ಚನ್ನಪ್ಪ ವಾಲೆಮನೆ ಅವರು ‘ವಾಯ್ಸ್ ಆಫ್ ಪ್ರೊಟೆಸ್ಟ್’ ಬರೆದಿದ್ದಾರೆ. ನಾನು ಅದನ್ನು ‘ಪ್ರತಿಭಟನೆಯ ಧ್ವನಿಗಳು’ ಎಂಬ ಹೆಸರಿಟ್ಟು ಅನುವಾದಿಸಿದ್ದೇನೆ. ಕನ್ನಡಿಗರು ಅರ್ಥ ಮಾಡಿಕೊಳ್ಳಲಿ ಎಂಬ ಉದ್ದೇಶ ನನ್ನದು ಎಂದರು.

S.N. Channabasappa ಪ್ರತಿಭಟನೆಗಳನ್ನೇ ಹತ್ತಿಕ್ಕುವ ಕಾಲವಿದು. ಇದಕ್ಕೆ ಉದಾಹರಣೆ ಎಂದರೆ ಇತ್ತೀಚೆಗೆ ದೆಹಲಿಯಲ್ಲಿ ನಡೆದ ಉಪವಾಸ ಸತ್ಯಾಗ್ರಹ. ವಿದ್ಯಾರ್ಥಿಗಳ ಹಿತಕ್ಕಾಗಿ ಉಪವಾಸ ಮಾಡುತ್ತಿರುವ ಒಬ್ಬ ನಾಯಕನ ಮಾತನ್ನೂ ಕೇಳಿಸಿಕೊಳ್ಳದೇ ಆ ಪ್ರತಿಭಟನೆಯ ಧ್ವನಿಯನ್ನು ರಂಪಾಟ ಎಂದು ಕರೆಯುವ ವ್ಯವಸ್ಥೆಯ ಕಾಲದಲ್ಲಿ ನಾವಿದ್ದೇವೆ. ಇಂತಹ ಸಮಯದಲ್ಲಿ ಚನ್ನಪ್ಪ ವಾಲೆಮನೆ ಅವರ ಕೃತಿ ಹೆಚ್ಚು ಪ್ರಸ್ತುತವಾಗುತ್ತದೆ. ದಮನಿತರ ಶೋಷಿತರ ಪರವಾಗಿ ಇಳಿಯುವುದೇ ಪ್ರತಿಭಟನೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಜಿ.ಎನ್. ಪ್ರಕಾಶ್, ಜಿ.ಕಿರಣ್ ಕುಮಾರ್, ಸುರೇಖಾ ಮುರಳೀಧರ್, ಗೀತಾಂಜಲಿ ಪ್ರಕಾಶನದ ಮೋಹನ್ ಸೇರಿದಂತೆ ಹಲವರಿದ್ದರು.

ಇದೇ ಸಂದರ್ಭದಲ್ಲಿ ನಿವೃತ್ತಿ ಹೊಂದಲಿರುವ ಡಾ.ಸಿ. ಚನ್ನಪ್ಪ ವಾಲೆಮನೆ ದಂಪತಿಗಳನ್ನು ಸನ್ಮಾನಿಸಲಾಯಿತು. ಮತ್ತು ಅವರ ಶಿಷ್ಯರು ಅವರ ಕುರಿತು ಮಾತನಾಡಿದರು.
ದೀಪಶ್ರೀ ಸ್ವಾಗತಿಸಿದರು.

ಅಕ್ಟೋಬರ್ 1. ಹಿರಿಯ ನಾಗರಿಕರ ದಿನ: ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದವರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

0

ಅಕ್ಟೋಬರ್ 01 ರಂದು ನಡೆಯುವ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರೀಕರು ಹಾಗೂ ಸಂಸ್ಥೆಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಲು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರೀಕರ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಿರಿಯ ನಾಗರೀಕರಿಗೆ 6 ವೈಯಕ್ತಿಕ ಹಾಗೂ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಅರ್ಜಿಗಳನ್ನು ಪಡೆದು ಆ.24 ರೊಳಗಾಗಿ ಕನ್ನಡ ಭಾಷೆಯಲ್ಲಿ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತ್ರಿಪ್ರತಿಯಲ್ಲಿ ಭರ್ತಿ ಮಾಡಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಕಛೇರಿ, ಕಾಮಾಕ್ಷಿ ಬೀದಿ, ಗಣಪತಿ ದೇವಸ್ಥಾನದ ಹತ್ತಿರ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ https://dwdsc.kar.nic.in ಹಾಗೂ ದೂ. ಸಂ: 08182-251676ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ

ಯು.ಹೆಚ್.ಕ್ಯೂ. ಕೋಟಾದಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿಗೆ ಇಲಾಖಾ ಪ್ರಕಟಣೆ

0

ಸಿಗ್ನಲ್ ರೆಜಿಮೆಂಟ್‌ನಲ್ಲಿ ಯು.ಹೆಚ್.ಕ್ಯೂ. ಕೋಟಾದಡಿಯಲ್ಲಿ 17 ವರ್ಷ ಆರು ತಿಂಗಳಿಂದ 22 ವರ್ಷದೊಳಗಿನ ವೀರನಾರಿಯರು, ಮಾಜಿ ಸೈನಿಕರ ಮಕ್ಕಳಿಗೆ ಮತ್ತು ಸೈನಿಕರ ಸ್ವಂತ ತಮ್ಮಂದಿರುಗಳಿಗೆ ಆ.18 ರಿಂದ ಆ.21 ರವರೆಗೆ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಟ್ರೇಡ್ಸ್ಮನ್, ಅಗ್ನಿವೀರ್ ಜನರಲ್ ಡುಟಿ ಮತ್ತು ಅಗ್ನಿವೀರ್ ಟೆಕ್ನಿಕಲ್ ಗಳಿಗಾಗಿ ನೇಮಕಾತಿ ನಡೆಯಲಿದೆ.
ಅರ್ಹ ಆಸಕ್ತರು ಆ. 18 ರಂದು ಬೆಳಗ್ಗೆ 5.00 ಕ್ಕೆ ಬಾಯ್ಸ್ ಸ್ಪೋರ್ಟ್ಸ್ ಕಂಪನಿ ಮೈದಾನ, ಜಬಲ್ಪುರ್ ರಸ್ತೆ, ಜಬಲ್ಪುರ್, ಮಧ್ಯಪ್ರದೇಶ ಇಲ್ಲಿ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 04027-863016 ನ್ನು ಸಂಪರ್ಕಿಸಬಹುದೆಂದು
ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಆಗಸ್ಟ್ 4. ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

0

ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಆ. 04 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವುದು. ಮಾಹಿತಿಗಾಗಿ ದೂ ಸಂ.:9448289518 ನ್ನು ಸಂಪರ್ಕಿಸುವಂತೆ ಮೆಸ್ಕಾಂ ತಿಳಿಸಿದೆ.

Sahyadri Arts College ದುಶ್ಚಟಗಳು ಬೇಡವೆಂದು ನಿರಾಕರಿಸಿ ಮುಂದೆ ಸಾಗಿದರೆ ಮಾತ್ರ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ- ಎಸ್.ಎನ್.ಚನ್ನಬಸಪ್ಪ

0

Sahyadri Arts College ಒಳ್ಳೆಯದನ್ನು ಮಾತ್ರ ಆಯ್ಕೆ ಮಾಡಿಕೊಳ್ಳುವ ಹೊಣೆಗಾರಿಕೆ ನಮ್ಮ ಮೇಲಿದ್ದು, ದುಶ್ಚಟಗಳು ಬೇಡವೆಂದು ಒದ್ದು ಮುಂದೆ ಹೋದಾಗ ಮಾತ್ರ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ ಅಭಿಪ್ರಾಯಪಟ್ಟರು.

ಶನಿವಾರ ನಗರದ ಸಹ್ಯಾದ್ರಿ ಕಲಾ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಹ್ಯಾದ್ರಿ ಕಲಾ ಕಾಲೇಜು ಹಾಗೂ ಎನ್‌ಎಸ್‌ಎಸ್ ಘಟಕ 1 ಮತ್ತು 2ರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ‘ವ್ಯಸನಮುಕ್ತ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಾನ್ ಪುರುಷರ ಬಗ್ಗೆ ಯುವ ಪೀಳಿಗೆಗೆ, ಜನರಿಗೆ ತಿಳಿಸುವ ಉದ್ದೇಶದಿಂದ ಸರ್ಕಾರ ಜಯಂತಿಗಳನ್ನು ಆಚರಿಸುತ್ತಿದ್ದು, ಇಂತಹ ಕಾರ್ಯಕ್ರಮ ಗಳಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಮಹಾಂತರ ಕೊಡುಗೆ: ಜನರ ದುಶ್ಚಟಗಳನ್ನು ತಮ್ಮ ಜೋಳಿಗೆಗೆ ಹಾಕಿಸಿಕೊಂಡು ಯುವಕರನ್ನು ದುಶ್ಚಟಗಳ ದುಷ್ಪರಿಣಾಮಗಳಿಂದ ರಕ್ಷಿಸಲು ಜೀವನ‌ ಮುಡಿಪಾಗಿಟ್ಟ ಮಹಾನ್ ಪುರುಷ ಮಹಾಂತ ಶಿವಯೋಗಿಗಳು. ಇಂತಹ‌ ಮಹಾನ್ ವ್ಯಕ್ತಿಗಳ ಹಾದಿಯಲ್ಲಿ ನಾವೆಲ್ಲ ಸಾಗಬೇಕು‌.
ವ್ಯಸನಮುಕ್ತ ಸಮಾಜ: ನಮ್ಮ ಆಲೋಚನೆಗಳು ಬದಲಾಗಿ, ಮಹಾಂತ ಶಿವಯೋಗಿಗಳಂತಹ ಮನಸ್ಥಿತಿ ಬೆಳೆದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ‘ದೇಶ ಮೊದಲು’ ಎಂಬ ತತ್ವದೊಂದಿಗೆ ನಾವೆಲ್ಲ‌ ಸಾಗಬೇಕು. ಮನಸ್ಥಿತಿ ಬದಲಾಗಬೇಕು.
ಪ್ರಸ್ತುತ ಎಲ್ಲೆಡೆ ಮದ್ಯ, ತಂಬಾಕು ಲಭ್ಯವಿದ್ದು, ನಮಗೆ ಏನು ಬೇಕು ಎಂಬ ಆಯ್ಕೆ ನಾವು ಮಾಡಬೇಕಿದೆ.

ಒಳ್ಳೆಯದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ‌ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದ ಅವರು ನಿತ್ಯ ದುಶ್ಚಟಗಳ ವಿರುದ್ದ ಹೋರಾಡಿ ಅದನ್ನು ಮೆಟ್ಟಿ ನಿಲ್ಲಬೇಕು ಎಂದು ಯುವಜನತೆಗೆ ಕರೆ ನೀಡಿದರು.

Sahyadri Arts College ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮಾತಬಾಡಿ, ಮಾದಕ ವಸ್ತಿಗಳ ದುಶ್ಚಟ ಮಾನವನಿಗೆ ಮತ್ತು ಸಮಾಜಕ್ಕೆ ಮಾರಕವಾಗಿದ್ದು ಇದರಿಂದ ದೂರ ಇರಲು ಎಲ್ಲ ರೀತಿಯ ಪ್ರಯತ್ನಗಳಾಗಬೇಕು. ಯುವಜನತೆಯಲ್ಲಿ ಇಂದು ಮೊಬೈಲ್ ರೀಲ್ಸ್ ಕೂಡ ಒಂದು ದೊಡ್ಡ ಚಟವಾಗಿ ಬೆಳೆದಿದೆ. ಯುವಕರು ಜವಾಬ್ದಾರಿ ಅರಿತು, ಕೌಶಲ್ಯ ವೃದ್ಧಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ಹಾರೈಸಿದರು.
ಹೆಚ್ಚುಚರಿ ಪೊಲೀಸ್ ವರಿಷ್ಟಾಧಿಕಾರಿ ಕಾರಿಯಪ್ಪ ಮಾತನಾಡಿ, ಸಾಮಾನ್ಯವಾಗಿ 18ರಿಂದ 35 ವರ್ಷದೊಳಗಿನ ಯುವಕರು ದುಶ್ಚಟಗಳಿಗೆ ಬಲಿಯಾಗುವ ಸಂಭವ ಹೆಚ್ಚು.ಗಾಂಜಾ ಸೇರಿದಂತೆ ಹಲವು ಸಿಂಥೆಟಿಕ್ ಮಾದಕ ವಸ್ತುಗಳು ಲಭ್ಯವಿದ್ದು ಇವಕ್ಕೆ ಬಲಿಯಾಗುತ್ತಿರುವುದು ಶೋಚನೀಯ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಶೆ ಮುಕ್ತ ಭಾರತ ಮಾಡಲು ಬಹಳಷ್ಟು ಒತ್ತು ನೀಡುತ್ತದ್ದು ಎಲ್ಲರ ಸಹಕಾರ ಅಗತ್ಯ ವಾಗಿದೆ. ಸಮಸ್ಯೆಯಲ್ಲಿ ಇರುವವರಿಗೆ ಹೊರಬರಲು ಸಾಕಷ್ಟು ಬೆಂಬಲ, ಚಿಕಿತ್ಸೆ, ಡಿ ಅಡಿಕ್ಷನ್ ಕೇಂದ್ರಗಳು ಲಭ್ಯವಿದ್ದು ಬಳಕೆ ಮಾಡಿಕೊಳ್ಳಬೇಕು.
“ಮಾದಕ ವಸ್ತುಗಳಿಗೆ ಬೇಡ ಬ್ರೋ” : ಯಾವುದೇ ಮಾದಕ ವಸ್ತುಗಳಿಗೆ ‘ಬೇಡ ಬ್ರೋ’ ಅನ್ನುವ ಅಭಿಯಾನದ ಮೂಲಕ ದುಶ್ಚಟಗಳನ್ನು ತಿರಸ್ಕರಿಸಬೇಕು ಎಂದು ಯುವಜನತೆಗೆ ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿರಾಜ್ ಅಹಮದ್ ಎಸ್ ಮಾತನಾಡಿ , ಸಮಾಧಾನ ಹಾಗೂ ವ್ಯವಧಾನ ಇಲ್ಲದಿದ್ದಾಗ ವ್ಯಸನಕ್ಕೆ ಬಲಿಯಾಗುವ ಸಾಧ್ಯತೆ ಹೆಚ್ಚು. ಮಾದಕ ವಸ್ತುಗಳಲ್ಲದೆ ಅತಿಯಾದ ಶಾಪಿಂಗ್, ಅತಿಯಾಗಿ ತಿನ್ನುವುದು, ಅತಿಯಾದ ಮೊಬೈಲ್ ಬಳಕೆಯಂತಹ ವಿಚಿತ್ರ ವ್ಯಸನಗಳಿಂದ ದೂರವಿದ್ದು, ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.

ಡಿಎಲ್ ಓ ಡಾ. ಶಮಾ ಅಂಜುಮ್ ಸಣ್ಣದಾಗಿ ಶುರುವಾಗುವ ಅಭ್ಯಾಸಗಳೇ ಮುಂದೆ ದುಶ್ಚಟಗಳಾಗುತ್ತವೆ. ಆದ್ದರಿಂದ ಮಾದಕ ವಸ್ತುಗಳನ್ನು ಬಳಸುವುದಿಲ್ಲವೆಂದು ನಮಗೆ ನಾವೇ ಪ್ರತಿಜ್ಞೆ ಮಾಡಿಕೊಳ್ಳಬೇಕು ಎಂದರು.

ವಿಶೇಷ ಉಪನ್ಯಾಸ ನೀಡಿದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯರಾದ
ಡಾ. ಸಚಿನ್ ಒ. ಎನ್. ಮಾತನಾಡಿ, 12 ರಿಂದ 18ರ ವಯಸ್ಸಿನವರು ಸಾಮಾನ್ಯವಾಗಿ ಚಟಗಳಿಗೆ ಆಕರ್ಷಿತರಾಗುತ್ತಾರೆ‌ ಕುತೂಹಲ ಹಾಗೂ ಗೆಳೆಯರ ಒತ್ತಾಯ ಅಥವಾ ಇತರೆ ಒತ್ತಡದಿಂದ ಚಟಗಳು ಆರಂಭವಾಗುತ್ತವೆ.

ಮೊದಲಿಗೆ ಖುಷಿ ಕೊಡುವ ಚಟ ನಂತರ ಅನೇಕ ಗಂಭೀರ ಆರೋಗ್ಯ, ಸಾಮಾಜಿಕ, ಕೌಟುಂಬಿಕ ಸಮಸ್ಯೆಗಳನ್ನು ತಂದೊಡ್ಡುತ್ತದೆ. ದುಶ್ಚಟಗಳಿಂದ
ಹೊರ ಬರುವುದು ಕಷ್ಟವಾಗುತ್ತದೆ. ಆದರೆ ಇತರರ ಬೆಂಬಲ, ಸಹಕಾರ ಮತ್ತು ಚಿಕಿತ್ಸೆ ಮೂಲಕ ಹೊರ ಬರಬಹುದು.

ಚಟಗಳಿಂದ ಹೊರಬರಲು ‘ಟೆಲಿ ಮನಸ್’ ಸಹಾಯವಾಣಿ 14416 ಮೂಲಕ ಉಚಿತ ಆಪ್ತಸಮಾಲೋಚನೆ ಪಡೆಯಬಹುದು ಎಂದು ತಿಳಿಸಿದರು.

ಸಹ್ಯಾದ್ರಿ ಕಲಾ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಮಂಜುನಾಥ್ ಸ್ವಾಗತಿಸಿದರು. ಎನ್‌ಎಸ್‌ಎಸ್ ಘಟಕ-2ರ ಕಾರ್ಯಕ್ರಮಾಧಿಕಾರಿ ಹಾಲಮ್ಮ ವಂದಿಸಿದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಆರ್., ಉಪನ್ಯಾಸಕರಾದ ಸಂಗೀತ, ಅರುಣ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಜುಲೈ 4. ಕಾರಣಗಿರಿಯಲ್ಲಿ ಮಾಧ್ಯಮದ ವಿವಿಧ ಸಾಧಕರಿಗೆ ನಾರದರ ಸ್ಮರಣಾರ್ಥ ಸ್ಥಾಪಿತ” ನಾರದ ಪುರಸ್ಕಾರ” ವಿತರಣೆ

0

ಗ್ರಾಮಭಾರತಿ ಟ್ರಸ್ಟ್ (ರಿ.), ಕಾರಣಗಿರಿ ಹಾಗೂ ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿವಾಹಕ ನಾರದರ ಸಂಸ್ಮರಣಾರ್ಥ ಪ್ರತಿಷ್ಠಿತ “ನಾರದ ಪುರಸ್ಕಾರ” ಪ್ರದಾನ ಸಮಾರಂಭವು ಆಗಸ್ಟ್ 4ರ ಮಂಗಳವಾರ ಸಂಜೆ 4 ಗಂಟೆಗೆ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ನಡೆಯಲಿದೆ.

ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆಯ ಪ್ರಧಾನ ಸಂಪಾದಕರಾದ ಹಾದಿಗಲ್ಲು ಲಕ್ಷ್ಮೀನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮಗ್ರ ಕರ್ನಾಟಕ ಪ್ರಾಂತದ ಪ್ರಚಾರ ಪ್ರಮುಖ್ ಅರುಣ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಕಾರಣಗಿರಿ ರಾಷ್ಟೋತ್ಥಾನ ಬಳಗ ಹಾಗೂ ಶ್ರೀವಾದಿರಾಜ ಸಂಸ್ಕೃತಿ ಸಂವರ್ಧನಾ ಸಭಾ, ಹಾದಿಗಲ್ಲು ಸಹಯೋಗದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಗಣ್ಯರಿಗೆ “ನಾರದ ಪುರಸ್ಕಾರ” ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆಯ ಸಂಪಾದಕ, ಗ್ರಾಮಭಾರತಿ ಟ್ರಸ್ಟ್‌ನ ಅಧ್ಯಕ್ಷ ಹನಿಯ ರವಿ ಅವರು ತಿಳಿಸಿದ್ದಾರೆ.

ಈ ಬಾರಿ ನಾರದ ಪುರಸ್ಕಾರಕ್ಕೆ ಕನ್ನಡ ನ್ಯೂಸ್ ಅಂತರ್ಜಾಲ ಪತ್ರಿಕೆಯ ಸಂಪಾದಕ ರಘುಪತಿ ಯಾಜಿ, ಪರಿಸರ ಪತ್ರಕರ್ತ ರಘುನಂದನ್ ಭಟ್ ನರೂರ, ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ.ಸುಧೀಂದ್ರ, ಹಿರಿಯ ಪತ್ರಿಕಾ ಪ್ರತಿನಿಧಿ ಗಣಪತಿ ಪಂಡಿತ್, ಹೊಸದಿಗಂತ ಪ್ರಧಾನ ವರದಿಗಾರ ಸುರೇಶ್ ಡಿ. ಪಳ್ಳಿ, ಟಿ.ವಿ.ವರದಿಗಾರ್ತಿ ಶೈಲಜಾ ಗೊರ್ನಮನೆ, ಹೊಸದಿಗಂತ ಶಿವಮೊಗ್ಗದ ಸಂಪಾದಕ ವಾದಿರಾಜ್ ಕಮರೂರು, ಶ್ರೀಧರ ಸಂದೇಶ ಸಂಪಾದಕ ಗಜಾನನ ಭಟ್ಟ ರೇವಣಕಟ್ಟ ಹಾಗೂ ಅಂಕಣಕಾರ-ಲೇಖಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಆಯ್ಕೆಯಾಗಿದ್ದಾರೆ.

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

0

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಪರ್ವ ಆರಂಭವಾಗುತ್ತಿದ್ದು, ಪಾರದರ್ಶಕ, ಅಕ್ರಮಮುಕ್ತ ಹಾಗೂ ವಿಶ್ವಾಸಾರ್ಹ ನೇಮಕಾತಿ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ.

ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವುದು ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಅವರ ಸಂಪೂರ್ಣ ಜವಾಬ್ದಾರಿಯಾಗಿದ್ದು, ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಮಾಡುವಂತೆ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್‌ ಅವರು ಸೂಚಿಸಿದ್ದಾರೆ. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಮಗ್ರ ಸುಧಾರಣೆಗಳನ್ನು ತರಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದೂ ಮುಖ್ಯಮಂತ್ರಿಗಳುಮಾಹಿತಿ ನೀಡಿದ್ದಾರೆ.