DC Shivamogga ಶಿವಮೊಗ್ಗ ಜಿಲ್ಲೆಯಾದ್ಯಂತ ಫೆಬ್ರವರಿ 10 ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನವನ್ನು 1 ರಿಂದ 19 ವರ್ಷದ ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡುವ ಮೂಲಕ ಆಚರಿಸಲಾಗುತ್ತಿದ್ದು ಜಿಲ್ಲೆಯ ಎಲ್ಲ ಅರ್ಹ ಮಕ್ಕಳಿಗೆ ಈ ಮಾತ್ರೆಗಳನ್ನು ಕಡ್ಡಾಯವಾಗಿ ನೀಡಬೇಕೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಲಾಗಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಂತು ಹುಳು ಇರುವ ಮಕ್ಕಳು ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಾರೆ. ಅದರಿಂದ ಅವರ ದೈಹಿಕ, ಮಾನಸಿಕ ಬೆಳವಣಿಗೆ ಕುಂಠಿತವಾಗುವುದರೊಂದಿಗೆ ಶೈಕ್ಷಣಿಕ ಬೆಳವಣಿಗೆ ಸಹ ಕಡಿಮೆಯಾಗುವ ಕಾರಣದಿಂದ ಎಲ್ಲ 1 ರಿಂದ 19 ವರ್ಷದ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆಗಳನ್ನು ತೆಗೆದುಕೊಳ್ಳಬೇಕು.
ಫೆ.10 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಅಲ್ಬೆಂಡಝೊಲ್ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡಲಾಗುವುದು. ಅಂದು ಬಾಕಿ ಉಳಿದ ಮಕ್ಕಳಿಗೆ ಫೆ.16 ರಂದು ಮಾತ್ರೆ ನೀಡಲಾಗುವುದು. ಮಾತ್ರೆಗಳನ್ನು ನೀಡಲು ಕಾರ್ಯಕರ್ತೆಯರಿಗೆ, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಕಡ್ಡಾಯವಾಗಿ ಎಲ್ಲ ಅರ್ಹ ಮಕ್ಕಳು ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶಾಲೆಗಳಲ್ಲಿ ಕೈ ತೊಳೆಯುವುದು ಸೇರಿದಂತೆ ಸ್ವಚ್ಚತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು. ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಪೋಷಕರಿಗೆ ಮಾತ್ರೆ ನೀಡುವ ಬಗ್ಗೆ ತಿಳಿಸಬೇಕು ಎಂದು ತಿಳಿಸಿದರು.
ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಜಾಗೃತಿ ಚಟುವಟಿಕೆಗಳ ಮೂಲಕ ರಾಷ್ಟಿçÃಯ ಜಂತುಹುಳು ನಿವಾರಣಾ ದಿನದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಶಿಕ್ಷಕರು, ಸಿಡಿಪಿಓ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪೋಷಕರು ಈ ಕಾರ್ಯಕ್ರಮ ಶೇ.100 ಯಶಸ್ವಿಯಾಗಲು ಸಹಕರಿಸಬೇಕು ಎಂದರು.
DC Shivamogga ಆರ್ಸಿಹೆಚ್ಓ ಡಾ.ಓ.ಮಲ್ಲಪ್ಪ ಮಾತನಾಡಿ, ಮಣ್ಣಿನ ಮೂಲಕ ಹರಡುವ ಜಂತುಹುಳು ಸೋಂಕು ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತದೆ. ನಮ್ಮ ದೇಶದಲ್ಲಿ 61 ಕೋಟಿ ಸೋಂಕಿತರಿದ್ದು, ರಾಜ್ಯದಲ್ಲಿ 2015 ರಲ್ಲಿ ನಡೆಸಿದ ಬೇಸ್ಲೈನ್ ಸಮೀಕ್ಷೆ ಪ್ರಕಾರ 1 ರಿಂದ 19 ವರ್ಷ ವಯಸ್ಸಿನ ಸುಮಾರು ಶೇ.49 ಮಕ್ಕಳು ಪೀಡಿತರಾಗುವ ಸಾಧ್ಯತೆ ಇದೆ. ಜಂತುಹುಳು ಬಾಧೆಯಿಂದಾಗಿ ವ್ಯಕ್ತಿಯ ದೈಹಿಕ ಮತ್ತು ಬೌದ್ದಿಕ ಸಾಮರ್ಥ್ಯ ಕುಗ್ಗಿ ಆರ್ಥಿಕ ಪ್ರಗತಿಗೆ ಅಡ್ಡಿಯುಂಟಾಗುತ್ತದೆ. ಆದ್ದರಿಂದ ಎಲ್ಲ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಉಗುರುಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಬಯಲಿನಲ್ಲಿ ಮಲ ವಿಸರ್ಜನೆ ಮಾಡಬಾರದು. ಬರಿಗಾಲಿನಲ್ಲಿ ನಡೆಯದೇ ಚಪ್ಪಲಿಗಳನ್ನು ಧರಿಸಬೇಕು ಎಂದು ತಿಳಿಸಿದರು.
ಕಳೆದ ಸಾಲಿನಲ್ಲಿ 4,70,316 ಮಕ್ಕಳಿಗೆ ಮಾತ್ರೆ ನೀಡುವ ಗುರಿ ನೀಡಲಾಗಿತ್ತು. ಶೇ.98 ಪ್ರಗತಿ ಸಾಧಿಸಲಾಗಿತ್ತು. ಇದೀಗ ಮಾತ್ರೆಗಳ ಸರಬರಾಜು ಆಗಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಎಲ್ಲ ಅರ್ಹ ಮಕ್ಕಳಿಗೆ ಮಾತ್ರೆಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್, ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಹೆಚ್ಓ ಡಾ. ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಡಿಡಿಪಿಐ ಮಂಜುನಾಥ್, ಇತರೆ ವೈದ್ಯಾಧಿಕಾರಿಗಳು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
DC Shivamogga ಫೆಬ್ರವರಿ 10 ರಂದು ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಲ್ಲಿ ಜಂತು ನಿರೋಧಕ ಮಾತ್ರೆ ಉಚಿತ ವಿತರಣೆ- ಪ್ರಭುಲಿಂಗ ಕವಳಿಕಟ್ಟಿ
Podar International School ಜಾನಪದ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗದ ಕು.ಹೊನಲು
Podar International School ಶಿವಮೊಗ್ಗ ನಗರದ ಪೋದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ 3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕು.ಹೊನಲು.ಎಸ್ ಇತ್ತೀಚೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸಿದ ಜಿಲ್ಲಾ ಮಟ್ಟ ಮತ್ತು ವಿಭಾಗ ಮಟ್ಟದ ಜಾನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಿವಮೊಗ್ಗ ರಂಗಾಯಣದ ಆಡಳಿತಾಧಿಕಾರಿಗಳಾದ ಡಾ.ಶೈಲಜಾ ಎ.ಸಿ ಮತ್ತು ಶ್ರೀ ಯುತ ಸುಧಾಕರ್ ರವರ ಪುತ್ರಿಯಾಗಿರುವ ಈಕೆ ಶಿಕ್ಷಣದ ಜೊತೆಗೆ ಸುಗಮ ಸಂಗೀತ, ಭರತನಾಟ್ಯ, ಶಾಸ್ತ್ರೀಯ ಸಂಗೀತ, ಯೋಗಾಸನ, ಕ್ರೀಡೆ, ಜಾನಪದ ನೃತ್ಯ, ಪ್ರವಾಸ, ಚಿತ್ರ ಕಲೆ ಹೀಗೆ ಹಲವು ಹವ್ಯಾಸಗಳನ್ನು ರೂಢಿಸಿಕೊಂಡಿದ್ದಾಳೆ. 3 ವರ್ಷ ವಯಸ್ಸಿನಿಂದಲೇ ನವರಸ ಅಭಿನಯ, ಭಾವಗೀತೆ, ಶ್ಲೋಕ, ಮಂಕುತಿಮ್ಮನ ಕಗ್ಗ, ಜಾನಪದ ಗೀತೆಗಳನ್ನು ಹಾಡುವ ಮೂಲಕ ಗಮನಸೆಳೆದ್ದಿದ್ದಾಳೆ.
ಚಿಕ್ಕ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ಆಸಕ್ತಿ ಬೆಳಸಿಕೊಂಡ ಪ್ರತಿಭೆ ಮೊದಲು ಶಿವಮೊಗ್ಗ ರಂಗಾಯಣದ ಕಲಾವಿದರೊಂದಿಗೆ ರಂಗ ಗೀತೆಗಳ ಗಾಯನ ಕಾರ್ಯಕ್ರಮ, ಮಕ್ಕಳ ಬೇಸಿಗೆ ಶಿಬಿರ, ರಿಯಾಲಿಟಿ ಶೋ ಮತ್ತು ಉಸಿರಾ ನಾಟಕಗಳಲ್ಲಿ ನಟಿಸಿ ಪ್ರಶಂಸೆಗೆ ಪಾತ್ರಳಾಗಿದ್ದಳು. ಇದರ ಜೊತೆಗೆ ವೀರಗಾಸೆ, ಪಟ ಕುಣಿತ, ಛದ್ಮವೇಷ, ಸಂಗೀತ ಹಲವು ಕಾರ್ಯಗಳಲ್ಲಿ ಛಾಪು ಮೂಡಿಸಿದ್ದಲ್ಲದೇ ಸಹಚೇತನ ನಾಟ್ಯಾಲಯದ ಕಿರಿಯ ವಿದ್ಯಾರ್ಥಿನಿಯಾಗಿ ನಾಟ್ಯಾರಾಧನ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನ, ಪಂಡಿತ್ ಪುಟ್ಟರಾಜ ಗವಾಯಿಗಳ ಆಶ್ರಮದಲ್ಲಿ ಗಾಯನ ಕಾರ್ಯಕ್ರಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಚಿಗುರು ಕಾರ್ಯಕ್ರಮದಲ್ಲಿ ಜಾನಪದ ಗೀತೆ ಗಾಯನದಲ್ಲಿ ಭಾಗವಹಿಸಿ ಪ್ರಶಸ್ತಿಗಳಿಸಿದ್ದಾಳೆ.
Podar International School ಆದಿಚುಂಚನಗಿರಿ ನಿರ್ಮಲಾನಂದಶ್ರೀಗಳು ಮತ್ತು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಯುತ ಗೊಲ್ಲಹಳ್ಳಿ ಶಿವಪ್ರಸಾದ್ ರವರ ಮುಂದೆ ಹಾಡಿ ಗಮನ ಸೆಳೆದಿದ್ದಾಳೆ ಈ ಪೋರಿ. ಕಲೆ ಮಾತ್ರವಲ್ಲದೆ ಓದಿನಲ್ಲಿ ಕೂಡ ಮುಂದಿದ್ದು ಶಾಲೆಯಲ್ಲಿನ ಓಟದ ಸ್ಪರ್ಧೆ, ಪದ್ಯ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ಯಂಗ್ ಎಕ್ಸ್ ಫ್ಲೋರಲ್ ಆಗಿ ಪ್ರಶಂಸೆಗಳಿಸಿದ್ದಾಳೆ. ಪ್ರಸ್ತುತ ಹಿಂದೂಸ್ತಾನಿ ಸಂಗೀತವನ್ನು ಶ್ರೀ ನಿಷಾದ್ ಹರ್ಲಾಪುರ್ ರಿಂದ ಮತ್ತು ಭರತನಾಟ್ಯವನ್ನು ಸಹನಾ ಚೇತನ್ ಹಾಗೂ ಶೈಲಜಾ ಕುಮಾರ್ ಚನ್ನರಾಯಪಟ್ಟಣ ಇವರಿಂದ ಕಲಿಯುತ್ತಿದ್ದಾಳೆ. ಬೆಳೆಯುವ ಸಿರಿ ಮೊಳಕೆಯಲ್ಲೆ ಎಂಬಂತೆ ಬಹುಮುಖ ಪ್ರತಿಭೆಯಾಗಿ ಹೊರಹೊಮ್ಮಿದ್ದಾಳೆ ಕು.ಹೊನಲು.
Shivaganga Yoga Center ಯೋಗವು ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮಗೊಳಿಸುತ್ತದೆ- ಡಾ.ಸಿ.ವಿ.ರುದ್ರಾರಾಧ್ಯ
Shivaganga Yoga Center ಯೋಗ ಮಾನಸಿಕ ಹಾಗೂ ದೈಹಿಕ ಸದೃಢತೆ ಜೊತೆಗೆ ದೀರ್ಘಾಯುಷ್ಯ ಉಳ್ಳವರಾಗಿ ಮಾಡುವುದರಲ್ಲಿ ಸಂದೇಹವಿಲ್ಲ ಎಂದು ಶಿವಗಂಗಾ ಯೋಗ ಕೇಂದ್ರದ ಯೋಗಾಚಾರ್ಯ ಡಾಕ್ಟರ್ ಸಿ.ವಿ. ರುದ್ರಾರಾಧ್ಯ ನುಡಿದರು ಅವರು ಇಂದು ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯಲ್ಲಿ ಏರ್ಪಡಿಸಲಾಗಿದ್ದ ಪರಿಶೀಲನಾ ಸಭೆ ಹಾಗೂ ಶಿವರಾತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು ಸನಾತನ ಕಾಲದ ಯೋಗ ಇಂದಿಗೂ ಪ್ರಸ್ತುತ. ಪ್ರತಿನಿತ್ಯ ಕ್ರಮಬದ್ಧವಾಗಿ ಗುರು ಮುಖೇನ ಯೋಗ, ಪ್ರಾಣಾಯಾಮ ಹಾಗೂ ಧ್ಯಾನ ಮಾಡುವುದರಿಂದ ಆರೋಗ್ಯದಿಂದ ಇರಲು ಸಾಧ್ಯ ಇದರಿಂದ ನಕಾರಾತ್ಮಕ ಭಾವನೆಗಳು ದೂರವಾಗುತ್ತವೆ ಜೊತೆಗೆ ಮಾನಸಿಕ ಖಿನ್ನತೆ ದೂರವಾಗುತ್ತದೆ ಏಂದು ನುಡಿದ ಅವರು ಶಿವಗಂಗಾ ಯೋಗ ಕೇಂದ್ರದಲ್ಲಿ ನಡೆಯುವ ಶಿವರಾತ್ರಿ ಜಾಗರಣೆ, ಶಿವನ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮದಲ್ಲಿ ಎಲ್ಲರೂ ತಪ್ಪದೆ ಭಾಗವಹಿಸಲು ಕರೆ ನೀಡಿದರು. ಶಿವಗಂಗಾ ಯೋಗ ಕೇಂದ್ರದ ಮಾಜಿ ಕಾರ್ಯದರ್ಶಿಎಸ್. ಎಸ್ . ಜ್ಯೋತಿ ಪ್ರಕಾಶ ಅವರು ಮಾತನಾಡುತ್ತಾ ಶಿವಗಂಗಾ ಯೋಗ ಕೇಂದ್ರ ನಮ್ಮ ನಾಡಿಗೆ ಒಂದು ವಿಶೇಷವಾದ ಕೊಡುಗೆಯನ್ನು ನೀಡಿದೆ ಶಿವಮೊಗ್ಗದಲ್ಲಿ ಸಾಕಷ್ಟು ಜನ 38 ಕೇಂದ್ರಗಳಲ್ಲಿ ಉಚಿತವಾಗಿ ಯೋಗಭ್ಯಾಸ ನಡೆಸುತ್ತಿರುವುದು ತುಂಬಾ ವಿಶೇಷವಾಗಿದೆ ರಾಜ್ಯಕ್ಕೆ ಒಂದು ಮಾದರಿ ಸಂಸ್ಥೆಯಾಗಿದೆ. ಪ್ರತಿಯೊಬ್ಬರೂ ನಿರಂತರವಾಗಿ ಶಾಖೆಗೆ ತಪ್ಪದೇ ಬಂದು ಯೋಗಭ್ಯಾಸ ಮಾಡಬೇಕೆಂದು ನುಡಿದರು. Shivaganga Yoga Center ರಾಘವ ಶಾಖೆಯ ಮುಖ್ಯ ಶಿಕ್ಷಕರಾದ ಜಿ ಎಸ್ ಓಂಕಾರ್ ಅವರು ಇಂದಿನ ಒತ್ತಡದ ಪರಿಸ್ಥಿತಿಯಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಹಾಗೂ ಯುವಜನತೆಗೆ ಯೋಗ, ಪ್ರಾಣಾಯಾಮ ಹಾಗೂ ಧ್ಯಾನದ ಅವಶ್ಯಕತೆಯನ್ನು ತಿಳಿಹೇಳಿದರು. ಯೋಗ ಶಿಕ್ಷಕರಾದ ವಿಜಯ ಕೃಷ್ಣ. ಎಚ್ ಕೆ ಹರೀಶ್. ಜಿ ವಿಜಯಕುಮಾರ್. ಶಂಕರ್, ಸುಜಾತಾ..ಗಾಯತ್ರಿ ಲತಾ. ಶೈಲಾ. ಶೋಭಾ.. ಶ್ರೀನಿವಾಸ್. ಸುಬ್ರಮಣ್ಯ. . ಹಾಗೂ ಯೋಗ ಬಂದು ಗಳು ಉಪಸ್ಥಿತರಿದ್ದರು
Reserve Bank of India ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿರುವ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Reserve Bank of India ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು ಶಾಖೆಯಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು https//rbi.org.in/ ಎಂಬ ಬ್ಯಾಂಕಿನ ಜಾಲತಾಣದಲ್ಲಿ Recruitment for the post of office Attendant – PY 2025 ರ ಮೂಲಕ ಫೆ. 04 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ https//rbi.org.in/ ಎಂಬ ಬ್ಯಾಂಕಿನ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.
DC Shivamogga ಅಂಗನವಾಡಿಗಳ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಿ, ಕ್ರಮ ಜರುಗಿಸಿ- ಪ್ರಭುಲಿಂಗ ಕವಳಿಕಟ್ಟಿ
DC Shivamogga ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ನಿವೇಶನ ಗುರುತಿಸುವಂತೆ ಹಾಗೂ ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಸಮನ್ವಯ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕದ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 2563 ಅಂಗನವಾಡಿ ಕೇಂದ್ರಗಳಿದ್ದು 2065 ಸ್ವಂತ ಕಟ್ಟಡದಲ್ಲಿ, 106 ಶಾಲಾ ಕಟ್ಟಡದಲ್ಲಿ, 96 ಇತರೆ ಕಟ್ಟಡದಲ್ಲಿ ಮತ್ತು 296 ಬಾಡಿಗೆ ಕಟ್ಟಡದಲ್ಲಿವೆ. ನಗರದಲ್ಲಿ 180 ಮತ್ತು ಗ್ರಾಮೀಣ ಭಾಗದಲ್ಲಿ 70 ನಿವೇಶನಗಳ ಅವಶ್ಯಕತೆ ಇದ್ದು, ಆಯಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಗುರುತಿಸಿ, ಸ್ವಂತ ಕಟ್ಟಡ ನಿರ್ಮಿಸಲು ಕ್ರಮ ವಹಿಸಬೇಕು. ಶಿವಮೊಗ್ಗ ನಗರದಲ್ಲಿ ಆದ್ಯತೆ ಮೇಲೆ ನಿವೇಶನ ಗುರುತಿಸುವ ಕೆಲಸವಾಗಬೇಕು ಎಂದು ಸಿಡಿಪಿಓ ಗಳಿಗೆ ಸೂಚಿಸಿದರು.
ಹಾಗೂ ಅಮೃತ ನಗರೋತ್ಥಾನ ಯೋಜನೆಯಡಿ ಏಳು ತಾಲ್ಲೂಕಿಗಳಿಗೆ ಮಂಜೂರಾಗಿರುವ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯ ವಿವಿಧ ಹಂತದಲ್ಲಿದ್ದು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ನಿಯಮ 2006 ರಡಿ ಕಳೆದ ತ್ರೆöÊಮಾಸಿಕದಲ್ಲಿ 83 ಪ್ರಕರಣ ದಾಖಲಾಗಿದ್ದು ಹಿಂದಿನ ಬಾಕಿ ಸೇರಿದಂತೆ 123 ಪ್ರಕರಣಗಳ ಪೈಕಿ 61 ಇತ್ಯರ್ಥಗೊಂಡಿವೆ. ಸಂರಕ್ಷಣಾಧಿಕಾರಿಗಳ ಹಂತದಲ್ಲಿ 34 ಮತ್ತು ನ್ಯಾಯಾಲಯದಲ್ಲಿ 28 ಪ್ರಕರಣ ಬಾಕಿ ಇದ್ದು ಶೀಘ್ರದಲ್ಲಿ ಇತ್ಯರ್ಥಪಡಿಸುವಂತೆ ಸೂಚಿಸಿದ ಅವರು ಆಪ್ತಸಮಾಲೋಚನೆ ಮತ್ತಿತರೆ ಸೌಲಭ್ಯಗಳನ್ನು ಸಮರ್ಪಕವಾಗಿ ಸಂತ್ರಸ್ತರಿಗೆ ನೀಡಬೇಕೆಂದು ತಿಳಿಸಿದರು.
ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸಖಿ ಒನ್ ಸ್ಟಾಪ್ ಸೆಂಟರ್ನಡಿ ಸಂತ್ರಸ್ತರಿಗೆ ವೈದ್ಯಕೀಯ ಚಿಕಿತ್ಸೆ ಮತ್ತು ನೆರವು, ಪೊಲೀಸ್ ನೆರವು, ಕಾನೂನು ನೆರವು, ಸಮಾಲೋಚನೆ ಮತ್ತು ತಾತ್ಕಾಲಿಕ ಆಶ್ರಯ ವ್ಯವಸ್ಥೆ ನೀಡಲಾಗುತ್ತದೆ. ಪ್ರಸ್ತುತ 177 ಪ್ರಕರಣಗಳಿದ್ದು ಕೇಂದ್ರದಲ್ಲಿ ನೀಡಬೇಕಾದ ಸೇವೆಗಳನ್ನು ಸಕಾಲದಲ್ಲಿ ಒದಗಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ತಿಳಿಸಿದರು.
ರಾಜ್ಯ ಮಹಿಳಾ ನಿಲಯದಲ್ಲಿ ಪ್ರಸ್ತುತ 59 ಮಾನಸಿಕ ಅಸ್ವಸ್ಥ ಮತ್ತು 14 ಬುದ್ದಿಮಾಂದ್ಯ ನಿವಾಸಿ ಒಟ್ಟು 73 ನಿವಾಸಿಗಳಿದ್ದು ಅವರಿಗೆ ಆರೈಕೆ, ಆಹಾರ, ಸಮಾಲೋಚನೆ, ವೈದ್ಯಕೀಯ ನೆರವಿನೊಂದಿಗೆ ಕೌಶಲ್ಯ ತರಬೇತಿಯನ್ನು ಸಮರ್ಪಕವಾಗಿ ನೀಡುವಂತೆ ಸೂಚಿಸಿದರು.
ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ, ಗೃಹಲಕ್ಷಿö್ಮ ಯೋಜನೆ ಇತರೆ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದರು.
DC Shivamogga ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಯಡಿ ಸಮೀಕ್ಷೆ ಕೈಗೊಂಡು ಗುರುತಿಸಿ, ಪುನರ್ವಸತಿ ನೀಡುವಂತೆ ಸೂಚಿಸಿದ ಅವರು ಈ ಹಿಂದೆ 24 ಮಾಜಿ ದೇವದಾಸಿಯರು ಇದ್ದು 6 ಜನ ಮರಣ ಹೊಂದಿರುತ್ತಾರೆ. ಪ್ರಸ್ತುತ 18 ಮಾಜಿ ದೇವದಾಸಿಯರಿಗೆ ಸೌಲಭ್ಯ ನೀಡಲಾಗುತ್ತಿದೆ, ಹೊಸ ಸಮೀಕ್ಷೆಗೆ 4 ಅರ್ಜಿಗಳು ಬಂದಿವೆ ಎಂದರು.
ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ(ತಡೆಗಟ್ಟುವಿಕೆ, ರಕ್ಷಣೆ & ಪುನರ್ವಸತಿ) 2006 ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಜಿಲ್ಲೆಯಲ್ಲಿ ಇದಕ್ಕಾಗಿ ಗ್ರಾ.ಪಂ ಮಟ್ಟದಲ್ಲಿ 262, ತಾಲ್ಲೂಕು ಮಟ್ಟದಲ್ಲಿ 07 ಮತ್ತು ಜಿಲ್ಲಾ ಮಟ್ಟದಲ್ಲಿ 01 ಕಾವಲು ಸಮಿತಿಗಳನ್ನು ರಚಿಸಲಾಗಿದೆ. ಪರಿಣಾಮಕಾರಿಯಾಗಿ ಸಮಿತಿ ಸಭೆಗಳನ್ನು ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಉದ್ಯೋಗಿನಿ, ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಸಹಾಯಧನ ಯೋಜನೆಯಡಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗದಿತ ಅವಧಿಯೊಳಗೆ ಅವರಿಗೆ ಸೌಲಭ್ಯವನ್ನು ಒದಗಿಸುವಂತೆ ತಿಳಿಸಿದರು.
2025 ರ ಅಕ್ಟೋಬರ್ ನಿಂದ ಡಿಸೆಂಬರ್ ಅಂತ್ಯದವರೆಗೆ ಜಿಲ್ಲೆಯಲ್ಲಿ ನಡೆದ 19 ಬಾಲ್ಯ ವಿವಾಹಗಳಿಗೆ ಎಫ್ಐಆರ್ ದಾಖಲಿಸಿ ಕ್ರಮ ವಹಿಸಲಾಗಿದೆ. ಹಾಗೂ 16 ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದೆ. 73 ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು ಜಿಲ್ಲೆಯಾದ್ಯಂತ ಮಿಷನ್ ಸುರಕ್ಷಾ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ಜೊತೆಗೆ ಅರಿವು ಕಾರ್ಯಕ್ರಮಗಳನ್ನು ಪರಿಣಾಮಕಾರಿಗೊಳಿಸಿ, ಈ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವಲ್ಲಿ ಎಲ್ಲರೂ ಶ್ರಮಿಸಬೇಕೆಂದರು.
ಬಾಲ ಗರ್ಭಿಣಿ/ಬಾಲತಾಯಂದಿರಿಗೆ ಆರ್ಥಿಕ ಪರಿಹಾರ ಕಲ್ಪಿಸುವ ಹೊಸ ಯೋಜನೆಯಡಿ ಅಕ್ಟೋಬರ್ ರಿಂದ ಡಿಸೆಂಬರ್ವರೆಗೆ 28 ಸಂತ್ರಸ್ತರಿಗೆ ರೂ.6000 ದಂತೆ ಪರಿಹಾರ ಸೌಲಭ್ಯ ನೀಡಲಾಗಿದೆ. ಈ ಪ್ರಕರಣಗಳು ಕಡಿಮೆ ಆಗುವ ನಿಟ್ಟಿನಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
ಜಿ.ಪಂ. ಸಿಇಓ ಹೇಮಂತ್ ಎನ್ ಮಾತನಾಡಿ, ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 50 ಮಕ್ಕಳಿದ್ದು ಈ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಎನ್ಆರ್ಸಿ(ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ಗಳಿಗೆ ದಾಖಲಿಸಿ ಚಿಕಿತ್ಸೆ ನೀಡಬೇಕು. ಎನ್ಆರ್ಸಿಗಳಲ್ಲಿ ತೀವ್ರ ಅಪೌಷ್ಟಿಕ ಮಕ್ಕಳಿಗೆ 14 ದಿನಗಳ ಕಾಲ ನಿಗದಿತ ಪೌಷ್ಟಿಕ ಆಹಾರದೊಂದಿಗೆ ಚಿಕಿತ್ಸೆ ನೀಡಲಾಗುತ್ತದೆ. ಜೊತೆಗೆ ತಾಯಿಗೆ ಈ ಕುರಿತು ತರಬೇತಿ ನೀಡಲಾಗುತ್ತದೆ. ಹಲವಾರು ಪೋಷಕರು 14 ದಿನಗಳ ಕಾಲ ಕೇಂದ್ರದಲ್ಲಿ ಇರಲಾರದೇ ಚಿಕಿತ್ಸೆಯನ್ನು ಅಲ್ಲಗಳೆಯುತ್ತಿರುವುದು ಸರಿಯಲ್ಲ. ಸಂಬಂಧಿಸಿದ ಅಧಿಕಾರಿಗಳು ಪೋಷಕರ ಮನವೊಲಿಸಿ ಕಡ್ಡಾಯವಾಗಿ ಚಿಕಿತ್ಸೆ ಕೊಡಿಸಬೇಕೆಂದು ಸೂಚನೆ ನೀಡಿದರು.
ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲೆಯಲ್ಲಿ ಮೊದಲ ಪ್ರಸವದ ಗರ್ಭಿಣಿಯರಿಗೆ ನೀಡುವ ರೂ.5000 ಯೋಜನೆಯಡಿ 2025 ರ ಅಂತ್ಯಕ್ಕೆ ಶೇ.114.70 ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದರೆ ನೀಡುವ ರೂ.6000 ಯೋಜನೆಯಡಿ ಶೇ.98.77 ಪ್ರಗತಿ ಸಾಧಿಸಲಾಗಿದೆ ಎಂದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಡಿಸಿಪಿಓ ಮಂಜುನಾಥ್, ಸಿಡಬ್ಲ್ಯೂಸಿ ಅಧ್ಯಕ್ಷ ತಾಜುದ್ದೀನ್ ಖಾನ್, ಸಾಂತ್ವನ ಕೇಂದ್ರಗಳ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಶಿವಮೊಗ್ಗದಲ್ಲಿ ಕ್ರೂ ಐಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಆರಂಭ
ಸಾಫ್ಟ್ವೇರ್ ಸೇವೆಗಳು ಮತ್ತು AI ಆಧಾರಿತ ಉತ್ಪನ್ನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೂ ಐಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಶಿವಮೊಗ್ಗದಲ್ಲಿ ತನ್ನ ಹೊಸ ಕಚೇರಿಯನ್ನು ಆರಂಭಿಸಿದೆ. ಸಂಸ್ಥೆಗೆ ಈಗಾಗಲೇ ಬೆಂಗಳೂರು ಮತ್ತು ಮಧುರೈ ನಗರಗಳಲ್ಲಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಹೊಸ ಕಚೇರಿಯ ಮೂಲಕ ಕೃತಕ ಬುದ್ಧಿಮತ್ತೆ (AI), ವೆಬ್ ಮತ್ತು ಮೊಬೈಲ್ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಇದರಿಂದ ಸ್ಥಳೀಯ ಪ್ರತಿಭೆಗಳಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಶಿವಮೊಗ್ಗದ ತಂತ್ರಜ್ಞಾನ ಮತ್ತು ಆರ್ಥಿಕ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂದು ಸಂಸ್ಥೆ ತಿಳಿಸಿದೆ.
Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ
Department of Posts ಅಂಚೆ ಇಲಾಖೆ ವತಿಯಿಂದ ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಅಂಚೆ ವಿಭಾಗದಲ್ಲಿ 57 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ವೆಬ್ ಸೈಟ್
https://indiapost.gov.in/gdsonlineengagement ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
ಅರ್ಜಿ ನೋಂದಣಿ ಮಾಡಲು ಫೆ.14 ಹಾಗೂ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕಪಾವತಿಸಲು ಫೆ.16 ಕಡೆಯ ದಿನವಾಗಿದೆ. ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಹಾಗೂ ಗಣಿತ ಮತ್ತು ಇಂಗ್ಲೀಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷವಿದ್ದು ಮೀಸಲು ವರ್ಗಗಳಿಗೆ ವಯೋಮಿತಿ ಸಡಲಿಕೆ ಇರುತ್ತದೆ. ಅಂಕಗಳ ಆಧಾರದಲ್ಲಿ ಆನ್ ಲೈನ್ ಮೂಲಕವೇ ನೇಮಕಾತಿ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-222835 ನ್ನು ಸಂರ್ಕಿಸಬಹುದಾಗಿದೆ.
ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನ
2023-24 ಮತ್ತು 2024-25 ನೇ ಸಾಲಿಗೆ ರೇಷ್ಮೆ ಕೃಷಿ ಪ್ರಶಸ್ತಿ ನೀಡಲು ಉತ್ತಮ ಪ್ರಗತಿ ಸಾಧಿಸಿರುವ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರೇಷ್ಮೆ ಬೆಳೆಗಾರರು ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕೆ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆಜಿ ಗಿಂತ ಕಡಿಮೆ ಇರಬಾರದು. ರೇಷ್ಮೆ ಪಾಸ್ ಬುಕ್ , ರೇಷ್ಮೆ ಮೊಟ್ಟೆ /ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿ ಹೊಂದಿರಬೇಕು.
ಆಸಕ್ತರು ಸ್ಥಳೀಯ ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿಗೆ ಸಂಪರ್ಕಿಸಿ ಅರ್ಜಿ ಪಡೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರವರಿ 6 ರೊಳಗಾಗಿ ಅರ್ಜಿ ರೇಷ್ಮೆ ಉಪ ನಿರ್ದೇಶಕರ ಕಛೇರಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕೆಂದು ರೇಷ್ಮೆ ಉಪನಿರ್ದೇಶಕರು ತಿಳಿಸಿದ್ದಾರೆ
ತೀರ್ಥಹಳ್ಳಿ ತಾಲೂಕಿನಲ್ಲಿ ಎರಡು ಪ್ರತ್ಯೇಕ ಸಿಲಿಂಡರ್ ಗೆ ಬೆಂಕಿ ಪ್ರಕರಣ-ಅಗ್ನಿಶಾಮಕ ದಳ ಡೌಡು
ತೀರ್ಥಹಳ್ಳಿ ಪ್ರತ್ಯೇಕ ಎರಡು ಮನೆಗಳಲ್ಲಿ ಸಿಲಿಂಡರ್ ಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಪ್ರಕರಣ ಬೆಳಕಿಗೆ ಬಂದಿವೆ. ಒಂದು ಪ್ರಕರಣ, ಇಂದು ಬೆಳಗ್ಗೆ ತೀರ್ಥಹಳ್ಳಿಯ ಬೆಳಗಾರ್ ನಲ್ಲಿ ನಡೆದಿದ್ದು ಬೆಂಕಿ ಆರಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಬಾಳಗಾರಿನ ನಾಗರಾಜ್ ಭಟ್ ಎನ್ನುವವರ ಮನೆಯಲ್ಲಿ ಬಳಸುತ್ತಿದ್ದ ಎಚ್ ಪಿ ಗ್ಯಾಸ್ ಸಿಲಿಂಡರ್ ಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಗ್ಯಾಸ್ ಬ್ಲಾಸ್ಟ್ ಆಗುವ ಭಯದಲ್ಲಿ ಬೆಂಕಿ ನಂದಿಸುವ ಪ್ರಯತ್ನ ನಡೆದಿದೆ. ಆ ನಂತರ ಎಚ್ ಪಿ ಗ್ಯಾಸ್ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಹಾಗೆ ಇನ್ನೊಂದು ಪ್ರಕರಣ, ಲೇಔಟ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ಬಿಹಾರ ಮೂಲದ ಕಾರ್ಮಿಕರು ಅಡುಗೆ ಮಾಡುವಾಗ ಗ್ಯಾಸ್ ಸ್ಟವ್ ನಲ್ಲಿ ಲೀಕ್ ಆದ ಹಿನ್ನಲೆಯಲ್ಲಿ ಸಿಲಿಂಡರ್ ಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು ಬೆಂಕಿ ಆರಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೇಲಿನಕುರುವಳ್ಳಿಯ ಕೊಪ್ಪ ರಸ್ತೆಯ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ಕಾರ್ಮಿಕರ ತಂಡ ಕೆಲಸ ನಿರ್ವಹಿಸುತ್ತಿದ್ದಾರೆ. ಅಡುಗೆ ಮಾಡುವಾಗ ಬೆಂಕಿ ಹತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಇಂದು ಬೆಳಗ್ಗೆ ಬಾಳಗಾರಿನಲ್ಲಿ ಸಂಜೆ ಮೇಲಿನಕುರುವಳ್ಳಿಯಲ್ಲಿ ಒಂದೇ ರೀತಿಯಲ್ಲಿ ಘಟನೆ ನಡೆದಿದೆ.
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಅಭ್ಯರ್ಥಿಗಳಾಗಿ ಅಪೂರ್ಣ ಅರ್ಜಿ ಸಲ್ಲಿಸಿದವರಿಗೆ ವಿಶೇಷ ಮಾಹಿತಿ
ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಅಪೂರ್ಣ ಅರ್ಜಿ ಪೂರ್ಣಗೊಳಿಸಲು ಫೆಬ್ರವರಿ 3 ರಿಂದ 12 ರವರೆಗೆ 10 ದಿನಗಳ ಕಾಲವಕಾಶ ನೀಡಲಾಗಿದೆ.
ಅಭ್ಯರ್ಥಿಗಳು https://karnemakaone.kar.nic.in/abcd/ ವೆಬ್ಸೈಟ್ ಮೂಲಕ 4 ಹಂತಗಳನ್ನು ಪೂರೈಸಿ ಅಪೂರ್ಣ ಅರ್ಜಿ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.
