Thursday, February 12, 2026
Thursday, February 12, 2026
Home Blog Page 103

ಶಿವಮೊಗ್ಗದಲ್ಲಿ ಆಸ್ಪತ್ರೆಗಳಿಂದ ರಸ್ತೆ, ಫುಟ್ ಪಾತ್ ಒತ್ತುವರಿ. ಸೂಕ್ತ ಕ್ರಮಕ್ಕೆ ಮನವಿ

0

ಶಿವಮೊಗ್ಗ ನಗರದ ಹೃದಯ ಭಾಗದಲ್ಲಿನ ಕನ್ಸರ್ವೆನ್ಸಿ ಜಾಗದ ಸದ್ಬಳಕೆ ಹಾಗೂ ಆಸ್ಪತ್ರೆಗಳು ರಸ್ತೆ ಮತ್ತು ಫುಟ್‌ಪಾತ್‌ ಒತ್ತುವರಿ ಮಾಡಿಕೊಂಡಿರು ವುದರ ಕುರಿತು ಸಮಾಜ ಸೇವಕ, ಸ್ಥಳೀಯ ಪತ್ರಿಕೆಯ ಜಾಹಿರಾತು ವ್ಯವಸ್ಥಾಪಕರೂ ಆದ ಕಾಯಕಯೋಗಿ ಬಿ.ಚನ್ನಬಸಪ್ಪ ಅವರು ನಗರಪಾಲಿಕೆಯ ಆಯುಕ್ತರನ್ನು ಒತ್ತಾಯಿಸಿದ್ದಾರೆ.

ನಗರದ ಹಲವು ಸಮಸ್ಯೆ ಗಳ ಕುರಿತಾಗಿ ಸಾರ್ವಜನಿಕ ಅಭಿಯಾನವೊಂದನ್ನು ಆರಂಭಿಸಿರುವ ಅವರು ಸಮಸ್ಯೆಗಳ ಕುರಿತು ವಿವರವಾದ ಮಾಹಿತಿ, ಸ್ಥಳದ ಹಾಗೂ ಕಾರಣಕರ್ತರ ಕುರಿತು ವಿವರವಾದ ಮಾಹಿತಿಯನ್ನು ಫೋಟೋ ಸಮೇತ ಸಂಬಂಧಿಸಿದವರಿಗೆ ತಲುಪಿಸಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸುವುದಲ್ಲದೆ, ಕಾರ್ಯಪೂರ್ಣಗೊಳ್ಳುವವರೆಗೂ

ಸಂಬಂಧಿಸಿದವರ ಜೊತೆ ನಿರಂತರವಾಗಿ ಸಂಪರ್ಕ ಸಾಧಿಸುವ ಅಭಿಯಾನ ಇದಾಗಿದೆ ಎಂದು ಕಾಯಕಯೋಗಿ ಚನ್ನಬಸಪ್ಪ ತಿಳಿಸಿದ್ದಾರೆ.

ನಗರದ ಮಧ್ಯಭಾಗದಲ್ಲಿ ಹಲವಾರು ದೊಡ್ಡ ದೊಡ್ಡ ಆಸ್ಪತ್ರೆಗಳು ಇದ್ದು, ಈ ಆಸ್ಪತ್ರೆಗಳು ಫುಟ್‌ಪಾತ್ ಅನ್ನು ಆಕ್ರಮಿಸಿಕೊಂಡು ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಉಂಟುಮಾಡಿದ್ದಾರೆ. ಕೆಲವು ಕಡೆ ಫುಟ್‌ಪಾತ್ ಅನ್ನು ಎತ್ತರಕ್ಕೆ ಏರಿಸಿ ಆಸ್ಪತ್ರೆಯ ವೈದ್ಯರ ಕಾರುಗಳನ್ನು ಮಾತ್ರ ನಿಲ್ಲಿಸುತ್ತಿದ್ದು, ಉಳಿದವರಿಗೆ ನಿರಾಕರಿಸುತ್ತಿದ್ದಾರೆ. ಇಲ್ಲಿ ಸರಪಳಿ ಹಾಕಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಇದರ ಬದಲಿಗೆ ಆಸ್ಪತ್ರೆ ಸಮೀಪದಲ್ಲಿ ಹಲವಾರು ಕಡೆಗಳಲ್ಲಿ ಇರುವ ಕನ್ಸರ್ ವೆನ್ಸಿಗಳನ್ನು ಈ ಆಸ್ಪತ್ರೆಗಳು ತಮ್ಮ ಉಸ್ತುವಾರಿಗೆ ಪಡೆದು, ಇವುಗಳನ್ನು ಅಭಿವೃದ್ಧಿಪಡಿಸಿ ಅಲ್ಲಿ ಸಾರ್ವಜನಿಕ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಕೆಲವು ಕಡೆಗಳಲ್ಲಿ ಸಂಚಾರಕ್ಕೆ ಅನುಕೂಲವಾಗುವಂತೆ ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದ್ದಾರೆ
ರಕ್ಷಣಾ ಇಲಾಖೆಯ ನೆರವಿನೊಂದಿಗೆ ನಗರ ಪಾಲಿಕೆಯು ಈ ಸಮಸ್ಯೆ ಗಳನ್ನು 15 ದಿನಗಳ ಒಳಗಾಗಿ ಪರಿಹರಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.

ಕೆಲವು ಕಡೆ ರಸ್ತೆಗಳಲ್ಲಿ ಹಣ್ಣು ಮತ್ತು ತರಕಾರಿ ವ್ಯಾಪಾರ ಮಾಡುವವರು ರಸ್ತೆಗಳನ್ನು ಅತಿಕ್ರಮಿಸಿಕೊಂಡು ಸಾರ್ವಜನಿಕರ ಓಡಾಟಕ್ಕೆ ಅಡ್ಡಿ ಉಂಟು ಮಾಡುತ್ತಿದ್ದಾರೆ. ಆಗಾಗ್ಗೆ ಸಂಚಾರ ಜಾಮ್ ಆಗುತ್ತಿದೆ. ಹೀಗಾಗಿ ಇವರನ್ನು ಇಲ್ಲಿಂದ ತೆರವುಗೊಳಿಸಿ ಅವರಿಗೂ ಸೂಕ್ತವಾದ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸಾರ್ವಜನಿಕರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದ್ದಾರೆ.

CM Siddharamaiah ರೈತ ಮುಖಂಡರೊಡನೆ ಸರ್ಕಾರದ ಚರ್ಚೆ, ಕಬ್ಬು ಟನ್ ಒಂದಕ್ಕೆ ₹3300 ಘೋಷಣೆ

0

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತಂತೆ ಸಂಬಂಧಪಟ್ಟ ರೈತ ಮುಖಂಡರುಗಳೊಂದಿಗೆ ಸಭೆ ನಡೆಯಿತು.

ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಪ್ರತಿ ಟನ್ ಗೆ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳಿಂದ ಹೆಚ್ಚುವರಿ ಯಾಗಿ 50 ರೂ. ಕೊಡಿಸುವ ಭರವಸೆಯೊಂದಿಗೆ ಹೋರಾಟ ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿದೆ.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಗಬೇಕೆಂದು ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರನ್ನು ಕೋರಲಾಗಿದೆ. ರೈತರು ಪ್ರತಿಭಟನೆ ಹಿಂಪಡೆದು ಕಾನೂನು ವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

CM Siddharamaiah ಈ ಸಭೆಯಲ್ಲಿ, ಸಚಿವರಾದ ಎಚ್.ಕೆ ಪಾಟೀಲ, ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ, ಸತೀಶ್ ಜಾರಕಿಹೊಳಿ, ಆರ್.ಬಿ. ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ರೈ ಮುಖಂಡರುಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Karnataka Working Journalists Association ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ವೈದ್ಯ ಆಯ್ಕೆ. ಪ್ರಧಾನ ಕಾರ್ಯದರ್ಶಿಯಾಗಿ ಆರ್.ಎಸ್.ಹಾಲಸ್ವಾಮಿ

0

Karnataka Working Journalists Association ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ನಮ್ಮ ನಾಡು ಪತ್ರಿಕೆಯ ವರದಿಗಾರ ಹೆಚ್. ಯು. ವೈದ್ಯನಾಥ್ (ವೈದ್ಯ), ಪ್ರಧಾನ ಕಾರ್ಯದರ್ಶಿಯಾಗಿ ದೂರದರ್ಶನ ಚಂದನ ವಾಹಿನಿ ವರದಿಗಾರ ಆರ್. ಎಸ್. ಹಾಲಸ್ವಾಮಿ ಹಾಗೂ ರಾಜ್ಯ ಸಮಿತಿಯ ನಿರ್ದೇಶಕರಾಗಿ ನಮ್ಮ ನಾಡು ಪತ್ರಿಕೆಯ ಸಂಪಾದಕ ಕೆ. ವಿ. ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಸಮಿತಿಯ ನಿರ್ದೇಶಕ ಸ್ಥಾನಕ್ಕೆ ಶಿಕಾರಿಪುರದ ನಮ್ಮ ಕನ್ನಡ ನಾಡು ಪತ್ರಿಕೆಯ ರಾಜರಾವ್ ಎಂ. ಜಾದವ್‌ರವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ಚುನಾವಣಾಧಿಕಾರಿ ಶ್ರೀನಿವಾಸ್‌ರವರು ಘೋಷಿಸಿದ್ದಾರೆ.

ಹೊಸ ತಲೆಮಾರಿನ ಯುವಜನತೆಗೆ ಉಪಯುಕ್ತ ಪುಸ್ತಕ- ಪ್ರೊ.ಶ್ರೀಕಂಠ ಕೂಡಿಗೆ

0

ಶಿವಮೊಗ್ಗದ ಸಾಹಿತಿ ಆರ್.ಶೇಖರ್ ಬರೆದ ಪುಸ್ತಕ (ವ್ಯಕ್ತಿ ಚಿತ್ರಗಳು )”ಚರಿತ್ರೆಯ ಪುಟಗಳಿಂದ.”ಇದರಲ್ಲಿ 53 ಲೇಖನಗಳಿವೆ. ಈ ಪುಸ್ತಕದ ಬಿಡುಗಡೆಯು ತಾ.6.11.2025 ರಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಜರುಗಿತು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಾಹಿತಿ ಪ್ರೊ.ಕೆ.ಶ್ರೀಕಂಠ ಕೂಡಿಗೆ ಅವರು “ಇದೊಂದು ಉಪಯುಕ್ತ ಪುಸ್ತಕ.ವಿಶೇಷವಾಗಿ ಹೊಸ ತಲೆಮಾರಿನ ಯುವಕರಿಗೆ ಹೆಚ್ಚು ಉಪಯೋಗವಾಗುತ್ತ ದೆ.
ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಲು, ತಿಳುವಳಿಕೆ ಜಾಸ್ತಿಮಾಡಿಕೊಳ್ಳಲು ಈ ಪುಸ್ತಕ ಉಪಯುಕ್ತ ಎಂದರು.
ತಮಿಳು ಮಾತೃಭಾಷೆ ಯಾದರು ಶೇಖರ್ “ಅಂಗೈಯಲ್ಲಿ ಅರಿವು “ಮತ್ತು ಚರಿತ್ರೆಯ ಪುಟಗಳಿಂದ (2ನೇ ಭಾಗ) ) ಎಂಬ ಪುಸ್ತಕಗಳನ್ನು ಪ್ರಕಟಿಸುತ್ತಿದ್ದಾರೆ.
ಅವರಿಗೆ ಅಭಿನಂದನೆಗಳು. ಎಂದಯ ಹೇಳಿದರು. ಪುಸ್ತಕ ಕುರಿತು ಲೇಖಕ ಆರ್.ಕುಮಾರ್ ವಿವರವಾಗಿ ಮಾತನಾಡಿದರು.
ನಟನo ಬಾಲ್ಯನಾಟ್ಯ ಕೇಂದ್ರದ
ಡಾ.ಎಸ್.ಕೇಶವ ಕುಮಾರ್ ಪಿಳ್ಳೆ ಉಪಸ್ಥಿತರಿದ್ದರು.

MESCOM ನವೆಂಬರ್ 11. ಸೊರಬ ಮೆಸ್ಕಾಂ ಉಒವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

0

MESCOM ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ನ. 11 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;.9448289518

Kanakadasa Jayanti ಕನಕದಾಸರ ತತ್ವಾದರ್ಶಗಳು ಇಂದು & ಎಂದೆಂದಿಗೂ ಸಮಾಜಕ್ಕೆ ಆದರ್ಶಪ್ರಾಯ- ಕೆ.ಬಿ.ರವಿಶಂಕರ್

0

Kanakadasa Jayanti ಕನಕದಾಸರ ಕೀರ್ತನೆಗಳು ಹಾಗೂ ಅವರ ತತ್ವ ಆದರ್ಶ ಗುಣಗಳು ಸಮಾಜದ ಒರೆಕೊರೆಗಳನ್ನು ತಿದ್ದುವುದರ ಜೊತೆಗೆ ಕನಕದಾಸರು ರಚಿಸಿದ ಸಾಹಿತ್ಯದಿಂದ ಬದುಕಿನ ಮೌಲ್ಯಗಳು ಶ್ರೀಮಂತಗೊಳ್ಳುತ್ತವೆ ಎಂದು ಮ್ಯಾನೇಜಿಂಗ್ ಟ್ರಸ್ಟಿ ರೊ. ಕೆ ಬಿ ರವಿಶಂಕರ್ ರವರು ರೋಟರಿ ಶಿವಮೊಗ್ಗ ಪೂರ್ವ ಶಾಲೆಯಲ್ಲಿ ಆಯೋಜಿಸಲಾಗಿದ್ದ 516 ನೇ ಕನಕದಾಸ ಜಯಂತಿಯನ್ನು ಉದ್ಘಾಟಿಸಿ ಮಾತನಾಡುತ್ತಾ ತಿಳಿಸಿದರು.

ಹಾಗೆಯೇ ಅವರ ಸಾಹಿತ್ಯದ ವಿವಿದ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಬೊಗಗಳು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿರುತ್ತವೆ. ಸಂಗೀತ ಪ್ರಪಂಚಕ್ಕೆ ತನ್ನದೆ ಆದ ಮೌಲ್ಯ ನೀಡಿದವರಲ್ಲಿ ಕನಕದಾಸರು ಪ್ರಮುಖರಾಗಿರುತ್ತಾರೆಂದು, ಅವರ ತತ್ವಾದರ್ಶಗಳು ಇಂದು ಮತ್ತು ಎಂದೆಂದಿಗೂ ಸಮಾಜಕ್ಕೆ ಆದರ್ಶಪ್ರಾಯವಾಗಿರುತ್ತದೆಂದು ತಿಳಿಸಿದರು.

ಇದೇ ಸಂದಂರ್ಭದಲ್ಲಿ ಟ್ರಸ್ಟಿನ ಕಾರ್ಯದರ್ಶಿಯಾದ ರೊ. ಎಸ್ ಸಿ ರಾಮಚಂದ್ರ ಇವರು ಮಾತನಾಡುತ್ತಾ ಕನಕದಾಸರು ಕನ್ನಡದ ಪ್ರಮುಖ ಸಂತರಷ್ಟೇಲ್ಲದೆ ಕವಿ, ಮತ್ತು ಶ್ರೇಷ್ಟ ತತ್ವ ಜ್ಙಾನಿಯಾಗಿರುತ್ತಾರೆಂದು, ಅವರ ಕೃತಿಗಳಲೊಂದಾದ ರಾಮದಾನ್ಯ ಚರಿತ್ರೆಯು ಸಮ ಸಮಾಜ ಮತ್ತು ಪರಸ್ಪರ ಅನ್ಯೊನ್ಯತೆಯಿಂದ ಬದುಕನ್ನು ಹೇಗೆ ಕಟ್ಟಿಕೊಳ್ಲಬೇಕೆಂಬುದರ ¨ಗ್ಗೆ ತುಂಬಾ ಸಂಕೇತಿಕವಾಗಿ ಸಾದರ ಪಡಿಸಿರುತ್ತದೆಂದು ಇಂದಿನ ಯುವ ಜನರು ಕನಕದಾಸರ ಈ ಪ್ರಮುಖ ಆಶಯವನ್ನು ರೂಢಿಕೊಳ್ಳಬೇಕೆಂದು ಕರೆನೀಡಿದರು.

ಇದೇ ಸಮಾರಂಭದಲ್ಲಿ ಟ್ರಸ್ಟಿನ ಜಂಟಿ ಕಾರ್ಯದರ್ಶಿಯಾದ ವಿಜಯಕುಮಾರ್ ರವರು ಮಾತನಾಡುತ್ತಾ ಕನಕದಾಸರ ಕೀರ್ತನೆಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಮಹತ್ವದ ಸಂದೇಶವನ್ನು ಸಮಾಜಕ್ಕಕೆ ನೀಡಿವೆ ಎಂದು, ಕನಕದಾಸರ ಕೀರ್ತನೆಯೊಂದನ್ನು ಹಾಡುವುದರ ಮೂಲಕ ಕನಕ ಜಯಂತಿಗೆ ಹೆಚ್ಚಿನ ಮೆರಗನ್ನು ತಂದುಕೊಟ್ಟಿರುತ್ತಾರೆ.

ಸಮಾರಂಭದಲ್ಲಿ ಶ್ರೀಮತಿ ಕಾವ್ಯ ಇವರು ಪ್ರಾಸ್ತಾವಿಕ ನುಡಿಗಳ್ಳನ್ನಾಡುತ್ತಾ ಕನಕದಾಸರ ಹುಟ್ಟು ಬದುಕು ಮತ್ತು ಸಮಾಜಕ್ಕೆ ಅವರು ನೀಡಿದ ಮೌಲ್ಯಗಳನ್ನು ಕೀರ್ತನೆಗಳ ಮೂಲಕ ಸಾಹಿತ್ಯ ಮತ್ತು ಸಂಗೀತಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.

Kanakadasa Jayanti ಶಿಕ್ಷಕಿಯಾದ ಶ್ರೀಮತಿ ರೂಪ ರಾವ್ ಇವರು ಕನಕದಾಸರ ಪ್ರಮುಖ ಕೀರ್ತನೆಯಾದ ಬಾಗಿಲನು ತೆರೆದು ಸೇವೆಯನ್ನು ಕೊಡುಹರಿಯೆ ಎಂಬ ಕೀರ್ತನೆಯನ್ನು ಸುಶ್ರಾವ್ಯವಾಗಿ ಹಾಡುವುದರ ಮೂಲಕ ಕನಕದಾಸರ ಜಯಂತಿಯ ಸೊಬಗನ್ನು ಹೆಚ್ಚಿಸಿದರು. ಇದೇ ಸಮಾರಂಭದಲ್ಲಿ ರೊಟರಿ ಆಂಗ್ಲ ಮಾದ್ಯಮ ಶಾಲೆಯ ಪ್ರಿನ್ಸಿಪಾಲ್‌ರಾದ ಸೂರ್ಯನಾರಾಯಣ್‌ರವರು ಮಾತನಾಡುತ್ತಾ ಕನಕದಾಸರ ಪ್ರಮುಖ ಸಂದೇಶವಾದ ನಾನು ಹೊದರೆ ಹೊದೇನು ಅಂದರೆ ಪ್ರತಿಯೊಬ್ಬರು ಅಹಂನ್ನು ಬಿಟ್ಟು ನಾವೆಲ್ಲರೂ ಒಂದೇ ಎಂಬ ಬಾವನೆಯನ್ನು ರೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಸಮಾರಂಭದಲ್ಲಿ ಎಲ್ಲಾ ಶಿಕ್ಷಕವೃಂದ ಹಾಜರಿದ್ದು ನಿರೂಪಣೆಯನ್ನು ಶ್ರೀಮತಿ ವಿದ್ಯಾ ರವರು ನಿರ್ವಹಿಸಿದ್ದು ಶ್ರೀಮತಿ ರೇಖ ಇವರ ವಂದಾನರ್ಪಣೆಯೊಂದಿಗೆ ಕನಕ ಜಯಂತಿಯ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

MESCOM ಶಿವಮೊಗ್ಗ ಆಲ್ಕೊಳ ಸುತ್ತಮುತ್ತ ಕೆಲವೆಡೆ ನವೆಂಬರ್ 11 ರಂದು ವಿದ್ಯುತ್ ವ್ಯತ್ಯಯ, ಮೆಸ್ಕಾಂ ಮಾಹಿತಿ

0

MESCOM ಶಿವಮೊಗ್ಗ ನಗರ ಆಲ್ಕೋಳ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ನ.11 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ಸಾಗರ ರಸ್ತೆ, ಎಪಿಎಂಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ ರಿಂದ ಎಫ್ ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ, ಆನೆ ವೃತ್ತ, ಅಲ್ ಹರೀಮ್ ಲೇಔಟ್, ಮಹೇಶ್ ಪಿಯು ಕಾಲೇಜ್, ಅಂದರ ವಿಕಾಸ ಶಾಲೇ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರ‍್ನರಿ ಕಾಲೇಜ್ ಮುಖ್ಯರಸ್ತೆ, ಇಂದಿರಾ ಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ.ಲೇಔಟ್, ಕೆ.ಹೆಚ್.ಬಿ ಎ ಯಿಂದ ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ ಹಾಗೂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ತಿಳಿಸಿದೆ.

Department of Kannada and Culture ನವೆಂಬರ್ 11, ಜಿಲ್ಲಾಡಳಿತದಿಂದ ಒನಕೆ ಓಬವ್ವ ಜಯಂತಿ ಆಯೋಜನೆ

0

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಛಲವಾದಿ ಮಹಾಸಭಾ ಇವರ ಸಂಯುಕ್ತಾಶ್ರಯದಲ್ಲಿ ನ.11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ವಿಶೇಷ ಆಹ್ವಾನಿತರಾಗಿ ಆಗಮಿಸುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸಲಿದ್ದು, ಭದ್ರಾವತಿ ಶಾಸಕ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಸಾಗರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಉಪಸ್ಥಿತರಿರುವರು.

Department of Kannada and Culture ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪೊಲೀಸ್ ವರಿಷ್ಠಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರು ಹಾಗೂ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕುಂದನ್ ಬಸವರಾಜ್ ವಿಶೇಷ ಉಪನ್ಯಾಸ ನೀಡುವರು.

Women and Child Development Department ಜಿಲ್ಲೆಯಲ್ಲಿ”ಅಕ್ಕ ಪಡೆ ತಂಡ” ಕ್ಕೆ ಸೇವಾ ಗುತ್ತಿಗೆ ಆಧಾರದ ಮೇಲೆ 5 ಮಹಿಳಾ ಅಭ್ಯರ್ಥಿಗಳ ನೇಮಕಾತಿ ಪ್ರಕಟಣೆ

0

Women and Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ತಂಡ ರಚನೆ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಈ ತಂಡಕ್ಕೆ ಎನ್ ಸಿ ಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿನವರಾಗಿದ್ದು, ದೈಹಿಕ ಸದೃಢತೆ ಮತ್ತು ಸ್ಥಳೀಯ ನಿವಾಸಿ ಯಾಗಿರಬೇಕು. ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ 2 ಪಾಳಿ ಆಧಾರದಲ್ಲಿ ಕೆಲಸ ನಿರ್ವಹಿಸಲು ಬದ್ಧರಿರಬೇಕು.

Women and Child Development Department ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ ಶಿವಮೊಗ್ಗ ಇವರಿಗೆ ದಿನಾಂಕ:13.11.2025 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-295514 ಅಥವಾ ddwcdshimoga@gmail.com ಸಂಪರ್ಕಿಸಬಹುದಾಗಿದೆ ಎಂದು ಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ‌ ಬಣಕಾರ್ ತಿಳಿಸಿದ್ದಾರೆ.

ಜಾಟ್ ರೆಜಿಮೆಂಟ್ ನಲ್ಲಿ ಅಗ್ನಿವೀರ್ ಟ್ರೇಡ್ಸ್ಮನ್,, ಜನರಲ್ ಡ್ಯೂಟಿ & ಕ್ಲರ್ಕ್ ಹುದ್ದೆಗೆ ನೇಮಕಾತಿ ಪ್ರಕಟಣೆ

0

ಜಾಟ್ ರೆಜಿಮೆಂಟ್ ಸೆಂಟರ್, ಬರೇಲಿ ಇಲ್ಲಿ ಯುಎಚ್ ಕ್ಯು ಕೋಟಾದಡಿಯಲ್ಲಿ ಡಿ.6 ರಿಂದ 16 ರವೆಗೆ ಅಗ್ನಿವೀರ್ ಟ್ರೇಡ್ಸ್ಮನ್, ಜನರಲ್ ಡ್ಯೂಟಿ ಮತ್ತು ಕ್ಲರ್ಕ್ ಹುದ್ದೆಗೆ ನೇಮಕಾತಿ ನಡೆಯಲಿದೆ.

ಈ ಹುದ್ದೆಗಳಿಗೆ 2004 ರ ಅಕ್ಟೋಬರ್ 01 ರಿಂದ 2008 ರ ಏಪ್ರಿಲ್ 01 ನಡುವೆ ಜನಿಸಿರುವ 17 1/2 ವರ್ಷದಿಂದ 21 ವರ್ಷದೊಳಗಿನ ವೀರ ನಾರಿಯರು, ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ; 05812-510596, 2511796/6335 ಅಥವಾ fatherland.two@nic.in ಗೆ ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು(ಪ್ರ) ತಿಳಿಸಿದ್ದಾರೆ.