MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ನ 14 ರಂದು ಬೆಳಿಗ್ಗೆ 11.00ರಿಂದ 01.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;. 9448998783.
MESCOM ನವೆಂಬರ್ 14. ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ
Department of Kannada and Culture ಒನಕೆ ಓಬವ್ವನ ಶೌರ್ಯ ಮತ್ತು ಕರ್ತವ್ಯ ಪ್ರಜ್ಞೆ ಎಲ್ಲರಿಗೂ ಮಾದರಿ- ಶಾಸಕಿ ಬಲ್ಕೀಷ್ ಬಾನು
Department of Kannada and Culture ತನ್ನ ಒನಕೆಯನ್ನೇ ಆಯುಧ ಮಾಡಿಕೊಂಡು ವೈರಿಪಡೆಯನ್ನು ದಿಟ್ಟತನದಿಂದ ಎದುರಿಸಿದ ವೀರಮಹಿಳೆ ಒನಕೆ ಓಬವ್ವ ಧೈರ್ಯ ಮತ್ತು ಶೌರ್ಯದ ಪ್ರತೀಕ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಕೊಂಡಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಛಲವಾದಿ ಮಹಾಸಭಾ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳಿಗೆ ಜನ್ಮತಃ ಧೈರ್ಯ, ಸ್ಥೈರ್ಯ, ಕುಟುಂಬ ನಿರ್ವಹಣೆಯ ಚಾಕಚಕ್ಯತೆ ದೇವರು ಕೊಟ್ಟ ವರವಾಗಿದ್ದು, ಓಬವ್ವ ಪತಿ ತನಗೆ ವಹಿಸಿದ ಜವಾಬ್ದಾರಿಯನ್ನು ತಾನೊಂದು ಹೆಣ್ಣು ಎಂದೂ ಎಣಿಸದೇ, ಜೀವದ ಹಂಗು ತೊರೆದು, ಧೈರ್ಯದಿಂದ ನಿರ್ವಹಿಸುವ ಮೂಲಕ ಹೈದರಾಲಿ ಸೇನೆಯನ್ನು ಬಗ್ಗುಬಡಿದ ಈಕೆ ಎಲ್ಲರಿಗೂ ಮಾದರಿ ಮತ್ತು ಕರ್ತವ್ಯಪ್ರಜ್ಞೆಯ ಸಂಕೇತವಾಗಿದ್ದಾಳೆ.
ಇಂತಹ ವೀರ ಮಹಿಳೆಯನ್ನು ಪಡೆದ ನಮ್ಮ ಸಮಾಜ ನಿಜಕ್ಕೂ ಪುಣ್ಯ ಮಾಡಿದೆ. ನಮ್ಮ ಸಮಾಜವನ್ನು ಕಾಪಾಡಲು ಹಾಗೂ ಸಮಾಜದ ಒಳಿತು ಮತ್ತು ಏಳ್ಗೆಗಾಗಿ ಗಟ್ಟಿಯಾದ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಜಾತಿ, ಧರ್ಮ, ಭಾಷೆ ಮರೆತು ಸ್ವಾತಂತ್ರಕ್ಕಾಗಿ ಗಾಂಧೀಜಿಯವರ ನೇತೃತ್ವದಲ್ಲಿ ಒಟ್ಟಾದ ರೀತಿಯಲ್ಲಿ ಇಂದಿಗೂ ನಾವು ಒಟ್ಟಾಗಿ ಇರುವ ಅವಶ್ಯಕತೆ ಇದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಂವಿಧಾನ ನಮಗೆಲ್ಲ ದಾರಿ ದೀಪವಾಗಿದ್ದು, ಎಲ್ಲರೂ ಸಾಮರಸ್ಯದಿಂದ ಬಾಳೋಣ ಎಂದು ಕರೆ ನೀಡಿದರು.
Department of Kannada and Culture ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ ಮಾತನಾಡಿ, ಒನಕೆ ಓಬವ್ವ ಎಂಬ ಹೆಸರೇ ಒಂದು ಶಕ್ತಿ. ಧೈರ್ಯಕ್ಕೆ ಮಾದರಿಯಾದ ಮಹಿಳೆ. ಚಿತ್ರದುರ್ಗ ಕೋಟೆಯನ್ನು ರಕ್ಷಿಸಿದ ವೀರವನಿತೆ. ಒನಕೆ ಓಬವ್ವ ಯಾರೆಂದು ನಮ್ಮ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಯುವಜನತೆಗೆ ತಿಳಿಸಬೇಕು. ಇಂತಹ ಕಾರ್ಯಕ್ರಮದಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಎಲ್ಲ ವರ್ಗದವರೂ ಸೇರಿ ಇಂತಹ ಮಹಾನ್ ವ್ಯಕ್ತಿಗಳ ಜಯಂತಿಗಳನ್ನು ಆಚರಿಸಬೇಕೆಂಬುದು ಸರ್ಕಾರದ ಉದ್ದೇಶವಾಗಿದ್ದು ಎಲ್ಲರೂ ಒಟ್ಟಾಗಿ ಆಚರಿಸೋಣ ಎಂದು ಕರೆ ನೀಡಿದರು.
ಛಲವಾದಿ ಸಮಾಜ ಛಲ ಮೈಗೂಡಿಸಿಕೊಂಡು, ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಯಾಗಬೇಕು ಎಂದು ಹಾರೈಸಿದರು.
ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕುಂದನ್ ಬಸವರಾಜ್ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಕೋಟೆ ಮತ್ತು ಕಹಳೆಯನ್ನು ಆಯುಧವಾಗಿ ಹೊಂದಿದ್ದವ ಛಲವಾದಿ. ಕಹಿ ನುಂಗಿ ಸಿಹಿ ಉಗಿಯುವವ ಛಲವಾದಿ. ಛಲ ಬಿಡದೆ ವಾದಿಸುವವನೇ ಛಲವಾದಿ. ಹಿಂಜರಿಯದವ, ಪಟ್ಟು ಬಿಡದೇ ಸಾಧಿಸಿಯೇ ತೀರುತ್ತೇನೆಂಬುವವ ಛಲವಾದಿ.
ಗಟ್ಟಿಯಾದ ಬೇರುಗಳನ್ನು ಹೊಂದಿರುವ ಛಲವಾದಿ ಸಮಾಜ ಬಸವ ತತ್ವಗಳನ್ನು ಸಾರಿತು. ಇಂತಹ ಸಮಾಜದಲ್ಲಿ ಜನಿಸಿದ ಓಬವ್ವ, ಚಿತ್ರದುರ್ಗದ ಕೋಟೆ ರಕ್ಷಣೆಯಲ್ಲಿ ಟೊಂಕಕಟ್ಟಿ ನಿಂತು ಯಶಸ್ವಿಯಾದ ನಂತರ ಸ್ವತಃ ಚಿತ್ರದುರ್ಗದ ರಾಜ ವೀರ ಮದಕರಿನಾಯಕರೇ ಓಬವ್ವನ ಮನೆಗೆ ಬಂದು ಓಬವ್ವರನ್ನು ತಂಗ್ಯವ್ವ ಎಂದು ಸಂಭೋದಿಸಿ, ಚಿತ್ರದುರ್ಗದ ಇತಿಹಾಸದಲ್ಲಿ ಸದಾ ನಿನ್ನ ಹೆಸರು ಅಜರಾಮರವಾಗಿರುತ್ತದೆ. ನಿನ್ನ ಶಕ್ತಿ, ಪರಾಕ್ರಮ ಸದಾ ನೆಲೆಯಾಗಿರುತ್ತದೆ ಎಂದು ಶ್ಲಾಘಿಸುವುದರೊಂದಿಗೆ ಓಬವ್ವನಿಗೆ ಮೂರು ವರಗಳನ್ನು ನೀಡುತ್ತಾರೆ ಎಂದು ಸ್ಮರಿಸಿದರು.
ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಹೆಚ್ ಎಸ್ ಕುಮಾರಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಎಎಸ್ಪಿ ರಮೇಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ನಿವೃತ್ತ ನ್ಯಾಯಾಧೀಶರಾದ ದೇವೇಂದ್ರ, ಸಮಾಜದ ಮುಖಂಡರು ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.
ಈರ್ವರ ಜಾತಿ ಪ್ರಮಾಣ ಪತ್ರ ರದ್ದುಗೊಳಿಸಿ ಶಿವಮೊಗ್ಗ ತಹಶೀಲ್ದಾರ್ ಆದೇಶ
ಶಿವಮೊಗ್ಗ ತಾಲೂಕು ಕೋಟೆ ರಸ್ತೆಯ ಗಿರೀಶ ಎಂ.ಆರ್. ಎಲ್.ಐ.ಸಿ ಏಜೆಂಟ್ ಎಂಬುವವರ ಮಕ್ಕಳು ಕು.ಅಭಿಷೇಕ್ ಎಂ.ಜಿ. (ಆರ್.ಡಿ.ನಂ.0039017165807) ಮತ್ತು ಕು. ಮಾಧುರ್ಯ ಎಂ.ಜಿ. (ಆರ್.ಡಿ.ನಂ.0039017031829) ಎಂಬುವವರ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಶಿವಮೊಗ್ಗ ತಾಲೂಕು ತಹಶೀಲ್ದಾರ್ ಕೆ.ಓ. ಪಾಲಯ್ಯ ಆದೇಶ ನೀಡಿದ್ದಾರೆ.
Adoption Awareness Month ಮಕ್ಕಳ ದತ್ತು ಪ್ರಕ್ರಿಯೆ ಬಗ್ಗೆ ಜಾಗೃತಿ ಹೆಚ್ಚುತ್ತಿದೆ. ಮಕ್ಕಳನ್ನ ಎಲ್ಲೆಂದರಲ್ಲಿ ಎಸೆಯುವ ಬದಲು ಇಲಾಖೆಗೆ ಒಪ್ಪಿಸುವವರ ಸಂಖ್ಯೆಯೂ ಹೆಚ್ವುತ್ತಿದೆ : ಗುರುದತ್ತ ಹೆಗಡೆ
Adoption Awareness Month ಒಂದು ಮಗುವನ್ನು ದತ್ತು ತೆಗೆದುಕೊಂಡಲ್ಲಿ ಜಗತ್ತು ಬದಲಾಗುವುದಿಲ್ಲ. ಆದರೆ ಆ ಮಗುವಿನ ಜಗತ್ತು ಬದಲಾಗುತ್ತದೆ… ಪ್ರತಿಯೊಂದು ಮಗುವೂ ಕುಟುಂಬ ಹೊಂದಲು ಅರ್ಹ.
ಈ ನಿಟ್ಟಿನಲ್ಲಿ ಭಾರತ ಸರ್ಕಾರ ಕಾನೂನು ಬದ್ದ ದತ್ತು ಯೋಜನೆಯನ್ನು ರೂಪಿಸಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಈ ಯೋಜನೆಯನ್ನು ಜಾರಿಗೊಳಿಸುತ್ತಾ ಬಂದಿದೆ.
ಈ ಯೋಜನೆಯ ಭಾಗವಾಗಿ ನವೆಂಬರ್ ಮಾಸ ಪೂರ್ತಿ ದತ್ತು ಮಾಸಾಚರಣೆಯನ್ನು ಆಚರಿಸುವ ಮೂಲಕ ದತ್ತು ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.
ವಿಶೇಷ ಮಕ್ಕಳು ಸೇರಿದಂತೆ ಮಕ್ಕಳು ಹುಟ್ಟಿದಾಗ ಎಲ್ಲೆಂದರಲ್ಲಿ ಬಿಟ್ಟು ಹೋಗದೆ, ಬಿಸಾಡದೇ ಸರ್ಕಾರಿ ಆಸ್ಪತ್ರೆಗಳು, ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ರಕ್ಷಣಾ ಘಟಕ ಸಂಪರ್ಕಿಸಿ ಒಪ್ಪಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಮಾಸಾಚರಣೆ ಮಾಡಲಾಗುತ್ತದೆ.
ಈ ವರ್ಷ ವಿಶೇಷ ಅಗತ್ಯತೆಯುಳ್ಳ ಮಕ್ಕಳನ್ನು ದತ್ತು ನೀಡುವ ಕುರಿತು ಅರಿವು ಮೂಡಿಸಲಾಗುತ್ತಿದೆ. ವಿಶೇಷ ಅಗತ್ಯವಿರುವ ಮಕ್ಕಳಿಗೆ ಕುಟುಂಬ ಆಧಾರಿತ ಆರೈಕೆ ನೀಡಿ, ಕಾಳಜಿಯಿಂದ ಭವಿಷ್ಯವನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ.
ಪ್ರತಿಯೊಂದು ಮಗುವೂ ಒಂದು ಕುಟುಂಬ ಅಥವಾ ಕುಟುಂಬದಂತಹ ವಾತಾವರಣಕ್ಕೆ ಅರ್ಹವಾಗಿದೆ ಎಂಬ ನಂಬಿಕೆಯಲ್ಲಿ ನೆಲೆಗೊಂಡಿರುವ ಈ ವರ್ಷದ ಅಭಿಯಾನವು, ವಿಶೇಷ ಅಗತ್ಯವಿರುವ ಮಕ್ಕಳ ಸಾಂಸ್ಥಿಕವಲ್ಲದ ಪುನರ್ವಸತಿಯನ್ನು ಉತ್ತೇಜಿಸುವಲ್ಲಿ ಎಲ್ಲರೂ ಸಹಯೋಗದಿಂದ ಕೆಲಸ ಮಾಡಲು ಕರೆ ನೀಡಿದೆ.
ಈ ಮಕ್ಕಳು ಪ್ರೀತಿ, ಆರೈಕೆ ಮತ್ತು ಬೆಳವಣಿಗೆಯ ಅವಕಾಶಗಳಿಗೆ ಎಲ್ಲರಂತೆ ಅರ್ಹರಾಗಿದ್ದು, ಒಂದು ಕುಟುಂಬವು ಮಗುವಿನ ಸಮಗ್ರ ಬೆಳವಣಿಗೆಗೆ ಅನುಕೂಲಕರವಾದ ಪೋಷಣೆಯ ವಾತಾವರಣವನ್ನು ಒದಗಿಸುತ್ತದೆ ಮತ್ತು ಇದು ವಿಶೇಷ ಅಗತ್ಯವಿರುವ ಮಕ್ಕಳು ಸೇರಿದಂತೆ ಎಲ್ಲಾ ಮಕ್ಕಳಿಗೆ ಅವಶ್ಯಕವಾಗಿದೆ.
ಹಾಗೂ ಕಾಳಜಿ, ಸಹಾನುಭೂತಿ ಮತ್ತು ಸ್ಪಂದಿಸುವ ಈ ದತ್ತು ಪರಿಸರ ವ್ಯವಸ್ಥೆಯನ್ನು ಕಾನೂನು ರೀತಿಯಲ್ಲಿ ಭದ್ರಪಡಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾದ್ಯಂತ ರಾಷ್ಟ್ರೀಯ ದತ್ತು ಮಾಚರಣೆಯ ಪ್ರಯುಕ್ತ ಸಂಕಲ್ಪ ಸಂದೇಶದ ಮೂಲಕ ಅರಿವು ಕಾರ್ಯಕ್ರಮವಗಳನ್ನು ಆಯೋಜಿಸಿದೆ.
2018-19 ರಿಂದೀಚೆಗೆ ದತ್ತು ಮಾಸಾಚರಣೆಗಳು, ಗ್ರಾ.ಪಂ ಆಶಾ, ಅಂಗನವಾಡಿ ಕಾರ್ಯಕರ್ತೆರಯರು ಮಕ್ಕಳ ರಕ್ಷಣಾ ಘಟಕ, ವಿವಿಧ ಇಲಾಖೆಗಳು, ದೃಶ್ಯ ಮತ್ತು ಸುದ್ದಿ ಮಾಧ್ಯಮಗಳ ಮೂಲಕ ಮೂಡಿಸಲಾದ ಜಾಗೃತಿಯಿಂದಾಗಿ ಮಕ್ಕಳನ್ನು ಎಲ್ಲೆಂದರಲ್ಲಿ ಬಿಸಾಡದೆ, ಇಲಾಖೆಗೆ ಒಪ್ಪಿಸುವ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಜಾಗೃತಿಯ ಯಶಸ್ಸನ್ನು ಕಾಣಬಹುದಾಗಿದೆ.
Adoption Awareness Month ದತ್ತು ಪಡೆಯುವುದು ಹೇಗೆ :
ಅನಾಥ, ಪರಿತ್ಯಕ್ತ, ಸ್ವಇಚ್ಛೆಯಿಂದ ಒಪ್ಪಿಸಲ್ಪಟ್ಟ ಮಕ್ಕಳನ್ನು ದತ್ತು ಪಡೆಯಬಹುದಾಗಿದ್ದು ದತ್ತು ಪಡೆಯಲು www.cara.wcd.gov.inನಲ್ಲಿ ನೋಂದಣಿಯಾಗುವುದು ಕಡ್ಡಾಯವಾಗಿದೆ. ವಯಸ್ಸಿನ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣಕ್ಕೆ ಪೂರಕವಾದ ದಾಖಲೆಗಳು, ವೈದ್ಯಕೀಯ ತಪಾಸಣಾ ದಾಖಲೆಗಳು, ವಿವಾಹ ದೃಢೀಕರಣ ಪತ್ರ, ಆದಾಯ ದೃಢೀಕರಣಕ್ಕೆ ಸಂಬಧಿಸಿದ ದಾಖಲೆಗಳು, ಏಕಪೋಷಕರಾಗಿದ್ದಲ್ಲಿ ಸಂಬಂಧಿಸಿದ ದಾಖಲೆಗಳು, ಪಾನ್ಕಾರ್ಡ್ ಪೋಸ್ಟ್ ಕಾರ್ಡ್ ಭಾವಚಿತ್ರ ನೀಡಬೇಕು. ಕೇರಿಂಗ್ಸ್ನಲ್ಲಿ ನೋಂದಣಿಯಾದ ನಂತರ ಗೃಹ ಅಧ್ಯಯನ ವರದಿ ತಯಾರಿಸುವ ಸಂದರ್ಭದಲ್ಲಿ ನಿಗದಿತ ಮೊತ್ತ ಪಾವತಿಸಬೇಕು.
ಉತ್ತಮ ಆರೋಗ್ಯ, ಆರ್ಥಿಕ ಹಿನ್ನೆಲೆ ಹೊಂದಿದ ದಂಪತಿಗಳ ಒಟ್ಟಾರೆ ಸರಾಸರಿ 110ಕ್ಕೆ ಮೀರದ ಅನ್ಯೋನ್ಯತೆಯ ಜೀವನ ನಡೆಸುತ್ತಿರುವ ಜೈವಿಕ ಮಕ್ಕಳನ್ನು ಹೊಂದಿರುವ/ಹೊಂದಿಲ್ಲದ ದಂಪತಿಗಳು ದತ್ತು ಪಡೆಯಬಹುದು. ಇದಕ್ಕೆ ಕುಟುಂಬದ ಇತರೆ ಸದಸ್ಯರ ಅನುಮತಿ ಇರಬೇಕು.
ದತ್ತು ಪಡೆಯುವ ಪೋಷಕರು ಹಾಗೂ ಮಗುವಿನ ನಡುವೆ 25 ವರ್ಷಗಳ ಅಂತರವಿರಬೇಕು.
ಏಕಪೋಷಕ ಪುರುಷ/ಮಹಿಳೆ ಸಂದರ್ಭದಲ್ಲಿ ಕನಿಷ್ಠ 40 ಮತ್ತು ಗರಿಷ್ಠ 55 ವರ್ಷ ವಯೋಮಿತಿಯೊಳಗಿನ ವ್ಯಕ್ತಿಗಳು ದೈಹಿಕ, ಮಾನಸಿಕವಾಗಿ ಆರೋಗ್ಯವಂತರಾಗಿದ್ದು ಆರ್ಥಿಕ ಹಿನ್ನೆಲೆಯುಳ್ಳ ಬಂಧು ಬಾಂಧವರ ಉತ್ತಮ ಸಹಕಾರ ಇರುವವರು ಪಡೆಯಬಹುದು. ಆದರೆ ಅವಿವಾಹಿತ ಅಥವಾ ಏಕಪೋಷಕ ಪುರುಷರು ಹೆಣ್ಣು ಮಗುವನ್ನು ದತ್ತು ಪಡೆಯಲು ಅವಕಾಶವಿಲ್ಲ.
ಜೈವಿಕ ಮಕ್ಕಳನ್ನು ಹೊಂದಿರುವ ದಂಪತಿಗಳು ಮಕ್ಕಳನ್ನು ದತ್ತು ಪಡೆಯಬಹುದಾಗಿದ್ದು ಎರಡು ಅಥವಾ ಹೆಚ್ಚಿನ ಮಕ್ಕಳನ್ನು ಹೊಂದಿರುವ ದಂಪತಿಗಳು ದತ್ತು ಪಡೆಯುವ ಸಂದರ್ಭದಲ್ಲಿ ಅವರಿಗೆ ವಿಶೇಷ ಅಗತ್ಯವಿರುವ ಮಕ್ಕಳಿಗೆ ಮಾತ್ರ ಪರಿಗಣಿಸಲಾಗುತ್ತದೆ.
ದತ್ತು ಪಡೆಯಲು ನಿರೀಕ್ಷಿಸುವ ದಂಪತಿಗಳ ವರಮಾನವು ಮಗುವನ್ನು ಉತ್ತಮವಾಗಿ ಬೆಳೆಸಲು ಪೂರಕವಾದ ಉತ್ತಮವಾದ ಆದಾಯದ ಮೂಲಗಳನ್ನು ಹೊಂದಿರಬೇಕು.
ದತ್ತು ಪಡೆಯುವ ಸಂಭವನೀಯ ದತ್ತು ಪೋಷಕರು ದತ್ತು ಪಡೆಯಲು ನೋಂದಣಿಯಾಗುವ ಸಂದರ್ಭದಲ್ಲಿ ಮಗುವಿನ ಲಿಂಗ ಆಯ್ಕೆ ಮಾಡುವ ಅವಕಾಶವಿದ್ದು ಎರಡು ಅವಳಿ ಮಕ್ಕಳು, ಸೋದರಿ/ಸೋದರರಿದ್ದಾಗ ಮೂರು ಮಕ್ಕಳನ್ನು ದತ್ತು ಪಡೆಯಬಹುದು.
ಮೊದಲನೇ ಹಂತದ ಸಂಬಂಧಿಕರ ಮಕ್ಕಳನ್ನು ಸಹ ಪರಸ್ಪರ ಒಪ್ಪಿಗೆಯನುಸಾರ ದತ್ತು ಪಡೆಯಲು ಅವಕಾಶವಿದ್ದು, ಸದರಿ ಸಂಬಂಧಿತ ಪೋಷಕರು ಮಕ್ಕಳ ಕಲ್ಯಾಣ ಸಮಿತಿಯ ಅನುಮೋದನೆ ಪಡೆದು ಕೇರಿಂಗ್ಸ್ನಲ್ಲಿ ನೋಂದಣಿ ಮಾಡಿಕೊಂಡು ದತ್ತು ಪಡೆಯಬಹುದಾಗಿದೆ.
ಹಾಗೂ ವಿಕಲಚೇತನ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಪೋಷಕರು ಮುಂದೆ ಬಂದರೆ ಅಂತಹ ಮಕ್ಕಳನ್ನು ಸ್ವದೇಶಿ/ವಿದೇಶಿ ದತ್ತು ಸಂಸ್ಥೆಗಳ ಮೂಲಕ ದತ್ತು ನೀಡಲು ಅವಕಾಶವಿದೆ.
ಮಕ್ಕಳು ಬೇಡವಾದಲ್ಲಿ ತೊಟ್ಟಿಲಿಗೆ ಹಾಕಿ :
ನವಜಾತ ಶಿಶುಗಳು ಬೇಡವಾದಲ್ಲಿ ನಿರ್ಜನ ಪ್ರದೇಶಗಳ ಪೊದೆಗಳು, ಚರಂಡಿ ಮತ್ತಿತರೆಡೆ ಎಸೆಯುವ ಬದಲು ಜಿಲ್ಲೆಯ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ, ಸರ್ಕಾರಿ ಬಾಲಕಿಯರ, ಬಾಲಕರ ಬಾಲಮಂದಿರ, ದ
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಆವರಣದಲ್ಲಿರುವ ವಿಶೇಷ ಸರ್ಕಾರಿ ದತ್ತು ಕೇಂದ್ರ ಇಲ್ಲಿ ಅಳವಡಿಸಲಾಗಿರುವ ಮಮತೆಯ ತೊಟ್ಟಿಲುಗಳಿಗೆ ಹಾಕಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮನವಿ ಮಾಡಿದೆ.
151 ಮಕ್ಕಳ ಕಾನೂನುಬದ್ದ ದತ್ತು : 2015 ರಿಂದ 2025 ನೇ ಸಾಲಿನವರೆಗೆ ಇಲಾಖೆಗೆ 174 ಪರಿತ್ಯಕ್ತ, ಅನಾಥ, ಒಪ್ಪಿಸಲ್ಪಟ್ಟ ಮಕ್ಕಳು ದಾಖಲಾಗಿದ್ದು 151 ಮಕ್ಕಳನ್ನು ಕಾನೂನುಬದ್ದವಾಗಿ ದತ್ತು ನೀಡಲಾಗಿದೆ.
2015-16 ಸಾಲಿನಲ್ಲಿ 10 ಪರಿತ್ಯಕ್ತ(ಬೀದಿ ಬದಿ, ನಿರ್ಜನ ಪ್ರದೇಶ, ಬಸ್ಸ್ಟಾö್ಯಂಡ್, ಪೊದೆಗಳಲ್ಲಿ ಬಿಸಾಡಿದ ಮಕ್ಕಳು) ಮತ್ತು 5 ಮಕ್ಕಳನ್ನು ನೇರವಾಗಿ ಇಲಾಖೆಗೆ ಒಪ್ಪಿಸಲಾಗಿದೆ. 2016-17 ರಲ್ಲಿ 18 ಪರಿತ್ಯಕ್ತ, 5 ಇಲಾಖೆಗೆ ಒಪ್ಪಿಸಿರುವ ಮಕ್ಕಳು.
2017-18 ರಲ್ಲಿ 25 ಪರಿತ್ಯಕ್ತ, 10 ಇಲಾಖೆಗೆ ಒಪ್ಪಿಸಲ್ಪಟ್ಟ ಮಕ್ಕಳು. 2018-19 ರಲ್ಲಿ 03 ಪರಿತ್ಯಕ್ತ, 15 ಇಲಾಖೆಗೆ ಒಪ್ಪಿಸಲ್ಪಟ್ಟ ಮಕ್ಕಳು. 2019-20 ರಲ್ಲಿ 2 ಪರಿತ್ಯಕ್ತ, 12 ಇಲಾಖೆಗೆ ಒಪ್ಪಿಸಲ್ಪಟ್ಟ ಮಕ್ಕಳು. 2020-21 ರಲ್ಲಿ 12 ಇಲಾಖೆಗೆ ಒಪ್ಪಿಸಲ್ಪಟ್ಟ ಮಕ್ಕಳು. 2021-22 ರಲ್ಲಿ 17 ಮಕ್ಕಳನ್ನು ಇಲಾಖೆಗೆ ಒಪ್ಪಿಸಿದ್ದು, 2022-23 ರಲ್ಲಿ 01 ಪರಿತ್ಯಕ್ತ, 07 ಇಲಾಖೆಗೆ, 2023-24 ರಲ್ಲಿ 01 ಪರಿತ್ಯಕ್ತ, 9 ಮಕ್ಕಳು ಇಲಾಖೆಗೆ, 2024-25 ರಲ್ಲಿ 01 ಪರಿತ್ಯಕ್ತ ಮತ್ತು 11 ಇಲಾಖೆಗೆ ಒಪ್ಪಿಸಲಾಗಿದೆ. ಹಾಗೂ 2025-26 ರಲ್ಲಿ 15 ಮಕ್ಕಳನ್ನೂ ನೇರವಾಗಿ ಇಲಾಖೆಗೆ ಒಪ್ಪಿಸಲಾಗಿದೆ.
ಕಾನೂನು ಬದ್ದ ದತ್ತು ಪ್ರಕ್ರಿಯೆ ಬಗ್ಗೆ ಜಿಲ್ಲೆಯಾದ್ಯಂತ ಹೆಚ್ಚಿನ ಅರಿವನ್ನು ಮೂಡಿಸಲಾಗುತ್ತಿದ್ದು ಈ ವರ್ಷ ವಿಶೇಷ ಅಗತ್ಯವುಳ್ಳ ಮಕ್ಕಳ ದತ್ತು ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ಕಾನೂನು ಬಾಹಿರವಾಗಿ ಮಕ್ಕಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಕಾನೂನು ರೀತ್ಯಾ ಶಿಕ್ಷೆ ನೀಡಲಾಗುವುದು. ಬೇಡವಾದ ಮಕ್ಕಳ ಮಾರಾಟ ಅಪರಾಧವಾಗಿದ್ದು, ಮಕ್ಕಳನ್ನು ಮಾರುವವರು ಹಾಗೂ ಕೊಳ್ಳುವವರಿಬ್ಬರಿಗೂ ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 81 ರನ್ವಯ 5 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.1 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ
ಗುರುದತ್ತ ಹೆಗಡೆಯವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ದತ್ತು ಪ್ರಕ್ರಿಯೆ ಕುರಿತು ಹಾಗೂ ಮಕ್ಕಳ ಕುರಿತಾದ ಜಾಗೃತಿ ಹೆಚ್ಚುತ್ತಿರುವ ಕಾರಣ ಮಕ್ಕಳನ್ನು ಎಲ್ಲೆಂದರಲ್ಲಿ ಎಸೆಯುವ ಬದಲು ಇಲಾಖೆಗೆ ಒಪ್ಪಿಸುವ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ.
ಈವರೆಗೆ 151 ಮಕ್ಕಳನ್ನು ಕಾನೂನುಬದ್ದ ದತ್ತು ನೀಡಲಾಗಿದೆ. 2025 ರಲ್ಲಿ 01 ವಿಶೇಷಚೇತನ ಮಗುವನ್ನು ಅಮೇರಿಕಾ ಮೂಲದ ಪೋಷಕರಿಗೆ ದತ್ತು ನೀಡಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಂಜುನಾಥ್ ಅವರು ತಿಳಿಸಿದ್ದಾರೆ.
- ಭಾಗ್ಯ ಎಂ ಟಿ,
ವಾರ್ತಾ ಸಹಾಯಕರು, ವಾರ್ತಾ ಇಲಾಖೆ, ಶಿವಮೊಗ್ಗ
Shivamogga City Corporation ಶಿವಮೊಗ್ಗ ಮಹಾ ನಗರಪಾಲಿಕೆಯಿಂದ ಪ್ರತೀ ವಾರ್ಡ್ ಗಳಲ್ಲಿ ‘ಇ ಖಾತಾ ಅಭಿಯಾನ’ ಆರಂಭ
Shivamogga City Corporation ಸರ್ಕಾರದ ಆದೇಶದಂತೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ 35 ವಾರ್ಡ್ಗಳಲ್ಲಿ ಇ-ಆಸ್ತಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು ನ.11 ರಿಂದ ಡಿ.03 ರವರೆಗೆ ವಿವಿಧ ವಾರ್ಡುಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಮಹಾನಗರಪಾಲಿಕೆ ಆಯುಕ್ತರು ಕೋರಿದ್ದಾರೆ.
ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇ-ಆಸ್ತಿ(ಇ-ಖಾತಾ) ಪಡೆಯುವುದು ಕಡ್ಡಾಯವಾಗಿದ್ದು ಆಸ್ತಿ ಮಾಲೀಕರು ಕರ್ನಾಟಕ ಒನ್/ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಪಾಲಿಕೆಯ 3 ವಲಯ ಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು, ಪಾಲಿಕೆ ಸಿಬ್ಬಂದಿಗಳು ಮನೆ-ಮನೆಗೆ ಭೇಟಿ ನೀಡಿದಾಗ ಸೂಕ್ತ ದಾಖಲೆಗಳನ್ನು ಒದಗಿಸಿ ಪಡೆಯಬಹುದು, ವಾರ್ಡ್ವಾರು ‘ಇ-ಖಾತಾ ಮೇಳ’ ದಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ Citizen Portal Link : https//eaasthi.karnataka.gov.in
ಇಲ್ಲಿ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.
Shivamogga City Corporation ಕಂದಾಯ ವಾರ್ಡ್ ಸಂಖ್ಯೆ 35 ಗಾಡಿಕೊಪ್ಪ ದಿ: 11-11-2025 ಅಗಮುಡಿ ಸಮಾಜ ಸೇವಾ ಸಂಘ, ಆಲ್ಕೋಳ ವೃತ್ತ. ವಾರ್ಡ್ ಸಂಖ್ಯೆ 34 ವಿನೋಬನಗರ ದಿ: 13-11-2025 ಆಟೋ ಕಾಂಪ್ಲೆಕ್ಸ್, ಪ್ಲಾಟ್ ನಂ 61, ಶ್ರೀ ಮಲ್ಲಿಕಾರ್ಜುನ ಆಗ್ರೋ, 1ನೇ ಮುಖ್ಯರಸ್ತೆ ಶಿವಮೊಗ್ಗ. ವಾರ್ಡ್ ಸಂಖ್ಯೆ 12 ಗುಡ್ಡೇಕಲ್ ದಿ: 13-11-2025 ಯೋಗಭವನ, 4ನೇ ತಿರುವು ಸಿದ್ದೇಶ್ವರ ನಗರ. ವಾರ್ಡ್ ಸಂಖ್ಯೆ 01 ಸಹ್ಯಾದ್ರಿ ನಗರ ದಿ: 15-11-2025 ತಮಿಳ್ ತಾಯಿ ಸಮುದಾಯ ಭವನ, ಜೆ ಹೆಚ್ ಪಟೇಲ್ ಲೇಔಟ್ ಸೋಮಿನಕೊಪ್ಪ ರಸ್ತೆ. ವಾರ್ಡ್ ಸಂಖ್ಯೆ 08 ಶಾಂತಿನಗರ ದಿ: 19-11-2025 ಗಣಪತಿ ದೇವಸ್ಥಾನ ಮುಂಭಾಗ, 2ನೇ ಮುಖ್ಯರಸ್ತೆ, ರಾಜಾಕಾಲುವೆ ಪಕ್ಕ ಕೃಷಿನಗರ. ವಾರ್ಡ್ ಸಂಖ್ಯೆ 31 ಹೊಸಮನೆ ದಿ: 19-11-2025 ಸಾರ್ವಜನಿಕ ಗ್ರಂಥಾಲಯ ಶರಾವತಿ ನಗರ. ವಾರ್ಡ್ ಸಂಖ್ಯೆ 16 ಊರುಗಡೂರು ದಿ: 24-11-2025 ಅಶ್ವಥ್ ಕಲಾ ವೇದಿಕೆ, ಪಾರ್ಕ್ ಆವರಣ, ಗಣಪತಿ ದೇವಸ್ಥಾನದ ಹತ್ತಿರ, ನಂಜಪ್ಪ ಲೇಔಟ್, ಬೈಪಾಸ್ ರಸ್ತೆ, ವಾರ್ಡ್ ಸಂಖ್ಯೆ 26 ಗೋಪಾಳ ದಿ: 26-11-2025 ದ್ರೌಪದಮ್ಮ ದೇವಸ್ಥಾನ ಸಭಾಭವನ ಗೋಪಾಳ. ವಾರ್ಡ್ ಸಂಖ್ಯೆ 27 ಮಿಳಘಟ್ಟ ದಿ: 03-12-2025 ಭಾರತೀಯ ಸಭಾ ಭವನ ಮುಖ್ಯರಸ್ತೆ ಆರ್ಎಂಎಲ್ ನಗರ ಇಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಅರ್ಜಿ ಸ್ವೀಕರಿಸಲಾಗುವುದು.
S.N.Chennabasappa ಶಿವಮೊಗ್ಗ ನಗರದ 6 ನೇ ವಾರ್ಡಿಗೆ ಭೇಟಿ ನೀಡಿದ ಶಾಸಕ ಚೆನ್ನಿ, ಸಾರ್ವಜನಿಕರ ಸಮಸ್ಯೆ ಆಲಿಕೆ
S.N.Chennabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 6ರ ಕಾಶಿಪುರ ಮತ್ತು ವಾರ್ಡ್ ಸಂಖ್ಯೆ 35ರ ಗಾಡಿಕೊಪ್ಪ ಬಡಾವಣೆಗಳಿಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಕ್ಷೇತ್ರ ಸಂಚಾರ ಕೈಗೊಂಡರು.
ಸ್ಥಳೀಯ ನಿವಾಸಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರ ಮೂಲಭೂತ ಸಮಸ್ಯೆಗಳು ಮತ್ತು ಕುಂದುಕೊರತೆಗಳನ್ನು ಕೂಲಂಕಷವಾಗಿ ಆಲಿಸಿದರು. ರಸ್ತೆ, ನೀರು, ಒಳಚರಂಡಿ ಮುಂತಾದ ಸೌಕರ್ಯಗಳ ಕುರಿತಂತೆ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಿದರು.
S.N.Chennabasappa ನಿವಾಸಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
VISL Bhadravati ಬೆಂಗಳೂರಿನ ಮಾಹಿತಿ ವಿಜ್ಞಾನ ಇಂಜಿಯರಿಂಗ್ ವಿದ್ಯಾರ್ಥಿಗಳಿಂದ ಸೈಲ್ ವಿಐಎಸ್ ಎಲ್ ಗೆ ಭೇಟಿ
VISL Bhadravati ನವೆಂಬರ್ 08, 2025ರಂದು ಟಿ.ಜಾನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಗಿ, ಬೆಂಗಳೂರಿನ 38 ಇನ್ಪರ್ಮೆಷನ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳೊಂದಿಗೆ ಕೈಗಾರಿಕೆಗಳ ಕುರಿತು ಸಂವಹನ ಕಾರ್ಯಕ್ರಮದ ಭಾಗವಾಗಿ ಸೈಲ್ – ವಿಐಎಸ್ ಎಲ್ ನ ಪ್ರೆöÊಮರಿಮಿಲ್, ಬಾರ್ ಮಿಲ್, ಹೀಟ್ ಟ್ರೀಟ್ಮೆಂಟ್ ಶಾಪ್, ಫೋರ್ಜ್ ಪ್ಲಾಂಟ್ ಮತ್ತು ಮಿಶಿನ್ ಶಾಪ್ ಭೇಟಿನೀಡಿ ತಂತ್ರಜ್ಞರಿಂದ ಮಾಹಿತಿ ಪಡೆದು ನಂತರ ಮಾನವ ಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಂವಹನವನ್ನು ನಡೆಸಿದರು.
VISL Bhadravati ಟಿ.ಜಾನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಗಿ ಆಡಳಿತ ಮಂಡಳಿ ಮತ್ತು ಅಧ್ಯಾಪಕರು ತಮ್ಮ ವಿದ್ಯಾರ್ಥಿಗಳಿಗೆ ಒದಗಿಸಿದ ಅವಕಾಶಕ್ಕಾಗಿ ಸೈಲ್ – ವಿಐಎಸ್ ಎಲ್ ಗೆ ಧನ್ಯವಾದ ಅರ್ಪಿಸಿದರು.
ವ್ಯಕ್ತಿ ನಾಪತ್ತೆ, ಮಾಳೂರು ಪೊಲೀಸ್ ಠಾಣೆ ಪ್ರಕಟಣೆ
ಪ್ರಶಾಂತ್, 25 ವರ್ಷ ವಯಸ್ಸು ಇವರು ದಿ:24-10-2025 ರಂದು ಬೆಳಿಗ್ಗೆ ತಮ್ಮ ಅಂಗಡಿಯಲ್ಲಿ ಪತ್ರ ಬರೆದಿಟ್ಟು ಕಾಣೆಯಾಗಿರುತ್ತಾರೆ.
ಸಾಲ ಜಾಸ್ತಿಯಾಗಿದೆ ದುಡಿಮೆ ಹಾಗೂ ಹೆಂಡತಿ ಜೊತೆ ಬಾಳ್ವೆ ಮಾಡಲು ಇಷ್ಟವಿಲ್ಲದೇ ಮಹಾರಾಷ್ಟ್ರಕ್ಕೆ ಹೋಗುತ್ತೇನೆ ಪತ್ರ ಬರೆದು ಮನೆ ಬಿಟ್ಟು ಹೋಗಿದ್ದು ಇದುವರೆಗೂ ಅವರ ಯಾವುದೇ ಮಾಹಿತಿ ದೊರಕಿರುವುದಿಲ್ಲ.
ಕಾಣೆಯಾದ ವ್ಯಕ್ತಿ 6 ಅಡಿ ಎತ್ತರ, ದುಂಡು ಮುಖ, ಗೋಧಿ ಮೈ ಬಣ್ಣ, ಕಪ್ಪು ಕೂದಲು, ಸದೃಢ ಮೈಕಟ್ಟು ಹೊಂದಿದ್ದಾರೆ. ಇವರು ಕಾಣೆಯಾದ ನೀಲಿ ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಕನ್ನಡ ಮತ್ತು ತೆಲುಗು ಭಾಷೆಗಳನ್ನು ಮಾತನಾಡುತ್ತಾರೆ. ಕಾಣೆಯಾದ ವ್ಯಕ್ತಿಯ ಪತ್ತೆ ಯಾರಿಗಾದರೂ ಸಿಕ್ಕಲ್ಲಿ ಪಿಎಸ್ಐ ಮಾಳೂರು ಠಾಣೆ ದೂ.ಸಂ:08181-235142, 9480803353, ಸಿಪಿಐ ಮಾಳೂರು ವೃತ್ತ ದೂ.ಸಂ:08181-228310, 9480803333, ಶಿವಮೊಗ್ಗ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ: 08182-261413, 9480803300 ಗೆ ಸಂಪರ್ಕಿಸಬಹುದೆಂದು ಮಾಳೂರು ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸಪೆಕ್ಟರ್ ಪ್ರಕಣೆಯಲ್ಲಿ ತಿಳಿಸಿದ್ದಾರೆ.
Klive Special Article ಪ್ರವಾಸಿ ವಿಶೇಷ , ಕಲ್ಲೇಶ್ವರ ದೇವಾಲಯ-ಹುಲಿಕಲ್ ಲೇ: ದಿಲೀಪ್ ನಾಡಿಗ್
Klive Special Article ತಾಂಡಗದಿಂದ ಸುಮಾರು 3 ಕಿಲೋಮೀಟರ್ ದೂರದಲ್ಲಿರುವ ಮತ್ತೊಂದು ಕಲ್ಲಿನ ದೇವಾಲಯವೇ ಕಲ್ಲೇಶ್ವರ ದೇವಾಲಯ. ಹುಲಿಕಲ್ನಲ್ಲಿರುವ ಕಳ್ಳೇಶ್ವರ ದೇವಾಲಯದ ಬಗ್ಗೆ ನಮಗೆ ತಿಳಿದದ್ದು ತುಮಕೂರಿನ ಹೊಯ್ಸಳ ದೇವಾಲಯದ ಕುರಿತು ಮ್ಯಾಪ್ ನೋಡಿದ ನಂತರವೇ. ಮ್ಯಾಪ್ ನಲ್ಲಿದ್ದ ರಸ್ತೆ ಅನುಸರಿಸಿ ಹೊರಟ ನಮಗೆ ಎದುರಾದದ್ದು ಒಂದು ಕಾಲುವೆ. ಆ ಕಾಲುವೆಯ ದಾರಿಯಲ್ಲಿ ಸಾಗಿ ಬಲಕ್ಕೆ ತಿರುಗಬೇಕಿತ್ತು. ಆದರೆ ಅಲ್ಲಿ ಮಳೆಬಿದ್ದ ಕಾರಣ ರಸ್ತೆಯು ಸಂಪೂರ್ಣ ಕೆಸರು ತುಂಬಿದ ಗುಂಡಿಗಳು ಎದುರಾಯಿತು. ಕಾಲುವೆಯ ಎರಡು ಬದಿಗಳಲ್ಲಿಯೂ ಎರಡು ಸಮಾಂತರ ವಾಹನ ಮಾರ್ಗಗಳು ಬಲಕ್ಕೆ ತಿರುಗುತ್ತಿದ್ದು ದೇವಾಲಯ ದೂರದಿಂದಲೇ ಕಾಣುತಿದ್ದರೂ ಅಲ್ಲಿಗೆ ತಲುಪುವುದು ದೊಡ್ಡ ಸಾಹಸವೇ ಸರಿ. ಕಾಡಿನ ಮಧ್ಯದಲ್ಲಿ ಮುಳ್ಳುಗಳಿಂದ ಮೈ ಕೈ ಗಾಯಮಾಡಿಕೊಂಡು, ಹಾವುಗಳನ್ನೇ ಎದುರು ಹಾಕಿಕೊಂಡು ಹೊರಡುವ ನಮಗೆ ಇದೊಂದು ಸಣ್ಣಸಂಗತಿಯಾಗಿತ್ತು. ವಿಪರ್ಯಾಸವೆಂದರೆ
ಸ್ಥಳೀಯರಿಗೂ ಸಹ ದೇವಾಲಯದ ಬಗ್ಗೆ ಸರಿಯಾದ ದಾರಿಯ ಬಗ್ಗೆ ಮಾಹಿತಿ ಇಲ್ಲದಿರುವುದು. ನಮ್ಮ ಆತ್ಮವಿಶ್ವಾಸವೇ ನಮಗೆ ದಾರಿ ತೋರಿದ್ದು ಬಲಭಾಗದ ದಾರಿಗಳಲ್ಲಿ ಒಂದನ್ನು ಆಯ್ದುಕೊಂಡು ಮುಂದುವರಿದ ನಂತರ ಸುಮಾರು 2 ಕಿಲೋಮೀಟರ್ ಪ್ರಯಾಣಿಸಿದರೂ ದೇವಾಲಯದ ಯಾವ ಗುರುತು ಕೂಡ ಕಾಣಿಸಲಿಲ್ಲ, ನಾವು ತಪ್ಪು ದಾರಿ ಹಿಡಿದು ಬಂದೆವೆಂಬ ಅನುಮಾನ ನಮಗೆ.
ಧೈರ್ಯ ಮಾಡಿ ಕಾಲುವೆ ದಾರಿಯಲ್ಲಿ ಮುಂದೆ ಸಾಗಿದ ನಮಗೆ ಕಾಲುವೆಯನ್ನು ದಾಟುತಿದ್ದಂತೆ
ನಾವು ಅರಸಿಬಂದಿದ್ದ ಕಲ್ಲೇಶ್ವರ ದೇವಾಲಯ ಗೋಚರಿಸಿತು. ಖುಷಿಯಿಂದ ನೋಡಲು ಕಾರಿನಿಂದ ಇಳಿದ ನಮಗೆ ಎದುರಾದದ್ದು ಸುಮಾರು ಐದು ಅಡಿ ಜಲಾವೃತವಾಗಿರುವ ದೇವಾಲಯದ ಸಂಕೀರ್ಣ. ಪಾಲಿಗೆ ಬಂದಿದ್ದೇ ಪಂಚಾಮೃತವೆಂದುಕೊಂಡು.ದೇವಾಲಯದ ಎದುರುಭಾಗದಲ್ಲಿದ್ದ ಶಾಸನ ಹಾಗೂ ದೇವಾಲಯದ ಫೋಟೋಗಳನ್ನು ತೆಗೆದುಕೊಂಡು ತೃಪ್ತರಾಗಬೇಕಾಯಿತು. ಇಲ್ಲಿರುವ ಕಲ್ಲೇಶ್ವರನ ವೈಶಿಷ್ಟ್ಯ ವೆಂದರೆ ಈಶ್ವರನು ಮಯೂರಾಸನದಲ್ಲಿ ವಿರಾಜಮಾನನಾಗಿರುವುದು ಮತ್ತು ನೀಲಲೋಹಿತ(ನೀಲಿಬಣ್ಣದ ಲಿಂಗ)ನಾಗಿರುವುದು. ನೂರಾರು ಈಶ್ವರನ ಲಿಂಗವನ್ನು ನೋಡಿದ ನಮಗೆ ಈ ಲಿಂಗವು ಬಹಳ ವಿಶಿಷ್ಟ ವೆನಿಸಿತು.

Klive Special Article ದೇವಾಲಯವನ್ನು ಇತ್ತೀಚೆಗೆ ಪುನರ್ನಿರ್ಮಾಣ ಮಾಡಲಾಗಿದೆ. ಆದರೆ ವಿಷಾದಕರವಾಗಿ, ಅದರ ಸುತ್ತಮುತ್ತ ಯಾವುದೇ ನಿರ್ವಹಣೆಯ ಗುರುತು ಕಾಣಿಸಲಿಲ್ಲ — ದೇವಾಲಯದ ಸುತ್ತ ನೀರು ನಿಂತಿರುವುದು ಅದರ ಸಾಕ್ಷಿ. ದೇವಾಲಯ ಬಾಗಿಲು ಮುಚ್ಚಲ್ಪಟ್ಟಿದ್ದರೂ, ಜಾಲರಿಯ ಬಾಗಿಲಿನಿಂದ ನಾವು ಒಳಗೆ ನೋಡಿದಾಗ ಭಗವಾನ್ ಶಿವ ಮತ್ತು ಅವರ ವಾಹನ ನಂದಿಯ ಒಂದು ನೋಟ ಕಾಣಿಸಿತು.
ದೇವಾಲಯದ ವಾಸ್ತು ವಿನ್ಯಾಸವು ತಂಡಗದ ಚೆನ್ನಕೇಶವ ದೇವಾಲಯದಂತೆಯೇ ಇದೆ. ಈ ದೇವಾಲಯವನ್ನು ಹೊಯ್ಸಳರು ನಿರ್ಮಿಸಿದ್ದರು — ಅವರು ಸುಂದರ ಮತ್ತು ಸೂಕ್ಷ್ಮ ಶಿಲ್ಪಕಲೆಗೆ ನಾಂದಿಹಾಡಿದವರು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಆಶ್ಚರ್ಯಕರವಾಗಿ, ಹುಲಿಕಲ್ನ ಕಲ್ಲೇಶ್ವರ ದೇವಾಲಯವು ಇತರ ಹೊಯ್ಸಳ ದೇವಾಲಯಗಳಿಗಿಂತ ಸರಳ ಹಾಗೂ ಅಲಂಕಾರ ರಹಿತವಾಗಿದೆ.
ಹೊಯ್ಸಳರ ಪ್ರಸಿದ್ಧ ಅರಸು ಬಿಟ್ಟಿಗ, ರಾಮಾನುಜಾಚಾರ್ಯರಿಂದ ದೀಕ್ಷೆ ಪಡೆದು ವಿಷ್ಣುವರ್ಧನನೆನಿಸಿದ. (ಆಡಳಿತ: ಸು 1110-1142). ವಿಷ್ಣುವರ್ಧನನ ಆಡಳಿತದ ಕಾಲದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಹೊಯ್ಸಳ ಸಾಮ್ರಾಜ್ಯ ಇಂದಿನ ಕರ್ನಾಟಕ ರಾಜ್ಯದ ಬಲಿಷ್ಠ ಸಾಮ್ರಾಜ್ಯವಾದದ್ದಲ್ಲದೆ ಪಕ್ಕದ ರಾಜ್ಯಗಳಲ್ಲಿಯೂ ವಿಸ್ತರಿಸಿತು. ವಿಷ್ಣುವರ್ಧನನ ಕಾಲದಲ್ಲಿ ಕಲೆ ಮತ್ತು ಶಿಲ್ಪಕಲೆಗೆ ಬಹಳ ಪ್ರೋತ್ಸಾಹ ನೀಡಲಾಯಿತು. ಈತನ ಪತ್ನಿ ಮತ್ತು ಹೊಯ್ಸಳ ರಾಣಿ ಶಾಂತಲೆ ಪ್ರಸಿದ್ಧ ಭರತನಾಟ್ಯ ನರ್ತಕಿ ಮತ್ತು ಶಿಲ್ಪಕಲೆಯಲ್ಲಿ ಆಸಕ್ತಿಯಿದ್ದವಳು. ಇವಳು ಶಿವಮೊಗ್ಗೆ ಬಳ್ಳಿಗಾವಿಯವಳು. ಇವಳ ಕಾಲದಲ್ಲಿಯೇ ಹೊಯ್ಸಳ ಶಿಲ್ಪಕಲೆಯ ಅತ್ಯುನ್ನತವಾಗಿ ಮೂಡಿಬಂದವು.
ವಿಷ್ಣುವರ್ಧನನು ಹೊಯ್ಸಳ ಸಾಮ್ರಾಜ್ಯದ ರಾಜ ಎರೆಯಂಗನ ಎರಡನೇ ಮಗನಾಗಿದ್ದು, ವಿನಯಾದಿತ್ಯನ ಮೊಮ್ಮಗನಾಗಿರುತ್ತಾನೆ.ಈತನ ಪತ್ನಿ ಮತ್ತು ಹೊಯ್ಸಳ ರಾಣಿ ಶಾಂತಲೆ ಪ್ರಸಿದ್ಧ ಭರತನಾಟ್ಯ ನರ್ತಕಿ ಮತ್ತು ಶಿಲ್ಪಕಲೆಯಲ್ಲಿ ಆಸಕ್ತಿಯಿದ್ದವಳೆಂದು ಹೆಸರಾಗಿದ್ದವಳು. ಈತನಿಗೆ ಮೂರು ಜನ ಗಂಡು ಮಕ್ಕಳು (ಕುಮಾರಬಲ್ಲಾಳ,ಒಂದನೇಯ ನರಸಿಂಹ, ವಿಜಯನಾರಾಯಣ) ಮತ್ತು ಒಂದು ಹೆಣ್ಣು (ಏಚಲದೇವಿ) ಮಗಳಿದ್ದಳು. ನಮ್ಮ ಪರಂಪರೆ, ಶ್ರೇಷ್ಠ ಪರಂಪರೆ. ನಮ್ಮ ಶಿಲ್ಪಿ ಗಳು ಅಮರಶಿಲ್ಪಿಗಳು. ನಮ್ಮ ಕರ್ನಾಟಕ ಶ್ರೇಷ್ಠ ಕರ್ನಾಟಕ.
ದಿಲೀಪ್ ನಾಡಿಗ್
ಕಾರ್ಯದರ್ಶಿ
ಮಲೆನಾಡು ಇತಿಹಾಸ ಸಂಶೋಧನಾ ಮತ್ತು ಅಧ್ಯಯನ ವೇದಿಕೆ(ನೋಂ), ಶಿವಮೊಗ್ಗ.
6361114316.
ಕಾರ್ತೀಕ ದೀಪೋತ್ಸವದಲ್ಲಿ ಭಾಗಿಯಾದರೆ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಹಾಗೂ ಕಷ್ಟಗಳ ಪರಿಹಾರ- ಸಂದೇಶ್ ಉಪಾಧ್ಯ
ಕಾರ್ತಿಕ ದೀಪ ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರಕುವುದರ ಜೊತೆಗೆ ನಮ್ಮ ಕಷ್ಟಗಳು ಪರಿಹಾರವಾಗುತ್ತದೆ ಎಂದು ನಾಗಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ಸಂದೇಶ್ ಉಪಾಧ್ಯ ತಿಳಿಸಿದರು ಅವರು ಕಾರ್ತಿಕ ದೀಪ ವೈಭವದ ಅಂಗವಾಗಿ ಸ್ವಾಮಿ ವಿವೇಕಾನಂದ ಬಡಾವಣೆಯ ನಾಗ ಸುಬ್ರಮಣ್ಯ ದೇವಸ್ಥಾನ ದಲ್ಲಿ ಹಮ್ಮಿಕೊಳ್ಳಲಾದ ಕಾರ್ತಿಕ ದೀಪ ವೈಭವ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ದೀಪೋತ್ಸವದಲ್ಲಿ. ಋಗ್ವೇದ ಯಜುರ್ವೇದ ಸಾಮವೇದ ಅಥರ್ವಣ ವೇದ. ಶಾಸ್ತ್ರ ಸಂಗೀತ ಅಷ್ಟಕ ಭಜನೆ. ಹೋಮ ಹವನಗಳು ಪ್ರಸಾದ ವಿತರಣೆ ಕಾರ್ಯಕ್ರಮ ನಾಲ್ಕು ದಿನಗಳ ಕಾಲ ನಡೆಯುತ್ತದೆ ಈ- ಕಾರ್ಯಕ್ರಮದಲ್ಲಿ ಭಕ್ತರು ಹಾಗೆ ಪ್ರತಿದಿನ ಸಂಜೆ 7 ಗಂಟೆಯಿಂದ 8. 15 ರವರೆಗೆ ಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ ಎಂದು ನುಡಿದರು. ಈ ದಿನದ ಕಾರ್ಯಕ್ರಮದಲ್ಲಿ ಸಾಕಷ್ಟು ಜನ ಭಕ್ತರು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ ಸ್ವಾಮಿಯ ಕೃಪೆಗೆ ಪಾತ್ರರಾದರು . ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜೀ ವಿಜಯಕುಮಾರ್. ಶ್ರೀಮತಿ ಬಿಂದು ವಿಜಯ ಕುಮಾರ್. ಹಾಗೂ ನಾಗಸಬ್ರಹ್ಮಣ್ಯ ದೇವಸ್ಥಾನದ ಸಮಿತಿಯ ಪದಾಧಿಕಾರಿಗಳು ಭಕ್ತ ಮಹಾಶಯರು ಉಪಸ್ಥಿತರಿದ್ದರು
