Friday, February 13, 2026
Friday, February 13, 2026
Home Blog Page 105

Visvesvaraya Iron and Steel Plant ನೂತನ ಕಾರ್ಯಪಾಲಕ ನಿರ್ದೇಶಕರಾಗಿ ಶ್ರೀ ಅನೂಪ್ ಕುಮಾರ್‌ರವರು ಅಧಿಕಾರ ಸ್ವೀಕಾರ

0

Visvesvaraya Iron and Steel Plant 22-06-2022ರಿಂದ ಕಾರ್ಯಪಾಲಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಬಿ.ಎಲ್. ಚಂದ್ವಾನಿಯವರಿಂದ ನವೆಂಬರ್ 5, 2025ರಂದು, ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಸ್ಥಾವರದ ನೂತನ ಕಾರ್ಯಪಾಲಕ ನಿರ್ದೇಶಕರಾಗಿ ಶ್ರೀ ಅನೂಪ್ ಕುಮಾರ್‌ರವರು ಅಧಿಕಾರ ವಹಿಸಿಕೊಂಡರು.

13ನೇ ಡಿಸೆಂಬರ್, ೧1966 ರಂದು ಜನಿಸಿದ ಶ್ರೀ ಅನೂಪ್ ಕುಮಾರ್, ಬಿಎಸ್ಸಿ ಎಂಜಿನಿಯರಿಂಗ್ (ಲೋಹಶಾಸ್ತ್ರ) ಪದವೀಧರಾಗಿದ್ದು, ಇಂದೋರ್‌ನಿಂದ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪ್ರಮಾಣಪತ್ರ ಪಡೆದಿದ್ದಾರೆ.

ಪಶ್ಚಿಮ ಬಂಗಾಳದ ಬರ್ನ್ಪುರದಲ್ಲಿರುವ ಸ್ಟೀಲ್ ಪ್ಲಾಂಟ್ ನಲ್ಲಿ ಮ್ಯಾನೇಜ್‌ಮೆಂಟ್ ಟ್ರೈನಿಯಾಗಿ ಸೇರಿದರು. ಅವರು 2017ರಲ್ಲಿ ಜನರಲ್ ಮ್ಯಾನೇಜರ್ ಮತ್ತು 2022ರಲ್ಲಿ ಕಾರ್ಯಪಾಲಕ ನಿರ್ದೇಶಕ (ಕೊಲಿಯರೀಸ್) ಹುದ್ದೆಗೆ ಏರಿದರು. ಅವರು ಬ್ಲಾಸ್ಟ್ಫರ್ನೇಸ್ ನಲ್ಲಿ 17 ವರ್ಷಗಳ ಪರಿಣತಿಯನ್ನು ಹೊಂದಿದ್ದಾರೆ. ಕಳೆದ 34 ವರ್ಷಗಳಲ್ಲಿ ಅವರು ಬರ್ನ್ಪುರ, ಬೊಕಾರೋ, ಕೊಲಿಯರೀಸ್ ವಿಭಾಗ ಮತ್ತು ಸೈಲ್ ಸುರಕ್ಷತಾ ಸಂಸ್ಥೆಯೊಂದಿಗೆ ಕೆಲಸ ಮಾಡಿದ್ದಾರೆ.

Visvesvaraya Iron and Steel Plant ಮೂಲಭೂತವಾಗಿ ಆಶಾವಾದಿಯಾಗಿರುವ ಅವರು ಪ್ರಾಯೋಗಿಕ ಮತ್ತು ಸಕಾರಾತ್ಮಕ ಮನೋಭಾವದವರು. ಘಟಕವು ಸವಾಲನ್ನು ಎದುರಿಸುತ್ತಿರುವ ಸಮಯದಲ್ಲಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವಲ್ಲಿ ತೀವ್ರ ಆಸಕ್ತಿ ಹೊಂದಿರುವ ಅವರು, ಸಾಮರ್ಥ್ಯಗಳನ್ನು ಅಂದರೆ ವಿಶಾಲವಾದ ಉತ್ಪನ್ನ ಮಿಶ್ರಣ, ಉತ್ಪನ್ನಗಳ ಗುಣಮಟ್ಟ ಮತ್ತು ಅದರ ಹೆಚ್ಚು ಪ್ರತಿಭಾನ್ವಿತ ಮತ್ತು ಕೌಶಲ್ಯಪೂರ್ಣ ಮಾನವ ಸಂಪನ್ಮೂಲವನ್ನು ಬಳಸಿಕೊಳ್ಳಲು ಬಯಸುತ್ತಾರೆ, ಸುಧಾರಣೆಯ ಬಗ್ಗೆ ಅವರು ವಿಶ್ವಾಸವನ್ನು ಹೊಂದಿದ್ದಾರೆ ಮತ್ತು ಸವಾಲುಗಳು ಅವಕಾಶಳನ್ನು ಒದಗಿಸುತ್ತದೆ ಎಂದು ನಂಬಿದ್ದಾರೆ ಮತ್ತು ವಿಐಎಸ್ ಎಲ್ ಸಾಮೂಹಿಕವಾಗಿ ಒಟ್ಟಾಗಿ ಘಟಕವನ್ನು ಪುನರುಜ್ಜೀವನಗೊಳಿಸಲು ಉಪಕ್ರಮಗಳೊಂದಿಗೆ ಹೊರಬರಲು ಕರೆ ನೀಡಿದ್ದಾರೆ. ಸ್ಥಾಪಕ ವಾಸ್ತುಶಿಲ್ಪಿ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ಅವರು, ಸಂಸ್ಥೆಯು ತನ್ನ ಹಿಂದಿನ ವೈಭವಕ್ಕೆ ಪುನರುಜ್ಜೀವನಗೊಳ್ಳಲು ಸಾಧ್ಯವಾಗುವಂತೆ, ಸಂಸ್ಥಾಪಕರ ಕನಸುಗಳು ಬೇಗನೆ ನನಸಾಗುವುದನ್ನು ಖಚಿತಪಡಿಸಿಕೊಳ್ಳುವ ಬಗ್ಗೆ ಸಕಾರಾತ್ಮಕವಾಗಿದ್ದಾರೆ.

Adichunchanagiri Mutt ಸೋಮಾರಿತನ ಇದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ :ನಿರ್ಮಲಾನಂದನಾಥ ಮಹಾಸ್ವಾಮೀಜಿ

0

Adichunchanagiri Mutt ಸೋಮಾರಿತನ ಇದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ. ನಾವು ಎಷ್ಟೇ ಓದಿರಲಿ, ಏನೇ ಸಾಧನೆ ಮಾಡಿರಲಿ, ನಮ್ಮಲ್ಲಿ ಸೋಮಾರಿತನ ಜೊತೆಗೂಡಿದಾಗ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು.

ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಾಖಾಮಠದ ಸಮುದಾಯಭವನದಲ್ಲಿ ಆಯೋಜಿಸಿದ್ದ 35ವಾರ್ಷಿಕೋತ್ಸವದ ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಸಾಧನೆ ಸಿಗಬೇಕೆಂದರೆ ಸೋಮಾರಿತನ ಕೈ ಬಿಟ್ಟಂತೆ, ಬದ್ಧತೆ ಹಾಗೂ ಛಲವನ್ನು ಬೆಳೆಸಿಕೊಳ್ಳಬೇಕು. ಅದಕ್ಕೆ ನಮ್ಮ ನಡುವೆ ಸಾಕಷ್ಟು ನಿದರ್ಶನಗಳು ಕಾಣಿಸುತ್ತವೆ ಎಂದು ಹೇಳಿದರು.
  ಆದಿಚುಂಚನಗಿರಿ ಮಹಾಸಂಸ್ಥಾನ ಆರಂಭಗೊಂಡು ಐವತ್ತು ವರ್ಷ ಆಗಿದ್ದು, ಕೇವಲ ಮಠದ, ಸಮಾಜದ ಕಾರ್ಯಕ್ಕೆ ಸೀಮಿತವಾಗದೆ, ನಮ್ಮ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಆರಂಭಗೊಂಡ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಿಜವಾಗಿಯೂ ಈಗ ರಾಜ್ಯಾದ್ಯಂತ ಲಕ್ಷಾಂತರ ಸಾಧಕರನ್ನು ಹೊರತಂದಿದೆ. ಲಕ್ಷಾಂತರ ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ ಎಂದರು.
Adichunchanagiri Mutt ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮೊಟ್ಟ ಮೊದಲ ಬಾರಿಗೆ ಖಾಸಗಿ ರೂಪದಲ್ಲಿ ಅಗ್ರಿಕಲ್ಚರ್ ಸೈನ್ಸ್ ಅಂದರೆ ಕೃಷಿ ವಿಜ್ಞಾನ ಕಾಲೇಜನ್ನು ಆರಂಭಿಸಿದ್ದು, ಅದರ ಮೂಲಕ ನಿತ್ಯ ನಿರಂತರ ಕೃಷಿ ಸಂಶೋಧನೆಗಳು ಹೆಚ್ಚುವ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿದೆ ಎಂದರು.
ಹಿಂದೆ 45 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಬಡ ಭಾರತದ ಬಗ್ಗೆ ಅತ್ಯಂತ ವಿವರಣಾತ್ಮಕವಾಗಿ ಹೊಗಳಿದ್ದರು. ಅದು ಈಗ ಸಾಧನೆಯಾಗಿದೆ. ಬಡಭಾರತವಾಗಿದ್ದ ನಮ್ಮ ದೇಶ ಇಂದು ವಿಶ್ವದಲ್ಲೇ ನಾಲ್ಕನೇ ಪ್ರಮುಖ ರಾಷ್ಟ್ರವಾಗಿರುವುದು ನಮ್ಮೆಲ್ಲರ ಹಿರಿಮೆಯ ಸಂಗತಿ. ತಾಯಿ ಹಾಗೂ ಹೆಣ್ಣು ಮಕ್ಕಳಿಗೆ ಗೌರವ ಕೊಡುವ ಭಾರತ ಇಡೀ ವಿಶ್ವದಲ್ಲೇ ಎಲ್ಲ ದೇಶಗಳಿಗೂ ಮಾದರಿಯಾಗಿದೆ ಎಂದರು. ಶ್ರೀಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಜಗದ್ಗುರುಗಳಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಮತ್ತು ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಮತ್ತು ಇನ್ನು ಮುಂತಾದವರು ತೀರ್ಥಹಳ್ಳಿ ತಾಲ್ಲೂಕಿನ, ಆರಗ ಗ್ರಾಮದಲ್ಲಿರುವ ಶ್ರೀ ಪುರಂದರ ದಾಸರ ಮೂಲ ಜನ್ಮ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ್ದರು.

CM Siddharamaiah ಮಾನ್ಯ ಮುಖ್ಯಮಂತ್ರಿಯವರಿಗೆ ಸಂಪನ್ಮೂಲ ಕ್ರೋಢೀಕರಣ ಸಮಿತಿಯ ವರದಿ ಸಲ್ಲಿಕೆ

0

CM Siddharamaiah ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024 ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿಯು ತನ್ನ ಅಂತಿಮ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿರುತ್ತದೆ. ಸಂಪನ್ಮೂಲ ಕ್ರೋಢೀಕರಣ ಸಮಿತಿಯು ಕೈಗೊಂಡ ಸಮಗ್ರ ವಿಶ್ಲೇಷಣೆ ಮತ್ತು ಶಿಫಾರಸುಗಳನ್ನು ಮಾನ್ಯ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಯಿತು.

ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಪ್ರವೃತ್ತಿ
ಕರ್ನಾಟಕ ರಾಜ್ಯವು, ಭಾರತದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಅತ್ಯುತ್ತಮ ಆರ್ಥಿಕ ಬೆಳವಣಿಗೆಯನ್ನು ಸಾಧಿಸುತ್ತಿದೆ. ರಾಜ್ಯದ ಒಟ್ಟು ರಾಜಸ್ವ ಸ್ವೀಕೃತಿಗಳಲ್ಲಿ ಸ್ವಂತ ತೆರಿಗೆ ರಾಜಸ್ವದ ಪಾಲು ಶೇ.60-70 ರಷ್ಟಿದ್ದು, ರಾಜ್ಯದ ಪ್ರಮುಖ ಆದಾಯದ ಮೂಲವಾಗಿದೆ. ವಾಣಿಜ್ಯ ತೆರಿಗೆ, ರಾಜ್ಯ ಅಬಕಾರಿ, ನೋಂದಣಿ ಮತ್ತು ಮುದ್ರಾಂಕ ಹಾಗೂ ಮೋಟಾರು ವಾಹನ ತೆರಿಗೆಗಳು ರಾಜ್ಯದ ಸ್ವಂತ ತೆರಿಗೆ ರಾಜಸ್ವದ ಪ್ರಮುಖ ಸ್ವೀಕೃತಿಗಳಾಗಿರುತ್ತದೆ.

ಪ್ರಮುಖ ಸವಾಲುಗಳು

  • ತೆರಿಗೆಯೇತರ ಆದಾಯ ಕಡಿಮೆಯಿರುವುದು, ವಿಶೇಷವಾಗಿ ಬಳಕೆದಾರರ ಶುಲ್ಕಗಳು ಹಾಗೂ ಸರ್ಕಾರಿ ಸ್ವತ್ತುಗಳಿಂದ, ಗುತ್ತಿಗೆ ಮತ್ತು ನಗದೀಕರಣದಿಂದ ಹೆಚ್ಚಿನ ರಾಜಸ್ವ ಸೃಜಿಸಲು ವಿಫುಲ ಅವಕಾಶಗಳಿರುತ್ತದೆ.
  • ಆಸ್ತಿ ದತ್ತಾಂಶಗಳ ಉತ್ತಮ ನಿರ್ವಹಣೆ ಮತ್ತು ಸರ್ಕಾರಿ ಆಸ್ತಿಗಳ ವ್ಯವಸ್ಥಿತ ಸಮೀಕ್ಷೆಯ ಅಗತ್ಯವಿರುತ್ತದೆ.
  • ಮಾರ್ಗಸೂಚಿ ದರಗಳು ಮತ್ತು ಆಸ್ತಿ ತೆರಿಗೆಗಳ ಪರಿಷ್ಕರಣೆಯಿಂದಾಗಿ ಸ್ಥಳೀಯ ಸಂಸ್ಥೆಗಳು ರಾಜಸ್ವ ಸೃಜಿಸಬಹುದಾದ ಅವಕಾಶವಿರುತ್ತದೆ.

ಪ್ರಮುಖ ಶಿಫಾರಸುಗಳು

  • ತೆರಿಗೆ ಸುಧಾರಣೆ ಮೂಲಕ ಕೆಲ ಪ್ರಮುಖ ರಾಜಸ್ವ ಮೂಲಗಳ ಮೇಲಿನ ಅತಿಯಾದ ಅವಲಂಬನೆಯನ್ನು ಕಡಿಮೆ ಮಾಡುವುದು ಮತ್ತು ತೆರಿಗೆ ವ್ಯಾಪ್ತಿಯನ್ನು ವಿಸ್ತರಿಸುವುದು.
  • ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಹರಾಜು ಆಧಾರಿತ ಡಿಜಿಟಲ್ ಸನ್ನದುಗಳನ್ನು ನೀಡುವುದು.
  • ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರ ಶುಲ್ಕಗಳನ್ನು ತರ್ಕಬದ್ಧಗೊಳಿಸುವುದು; ಪ್ರಮಾಣಾತ್ಮಕ ಬಿಲ್ಲಿಂಗ್ (volumetric billing) ವ್ಯವಸ್ಥೆಗೆ ಹಂತ ಹಂತವಾಗಿ ಸ್ಥಳಾಂತರಿಸುವುದು ಮತ್ತು ಹಣ ದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆಯನ್ನು ರೂಪಿಸುವುದು.
  • ವೈಜ್ಞಾನಿಕ ಆಸ್ತಿ ಮೌಲ್ಯಮಾಪನ, ಸಾರ್ವಜನಿಕ-ಖಾಸಗಿ ಪಾಲುದಾರಿಕೆಗಳ ಅಡಿಯಲ್ಲಿ ಗುತ್ತಿಗೆಯನ್ನು ವಿಸ್ತರಿಸುವುದು ಮತ್ತು ನಗರ ಭೂ-ಸ್ವತ್ತುಗಳನ್ನು ನಗದೀಕರಿಸುವ ಮೂಲಕ ಆದಾಯದ ಸಾಮರ್ಥ್ಯವನ್ನು ಹೆಚ್ಚಿಸುವುದು.
  • ಸಿಬ್ಬಂದಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮೂಲಕ ಇಲಾಖಾ ಸಾಮರ್ಥ್ಯವನ್ನು ಹೆಚ್ಚಿಸುವುದು, ಆಸ್ತಿ ಸಮೀಕ್ಷೆಗಳನ್ನು ನಿಯತಕಾಲಿಕವಾಗಿ ಮಾಡುವುದು ಮತ್ತು ತೆರಿಗೆಯೇತರ ಆದಾಯ ಮತ್ತು ಆಸ್ತಿ ನಗದೀಕರಣದ ಮೇಲ್ವಿಚಾರಣೆ ಮಾಡಲು ಆರ್ಥಿಕ ಇಲಾಖೆಯಲ್ಲಿ ಆರ್ಥಿಕ ನೀತಿ ವಿಭಾಗವನ್ನು ರಚಿಸುವುದು.

CM Siddharamaiah ಮುಂದಿನ ದಾರಿ
ಸಮಿತಿಯ ವರದಿಯಲ್ಲಿ ಮೂಲಸೌಕರ್ಯ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಂತಹ ಬೆಳವಣಿಗೆಯನ್ನು ಉತ್ತೇಜಿಸುವ ಕ್ಷೇತ್ರಗಳಿಗೆ ಅಗತ್ಯ ಅನುದಾನ ಮೀಸಲಿಡುವುದು, ಹಾಗೂ ಪರಿಣಾಮಕಾರಿಯಾಗಿ ವೆಚ್ಚವನ್ನು ನಿರ್ವಹಿಸುವ ಅಗತ್ಯದ ಬಗ್ಗೆ ವಿವರಿಸಲಾಗಿದೆ. ರಾಜ್ಯದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯದ ರಾಜಸ್ವ ಸಂಗ್ರಹಣೆಯಲ್ಲಿ ವ್ಯವಸ್ಥಿತ ಮತ್ತು ಕ್ರಮಬದ್ಧ ಸುಧಾರಣೆಗಳು ಅತ್ಯಾವಶ್ಯಕವೆಂದು ತಿಳಿಸಲಾಗಿದೆ.

Senior Citizens Empowerment Department ಯು.ಆರ್.ಡಬ್ಲ್ಯೂ ಮತ್ತು ವಿ.ಆರ್.ಡಬ್ಲ್ಯೂ ಹುದ್ದೆಗೆ ಅರ್ಜಿ ಆಹ್ವಾನ

0

Senior Citizens Empowerment Department ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಯು.ಆರ್.ಡಬ್ಲ್ಯೂ ಹಾಗೂ ಹೊಸಹಳ್ಳಿಯಲ್ಲಿ ವಿ.ಆರ್.ಡಬ್ಲ್ಯೂ, ಭದ್ರಾವತಿ ತಾಲೂಕಿನ ಗುಡುಮಘಟ್ಟ, ಹನುಮಂತಾಪುರ, ತಡಸ, ಸನ್ಯಾಸಿಕೊಡಮಗ್ಗಿ, ಸಿಮಗನಮನೆ, ಕಲ್ಲಹಳ್ಳಿ, ನಾಗತಿಬೆಳಗಲು, ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು, ಹೆದ್ದೂರು, ಹಣಗೆರೆ, ಮೇಲಿನ ಕುರುವಳ್ಳಿ, ಬಾಂಡ್ಯ, ಕುಕ್ಕೆ, ತ್ರಯಂಬಕಪುರ ಮತ್ತು ಕನ್ನಂಗಿ, ಶಿಕಾರಿಪುರ ತಾಲೂಕಿನ ಹೋತನಕಟ್ಟೆ, ಮುಡುಬ ಸಿದ್ದಾಪುರ, ಸಾಗರ ತಾಲೂಕಿನ ಅರಳಗೋಡು, ಯಡೆಹಳ್ಳಿ, ಆಚಾಪುರ ಹಾಗೂ ಹೊಸನಗರ ತಾಲೂಕಿನ ಮೇಲಿನ ಬೇಸಿಗೆ, ಅರಮನೆಕೊಪ್ಪ ಗ್ರಾಮ ಪಂಚಾಯ್ತಿಗಳಲ್ಲಿ ವಿ.ಆರ್.ಡಬ್ಲ್ಯೂ ಹುದ್ದೆಯು ಖಾಲಿಯಿದ್ದು, ಆಯಾ ಗ್ರಾ.ಪಂ/ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ 10 ತರಗತಿ ಪಾಸಾಗಿರುವ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Senior Citizens Empowerment Department ನಿಗದಿತ ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯೂ ಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸಿ ಡಿ.05 ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಎಂ.ಆರ್. ಡಬ್ಲ್ಯೂ, ಮಲ್ಲಿಕಾರ್ಜುನ್ -9980150110, ಭದ್ರಾವತಿ -ದಿನೇಶ್-7899137243, ತೀರ್ಥಹಳ್ಳಿ-ದಿವಾಕರ್-9480767638, ಶಿಕಾರಿಪುರ-ಹುಚ್ಚರಾಯಪ್ಪ-9741161346, ರವಿಕುಮಾರ್-ಹೊಸನಗರ-9731922693, ಸಾಗರ-ಶ್ಯಾಮ್‌ಸುಂದರ್-9535247757 ಇವರುಗಳನ್ನು ಸಂಪರ್ಕಿಸುವುದು.

Karnataka State Pollution Control Board ಮುಖಾಮುಖಿ ಎಸ್.ಟಿ. ರಂಗ ತಂಡಕ್ಕೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಗೌರವ

0

Karnataka State Pollution Control Board ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಚಿತ್ರದುರ್ಗದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಮುಖಾಮುಖಿ ಎಸ್.ಟಿ. ರಂಗ ತಂಡ (ರಿ), ಶಿವಮೊಗ್ಗ ಅವರಿಗೆ “ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ – 2025” ನೀಡಿ ಗೌರವಿಸಲಾಯಿತು.

ಈ ಪ್ರಶಸ್ತಿಯನ್ನು ಪರಿಸರ ಸಂರಕ್ಷಣೆ, ಜಾಗೃತಿ ಹಾಗೂ ನಾಟಕ ಕಲೆಯ ಮೂಲಕ ಸಮಾಜದಲ್ಲಿ ಪರಿಸರದ ಅರಿವು ಮೂಡಿಸುವ ಸೇವೆಗೆ ಮಾನ್ಯ ಮಂಡಳಿಯು ಪ್ರದಾನ ಮಾಡಿದೆ.

ಸಂಸ್ಥೆಯ ಪರವಾಗಿ ತಂಡದ ಮಂಜು ರಂಗಾಯಣ  ಪ್ರಶಸ್ತಿಯನ್ನು ಸ್ವೀಕರಿಸಿದರು.

Karnataka State Pollution Control Board ಮುಖಾಮುಖಿ ಎಸ್.ಟಿ. ರಂಗ ತಂಡ (ರಿ), ಶಿವಮೊಗ್ಗ ಕಳೆದ ದಶಕದಿಂದ ಪರಿಸರ, ಆರೋಗ್ಯ, ಸಾಕ್ಷರತೆ ಹಾಗೂ ಸಮಾಜಮುಖಿ ವಿಷಯಗಳ ಕುರಿತು ಬೀದಿ ನಾಟಕ ಮತ್ತು ರಂಗಭೂಮಿ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸುತ್ತಿದೆ.

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ತಂತ್ರಜ್ಞಾನದ ಕೃತಕ ಬುದ್ಧಿ ಮತ್ತೆಯಿಂದ ಸ್ತನ ಕ್ಯಾನ್ಸರ್‌ ಪತ್ತೆ ಹಚ್ಚುವ “ಥರ್ಮಾಲಿಟಿಕ್ಸ್‌” ಯಂತ್ರ ಸೇವೆಗೆ ಲಭ್ಯ

0

Sahyadri Narayana Hospital ಕ್ಷಣ ಮಾತ್ರದಲ್ಲಿಯೇ ಸ್ತನ ಕ್ಯಾನ್ಸರ್‌ನ ಗಡ್ಡೆಗಳನ್ನು ಅತ್ಯಂತ ಕರಾರುವಕ್ಕಾಗಿ ಪತ್ತೆ ಹಚ್ಚಬಲ್ಲ “ ಥರ್ಮಾಲಿಟಿಕ್ಸ್‌” ಎಂಬ ಯಂತ್ರ ಈಗ ಶಿವಮೊಗ್ಗ ನಗರ ಹಾಗೂ ಮಧ್ಯ ಕರ್ನಾಟಕದ ಜನರಿಗೆ ನಗರದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಲಭ್ಯವಿದೆ.

ಕೃತಕ ಬುದ್ಧಿಮತ್ತೆ ಹಾಗೂ ನೂತನ ವಿಕಿರಣ ರಹಿತ ತಂತ್ರಜ್ಞಾನ ಹೊಂದಿರುವ ಈ ಯಂತ್ರ, ಅತ್ಯಂತ ನಿಖರವಾಗಿ, ನೋವು ರಹಿತವಾಗಿ ಸ್ತನದ ಗಡ್ಡಗಳನ್ನು ಪತ್ತೆ ಹಚ್ಚುತ್ತದೆ. ಸಾಂಪ್ರದಾಯಿಕ ಮ್ಯಾಮೋಗ್ರಾಫಿ ಪ್ರಕ್ರಿಯಲ್ಲಿ ಮಹಿಳೆಯರು ಉಡುಪುಗಳನ್ನು ತೆಗೆದುಹಾಕಿ ಯಂತ್ರದ ಮುಂದೆ ನಿಂತು, ಪ್ರತಿ ಸ್ತನವನ್ನು ಎಕ್ಸ್-ರೇ ಚಿತ್ರಣಕ್ಕಾಗಿ ಎರಡು ಪ್ಲೇಟ್‌ಗಳ ನಡುವೆ ಒತ್ತಬೇಕಾಗುತ್ತಿತ್ತು — ಇದು ಸಾಮಾನ್ಯವಾಗಿ ನೋವು ಉಂಟುಮಾಡುತ್ತಿತ್ತು.

ಈ ಥರ್ಮಲಿಟಿಕ್ಸ್ ತಂತ್ರಜ್ಞಾನವು ನೋವಿಲ್ಲದ, ಶಸ್ತ್ರಚಿಕಿತ್ಸೆ ಅಗತ್ಯವಿಲ್ಲದ ಮತ್ತು ವಿಕಿರಣರಹಿತ ಪರ್ಯಾಯ ವಿಧಾನವಾಗಿದೆ, ಇದು ಎಲ್ಲಾ ವಯಸ್ಸಿನ ಮತ್ತು ವಿವಿಧ ಸ್ತನ ಘನತೆಯ ಮಹಿಳೆಯರಿಗೆ ಸೂಕ್ತವಾಗಿದೆ. ಮಹಿಳೆಯರು ಉಟ್ಟ ಬಟ್ಟೆಯಲ್ಲಿಯೇ ಈ ಯಂತ್ರದ ಮುಂದೆ ನಿಂತರೆ ಸಾಕು ಈ ಯಂತ್ರ ಉನ್ನತ ಗುಣಮಟ್ಟದ ತಾಪಮಾನ ಸಂವೇದನೆ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (AI) ಯನ್ನು ಬಳಸಿಕೊಂಡು ಸ್ತನದ ಉಷ್ಣ ಮಾದರಿಗಳನ್ನು ವಿಶ್ಲೇಷಿಸುತ್ತದೆ. ಇದು ಐದು ವಿಭಿನ್ನ ತಾಪಮಾನ ಚಿತ್ರಗಳನ್ನು ಸೆರೆಹಿಡಿದು, ಸಮಮಿತಿ ರಚನೆ ಮತ್ತು ರಕ್ತಪ್ರವಾಹದಂತಹ ಅಂಶಗಳನ್ನು ವಿಶ್ಲೇಷಿಸಲು ಉನ್ನತ ಅಲ್ಗೊರಿದಮ್‌ಗಳನ್ನು ಬಳಸುತ್ತದೆ, ಕೆಲವೇ ನಿಮಿಷಗಳಲ್ಲಿ ಸ್ತನದಲ್ಲಿರುವ ಸಂಭವನೀಯ ಅಸಾಮಾನ್ಯತೆಗಳನ್ನು ಗುರುತಿಸುತ್ತದೆ.

ಈ ಯಂತ್ರದ ಕುರಿತು ಮಾತನಾಡಿದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಮೆಡಿಕಲ್‌ ಆಂಕಾಲಾಜಿಸ್ಟ್‌ ಡಾ. ಅಪರ್ಣ ಶ್ರೀವತ್ಸ ಅವರು, “ಈ ಯಂತ್ರವು ಯುವ ಮತ್ತು ಲಕ್ಷಣಗಳಿಲ್ಲದ ಮಹಿಳೆಯರಲ್ಲಿಯೂ ಸ್ತನ ಕ್ಯಾನ್ಸರ್‌ನ್ನು ಪತ್ತೆಹಚ್ಚಲು ವಿಶೇಷವಾಗಿ ಉಪಯುಕ್ತವಾಗಿದೆ. ಈ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆಯನ್ನು ನಾಲ್ಕು ಲಕ್ಷಕ್ಕೂ ಹೆಚ್ಚು ಮಹಿಳೆಯರ ಡೇಟಾದ ಆಧಾರದ ಮೇಲೆ ತರಬೇತುಗೊಳಿಸಲಾಗಿದೆ, ಇದರಿಂದಾಗಿ ಇದರ ನಿಖರತೆ ಬಹಳ ಉನ್ನತ ಮಟ್ಟದಲ್ಲಿದೆ. ನಿಯಮಿತ ತಪಾಸಣೆಗಳ ಮೂಲಕ ಬೇಗ ಪತ್ತೆಹಚ್ಚುವುದರಿಂದ ಸ್ತನ ಕ್ಯಾನ್ಸರ್‌ನ ಮುಂದಿನ ಹಂತಗಳನ್ನು ತಡೆಯಬಹುದು. ಮಹಿಳೆಯರು ನಿಯಮಿತವಾಗಿ ಸ್ವಯಂ ಪರೀಕ್ಷೆ ಮಾಡಿಕೊಳ್ಳಬೇಕು ಅಥವಾ ವೈದ್ಯರ ಬಳಿ ಹೋದಾಗ ಸ್ತನದಲ್ಲಿ ಗಡ್ಡೆಗಳಿಗಾಗಿ ಪರಿಶೀಲಿಸಿಕೊಳ್ಳಬೇಕು. ಯಾವುದೇ ಅಸಾಮಾನ್ಯತೆ ಕಂಡುಬಂದರೆ ತಕ್ಷಣವೇ ವೈದ್ಯರನ್ನು ಕಾಣಬೇಕು,” ಎಂದು ಅವರು ಹೇಳಿದರು.

Sahyadri Narayana Hospital ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗೀಸ್ ಪಿ. ಜಾನ್ ಅವರು ಮಾತನಾಡಿ, “ನಮ್ಮ ಆಸ್ಪತ್ರೆಯಲ್ಲಿ ಈ ಉನ್ನತ ಮಟ್ಟದ ಕೃತಕ ಬುದ್ಧಿಮತ್ತೆ (AI) ಆಧಾರಿತ ಥರ್ಮಲಿಟಿಕ್ಸ್ (Thermalytix) ಯಂತ್ರವನ್ನು ಪರಿಚಯಿಸುತ್ತಿರುವುದು ನಮಗೆ ಅಪಾರ ಹೆಮ್ಮೆಯ ವಿಷಯವಾಗಿದೆ. ಈ ತಂತ್ರಜ್ಞಾನವು ಸ್ತನ ಕ್ಯಾನ್ಸರ್‌ನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆಹಚ್ಚುವಲ್ಲಿ ಕ್ರಾಂತಿಕಾರಿಯಾಗಿದೆ ಮತ್ತು ರೋಗಿಗಳಿಗೆ ಸಮಯೋಚಿತ ಚಿಕಿತ್ಸೆ ನೀಡಲು ಸಹಕಾರಿ ಆಗುತ್ತದೆ.

ಈ ಯಂತ್ರದ ಅಳವಡಿಕೆಯಿಂದ, ನಮ್ಮ ಆಸ್ಪತ್ರೆಯಲ್ಲಿ ದಾಖಲಾಗುವ ಕ್ಯಾನ್ಸರ್‌ ರೋಗಿಗಳಿಗೂ ಹಾಗೂ ತಪಾಸಣೆಗಾಗಿ ಬರುವ ಮಹಿಳೆಯರಿಗೂ ಅತ್ಯಾಧುನಿಕ, ನಿಖರ ಮತ್ತು ಸಂಪೂರ್ಣ ಕ್ಯಾನ್ಸರ್‌ ಚಿಕಿತ್ಸೆ ನೀಡುವ ನಮ್ಮ ಬದ್ಧತೆಯನ್ನು ಮತ್ತಷ್ಟು ಬಲಪಡಿಸಿದೆ,” ಎಂದು ಹೇಳಿದರು.

ಮನಸ್ಸು, ದೇಹದ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ

0

ಮನಸ್ಸು ಮತ್ತು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.
ಭಾವಸಾರ ವಿಜನ್ ಇಂಡಿಯಾ ವೈಭವ್ ಶಿವಮೊಗ್ಗ ಸಂಸ್ಥೆಯಿಂದ ನಗರದ ರೋಟರಿ ಮಿಡ್ ಟೌನ್ ಬ್ಲಡ್ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಸಭೆ ಕಾರ್ಯಕ್ರಮದಲ್ಲಿ 60ರ ನಂತರ ನಮ್ಮ ಜೀವನಶೈಲಿ ವಿಷಯ ಕುರಿತು ಮಾತನಾಡಿದರು.
60ರ ನಂತರ ಶರೀರದ ಶಕ್ತಿ ಕಡಿಮೆಯಾಗಬಹುದು. ಆದರೆ ಸರಿಯಾದ ಅಭ್ಯಾಸಗಳಿಂದ ನೀವು ಸಂತೋಷವಾಗಿ ಆರೋಗ್ಯವಾಗಿ ಬದುಕಬಹುದು. ಪೋಷಕಾಂಶ ತುಂಬಿದ ಆಹಾರ ಸೇವನೆ ಮಾಡಬೇಕು. ಹಣ್ಣು, ತರಕಾರಿ, ಸಂಪೂರ್ಣ ಧಾನ್ಯ, ಕಾಳು, ಹಾಲು ಸೇವಿಸಬೇಕು. ಸಾಕಷ್ಟು ನೀರು ಕುಡಿಯಬೇಕು ಎಂದು ತಿಳಿಸಿದರು.
ಪ್ರತಿ ದಿನ 30 ನಿಮಿಷ ವಾಕ್ ಅಥವಾ ಯೋಗ ಮಾಡುವುದು ಒಳ್ಳೆಯದು. ಹೃದಯದ ಆರೋಗ್ಯಕ್ಕೆ ಸರಿಯಾದ ವ್ಯಾಯಾಮ ಅಗತ್ಯ. ಪ್ರತಿದಿನ 7–8 ಗಂಟೆ ನಿದ್ರೆ ಮಾಡಬೇಕು. ನಿದ್ರೆ ಸರಿಯಾಗದಿದ್ದರೆ ಧ್ಯಾನ ಅಥವಾ ಲಘು ಪ್ರಾಣಾಯಾಮ ಪ್ರಯತ್ನಿಸಬೇಕು. ಧ್ಯಾನ, ಪಾಠ, ಸಂಗೀತ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ನಿಯಮಿತ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ಹೇಳಿದರು.
ಭಾವಸಾರ ವಿಜನ್ ಇಂಡಿಯಾ ಕಾರ್ಯ ಮಂಡಳಿ ಸದಸ್ಯ ಶಾಂತಕುಮಾರ್ ಸಾಕ್ರೆ, ವಿಜಯಕುಮಾರ್ ಬೇದ್ರೆ ಅವರನ್ನು ಸನ್ಮಾನಿಸಲಾಯಿತು. ವಿಜಯ ಬೇದ್ರೆ ಅವರು ಇತ್ತೀಚೆಗೆ ಅತ್ಯಂತ ಕಡಿಮೆ ದರದಲ್ಲಿ 15 ದಿನ 34 ಯಾತ್ರಾರ್ಥಿಗಳಿಗೆ ಚಾರ್‌ದಾಮ್ ಪ್ರವಾಸವನ್ನು ಅತ್ಯಂತ ಯಶಸ್ವಿಯಾಗಿ ಮುಗಿಸಿ ಹಿಂದಿರುಗಿರುತ್ತಾರೆ.
ಭಾವಸಾರ ವಿಜನ್ ಇಂಡಿಯಾ ವೈಭವ್ ಶಿವಮೊಗ್ಗ ಸಂಸ್ಥೆ ಅಧ್ಯಕ್ಷ ಹರೀಶ್ ಶಂಕರ್ ತೇಲ್ಕರ್, ಕಾರ್ಯದರ್ಶಿ ಎಂ.ಎನ್.ರಮೇಶ್, ಭಾವಸಾರ ಸಮಾಜ ಶಿವಮೊಗ್ಗ ಅಧ್ಯಕ್ಷ ಟಿ.ವಿ.ಗಜೇಂದ್ರನಾಥ್, ಸಂತೋಷ್ ಸಾಕ್ರೆ ಮತ್ತಿತರರು ಉಪಸ್ಥಿತರಿದ್ದರು.

Rotary Club Shivamogga ರೋಟರಿ ಪೂರ್ವ ಸಾರಥ್ಯದಲ್ಲಿ ಸಮೃದ್ಧಿ‌ 2025 ಕಾರ್ಯಾಗಾರ

0

Rotary Club Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ಸಾರಥ್ಯದಲ್ಲಿ ನಗರದ ಶಿವಮೊಗ್ಗ ಅರೆಕಾನಟ್ ಮರ್ಚೆಂಟ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನ. 8 ಮತ್ತು  9 ರಂದು ರೋಟರಿ ದತ್ತಿನಿಧಿ ಮತ್ತು ಪೊಲಿಯೋ ಪ್ಲಸ್ ಕುರಿತ ಸಮೃದ್ಧಿ 2025 ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಅಧ್ಯಕ್ಷ ಚಂದ್ರಹಾಸ್ ಪಿ ರಾಯ್ಕರ್ ಹೇಳಿದರು.

ರೋಟರಿ ಜಿಲ್ಲೆ 3182ರ ವ್ಯಾಪ್ತಿಯ ‌ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಒಳಗೊಂಡು ಸಮೃದ್ಧಿ 2025 ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ನಾಲ್ಕು ಜಿಲ್ಲೆಗಳಿಂದ 700ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಳ್ಳುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನವೆಂಬರ್ 8ರಂದು ಸಂಜೆ 5.30ಕ್ಕೆ ನಿಯೋಜಿತ ಜಿಲ್ಲಾ ಗವರ್ನರ್ ರವಿಶಂಕರ್ ದಾಕೋಜು ಕಾರ್ಯಾಗಾರ ಉದ್ಘಾಟಿಸುವರು. ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಅಧ್ಯಕ್ಷತೆ ವಹಿಸುವರು. ಮಾಜಿ ಜಿಲ್ಲಾ ಗವರ್ನರ್ ಸಾಂಬಶಿವ ರಾವ್ ಪತಿಬಂದ್ಲ, ರಾಜಾರಾಮ್ ಭಟ್ ಬಿ,  ಡಿ.ಎಸ್.ರವಿ,  ಬಿ.ಎನ್.ರಮೇಶ್, ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್,  ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ವಲಯ  11ರ ಸಹಾಯಕ ‌ಗವರ್ನರ್ ಲಕ್ಷ್ಮಣಗೌಡ ಬಿ, ವಲಯ 10ರ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ ಮುಖ್ಯ ಅತಿಥಿಗಳಾಗಿ ‌ಪಾಲ್ಗೊಳ್ಳುವರು ಎಂದರು.

ನವೆಂಬರ್ 9ರಂದು ಬೆಳಗ್ಗೆ 9.30ರಿಂದ ಐದು ವಿಷಯಗಳ ಉಪನ್ಯಾಸ ‌ಹಮ್ಮಿಕೊಂಡಿದ್ದು, ವಿನಯ್ ಕುಮಾರ್ ಪೈ, ಕೆ.ಕೃಷ್ಣ ಶೆಟ್ಟಿ, ಕಾಶಿನಾಥ್ ಪ್ರಭು, ಡಾ. ಆರ್.ಎಸ್.ನಾಗಾರ್ಜುನ ಮತ್ತು ಡಾ. ಪಿ.ನಾರಾಯಣ ಅವರು ವಿಶೇಷ ಉಪನ್ಯಾಸ ನೀಡುವರು. ನವೆಂಬರ್ 9ರಂದು ಮಧ್ಯಾಹ್ನ 1ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾ ಗವರ್ನರ್ ‌ಕೆ.ಪಾಲಾಕ್ಷ ಅವರ ಅಧ್ಯಕ್ಷತೆಯಲ್ಲಿ ಎಲ್ಲ ಆಹ್ವಾನಿತ ಗಣ್ಯರು ಪಾಲ್ಗೊಳ್ಳುವರು ಎಂದು ತಿಳಿಸಿದರು.

Rotary Club Shivamogga ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಮಾತನಾಡಿ, ರೋಟರಿ ದತ್ತಿನಿಧಿ ಮೂಲಕ ವಿಶ್ವಾದ್ಯಂತ ಆರೋಗ್ಯ, ಶಿಕ್ಷಣ ಸೇರಿದಂತೆ ಸಮಾಜಮುಖಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಪೊಲಿಯೋ ನಿರ್ಮೂಲನೆಗೆ 1.3 ಬಿಲಿಯನ್ ಡಾಲರ್ ‌ವಿನಿಯೋಗಿಸಲಾಗಿದೆ ಎಂದು ಹೇಳಿದರು.

Rotary Club Shivamogga ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳ ಅಗತ್ಯವಿದೆ : ಬಸವರಾಜ್ ಬಿ.

0

Rotary Club Shivamogga ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಹಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಕಲುಷಿತ ನೀರು ಕುಡಿಯುವುದನ್ನು ತಪ್ಪಿಸುವ ಉದ್ದೇಶದಿಂದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನೀರಿನ ಶುದ್ಧೀಕರಣ ಯಂತ್ರವನ್ನು ಕೊಡುಗೆಯಾಗಿ ನೀಡುತ್ತಿದೆ.

ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಮಕ್ಕಳ ಆರೋಗ್ಯ ರಕ್ಷಣೆಗೆ ರೋಟರಿ ಸಂಸ್ಥೆಯು ಮುಂದಾಗಿದೆ ಎಂದು ತಿಳಿಸಿದರು.

ಜೀವಿತ ಅವಧಿಯಲ್ಲಿ ಮನುಷ್ಯ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ನಾವು ಮಾಡಿದ ಒಳ್ಳೆಯ ಕೆಲಸಗಳನ್ನು ಜನರು ಸದಾ ನೆನಪಿಸಿಕೊಳ್ಳುತ್ತಾರೆ.

ಸಮಾಜಮುಖಿ ಕಾರ್ಯಗಳಲ್ಲಿ ಎಲ್ಲರೂ ಭಾಗಿಯಾಗಬೇಕು. ರೋಟರಿ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವಾಗಿ ವಿಶೇಷವಾಗಿ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದರು.

Rotary Club Shivamogga ನೀರಿನ ಯಂತ್ರವನ್ನು ಎನ್.ರಮೇಶ್ ಮತ್ತು ಜೆ.ಪಿ.ಚಂದ್ರು ಕೊಡುಗೆಯಾಗಿ ನೀಡಿದ್ದಾರೆ. ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರಾಜು ಸಭೆಯಲ್ಲಿ ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ರೋಟರಿ ಕ್ಲಬ್ ವಲಯ ಸೇನಾನಿ ಕಿರಣ್ ಕುಮಾರ್ ಜಿ ಹಾಗೂ ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಸಂತೋಷ್ ಬಿ.ಎ. ಹಾಗೂ ಕಾರ್ಯದರ್ಶಿ ಜಯಶೀಲ ಶೆಟ್ಟಿ ಉಪಸ್ಥಿತರಿದ್ದರು. ಶಾಲೆಯ ವಿದ್ಯಾರ್ಥಿಗಳು, ಹಿಟ್ಟೂರಿನ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕೆ ಎಸ್ ಆರ್ ಟಿ ಸಿ ಕುಮಾರ್ ನಿಧನ

0

ಇವರ ನಿಧನಕ್ಕೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಮಾಲತೇಶ್, ಪದಾಧಿಕಾರಿಗಳಾದ ಹುಲಿಗಿಕೃಷ್ಣ, ಮುಕ್ತಾರ ಅಹಮದ್(ನಜೀರ್) , ರಾಮು ಜಿ. ಪರಶುರಾಮ್, ನಾಗಭೂಷಣ್, ಮಲ್ಲಿಕಾರ್ಜುನ್, ಪಾರ್ಥಿಬನ್, ಹರ್ಷ, ಗಜೇಂದ್ರ, ರಾಘವೇಂದ್ರ, ಏಜೆಂಟರ್‌ಗಳಾದ ಯುವರಾಜ್, ಉಮೇಶ್, ಸತೀಶ್, ಮಂಜುನಾಥ್ ಪಾಟೀಲ್, ಯೋಗೇಶ್, ದತ್ತಣ್ಣ, ದುರ್ಗೋಜಿ, ಮೋಲನೋ ಸಾಬ್, ಶಿವು, ಸಂತಾಪ ಸೂಚಿಸಿದ್ದಾರೆ.