Monday, May 4, 2026
Monday, May 4, 2026
Home Blog

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

0

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ ಯಾವುದೇ ಹೆಸರಿಲ್ಲ. ಆದರೂ ಗಾಡಿಕೊಪ್ಪ ಸರ್ಕಲ್, ಆಟೋಸ್ಟ್ಯಾಂಡ್. ಪ್ರೈಮರಿ ಶಾಲೆ ಸಮೀಪ ,ಗುಂಡ ಕ್ಯಾಂಟೀನ ಬಳಿ ಎಂಬೆಲ್ಲ ವಿಳಾಸದ ಲೊಕೇಷನ್ ಹೊತ್ತಿದೆ.
ಅಲ್ಲಿ ಬಿ.ಹೆಚ್.ರಸ್ತೆ ಮತ್ತು ಗಾಡಿಕೊಪ್ಪ ಒಳಸಾಗುವ ಮಾರ್ಗದಿಂದಾಗಿ ವೃತ್ತ ನಿರ್ಮಾಣವಾಗಬೇಕು.

ಅಲ್ಲಿನ ವಾಹನಗಳ ಓಡಾಟ ಮಾತ್ರ ಲಂಗಿಲ್ಲ ಲಗಾಮಿಲ್ಲ.
ಈಗ್ಯೆ ನಾವೆಲ್ಲಾ ಗಮನಿಸಿದಂತೆ ಆರೇಳು ವರ್ಷಗಳಿಂದ ಗಾಡಿಕೊಪ್ಪದ ಫಾಸಲೆಯಲ್ಲಿ ಹಲವಾರು ಬಡಾವಣೆಗಳು ನಿರ್ಮಾಣವಾಗಿವೆ.

ಅಲ್ಲಿ ಹಾಹನಗಲಕ ನಿಯಂತ್ರಣ ಬೇಕಿತ್ತು.
ಇದನ್ನ ಸಾರ್ವಜನಿಕರು ಕೋರಿಕೆ ಸಲ್ಲಿಸಿಯಾಗಿತ್ತು.
ಇದೀಗ ಅಲ್ಲಿ ಸಂಚಾರಿ ದೀಪ ಬಂದಿದೆ. ಜಿಲ್ಲಾ ಪೊಲೀಸ್ ಇಲಾಖೆಯ ಈ ಕ್ರಮದಿಂದ ಅಪಘಾತಗಳು ಆಗದೇ ಇರಲಿ ಎಂದು ನಿಟ್ಟುಸಿರು ಬಿಡುವಂತಾಗಿದೆ.
ಮತ್ತೊಂದು ವಾಹನ ಚಾಲಕರಿಗೆ ಪೊಲೀಸ್ ನೆರವು ಬೇಕು. ಅದೆಂದರೆ ರಸ್ತೆ ಡಿವೈಡರ್ ಗಳ ಬಳಿ ಜನ ಇಳಿದು ರಸ್ತೆ ದಾಟುವ ಅಭ್ಯಾಸವಿದೆ.
ಎರಡೂ ರಸ್ತೆಗಳ ವಾಹನ ಸಂಚಾರದಿಂದ ಚಾಲಕರಿಗೆ ಹೆಡ್ ಲೈಟ್ ಗ್ಲೇರಿಂಗ್ ಪರಿಣಾಮದಿಂದ ವ್ಯಕ್ತಿಗಳು,ಪ್ರಾಣಿಗಳು
ವಾಹನಗಳ ಚಾಲಕರಿಗೆ
ಸ್ಪಷ್ಟ ಕಾಣಿಸುವುದಿಲ್ಲ.
ಇದೇ ಅಪಘಾತಕ್ಕೆ ಮತ್ತೊಂದು ಪ್ರಬಲ ಕಾರಣ. ಇದರ ಬಗ್ಗೆ ಸಂಚಾರಿ ಪೊಲೀಸ್ ವ್ಯವಸ್ಥೆ ತೀವ್ರ ಆಲೋಚಿಸಲಿ.
ಹಾಗೂ ಪೊಲೀಸ್ ಇಲಾಖೆಯ ಗಮನ ಸೆಳೆಯುವ ಮತ್ತೊಂದು
ಸಲಹೆ .
ನಂಜಪ್ ಲೈಫ್ ಕೇರ್ ಆಸ್ಪತ್ರೆ ತಿರುವು ಪ್ರಖರ ಬೀದಿ ದೀಪವಿಲ್ಲ. ಅಲ್ಲಿ ದೀಪ ಬೇಕು.
ಮುಂದೆ ಸಾಗಿದರೆ ಪುರದಾಳ್ ಕ್ರಾಸ್ ನಲ್ಲಿ “ಮೃತ್ಯು ಸ್ಥಳ” ನಿರ್ಮಾಣವಾಗಿದೆ.
ಪುರದಾಳ್ ಕ್ರಾಸ್ ನಲ್ಲಿ ಸಾಗಿದರೆ ಐದು ಬಡಾವಣೆಗಳಿಗೆ ಅದೇ ಮುಖ್ಯಮಾರ್ಗ. ಅಲ್ಲಿ ತಿರುವನಲ್ಲೇ ರಸ್ತೆಪಕ್ಕ
ಜ್ಯೂಸ್ ಮಳಿಗೆ, ಕ್ಯಾಂಟೀನು ಶುರುವಾಗಿ ಅಲ್ಲಿ ಪ್ರಯಾಣಿಕರು ವಾಹನ ನಿಲ್ಲಿಸುತ್ತಾರೆ. ಪುರದಾಳ್ ಕ್ರಾಸ್ ನಿಂದ ಬಿ .ಹೆಚ್.ರಸ್ತೆ ಬರಲು ಶಿವಮೊಗ್ಗದ ಕಡೆಯಿಂದ ಬರುವ ವಾಹನಗಳು ಕಾಣಿಸುವುದೇ ಇಲ್ಲ.
ಈಗಾಗಲೇ ಈ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯೋರ್ವರು ಅಪಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಈ ಸ್ಥಳದಲ್ಲೂ ಈಗ ಎಲ್ಲೋ ಲೈಟ್ ಬೇಕು.
ಮುಖ್ಯರಸ್ತೆ ತಿರುವು ಮರೆಯಾಗುವಂತೆ ಹರ್ಷ ದಿ ಫರ್ನ್ ಹೋಟೆಲ್ ಹೋರ್ಡಿಂಗ್ ನಿಲ್ಲಿಸಲಾಗಿದೆ. ಅದನ್ನೂ ಸ್ಥಳಾಂತರಗೊಳಿಸಬೇಕು.
ಪುರದಾಳ್ ಕ್ರಾಸ್ ರಸ್ತೆ ಬಿಸಿಎಂ ಹಾಸ್ಟೆಲ್ ಕಡೆ ಸಾಗುತ್ತದೆ. ಈ ಮಾರ್ಗದಲ್ಲಿ ದ್ವಿಚಕ್ರ ವಾಹನ, ಕಾರು ಲಾರಿಗಳ ಸಂಚಾರ ವೇಗವಾಗಿ ಬೆಳೆದಿದೆ. ಅಲ್ಲಿ ಸೂಕ್ತವಾದ ಎರಡು ಮೂರು ಹಂಪ್ ಗಳ ವ್ಯವಸ್ಥೆ ಮಾಡಬೇಕು.
ಅಲ್ಲಿರುವ ಸೋಷಿಯಲ್ ಆರ್ಬರ್ , ಅಂಬಿಯನ್ಸ್ ಹಾಲ್, ಹೊಟೇಲ್ ನಲ್ಲಿ ನಡೆಯುವ. ಮದುವೆ, ಇತ್ರೆ ಸಮಾರಂಭಗಳ ಅಬ್ಬರದ ಧ್ವನಿವರ್ಧಕದ ಹಾವಳಿಯನ್ನೂ ನಿಯಂತ್ರಿಸಬೇಕು.

Shivamogga Police ಶಿವಮೊಗ್ಗ ಸ್ಮಾರ್ಟ್ ಆಗುತ್ತಿದೆ. ಆದರೆ ದೀಪದ ಕೆಳಗೆ ಕತ್ತಲೆ ಎಂಬಂತೆ ಗಾಡಿಕೊಪ್ಪ ಫಾಸಲೆ ಹಾಗಾಗ ಬಾರದು.
ಸಾರ್ವಜನಿಕರೆಲ್ಲರ ಮನವಿ ಎಂದರೆ ಈ ಅಂಶಗಳನ್ನ ಗಮನಿಸಿ ಸೂಕ್ತ ಕ್ರಮಕೈಗೊಳ್ಳಿ ಎಂದು ಸಿರಿಮಲ್ಲಿಗೆ ವಸತಿ ಸಂಘವು ಕೋರುತ್ತದೆ.

Madhu Bangarappa ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ ಕಂಡುಕೊಳ್ಳಲು ಶೈಕ್ಷಣಿಕ ಮಾರ್ಗದರ್ಶನ ನೀಡುವ ಉತ್ತಮ ಕಾರ್ಯಕ್ರಮ- ಮಧು ಬಂಗಾರಪ್ಪ.

0

Madhu Bangarappa TV9 ಕನ್ನಡ ವಾಹಿನಿಯು ಶಿವಮೊಗ್ಗದ ಪೊಲೀಸ್ ಭವನದಲ್ಲಿ ಆಯೋಜಿಸಿದ್ದ “TV9 Education Expo 2026” ಕಾರ್ಯಕ್ರಮವನ್ನು ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿ, ಮಾತನಾಡಿದರು.

ಟಿವಿ9 ಎಜುಕೇಶನ್ ಎಕ್ಸ್‌ಪೋ ಮೇ 02 ಮತ್ತು 03 ರವರೆಗೆ ದಿನಗಳ ಕಾಲ ನಡೆಯಲಿದ್ದು, ದ್ವಿತೀಯ ಪಿಯುಸಿ (PUC) ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ ಕಂಡುಕೊಳ್ಳಲು ಶೈಕ್ಷಣಿಕ ಮಾರ್ಗದರ್ಶನ ನೀಡುವ ಒಂದು ಉತ್ತಮ ಕಾರ್ಯಕ್ರಮವಾಗಿದೆ.

Madhu Bangarappa ಈ ಎಜುಕೇಶನ್ ಎಕ್ಸ್‌ಪೋ ಹಲವು ಪ್ರತಿಷ್ಠಿತ ಕಾಲೇಜುಗಳ ಸಹಯೋಗದಲ್ಲಿ ನಡೆಯುತ್ತಿದ್ದು, ಪ್ರತಿಷ್ಠಿತ ಕಾಲೇಜುಗಳು ಇದರಲ್ಲಿ ಭಾಗಿಯಾಗಿವೆ. ಶಿಕ್ಷಣ ಸೇರಿದಂತೆ ಹೊಸ ವೃತ್ತಿ ಅವಕಾಶಗಳ ಬಗ್ಗೆ ತಜ್ಞರ ಜೊತೆಯಲ್ಲಿ ಅಭಿಪ್ರಾಯಗಳನ್ನು ಪಡೆಯಬಹುದಾಗಿದ್ದು ಇದರ ಸದುಪಯೋಗವನ್ನು ಪಡೆಯುವಂತೆ ಸಚಿವರು ತಿಳಿಸಿದರು
ಈ ಒಂದು ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಹಾಗೂ ಟಿವಿ9 ವಾಹಿನಿಗೆ ಈ ವೇಳೆ ಧನ್ಯವಾದಗಳನ್ನು ಸಚಿವ ಮಧು ಬಂಗಾರಪ್ಪ ಅರ್ಪಿಸಿದರು.

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

0

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ) ಅಧ್ಯಕ್ಷರಾದ ನಂಜಯ್ಯ ಮಠ ರವರು ಶಿವಮೊಗ್ಗ ನಗರ ವಿಮಾನ ನಿಲ್ದಾಣದಲ್ಲಿ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.
ಶನಿವಾರ ಸಂಜೆ ಶಿವಮೊಗ್ಗ ನಗರಕ್ಕೆ ಆಗಮಿಸಿ,ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ತಿಂಗಳ 7 ಮತು 8ರಂದು ತಾವು ಮತ್ತೊಮ್ಮೆ ಆಗಮಿಸಲಿದ್ದು ಅದರೊಳಗಾಗಿ ನೈಟ್ ಲ್ಯಾಂಡಿಂಗ್ ಕಾಮಗಾರಿ ಸಂಪೂರ್ಣ ಗೊಳಿಸಬೇಕೆಂದು ಕಾಮಗಾರಿಗೆ ಸಂಬಂಧಪಟ್ಟ ಇಲಾಖೆ ಅಽಕಾರಿಗಳು ಗುತ್ತಿಗೆದಾರರಿಗೆ ಸೂಚಿಸಿದರು.

ಜೂನ್ ತಿಂಗಳ ಮೊದಲನೇ ವಾರದಲ್ಲಿ ನೈಟ್ ಲ್ಯಾಂಡಿಂಗ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂಬ ಭರವಸೆಯನ್ನು ಅಽಕಾರಿಗಳು ನೀಡಿದರು. ಇದರ ಜೊತೆಗೆ ಇಂಡಿಗೋ ವಿಮಾನ ಸಂಸ್ಥೆ ಪ್ರಯಾಣವನ್ನು ನಿಲ್ಲಿಸಿರುವುದು ಈ ನೈಟ್ ಲ್ಯಾಂಡಿಂಗ್ ವಿಚಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ, ನೈಟ್ ಲ್ಯಾಂಡಿಂಗ್ ಕಾಮಗಾರಿಗೆ ಸಂಪೂರ್ಣ ರಾಜ್ಯ ಸರ್ಕಾರವೇ ಹಣವನ್ನು ನೀಡಿದ್ದು,
ಇಂಡಿಗೋ ವಿಮಾನವು ಕೇಂದ್ರ ಸರ್ಕಾರದ ಅಸ್ತಿತ್ವದಲ್ಲಿರುವುದರಿಂದ ಪೈಲೆಟ್‌ಗಳ ಕೊರತೆಯಿಂದ ಚಾಲನೆ ಯನ್ನು ನಿಲ್ಲಿಸಿರುತ್ತದೆ ಎಂದು ಅವರು ಹೇಳಿದರು.

Shivamogga Airport ಶಿವಮೊಗ್ಗ ನಗರದಲ್ಲಿ ನೈಟ್ ಲ್ಯಾಂಡಿಂಗ್ ವಿಚಾರವಾಗಿ ಹಲವು ವರದಿಗಳು ಬಂದಿದ್ದವು.
ಈ ಸಂಬಂಧ ನೈಟ್ ಲ್ಯಾಂಡಿಂಗ್ ಚಾಲನೆಗೆ ಇಂಡಿಗೋ ವಿಮಾನ ಸಂಸ್ಥೆ ಹಾಗೂ ಇನ್ನುಳಿದ ಅನೇಕ ವಿಮಾನ ಸಂಸ್ಥೆ ಗಳೊಂದಿಗೆ ಚರ್ಚಿಸಿ ಶಿವಮೊಗ್ಗ ನಗರಕ್ಕೆ ವಿಮಾನದ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದರು

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

0

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ “ಅಭಿಮಾನೋತ್ಸವ” ಕಾರ್ಯಕ್ರಮದ ಯಶಸ್ಸಿನ ನಿಮಿತ್ತ ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದರು.

ಜನಸಾಮಾನ್ಯರ ಮತ್ತು ರೈತರ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ ಯಡಿಯೂರಪ್ಪನವರ ಅಭಿಮಾನಿಗಳು ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಕುರಿತು ಮತ್ತು ಕಾರ್ಯಕ್ರಮದ ವ್ಯವಸ್ಥೆಗಳ ಬಗ್ಗೆ ಈ ಸಂದರ್ಭದಲ್ಲಿ ಬಿ.ವೈ.ರಾಘವೇಂದ್ರ ಸುದೀರ್ಘವಾಗಿ ಚರ್ಚಿಸಿದರು.

B.Y. Raghavendra ಚಿತ್ರದುರ್ಗದ ಈ ಅಭಿಮಾನೋತ್ಸವವು ಕೇವಲ ಒಂದು ಸಮಾರಂಭವಲ್ಲ, ಇದು ನಮ್ಮ ನಾಯಕರಿಗೆ ಸಲ್ಲಿಸುವ ಗೌರವದ ಪ್ರತೀಕವಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಪ್ರಮುಖರು ಮತ್ತು ಅಭಿಮಾನಿಗಳು ಒಗ್ಗಟ್ಟಾಗಿ ಕೆಲಸ ನಿರ್ವಹಿಸುವ ಮೂಲಕ ಈ ಸಮಾವೇಶವನ್ನು ಐತಿಹಾಸಿಕವಾಗಿಸಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಯಿತು.

Blood Donation camp ದೊಡ್ಡಪೇಟೆ ಪೊಲೀಸ್ ಠಾಣೆ ಆಶ್ರಯದಲ್ಲಿ ರಕ್ತದಾನ ಶಿಬಿರ.

0

Blood Donation camp ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಹಾಗೂ ಅಂಬೇಡ್ಕರ್ ರಕ್ತಕೇಂದ್ರದ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು.

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಸೇರಿದಂತೆ 21 ಜನ ರಕ್ತದಾನ ಮಾಡಿದರು.

Department Of Pre-University Education ಅನುಮತಿ ಇಲ್ಲದ ಪ್ರಥಮ ಪಿಯು ಕಾಲೇಜುಗಳ ಬಗ್ಗೆ ಎಚ್ಚರ.

Department Of Pre-University Education 2026-27 ನೇ ಸಾಲಿಗೆ ಪ್ರಥಮ ಪಿಯುಸಿಗೆ ದಾಖಲಾತಿ ಮಾಡುವಾಗ ಪೋಷಕರು ದಾಖಲಾತಿ ಮಾಡುವ ಕಾಲೇಜಿಗೆ ಇಲಾಖೆಯಿಂದ ಅನುಮತಿ ಪಡೆದಿರುವ ಬಗ್ಗೆ ಖಚಿತ ಪಡಿಸಿಕೊಂಡು ದಾಖಲಿಸುವಂತೆ ಶಾಲಾ ಕಾಲೇಜು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Department Of Pre-University Education ಜಿಲ್ಲೆಯ ಕೆಲವೊಂದು ಸಂಸ್ಥೆಯವರು ಹೊಸ ಕಾಲೇಜಿನ ಅನುಮತಿ ಪಡೆಯದೇ ಜಾಹಿರಾತುಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದ್ದು, ಅಂತಹ ಕಾಲೇಜುಗಳ ಬಗ್ಗೆ ಪೋಷಕರು ಎಚ್ಚರ ವಹಿಸುವುದು. ಒಂದು ವೇಳೆ ಈ ಸಂಸ್ಥೆ/ ಕಾಲೇಜುಗಳು ಅನಧಿಕೃತವಾಗಿ ದಾಖಲಾತಿ ಮಾಡಿಕೊಂಡಲ್ಲಿ ಅವರ ಮೇಲೆ ಇಲಾಖಾ ನಿಯಮಾನುಸಾರ ಶಿಸ್ತು ಕ್ರಮ ತೆಗೆದುಕೊಳ್ಳಾಗುವುದು. ಪೋಷಕರಿಗೆ ಅನುಮಾನ ಬಂದರೆ ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಬಿ.ಹೆಚ್ ರಸ್ತೆ ಶಿವಮೊಗ್ಗ ಇಲ್ಲಿಯ ಕಚೇರಿ ಸಮಯದಲ್ಲಿ ಬಂದು ವಿಚಾರಿಸುವಂತೆ ಅವರು ತಿಳಿಸಿದ್ದಾರೆ.

Byrathi Suresh ಸಮಾಜದ ಕಟ್ಟಕಡೆ ವ್ಯಕ್ತಿಗೂ ಮೂಲಭೂತ ಸೌಕರ್ಯಗಳ ಸೌಲಭ್ಯ – ಸಚಿವ ಭೈರತಿ ಸುರೇಶ್.

0

Byrathi Suresh ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಸೌಕರ್ಯಗಳನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಗಳನ್ನು‌ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿದ್ದು ಪ್ರತಿ ಮಹಾನಗರಪಾಲಿಕೆಗಳ ಅಭಿವೃದ್ಧಿ ಯೋಜನೆಗಳಿಗೆ ನಗರಾಭಿವೃದ್ದಿ ಇಲಾಖೆಯು ರೂ.200 ಕೋಟಿ ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ತಿಳಿಸಿದರು.
ಬೊಮ್ಮನಕಟ್ಟೆ ‘ಬಿ’ ಬ್ಲಾಕ್ ನಲ್ಲಿ ಶಿವಮೊಗ್ಗ ಮಹಾನಗರಪಾಲಿಕೆಯ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ (ಹಂತ-2), ಎನ್.ಜಿ.ಟಿ. ಅನುದಾನದ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ಮಾಜಿ ಮುಖ್ಯಮಂತ್ರಿ ದಿ|| ಶ್ರೀ ಎಸ್. ಬಂಗಾರಪ್ಪ ಬಡಾವಣೆಯ ನಾಮಕರಣ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ರವರ ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದೇವೆ.‌ ಜಾತ್ಯಾತೀತ, ಪಕ್ಷಾತೀತವಾಗಿ ಎಲ್ಲರಿಗೂ ಜನಪರವಾದ ಯೋಜನೆಗಳನ್ನು ನೀಡುತ್ತಿದ್ದೇವೆ. ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ. ೪ ಲಕ್ಷದ ೫೬ ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ-2) ಯಡಿ ಸುಮಾರು ರೂ. 127.5 ಕೋಟಿ ವೆಚ್ಚದ ಕಾಮಗಾರಿಗೆ ಇಂದು ಚಾಲನೆ ನೀಡಿದ್ದು
ಮುಂದಿನ ೨೦ ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು.
ನಗರದ ಕುಡಿಯುವ ನೀರಿನ ಯೋಜನೆ ಕುರಿತು ಸಚಿವರು, ಶಾಸಕ ರೊಂದಿಗೆ ಚರ್ಚಿಸಿ ಸಮಗ್ರ ಕುಡಿಯುವ ನೀರಿನ‌ ಯೋಜನೆಗೆ ಹಂತ ಹಂತವಾಗಿ ಹಣ ಮಂಜೂರು ಮಾಡುವ ಮೂಲಕ ಯೋಜನೆಯನ್ನು ಸಾಕಾರಗೊಳಿಸಲು ಕಟಿಬದ್ದರಾಗಿದ್ದೇವೆಂದು ಭರವಸೆ ನೀಡಿದ ಅವರು ಪೌರ ಕಾರ್ಮಿಕರ ವಸತಿ ಯೋಜನೆಯಡಿ ಬಾಕಿ‌ ಕಾಮಗಾರಿಗೆ ಅಗತ್ಯವಾದ ಅನುದಾನ ಕೊಡಿಸಲು ಭರವಸೆ ನೀಡಿದರು.ರಾಜ್ಯದಲ್ಲಿ ನಗರಾಭಿವೃದ್ದಿ ಇಲಾಖೆಯಿಂದ ನಗರ, ಪಟ್ಟಣ, ಪಾಲಿಕೆಗಳಿಗೆ ಕುಡಿಯುವ ನೀರಿಗಾಗಿ ರೂ. ೨೫ ಸಾವಿರ ಕೋಟಿ ನೀಡಲಾಗಿದೆ. ೭೦% ನಗರಗಳಿಗೆ ಕುಡಿಯುವ ನೀರು‌ ಮತ್ತು ಯುಜಿಡಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಅಂದಿನ ಅಹಿಂದ ಪರವಾದ ನಾಯಕ ಬಂಗಾರಪ್ಪನವರನ್ನು ನೋಡಿ ಬೆಳೆದ ನಮಗೆಲ್ಲ ಅವರು ಆದರ್ಶ ವ್ಯಕ್ತಿ. ಅವರ ಕಾರ್ಯಕ್ರಮ ನೋಡಿಯೇ ರಾಜಕಾರಣಕ್ಕೆ ಪ್ರವೇಶಿಸಿದ್ದೇನೆ. ಅವರು‌ ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ.ಭೈರತಿ ಸುರೇಶ್, ಸಚಿವರು, ನಗರಾಭಿವೃದ್ಧಿ ಮತ್ತು ನಗರ ಯೋಜನೆ

ಕೆರೆಯ ನೀರನ್ನು ಕೆರೆಗೆ ಚೆಲ್ಲು ಎಂಬಂತೆ ನಿಮ್ಮ‌ಹಣದಿಂದಲೇ ಅಭಿವೃದ್ಧಿ ಯೋಜನೆಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಗ್ಯಾರಂಟಿ ಯೋಜನೆಗಳೊಂದಿಗೆ ಒತರೆ ಅಭಿವೃದ್ದಿ ಯೋಜನೆಗಳಿಗೆ ಹಣ ನೀಡುತ್ತಿದೆ. ಸರ್ಕಾರ ಸ್ಮಾರ್ಟ್ ಸಿಟಿಗೆ ಶೇ.೫೦ ರಷ್ಟು ಹಣ ನೀಡಿದೆ.ಯುಬಿಐಡಿ ಪ್ರಕಾರ ಪ್ರತಿ ತಿಂಗಳು ಜೀವನ ನಡೆಸಲು ಅಗತ್ಯವಾದ ಆರ್ಥಿಕ ಸಹಾಯ ಒದಗಿಸುತ್ತಿರುವ ಸರ್ಕಾರ ಇಡೀ ಪ್ರಪಂಚದಲ್ಲೇ ನಮ್ಮದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಮಾತನಾಡಿ, ಬಡಜನರ ಕಲ್ಯಾಣಕ್ಕಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಶ್ರೀ ಎಸ್. ಬಂಗಾರಪ್ಪ ಅವರ ಹೆಸರನ್ನು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಗೆ ನಾಮಕರಣ ಮಾಡಬೇಕೆಂದು
2016 ರಿಂದ ಪಕ್ಷಾತೀತವಾದ ಬೇಡಿಕೆ ಇತ್ತು. ಇಂದು ಅದು ಸಾಕಾರಗೊಳ್ಳುತ್ತಿರುವುದಕ್ಕೆ ಸಂತಸವಾಗಿದೆ. ಬಡವರ ಉದ್ದಾರದ ಬಂಗಾರಪ್ಪನವರ ಕನಸನ್ನು ಸರ್ಕಾರಗಳು ನನಸು ಮಾಡುತ್ತಾ ಬಂದಿದೆ.
ಬಂಗಾರಪ್ಪನವರು ಜಾರಿಗೆ ತಂದ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಯೋಜನೆಗೆ ರೂ. ೨೦ ಸಾವಿರ ಕೋಟಿ ಅನುದಾನ ಸರ್ಕಾರ ನೀಡುತ್ತಿದೆ.
ಗ್ರಾಮೀಣ ಭಾಗದ ಯುವಜನತೆಯನ್ನು ಮುಂದೆ ತರಲು, ಉತ್ತಮ ಅವಕಾಶ ನೀಡಲು ೧೫% ಗ್ರಾಮೀಣ ಕೃಪಾಂಕ ಯೋಜನೆಯನ್ನು ನಾವೆಲ್ಲ ಸ್ಮರಿಸುತ್ತಿದ್ದೇವೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರು ವಾಸಿಸುವ ಪ್ರದೇಶಗಳಲ್ಲಿ ಪ್ರಾರ್ಥನಾ ಮಂದಿರಗಳು ಹಾಗೂ ಪೂಜಾ ಸ್ಥಳಗಳನ್ನು ನಿರ್ಮಿಸಲು ಮತ್ತು ಜೀರ್ಣೋದ್ಧಾರ ಮಾಡಲು ಆರ್ಥಿಕ ನೆರವು ನೀಡುವ ಆರಾಧನಾ ಯೋಜನೆ ಜಾರಿಗೆ ತಂದು ಎಲ್ಲರಿಗೂ ಸಮಾನ ಅವಕಾಶ ನೀಡಿದರೆಂದು ಸ್ಮರಿಸಿದರು.
ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ವ್ಯವಸ್ಥಿತವಾದ ಕ್ರಿಯಾ ಯೋಜನೆ ಸಿದ್ದಪಡಿಸಿದ್ದು, ಈ ಯೋಜನೆಯನ್ನು ಮಂಜೂರು ಮಾಡಬೇಕೆಂದು ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡಿದರು.
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ-2) ಯಡಿ ಸುಮಾರು ರೂ. 127.5 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಆಗಿದೆ.ಎನ್.ಜಿ.ಟಿ ಅನುದಾನದಡಿ ರೂ. 40 ಕೋಟಿ ವೆಚ್ಚದಲ್ಲಿ ತುಂಗಾ ನದಿಯ ಮಾಲಿನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ ಎಂದರು.

Byrathi Suresh ಆರಾಧನಾ, ಅಕ್ಷಯ, ಆಶ್ರಯ ಯೋಜನೆಗಳನ್ನು ನೀಡಿದ ಬಡವರ ನಾಯಕ ಬಂಗಾರಪ್ಪನವರನ್ನು ನಾವು ಮರೆಯುವ ಹಾಗಿಲ್ಲ. ಜಿಲ್ಲೆಯ ಕುಡಿಯುವ ನೀರಿಗೆ ಎಲ್ಲ ಮುಖ್ಯಮಂತ್ರಿಗಳು ಸಹಕರಿಸಿದ್ದಾರೆ. ಪ್ರಸ್ತುತ ಬೆಳೆಯುತ್ತಿರುವ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಯೋಜನೆಗೆ ರೂ. ೪೯೦ ಕೋಟಿ ಅವಶ್ಯಕತೆ ಇದ್ದು, ಕ್ರಿಯಾ ಯೋಜನೆ ತಯಾರಿಸಿದ್ದು ನಗರಾಭಿವೃದ್ಧಿ ಸಚಿವರು ಈ ಬಗ್ಗೆ ಭರವಸೆ ನೀಡಿದ್ದಾರೆ. ಹಾಗೂ ಪೌರ ಕಾರ್ಮಿಕರಿಗೆ ವಸತಿ ಯೋಜನೆಯ ಬಾಕಿ ಕಾಮಗಾರಿಗಳಿಗೆ ಅವಶ್ಯವಿರುವ ರೂ. ೨೭ ಕೋಟಿ ಅನುದಾನ ನೀಡಬೇಕೆಂದು‌ ಮನವಿ ಮಾಡುತ್ತೇನೆ.-ಎಸ್ ಎನ್ ಚನ್ನಬಸಪ್ಪ, ಶಾಸಕರು

ಬಡವರಿಗಾಗಿ‌ ಆರಾಧನಾ, ಆಶ್ರಯ, ಬಗರ್ ಹುಕುಂ, ಗ್ರಾಮೀಣ ಕೃಪಾಂಕ, ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಹೀಗೆ ಹಲವಾರು ಯೋಜನೆ ನೀಡಿದ ಮಾಜಿ‌ ಮುಖ್ಯಮಂತ್ರಿಗಳಾದ ಎಸ್.ಬಂಗಾರಪ್ಪನವರು ನನ್ನಂತಹ ಯುವ ನಾಯಕರನ್ನು ಸಹ ಬೆಳೆಸಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳೊಂದಿಗೆ ಅಭಿವೃದ್ಧಿ ಕೆಲಸಗಳನ್ನು ಯಶಸ್ವಿಯಾಗಿ ಕೈಗೊಂಡಿದೆ.-ಗೋಪಾಲಕೃಷ್ಣ ಬೇಳೂರು, ಶಾಸಕರು.

ಬಡವರ ಬಂಧು ಬಂಗಾರಪ್ಪನವರು ನೀಡಿರುವ ಕೊಡುಗೆಗಳು, ಕೆಲಸಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆ, ಬಗರ್ ಹುಕುಂ‌ ಸಮಿತಿ‌ ರಚನೆ ಸೇರಿದಂತೆ ಹಲವಾರು ಜನಪರ, ಬಡವರಪರವಾದ ಯೋಜನೆಗಳನ್ನು ಬಂಗಾರಪ್ಪನವರು ನೀಡಿರುವುದು ಅತ್ಯಂತ ಅನುಕೂಲವಾಗಿದೆ.- ಶಾರದಾ ಪೂರ್ಯಾನಾಯ್ಕ್, ಶಾಸಕರು

ಇತಿಹಾಸ ತಿಳಿಯದೆ ಭವಿಷ್ಯ ಕಟ್ಟಲು ಸಾಧ್ಯವಿಲ್ಲ. ಆದ್ದರಿಂದ ಮಾಜಿ ಸಚಿವರಾದ ದಿ.ಎಸ್.ಬಂಗಾರಪ್ಪನವರವ ಕೊಡುಗೆಗಳ ಬಗ್ಗೆ ತಿಳಿಯಬೇಕಿದೆ. ಶಿವಮೊಗ್ಗ ನಗರದಲ್ಲಿ ಸ್ಲಂಗಳ ಅಭಿವೃದ್ದಿ ಆಗಬೇಕು.ಬಲ್ಕೀಶ್ ಬಾನು, ವಿಧಾನ ಪರಿಷತ್ ಶಾಸಕರು

ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ಪಾಲಿಕೆ ತೆರಿಗೆ ವ್ಯವಸ್ಥೆ ಸರಳೀಕರಣ ಮಾಡಿ, ರಿಯಾಯಿತಿ ನೀಡಬೇಕು.ಡಿ.ಎಸ್ ಅರುಣ್, ವಿಧಾನ ಪರಿಷತ್ ಶಾಸಕರು

ಕಾರ್ಯಕ್ರಮದಲ್ಲಿ ರಾಜ್ಯ ಜವಳಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಚೇತನ್ ಕೆ, ರಾಜ್ಯ ಎಸ್ ಸಿ/ಎಸ್ ಟಿ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ,
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್,
ಜಿಲ್ಲಾಧಿಕಾರಿಗಳಾದ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಡಿಸಿ ಅಭಿಷೇಕ್ ವಿ, ಡಿಯುಡಿಸಿ ಯೋಜನಾ ನಿರ್ದೇಶಕ ರಂಗಸ್ವಾಮಿ, ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಕೆ, ಇತರೆ ಮುಖಂಡರು ಹಾಜರಿದ್ದರು.

Backward Classes Welfare Department ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ & ತರಬೇತಿಗೆ ಅರ್ಜಿ ಆಹ್ವಾನ

0

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಭಾರತೀಯ ಸೇನೆ/ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಂದ ವೀರ ಬಹದ್ದೂರ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಮಾಜಾಳಿ, ಕಾರವಾರದಲ್ಲಿ ನೀಡುವ ಸೇನಾ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ.

Backward Classes Welfare Department ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಪ್ರವರ್ಗ-1 ಕ್ಕೆ ರೂ. 2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1.00 ಲಕ್ಷಗಳ ಮಿತಿಯಲ್ಲಿರಬೇಕು. ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣನಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ. 45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು ಅಭ್ಯರ್ಥಿಯ ವಯಸ್ಸು 17 ರಿಂದ 20ರೊಳಗಿರಬೇಕು. ಮೇ.28 ಕ್ಕೆ ಅನ್ವಯಿಸುವಂತೆ ದಿ:28-05-2006 ರಿಂದ 28-05-2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಮೇ 28 ರೊಳಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಜಿಲ್ಲೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ನೆಲಮಹಡಿ, ಕೊಠಡಿ ಸಂಖ್ಯೆ 01, ಕಾರವಾರ 58130 ಇಲ್ಲಿಗೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Acharya Tulsi National College of Commerce ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ- ಡಾ.ಕೆ.ರಾಘವೇಂದ್ರ

0

Acharya Tulsi National College of Commerce ದೇಶದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಪ್ರಮುಖವಾಗಿದ್ದು, ತಾವು ಓದಿದ ಕಾಲೇಜು, ಪ್ರಾದ್ಯಾಪಕರನ್ನು ಎಂದಿಗೂ ಮರೆಯುವುದಿಲ್ಲ. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಬಹಳ ಮುಖ್ಯ ಎಂದು ಅಮೇರಿಕಾದ ವ್ಯಾಸ ಭಾರತೀ ತ್ರಿಯೋಗ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ಕೆ.ರಾಘವೇಂದ್ರ ಪೈ ಕರೆ ನೀಡಿದರು.

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಿರಿಯ ವಿದ್ಯಾರ್ಥಿ ಬಳಗದ ವತಿಯಿಂದ ಏರ್ಪಡಿಸಿದ್ದ ಸ್ನೇಹ ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಯಾಗಿದ್ದಾಗ ಎನ್ ಸಿ ಸಿ ವಿದ್ಯಾರ್ಥಿಯಾಗಿ ದೆಹಲಿಗೆ ಹೋದಾಗ, ಅಲ್ಲಿ ಯುವ ಮಹೋತ್ಸವದಲ್ಲಿ ಯೋಗಾಸನ ಸ್ವರ್ಧೆಯಲ್ಲಿ ಭಾಗವಹಿಸಿದ್ದೆ. ಪ್ರಥಮ ಸ್ಥಾನ ದೊರೆಯಿತು. ನಂತರ ಅಂತರ ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದೆ. ಅಲ್ಲಿಯೂ ಪ್ರಥಮ ಸ್ಥಾನ ದೊರಕಿತು. ಹೀಗೆ ನನ್ನ ಹವ್ಯಾಸ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟು ಇಂದು ಅಮೇರಿಕದ ವ್ಯಾಸ ಭಾರತಿ ತ್ರಿಯೋಗ ವಿಶ್ವವಿದ್ಯಾಲಯದ ಇನ್ನೂರ ಐವತ್ತಾರು ಶಾಖೆಗಳ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ಯುವ ವಿದ್ಯಾರ್ಥಿಗಳಲ್ಲಿ ಪ್ರೇರಣೆ ತುಂಬಿದರು.

ಯೋಗದಿಂದ ದೊರಕುವ ಪ್ರಯೋಜನ ಹಾಗೂ ಪ್ರಾತ್ಯಕ್ಷೆಕೆ ಮೂಲಕ ಹಿರಿಯ ವಿದ್ಯಾರ್ಥಿಗಳ ಮನಗೆದ್ದು, ಆರೋಗ್ಯದ ಬಗ್ಗೆ ಕೆಲವು ಮಾಹಿತಿ ನೀಡಿದರು. ತಮಗೆ ಕಾಲೇಜಿನಲ್ಲಿ ಸಿಕ್ಕ ನೆರವು ಸ್ನೇಹಿತರ ಹುಡುಗಾಟದ ದಿನಗಳನ್ನು ನೆನಪಿಸಿಕೊಂಡು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಮತ್ತೋರ್ವ ಅತಿಥಿಯಾಗಿ ಆಗಮಿಸಿದ್ದ ಖ್ಯಾತ ಉದ್ಯಮಿ ಕಿಮ್ಮನೆ ಜಯರಾಂ ಮಾತನಾಡಿ, ಅಂದು ಮಾಡಿದ ಹುಡುಗಾಟಿಕೆ ಇಂದು ನೆನೆಪು ಮಾತ್ರ, ಆದರು ಖುಷಿ ಕೊಡುತ್ತದೆ. ಸ್ನೇಹಿತರು ಇಂದಿಗೂ ಜೊತೆಗಿದ್ದಾರೆ. ನನ್ನ ಊರಿಗೆ ವಿಶ್ವ ಮಟ್ಟದಲ್ಲಿ ಮನ್ನಣೆ ದೊರಕಬಹುದಾದ ಹಾಗೂ ಮತ್ತೊಬ್ಬರು ಸ್ವರ್ಧೆಗೆ ಬಾರದೆ ಇರುವ ಕೆಲಸ ಮಾಡಬೇಕೆಂದು ತಮ್ಮ ಪತ್ನಿಯೊಂದಿಗೆ ಚರ್ಚಿಸಿ ಗಾಲ್ಫಕ್ಲಬ್ ಪ್ರಾರಂಭಿಸಿದೆ. ಈಗ ಅದರ ಬಗ್ಗೆ ಪ್ರಶಂಸೆ ಸಿಕ್ಕಾಗ ಸಂತೃಪ್ತ ಭಾವ ಮೂಡುತ್ತದೆ ಎಂದರು.

Acharya Tulsi National College of Commerce ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷರಾದ ಕೆ.ಎಸ್.ಈಶ್ವರಪ್ಪ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ವಿಶ್ವ ಮಟ್ಟದಲ್ಲಿ ಎಂತೆಂಥ ಸಾಧನೆ ಮಾಡಿದ್ದಾರೆ, ಸಂತೋಷವಾಗುತ್ತದೆ. ಇಡೀ ವಿಶ್ವದಲ್ಲಿ ಸ್ವಂತಮಾಲಿಕತ್ವದ ಗಾಲ್ಫಕ್ಲಬ್ ಇರುವುದು ಇಬ್ಬರ ಬಳಿ ಒಬ್ಬರು ಬಿಲ್ ಕ್ಲಿಂಟನ್, ಮತ್ತೋರ್ವರು ನಮ್ಮೂರಿನ ಹುಡುಗ ಕಿಮ್ಮನೆ ಜಯರಾಂ, ಈತಾ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿ. ಡಾ. ರಾಘವೇಂದ್ರ ಪೈ, ಅಮೇರಿಕ ದೇಶದ ವಿಶ್ವವಿದ್ಯಾಲಯದ ಉಪಕುಲಪತಿ, ಲೆಪ್ಟಿನೆಂಟ್ ಕರ್ನಲ್ ದಿವಾಕರನಾಯ್ಡು, ಉದ್ಯಮಿ ಬಾಲಕೃಷ್ಣ, ವಿಕ್ರಂ ರವರನ್ನು ಗುರುತಿಸಿ ಇಂದು ಕರೆದು ಗೌರವಿಸಿದ್ದು ಹಾಗೂ ನಮಗೆ ಸರಿದಾರಿ ತೋರಿಸಿದ ಪ್ರಾಧ್ಯಾಪಕರನ್ನು ಕರೆದು ಸನ್ಮಾನಿಸಿರುವುದು ಬಹಳ ಸಂತೋಷ. ಇಂತಹ ಸ್ನೇಹ ಸಮ್ಮಿಲನ ಆಗಿಂದಾಗೆ ಜರುಗುತ್ತಿದ್ದರೆ ಸಿಗುವ ಸಂತೋಷ ಬೇರೆ ಯಾವುದರಿಂದಲು ಸಿಗುವುದಿಲ್ಲ. ಇಂತಹ ಸಂದರ್ಭವನ್ನು ತಾವು ಎಂದಿಗೂ ತಪ್ಪಿಸಿಕೊಳ್ಳುವುದಿಲ್ಲ ಎಂದರು.

Acharya Tulsi National College of Commerce ಕಾರ್ಯಕ್ರಮದಲ್ಲಿ ಮಂಜುನಾಥ್ ಪ್ರಾರ್ಥಿಸಿದರು. ಪ್ರೊ. ಆಶಾಲತ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಅಧ್ಯಕ್ಷ ವಾಗೇಶ್ ಮಾತನಾಡಿದರು. ಮುಖ್ಯ ಅತಿಥಿಗಳನ್ನು ಕೇಶವಮೂರ್ತಿ ಪರಿಚಯಿಸಿದರು. ಘನಶ್ಯಾಮ್, ದಿಲೀಪ್ ನಾಡಿಗ್, ಸ್ಮೀತರೂಪೇಶ್, ದೇವಿಕುಮಾರ್ ನಡೆಸಿಕೊಟ್ಟರು. ರೋಟರಿ ಜಿ.ವಿಜಯಕುಮಾರ್ ಮತ್ತು ಸಮನ್ವಯಕಾಶಿ ನಿರೂಪಿಸಿದರು. ಪ್ರಾಂಶುಪಾಲೆ ಮಮತಾ, ಪ್ರಕಾಶ್ ಕುಮಾರ್ ಜೈನ್, ಸೈಯದ್ ಅಬೂತಾಹಿರ್, ಮಹೇಶ್, ನವೀನ್, ಸುನೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ಕಡ್ಡಾಯ – ವಿ‌.ಅಭಿಷೇಕ್

0

ಶಿವಮೊಗ್ಗ ಜಿಲ್ಲೆಯ ಎಲ್ಲಾ 5 ರಿಂದ 7 ಹಾಗೂ 15 ರಿಂದ 17 ರ ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ನವೀಕರಣ ಮಾಡುವುದು ಕಡ್ಡಾಯ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆ. 30 ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿದ್ದು, ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ. ಇದರಿಂದ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿಧ್ಯಾರ್ಥಿ ವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ. ಪೋಷಕರು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ತಮ್ಮ ಮಕ್ಕಳಿಗೆ ಸರ್ಕಾರದ ಯೋಜನೆಯನ್ನು ಸಕಾಲದಲ್ಲಿ ತಲುಪಿಸುವಲ್ಲಿ ಸಹಕರಿಸುವಂತೆ ಅವರು ತಿಳಿಸಿದ್ದಾರೆ.