Thursday, February 12, 2026
Thursday, February 12, 2026
Home Blog Page 101

Sharavati Pumped Storage Project ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರದ್ದಾಗಿಲ್ಲ- ಅಖಿಲೇಶ್ ಚಿಪ್ಪಳಿ

0

Sharavati Pumped Storage Project ಅಕ್ಟೋಬರ್ 27 2025ರಂದು ದೆಹಲಿಯಲ್ಲಿ ನಡೆದ FAC (ಫಾರೆಸ್ಟ್ ಅಡ್ವೈಸರಿ ಕಮಿಟಿ) ಸಭೆಯಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ರದ್ದು ಪಡಿಸಿಲ್ಲ. ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಮತ್ತು ವಿವರಗಳನ್ನು ಹಾಗೂ ಸಮಜಾಯಿಷಿಗಳನ್ನು ಕೇಳಿದ್ದಾರೆ ಅಷ್ಟೇ. ಕೆಪಿಸಿಎಲ್ ಮತ್ತು ಕರ್ನಾಟಕ ಸರ್ಕಾರ ಸುಳ್ಳುಗಳ ಪ್ರಮಾಣ ಕಡಿಮೆ ಮಾಡಿ; ಮತ್ತೊಂದು ವರದಿ ಸಲ್ಲಿಸಲಿದೆ. ಬಹುಶ ಮುಂದಿನ ಸಭೆಯಲ್ಲಿ FAC ಇದನ್ನು ಒಪ್ಪಿಕೊಂಡು ಅನುಮತಿ ನೀಡಬಹುದು. ಇದು ಪೂರ್ವ ನಿಯೋಜಿತ ತಂತ್ರ. ನಾನು ಸತ್ತ ಹಾಗೆ ಮಾಡುತ್ತೀನಿ; ನೀನು ಅತ್ತ ಹಾಗೆ ಮಾಡು. FACಗೆ ಎಲ್ಲಾ ಮಾಹಿತಿ ಇದೆ. ಬಹಳ ಸ್ಪಷ್ಟವಾಗಿ ಈ ಯೋಜನೆಯನ್ನು ರದ್ದು ಪಡಿಸಲು/ ಪರವಾನಿಗೆಯನ್ನು ನಿರಾಕರಿಸಲು ಬಹಳ ಸಮರ್ಥ ಕಾರಣಗಳು ಅವರ ಹತ್ತಿರವೇ ಇದೆ (ಈ ಕುರಿತು ಜನ ಸಂಗ್ರಾಮ ಪರಿಷತ್ ವತಿಯಿಂದ ದಾಖಲೆ ಸಮೇತ ಪತ್ರ ವ್ಯವಹಾರ ನಡೆಸಿದ್ದು ವೇಧ್ಯ). ಈಗ ತಡೆ ನೀಡಿರುವುದು; ಅನುಮತಿ ನೀಡುವ ಹುನ್ನಾರದ ಭಾಗದ ತಂತ್ರ. ಇದನ್ನು ಕೆಲ ಮಾಧ್ಯಮಗಳು ತಪ್ಪಾಗಿ ಬಿಂಬಿಸುತ್ತಿವೆ. Sharavati Pumped Storage Project ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರದ ತಡೆ; ಹೋರಾಟಗಾರರಿಗೆ ದೊರಕಿದ ಜಯ; ಕರ್ನಾಟಕ ಸರ್ಕಾರಕ್ಕೆ ಹಿನ್ನಡೆ; ಪಶ್ಚಿಮ ಘಟ್ಟ ಸುರಕ್ಷಿತ ಇತ್ಯಾದಿ. ಇದನ್ನು ದಯವಿಟ್ಟು ಯಾರೂ ನಂಬಬೇಡಿ. ಈ ತಡೆ ಎಂಬ ಶಬ್ದದ ಅರ್ಥವೇ ಮುಂದೆ ನಡೆ ಎಂಬುದಾಗಿದೆ (ಯೋಜನೆಗೆ ಹಸಿರು ನಿಶಾನೆ ತೋರಿಸುವ ಭಾಗವಿದು). ದಯವಿಟ್ಟು ಅರ್ಥ ಮಾಡಿಕೊಳ್ಳಿ
ನಿಮ್ಮವ.
ಅಖಿಲೇಶ್ ಚಿಪ್ಪಳಿ

ಶಿವಮೊಗ್ಗದಿಂದ ಹೊಸಪೇಟೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ‌ ಮಾರ್ಗ ಬದಲಾವಣೆ ಆದೇಶ

0

ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೈ ಓವರ್ ಇಳಿಜಾರು ಮತ್ತು ಕೂಡು ರಸ್ತೆಯನ್ನು ಸೇರುವ ಜಾಗದಲ್ಲಿ ಹೆಚ್ಚಿನ ವಾಹನಗಳ ಸಂಚಾರದಿಂದ ಹಾಗೂ ಭಾರೀ ವಾಹನಗಳ ಓಡಾಟದಿಂದ ರಸ್ತೆಯು ತೀವ್ರವಾಗಿ ಹಾನಿಗೊಂಡು, ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆಯಾಗುತ್ತಿದ್ದು, ಫ್ಲೈ ಒವರ್ ಇಳಿಜಾರು ಮುಕ್ತಾಯ ಜಾಗದಿಂದ ಮತ್ತು ಚತುಷ್ಪಥಕ್ಕೆ ಕೂಡುವ ರಸ್ತೆಯ ಜಾಗದವರೆಗೆ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ.
ಶಿವಮೊಗ್ಗದಿಂದ-ಹೊನ್ನಾಳಿ-ಹೊಸಪೇಟೆ ಕಡೆಗೆ ಸಂಚರಿಸುವ ವಾಹನಗಳು ಶಿವಮೊಗ್ಗ ನಗರ-ಎಸ್‌ಎಚ್57 ಸವಳಂಗ ರಸ್ತೆಯ ಉಷಾ ನರ್ಸಿಂಗ್ ಹೋಮ್-ಜೆಎಸ್‌ಎಸ್‌ಸಿ ಕಾಲೇಜ್ ಬಳಿ ಬಲಕ್ಕೆ ತಿರುಗಿ- ಕುವೆಂಪುನಗರ-ಶಾಂತಿನಗರದಿಂದ ರಾಜ್ಯ ಹೆದ್ದಾರಿ 25 ಕೂಡುವ ರಸ್ತೆ ಮಾರ್ಗವನ್ನು ಅನುಸರಿಸುವುದು.
ಹಾಗೂ ಹೊನ್ನಾಳಿಯಿಂದ -ಶಿವಮೊಗ್ಗ ಹೊಸಪೇಟೆ ಕಡೆಗೆ ಸಂಚರಿಸುವ ವಾಹನಗಳು ರಾಜ್ಯ ಹೆದ್ದಾರಿ 25 ಶಾಂತಿನಗರ ಕ್ರಾಸ್-ಶಾಂತಿನಗರ ಸರ್ಕಲ್‌ನಿಂದ ಎಡಕ್ಕೆ ತಿರುಗಿ-ರಾಗಿಗುಡ್ಡ ರಸ್ತೆಯಿಂದ-ಕೆಎಸ್‌ಸಿಎ ಸ್ಟೇಡಿಯಮ್ ಬಳಿ ಎಸ್‌ಎಚ್ 57 ಉಷಾ ಸರ್ಸಿಂಗ್ ಹೋಮ್- ಶಿವಮೊಗ್ಗ ನಗರಕ್ಕೆ ಸೇರುವ ರಸ್ತೆ ಮಾರ್ಗವನ್ನು ಬಳಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಸಾಗರದ ತ್ಯಾಗರ್ತಿಯಿಂದ ವ್ಯಕ್ತಿ ನಾಪತ್ತೆ, ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕಟಣೆ

0

ಸಾಗರದ ತ್ಯಾಗರ್ತಿಯ ನಿವಾಸಿ ಬಸವರಾಜ ಕೌಟುಂಬಿಕ ಕಾರಣದಿಂದ ಮಾನಸಿಕ ಅಸ್ವಸ್ಥನಾಗಿದ್ದು, ದಿ: 22-07-2024 ರಂದು ಬೆಳಿಗ್ಗೆ 7 ಗಂಟೆಗೆ ತನ್ನ ತಮ್ಮನ ಮನೆಯಿಂದ ಕಾಣೆಯಾಗಿದ್ದಾರೆ.
ಕಾಣೆಯಾದ ವ್ಯಕ್ತಿ 41 ವರ್ಷದವರಾಗಿದ್ದು, 4.5 ಅಡಿ ಎತ್ತರ, ದುಂಡನೆ ಮುಖ, ಕಪ್ಪನೆಯ ಮೈಬಣ್ಣ ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಇವರು ಮನೆಯಿಂದ ಹೋಗುವಾಗ ಬಿಳಿ ಕಾಫಿ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಲುಂಗಿ ಧರಿಸಿದ್ದು, ಕನ್ನಡ ಭಾಷೆಯನ್ನು ಮಾತನಾಡುತ್ತಾರೆ.
ಕಾಣೆಯಾದ ವ್ಯಕ್ತಿಯ ಪತ್ತೆ ಯಾರಿಗಾದರೂ ಸಿಕ್ಕಲ್ಲಿ ಆನಂದಪುರ ಪೊಲೀಸ್ ಠಾಣೆ ದೂ.ಸಂ:9480803363, ಸಾಗರ ಗ್ರಾಮಾಂತರ ವೃತ್ತ ನಿರೀಕ್ಷಕರು ದೂ.ಸಂ:9480803336, ಶಿವಮೊಗ್ಗ ಕಂಟ್ರೋಲ್ ರೂಂ ದೂ.ಸಂ: 08182-270521 ಗೆ ಸಂಪರ್ಕಿಸಬಹುದೆAದು ಅನಂದಪುರ ಪೊಲೀಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

Children’s Day ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿಗೆ ಜಿಲ್ಲೆಯಿಂದ ಆಯ್ಕೆಯಾದ ಪ್ರತಿಭಾಶಾಲಿ ಮಕ್ಕಳಿಗೆ ಸ್ಮರಣಿಕೆಗಳ ವಿತರಣೆ

0

Children’s Day ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು ವತಿಯಿಂದ ರಾಜ್ಯ ಮಟ್ಟದಲ್ಲಿ ನಡೆಯುವ ಕಲಾಶ್ರೀ ಪ್ರಶಸ್ತಿ ಸ್ಪರ್ಧೆಗೆ ಜಿಲ್ಲಾ ಮಟ್ಟದಿಂದ ಮಕ್ಕಳನ್ನು ಆಯ್ಕೆ ಮಾಡುವ ಸಲುವಾಗಿ ಗುರುವಾರ ಜಿಲ್ಲೆಯ ವಿವಿಧ ಶಾಲೆಯ ಮಕ್ಕಳಿಗೆ ವಿವಿಧ ಪಠ್ಯೇತರ ಚಟುವಟಿಕೆಗಳಾದ ಸೃಜನಾತ್ಮಕ ಕಲೆ, ಬರವಣಿಗೆ, ಪ್ರದರ್ಶನ ಹಾಗೂ ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್.ಸAತೋಷ್ ಸ್ಮರಣಿಕೆ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಿದರು.
ಸೃಜನಾತ್ಮ ಕಲೆ (ಚಿತ್ರಕಲೆ, ಕರಕುಶಲ ಕಲೆ, ಜೇಡಿ ಮಣ್ಣಿನ ಕಲೆ) ಸ್ಪರ್ಧೆಯಲ್ಲಿ ಮೇರಿ ಇಮ್ಯಾಕ್ಯುಲೇಟ್ ಶಾಲೆಯ ಖುಷಿ.ಆರ್ ಪ್ರಥಮ, ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್‌ನ ಆರ್ನಾ.ಎಸ್ ದ್ವಿತೀಯ, ಬಾಲಕರ ಬಾಲ ಮಂದಿರದ ಸಿದ್ದಾರ್ಥ್ ತೃತೀಯ ಸ್ಥಾನ ಪಡೆದಿದ್ದಾರೆ.
ಸೃಜನಾತ್ಮ ಪ್ರದರ್ಶನ ಕಲೆ ಸ್ಪರ್ಧೆಯಲ್ಲಿ ಅನನ್ಯ ವಿದ್ಯಾಪೀಠದ ಗ್ಲೋರಿಯಾ ರಿಜಾರಿಯೋ ಪ್ರಥಮ, ಹೊಸನಗರ ವಿದ್ಯಾಭಾರತಿ ಶಾಲೆಯ ಆರ್ವಿ ಎಲ್.ಹೆಚ್ ದ್ವಿತೀಯ, ಗಾಜನೂರಿನ ಕರ್ನಾಟಕ ಪ್ರೌಢಶಾಲೆಯ ಅನುಷಾ ತೃತೀಯ ಸ್ಥಾನ ಪಡೆದಿದ್ದಾರೆ.
ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ಗಾಜನೂರಿನ ಕರ್ನಾಟಕ ಪ್ರೌಢಶಾಲೆಯ ರಶ್ಮಿತಾ.ಎಸ್ ಪ್ರಥಮ, ಗಾಡಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಯಶವಂತ ವೈ.ಆರ್ ದ್ವಿತೀಯ, ಗೋಪಾಳ ಹಿರಿಯ ಪ್ರಾಥಮಿಕ ಶಾಲೆಯ ಪೂರ್ಣಿಮಾ.ಆರ್ ತೃತೀಯ ಸ್ಥಾನ ಪಡೆದಿದ್ದಾರೆ.
Children’s Day ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಯಲ್ಲಿ ಶಿವಮೊಗ್ಗ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಸಾನಿಧ್ಯ ಪ್ರಥಮ, ರಾಮಯ್ಯ ಸರ್ವೋದಯ ಪ್ರೌಢಶಾಲೆಯ ಲಾವಣ್ಯ.ಸಿ.ಆರ್, ಗೋಪಾಳ ಹಿರಿಯ ಪ್ರಾಥಮಿಕ ಶಾಲೆಯ ಮೊಹಮದ್ ಇಬ್ರಾಹಿಂ ತೃತೀಯ ಸ್ಥಾನ ಪಡೆದಿದ್ದು, ಪ್ರಥಮ ಮತ್ತು ದ್ವಿತೀಯ ಶ್ರೇಯಾಂಕದಲ್ಲಿ ವಿಜೇತರಾದ ಮಕ್ಕಳನ್ನು ರಾಜ್ಯಮಟ್ಟದಲ್ಲಿ ನಡೆಯುವ ಕಲಾಶ್ರೀ ಪ್ರಶಸ್ತಿ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು.

Rotary Club Shivamogga ರೋಟರಿ ಫೌಂಡೇಷನ್ ಗೆ ನೀಡಿದ ದೇಣಿಗೆ ವಿಶ್ವ ಮನುಕುಲದ ಸೇವೆಗೆ ವಿನಿಯೋಗ- ರವಿಶಂಕರ್ ದಾಕೋಜು

0

Rotary Club Shivamogga ಮನುಕುಲದ ಸೇವೆಯಲ್ಲಿ ಮುಂಚೂಣಿಯಲ್ಲಿ ಸಂಸ್ಥೆ ರೋಟರಿ. ವಿಶ್ವಾದ್ಯಂತ 206 ದೇಶಗಳಲ್ಲಿ ಜಾತಿ, ಮತ, ಧರ್ಮ ಬೇಧವಿಲ್ಲದೇ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ನಿಯೋಜಿತ ಜಿಲ್ಲಾ ಗವರ್ನರ್ ರವಿಶಂಕರ್ ದಾಕೋಜು ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ಸಾರಥ್ಯದಲ್ಲಿ ನಗರದ ಶಿವಮೊಗ್ಗ ಅರೆಕಾನಟ್ ಮರ್ಚೆಂಟ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ರೋಟರಿ ದತ್ತಿನಿಧಿ ಮತ್ತು ಪೊಲಿಯೋ ಪ್ಲಸ್ ಕುರಿತ ಸಮೃದ್ಧಿ 2025 ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ರೋಟರಿ ಫೌಂಡೇಷನ್‌ಗೆ ನೀಡಿದ ದೇಣಿಗೆಯು ವಿಶ್ವದ ಮನುಕುಲದ ಸೇವೆಗೆ ವಿನಿಯೋಗಿಸಲಾಗುತ್ತದೆ. ಪಾರದರ್ಶಕತೆಯಿಂದ ಹಣದ ಉಪಯೋಗ ಮಾಡಲಾಗುತ್ತದೆ. ದೇಣಿಗೆ ನೀಡಿದ ಹಣ ಕೆಲ ವರ್ಷಗಳಲ್ಲಿ ಪುನಃ ಸಮುದಾಯ ಯೋಜನೆಗಳಿಗೆ ಸಿಗುತ್ತದೆ. ರೋಟರಿ ಫೌಂಡೇಷನ್‌ಗೆ ಕೋಟ್ಯಂತರ ರೂ. ದೇಣಿಗೆ ನೀಡಲಾಗಿದೆ ಎಂದು ತಿಳಿಸಿದರು.

ಬಡತನದಲ್ಲಿರುವ ಸಮುದಾಯದ ಮಕ್ಕಳ ವಿದ್ಯಾಭ್ಯಾಸ ಮತ್ತು ಪರಿಸರ ಸಂರಕ್ಷಣೆ ಸೇರಿದಂತೆ ಸಮಾಜಮುಖಿ ಕಾರ್ಯಗಳಿಗೆ ದೇಣಿಗೆ ಬಳಸಲಾಗುತ್ತಿದೆ. ಸಿದ್ದಾರ್ಥ ಸ್ಮರಣಾರ್ಥ ದತ್ತಿನಿಧಿ ಸ್ಥಾಪಿಸಿ 45 ಲಕ್ಷ ರೂ. ಹೊಂದಿಸಲಾಗಿದೆ ಎಂದು ಹೇಳಿದರು.

ನಿಯೋಜಿತ ಜಿಲ್ಲಾ ಗವರ್ನರ್ ರವಿಶಂಕರ್ ದಾಕೋಜು ಅವರು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ 100 ಕೋಟಿ ರೂ. ದೇಣಿಗೆ ನೀಡಿದ್ದು, ಪ್ರಸ್ತುತ ವಾಸದ ಮನೆ ಹೊಂದಿದ್ದೇನೆ. ಈವರೆಗೂ ಗಳಿಸಿದ ಹಣವನ್ನು ಉತ್ತಮ ಉದ್ದೇಶಕ್ಕೆ ನೀಡಿದ್ದೇನೆ ಎಂದು ತಿಳಿಸಿದರು.

Rotary Club Shivamogga ರೋಟರಿ 3182ರ ಜಿಲ್ಲೆಯಿಂದ ಸಮುದಾಯ ಸೇವೆಗೆ 5 ಕೋಟಿ ರೂ. ನೀಡುವ ಸಂಕಲ್ಪ ಮಾಡಿದ್ದು, ಈವರೆಗೂ ಸಂಗ್ರಹವಾದ 1 ಕೋಟಿ ರೂ.ವರೆಗೆ ದೇಣಿಗೆ ನೀಡಿದ ರೋಟರಿ ಸದಸ್ಯರನ್ನು ಸನ್ಮಾನಿಸಲಾಯಿತು. ರೋಟರಿ ಜಿಲ್ಲೆ 3182ರ ವ್ಯಾಪ್ತಿಯ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಭಾಗದ 700ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು.
ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ, ಸಮಾವೇಶದ ಅಧ್ಯಕ್ಷ ಚಂದ್ರಹಾಸ್ ಪಿ ರಾಯ್ಕರ್, ಮಾಜಿ ಜಿಲ್ಲಾ ಗವರ್ನರ್ ಸಾಂಬಶಿವ ರಾವ್ ಪತಿಬಂದ್ಲ, ಡಾ. ನಾರಾಯಣ್, ಡಾ. ವಿನಯಕುಮಾರ್, ರಾಜಾರಾಮ್ ಭಟ್ ಬಿ, ಡಿ.ಎಸ್.ರವಿ, ಬಿ.ಎನ್.ರಮೇಶ್, ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣಗೌಡ ಬಿ, ವಲಯ 10ರ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ಪ್ರಮೋಷನ್ ಚೇರ್ಮನ್ ಜಿ.ವಿಜಯಕುಮಾರ್, ರೇಖಾ ಪಾಲಾಕ್ಷ, ಪದ್ಮಿನಿ ವಸಂತ ಇದ್ದರು.

ಸರ್ಕಾರದ ಪ್ರಗತಿ ಯೋಜನೆಗಳು ಬಡಜನರಿಗೆ ತಲುಪಬೇಕು- ಮನೋಹರ್

0

ಸರ್ವೋದಯ ಎಂದರೆ ಎಲ್ಲರ ಪ್ರಗತಿ. ವ್ಯಕ್ತಿಯ ಒಳಿತು ಎಲ್ಲರ ಒಳಿತಿನಲ್ಲಿ ಅಡಕವಾಗಿದೆ. ಮಹಾತ್ಮ ಗಾಂಧಿ ಅವರ ಬೋಧನೆಗಳು ಸರ್ವೋದಯ ತತ್ವಗಳ ಸಾರ್ವತ್ರಿಕ ಪ್ರಸ್ತುತತೆಯನ್ನು ಹೇಳುತ್ತದೆ. ಸಾಮಾಜಿಕ ನ್ಯಾಯ, ಸಮಾನತೆ , ಸಾಮಾಜಿಕ, ಆರ್ಥಿಕ ಮತ್ತು ನೈತಿಕ ಸ್ವಾತಂತ್ರ‍್ಯ ಸಾಧಿಸುವುದು ಎಂದು ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಮನೋಹರ್ ಹೇಳಿದರು.

ಮಹಾತ್ಮ ಗಾಂಧೀಜಿ ಅವರ ಮಾಸ ಪ್ರಯುಕ್ತ ರಾಜ್ಯ ಸರ್ವೋದಯ ಮಂಡಳಿ ರಾಜ್ಯದ್ಯಂತ ಎಲ್ಲಾ ಶಾಲಾ ಕಾಲೇಜುಗಳು ಹಾಗೂ ಸಮುದಾಯ ಸಂಸ್ಥೆಗಳಲ್ಲಿ ಹಮ್ಮಿಕೊಳ್ಳುತ್ತಿರುವ ಗಾಂಧಿ ಚಿಂತನೆ ಕುರಿತು ಜಾಗೃತಿ, ಸಂವಾದ ಭಾಷಣ ಸ್ಪರ್ಧೆ ಕಾರ್ಯಕ್ರಮದ ಅಂಗವಾಗಿ ಮತ್ತೂರಿನ ಶಾರದ ವಿಲಾಸ ಪ್ರೌಢಶಾಲೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಧಿಕಾರದ ರಾಜಕೀಯದ ಬದಲಿಗೆ ಸಹಕಾರ ರಾಜಕೀಯವನ್ನು ಉತ್ತೇಜಿಸುವುದು. ಗ್ರಾಮ ಸ್ವಾವಲಂಬನೆಯ ಮೇಲೆ ಗಮನಹರಿಸುವುದು. ಸಾಮೂಹಿಕ ಯೋಗಕ್ಷೇಮ, ದುಡಿಮೆಯಲ್ಲಿ ಘನತೆ, ಸಮಾನ ಸಂಪತ್ತು ಹಂಚಿಕೆ ಮತ್ತು ಸಮುದಾಯ ಸ್ವಾವಲಂಬನೆಗೆ ಒತ್ತು ನೀಡುತ್ತದೆ. ಒಟ್ಟಾರೆಯಾಗಿ ಮಾನವೀಯತೆ ಮತ್ತು ಪ್ರಪಂಚದ ಸಮಗ್ರ ಕಲ್ಯಾಣದ ಕಡೆಗೆ ಆಶಯ ಹೊಂದಿದೆ ಎಂದು ತಿಳಿಸಿದರು.
ಎಲ್ಲಾ ವೃತ್ತಿಗಳು ಸಮಾನ ಮೌಲ್ಯವನ್ನು ಹೊಂದಿವೆ. ಶ್ರಮದಾಯಕ ಜೀವನವು ಬದುಕಲು ಯೋಗ್ಯವಾದ ಜೀವನವಾಗಿದೆ. ಸರ್ಕಾರದ ಪ್ರಗತಿಯ ಪ್ರಯೋಜನಗಳು ಸಮಾಜದ ಬಡ ಜನರಿಗೆ ತಲುಪಬೇಕು ಎಂದರು.

ರಾಜ್ಯ ಸರ್ವೋದಯ ಮಂಡಳಿ ರಾಜ್ಯಾಧ್ಯಕ್ಷ ಡಾ. ಎಚ್.ಎಸ್.ಸುರೇಶ್ ಮಾತನಾಡಿ, ಸರ್ವೋದಯ ಮಂಡಳಿ ಉದ್ಡೇಶ ಸಾಮಾಜಿಕ ನ್ಯಾಯ, ಸಮಾನತೆ, ಮತ್ತು ಅಹಿಂಸೆಯನ್ನು ಉತ್ತೇಜಿಸುವ ಮೂಲಕ ಎಲ್ಲರ ಕಲ್ಯಾಣವನ್ನು ಸಾಧಿಸುವುದು. ಇದು ಸಾಮೂಹಿಕ ಯೋಗಕ್ಷೇಮ ಮತ್ತು ಸ್ವಾವಲಂಬನೆಯ ಮೇಲೆ ಒತ್ತು ನೀಡುತ್ತದೆ ಎಂದರು.

ಸರ್ವೋದಯ ಮಂಡಳಿ ಜಿಲ್ಲಾ ಕಾರ್ಯದರ್ಶಿ ಜಿ.ವಿಜಯ್ ಕುಮಾರ್ ಮಾತನಾಡಿ, ಮಹಾತ್ಮ ಗಾಂಧಿ ಅವರ ಸತ್ಯ, ಶಾಂತಿ ಮತ್ತು ಸರಳತೆ, ಅಹಿಂಸೆ, ಸ್ವರಾಜ್ಯ ಮತ್ತು ಸ್ವದೇಶಿ ಬೋಧನೆಗಳ ಮೂಲಕ ಬದುಕಲು ಶಾಲಾ ಮಕ್ಕಳನ್ನು ಪ್ರೇರೇಪಿಸಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಘುನಾಥ್ ಮಾತನಾಡಿ, ಗಾಂಧಿ ಆದರ್ಶಗಳು ಮರೆಯಾಗುತ್ತಿರುವ ಆಗುತ್ತಿರುವ ಸಂದಂರ್ಭದಲ್ಲಿ ಮಕ್ಕಳಲ್ಲಿ ಗಾಂಧೀಜಿ ಅವರ ಸರ್ವೋದಯ ತತ್ವದ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಉಪಯುಕ್ತ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೋದಯ ಮಂಡಳಿಯ ಸದಸ್ಯರಾದ ಬಸವರಾಜಪ್ಪ, ಶಾರದ ವಿಲಾಸ ಪ್ರೌಢಶಾಲೆಯ ಅನೇಕ ಶಿಕ್ಷಕರು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳು ಭಾಗವಹಿಸಿದ್ದರು. ಮಕ್ಕಳಿಗೆ ಸ್ಫರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು.

Thawar Chand Gehlot ಉಪರಾಷ್ಟ್ರಪತಿಗಳಿಗೆ ಆತ್ಮೀಯ ಬೀಳ್ಗೊಡುಗೆ ನೀಡಿದ ಮಾನ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

0

Thawar Chand Gehlot ಕರ್ನಾಟಕ ರಾಜ್ಯದ ಒಂದು ದಿನದ ಪ್ರವಾಸವನ್ನು ಮುಗಿಸಿ, ನವದೆಹಲಿಗೆ ಹಿಂದಿರುಗಳು ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ಗೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.

Thawar Chand Gehlot ಈ ಸಮಯದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಎಂ.ಎ. ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಕೃಷಿ ಮೇಳಕ್ಕೆ ಭೇಟಿ ನೀಡಿ ಸಂತೋಷಪಟ್ಟಧಾರವಾಡ ಕೃಷಿ ವಿವಿ ಕುಲಪತಿ ಡಾ.ಪಾಟೀಲ್

0

ಮೂರನೇ ದಿನದ ಕೃಷಿ ಮತ್ತು ತೋಟಗಾರಿಕಾ ಮೇಳ 25 ಯಶಸ್ವಿಯಾಗಿ ಸಾಗುತ್ತಿದ್ದು ರೈತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ದಿನ ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪಾಟೀಲ್ ಸರ್ ಅವರು ಮೇಳದ ಕೃಷಿ ವಿಜ್ಞಾನ ಕೇಂದ್ರದಲ್ಲಿರುವ ಪ್ರಾತ್ಯಕ್ಷಿಕ ತತ್ವಗಳಿಗೆ ಭೇಟಿ ನೀಡಿ ಅಣಬೆ, ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರು ಮಾಡುವುದು ಮತ್ತು ಮತ್ತು ಕೃಷಿ ವಿಜ್ಞಾನ ಕೇಂದ್ರದ ಹೂ ಮತ್ತು ತರಕಾರಿ ಪ್ರಾತ್ಯಕ್ಷತೆಗೆ ಭೇಟಿ ನೀಡಿದರು. ಹಾಗೆಯೇ ಕೃಷಿ ವಿಜ್ಞಾನ ಕೇಂದ್ರದಿಂದ ಉದ್ಘಾಟನೆಗೊಂಡಿರುವ ಕೃಷಿ ಆನ ಕೇಂದ್ರಕ್ಕೂ ಭೇಟಿ ನೀಡಿ ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳು ಪ್ರಶಂಸೆಯನ್ನು ವ್ಯಕ್ತಪಡಿಸಿದರು.

Choudeshwari Temple ಶಿವಮೊಗ್ಗ ಚಾಲುಕ್ಯ ನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ಚಿಂತನ ಕಾರ್ತೀಕ ಕಾರ್ಯಕ್ರಮ

0

Choudeshwari Temple ಶಿವಮೊಗ್ಗ ನಗರದ ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಬಸವಕೇಂದ್ರ ಶಿವಮೊಗ್ಗ ಇವರ ಸಹಯೋಗದಲ್ಲಿ ನ.11ರ ಮಂಗಳವಾರದಂದು ಸಂಜೆ 6:30ರಿಂದ ಚಿಂತನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ದಿವ್ಯ ಸಾನಿಧ್ಯವನ್ನು ಶ್ರೀ ಮ.ನಿ.ಪ್ರ. ಡಾ. ಬಸವ ಮರುಳಸಿದ್ದ ಸ್ವಾಮಿಗಳು, ಶ್ರೀ ಬಸವತತ್ತ್ವ ಪೀಠ, ಚಿಕ್ಕಮಗಳೂರು, ಬಸವಕೇಂದ್ರ ಶಿವಮೊಗ್ಗ ಇವರು ವಹಿಸಲಿದ್ದಾರೆ.
ಅಧ್ಯಕ್ಷತೆಯನ್ನು ಶರಣ ಎನ್.ಗಂಗಾನಾಯ್ಕ, ಅಧ್ಯಕ್ಷರು ಶ್ರೀ ಚೌಡೇಶ್ವರಿ ದೇವಸ್ಥಾನ ಚಾಲುಕ್ಯನಗರ ಇವರು ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಹಿರಿದು ಕಿರಿದೆಂಬ ಶಬ್ದವಡಗಿದರೆ ಆತನೇ ಶರಣ ಎಂಬ ವಿಷಯದು ಕುರಿತು ಶ್ರೀ ಬಸವ ಭೃಂಗೀಶ್ವರ ಸ್ವಾಮಿಗಳು, ಬಿ.ಕೋಡಿಹಳ್ಳಿ ಇವರಿಂದ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.
Choudeshwari Temple ಮುಖ್ಯಅತಿಥಿಗಳಾಗಿ ಕೆ.ಶೇಖರ, ಎ.ಎಸ್.ನಾರಾಯಣ, ಟಿ.ಎಸ್.ಸಿದ್ದೇಶ್, ಜಿ.ಎಸ್.ಅನಂತ ಇವರು ಆಗಮಿಸಲಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಶ್ರೀ ಚೌಡೇಶ್ವರಿ ದೇವಸ್ಥಾನ ಆಡಳಿತ ಮಂಡಳಿ ಕೋರಿದೆ.

DVS College of Arts, Science and Commerce ಕನಕದಾಸರು, ಸಮಾನತೆಯ ಸಮಾಜದ ಕನಸು ಕಂಡು ಜಾಗೃತಿ ಮೂಡಿಸಿದರು- ಡಾ.ಎಂ.ವೆಂಕಟೇಶ್

0

DVS College of Arts, Science and Commerce ಸಂತ ಶ್ರೇಷ್ಠ ಕನಕದಾಸರು ಕೀರ್ತನೆಗಳಲ್ಲಿ ನೀಡಿರುವ ಸಂದೇಶಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಸನ್ಮಾರ್ಗದಲ್ಲಿ ಜೀವನ ಮುನ್ನಡೆಸಬೇಕು ಎಂದು ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಕನಕ ನಮಗೆ ಜಾತಿಯಿಂದ ಮುಖ್ಯವಾಗಬಾರದು. ಅವರ ನಡೆ, ನುಡಿ, ಅವರ ಕೀರ್ತನೆಗಳನ್ನು ಸೂಕ್ಷ್ಮವಾಗಿ ಅರ್ಥೈಸಿಕೊಳ್ಳಬೇಕು. ಸಮಾನತೆಯ ಸಮಾಜದ ಕನಸು ಕಂಡು ಜಾಗೃತಿ ಮೂಡಿಸಿದರು ಎಂದು ತಿಳಿಸಿದರು.

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಮೋಹನ್‌ಕುಮಾರ್ ಮಾತನಾಡಿ, ಕನಕದಾಸರು ಒಬ್ಬ ಸಂತ ಕವಿಯಾಗಿದ್ದು, ಸಮಾಜದ ಅಂಕು ಡೊಂಕುಗಳನ್ನು ತಿದ್ದಿದ ಮಹಾತ್ಮರು ಎಂದು ತಿಳಿಸಿದರು.

ಅಲ್ ಮೊಹಮ್ಮದ್ ಬಿಎಡ್ ಕಾಲೇಜಿನ ಪ್ರಾಚಾರ್ಯ ಡಾ. ಮೋಹನ್ ಎಸ್ ಮಾತನಾಡಿ, ನಮ್ಮ ಅರಿವಿನ ವಿಸ್ತಾರ ಮಾಡಿದವರಲ್ಲಿ ದಾಸಶ್ರೇಷ್ಠರು ಕನಕರು. ಇವರ ಸಾಹಿತ್ಯವು ಭಿನ್ನವಾಗಿದ್ದು ನಮ್ಮ ತಿಳುವಳಿಕೆ ನವಿಕರಿಸುತ್ತದೆ ಎಂದು ಹೇಳಿದರು. ಪತ್ರಕರ್ತ ಗಣೇಶ್ ಬಿಳಗಿ ಮಾತನಾಡಿ, ಕನಕದಾಸರ ಸಾಮಾಜಿಕ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಯೋಜಕ ಎನ್.ಕುಮಾರಸ್ವಾಮಿ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಕೇತನಾ ಆರ್ತಿ, ರಾಜೀವ್, ಕನ್ನಡ ವಿಭಾಗದ ಡಾ. ಡಿ.ಬಿ.ಶಿವರುದ್ರಪ್ಪ, ಡಾ. ಎಸ್.ಕೆ.ಮಂಜುನಾಥ್ ಉಪಸ್ಥಿತರಿದ್ದರು.

DVS College of Arts, Science and Commerce ಕನಕದಾಸರ ಕೀರ್ತನೆಗಳನ್ನು ವಿದ್ಯಾರ್ಥಿಗಳು ಮತ್ತು ಬೋಧಕೇತರ ವರ್ಗದವರು ಹಾಡಿದರು. ಸಹಾಯಕ ಪ್ರಾಧ್ಯಾಪಕರಾದ ಅಭಿನಯ ಮತ್ತು ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ ಸ್ವಾಗತಿಸಿದರು. ರಮ್ಯಾ ವಂದನಾರ್ಪಣೆ ನಡೆಸಿಕೊಟ್ಟರು.