Friday, February 13, 2026
Friday, February 13, 2026
Home Blog Page 106

ಹಾಪ್ ಕಾಮ್ಸ್ ಸಂಘದ ಅಧ್ಯಕ್ಷರಾಗಿ ಎಸ್.ಎಂ. ಶರತ್ ಮರಿಯಪ್ಪ ಆಯ್ಕೆ

0

ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ (ಹಾಪ್‌ಕಾಮ್ಸ್) ಸಂಘದ ಇತ್ತೀಚಿಗೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಯುವನಾಯಕ ಶ್ರೀ ಡಾII ಎಸ್.ಎಂ ಶರತ್ ಮರಿಯಪ್ಪ ನವರನ್ನು ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಸೂಡಾ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ನ ಮುಖಂಡ ಹೆಚ್. ಪಿ. ಗಿರೀಶ್, ನಗರ ಯುವ ಕಾಂಗ್ರೆಸ್ ಮುಖಂಡ ಬಿ ಲೋಕೇಶ್, ಪಂಚ ಗ್ಯಾರೆಂಟಿ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಪುಷ್ಪಕ್ ಕುಮಾರ್ ,ಕೆ ಎಲ್ ಪವನ್, ಎಂ ರಾಕೇಶ್, ಉಮೇಶ್ ಬಾಳೆಗುಂಡಿ, ಟಿ .ಗುರುಪ್ರಸಾದ್ , ರಾಜೇಶ್ ಮಂದಾರ, ಚಂದ್ರು ಗೆಡ್ಡೆ, ಇರ್ಫಾನ್, ಸಚಿನ್, ರಹೀಲ್, ಕಿರಣ್, ಮಿಥುನ್, ರಾಘವೇಂದ್ರ, ರಘು ಗೌಡ, ಫ್ಯಾಕ್ಟರಿ ಕಿರಣ್, ಚೇತನ್, ರಾಜು, ಶಮ್ಮು, ಮನ್ವಿತ್ ಜೈನ್, ಅಕ್ಷಯ್ ಹಾಗೂ ಇತರರು ಇದ್ದರು.

MESCOM ಶಿವಮೊಗ್ಗದ ವಿವಿಧಡೆ ನವೆಂಬರ್ 9ರಂದು ವಿದ್ಯುತ್ ವ್ಯತ್ಯಯ

0

MESCOM ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ನ.09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಇಲಿಯಾಜ್ ನಗರ 11 ರಿಂದ 14ನೇ ಕ್ರಾಸ್, ಇತಿಹಾದ್ ಲೇಔಟ್, ಹೆನ್ರಿ ತೋಟ, ಕಲ್ಲೂರ್ ಮಂಡ್ಲಿ ಇಂಡಸ್ಟ್ರೀಯಲ್ ಏರಿಯಾ, ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದ ನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಮಹಾತ್ಮ ಗಾಂಧೀಜಿ ಜೀವನ ಆದರ್ಶಗಳು ಇಂದಿಗೂ ಪ್ರಸ್ತುತ: ಕೆ.ಬಿ.ಸಂತೋಷ್

0

ಮಹಾತ್ಮ ಗಾಂಧೀಜಿ ಅವರ ಸರ್ವೋದಯ ತತ್ವಶಾಸ್ತ್ರ ಮತ್ತು ಅದರ ತತ್ವಗಳು ಇಂದಿಗೂ ಪ್ರಸ್ತುತ ಎಂದು ಹಾರನಹಳ್ಳಿಯ ಗ್ರಾಮಾಂತರ ವಿದ್ಯಾಭಿವೃದ್ಧಿ ಸಂಸ್ಥೆಯ ಕಾಲೇಜಿನ ಪ್ರಾಂಶುಪಾಲ ಕೆ.ಬಿ.ಸಂತೋಷ್ ಹೇಳಿದರು.
ಮಹಾತ್ಮ ಗಾಂಧೀಜಿ ಅವರ ಮಾಸ ಪ್ರಯುಕ್ತ ರಾಜ್ಯ ಸರ್ವೋದಯ ಮಂಡಳಿಯಿಂದ ಹಾರನಹಳ್ಳಿ ಗ್ರಾಮಾಂತರ ವಿದ್ಯಾಭಿವೃದ್ಧಿ ಸಂಸ್ಥೆಯ ಪ್ರೌಢಶಾಲೆ ಸಭಾಂಗಣದಲ್ಲಿ ಆಯೋಜಿಸಿದ್ದ ಗಾಂಧಿ ಚಿಂತನೆ ಕುರಿತು ಜಾಗೃತಿ, ಸಂವಾದ, ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗಾಂಧೀಜಿ ಅವರ ಸರಳತೆ, ಉನ್ನತ ನೈತಿಕ ಆದರ್ಶಗಳು, ಅವರ ವಿನಮ್ರತೆ, ಸಮಗ್ರತೆ ಮತ್ತು ದೂರದೃಷ್ಟಿಯ ನಾಯಕತ್ವಕ್ಕೆ ಹೆಸರುವಾಸಿಯಾಗಿದ್ದು, ಅವರ ಪರಂಪರೆ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ ಎಂದು ತಿಳಿಸಿದರು.
ರಾಜ್ಯ ಸರ್ವೋದಯ ಮಂಡಳಿ ರಾಜ್ಯಾಧ್ಯಕ್ಷ ಡಾ. ಎಚ್.ಎಸ್.ಸುರೇಶ್ ಮಾತನಾಡಿ, ಸರ್ವೋದಯ ಎಂದರೆ ಎಲ್ಲರ ಪ್ರಗತಿ. ಸ್ವನಿರ್ಣಯ ಮತ್ತು ಸಮಾನತೆಯನ್ನು ಭಾರತದ ಎಲ್ಲ ಸಮಾಜದ ಎಲ್ಲ ಸ್ಥರವನ್ನು ತಲುಪುವಂತೆ ಮಾಡುವ ಧೇಯ ಹೊಂದಿರುವ ಸಂಸ್ಥೆಯಾಗಿದೆ ಎಂದು ಹೇಳಿದರು.
ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಮನೋಹರ್ ಮಾತನಾಡಿ, ಜಿಲ್ಲೆಯಲ್ಲಿ ನಮ್ಮ ಸರ್ವೋದಯ ಮಂಡಳಿಯಿಂದ ಗಾಂಧಿ ತತ್ವದ ಸರ್ವೋದಯ ಪ್ರೇರಿತ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸರ್ವೋದಯ ಮಂಡಳಿಯ ತತ್ವ ಆದರ್ಶವನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸರ್ವೋದಯ ಮಂಡಳಿ ಜಿಲ್ಲಾ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಮಾತನಾಡಿ, ಸ್ವಾತಂತ್ರ‍್ಯ ಚಳುವಳಿಗಳಿಗೆ ಸ್ಫೂರ್ತಿ ನೀಡಿದ ನಾಯಕ ಮಹಾತ್ಮ ಗಾಂಧಿ ಅವರ ಪರಂಪರೆಯನ್ನು ಗೌರವಿಸಲು, ಅವರ ತ್ಯಾಗವನ್ನು ಸ್ಮರಿಸಲು ಮತ್ತು ಅವರ ಸತ್ಯ, ಶಾಂತಿ ಮತ್ತು ಸರಳತೆ, ಅಹಿಂಸೆ, ಸ್ವರಾಜ್ಯ ಮತ್ತು ಸ್ವದೇಶಿ ಬೋಧನೆಗಳ ಮೂಲಕ ಬದುಕಲು ಶಾಲಾ ಮಕ್ಕಳನ್ನು ಪ್ರೇರೇಪಿಸಲು ಇಂತಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸರೋಜ ಬಿ ಎಸ್ ಮಾತನಾಡಿ, ಗಾಂಧಿ ಆದರ್ಶಗಳು ಕಣ್ಮರೆ ಆಗುತ್ತಿರುವ ಇಂಥ ಸನ್ನಿವೇಶದಲ್ಲಿ ಮಕ್ಕಳಲ್ಲಿ ಗಾಂಧೀಜಿ ಅವರು ತತ್ವದ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಅನಿವಾರ್ಯ ಎಂದು ಹೇಳಿದರು.
ಗ್ರಾಮಾಂತರ ವಿದ್ಯಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ನಾಗರಾಜಪ್ಪ ಮಾತನಾಡಿ, ಮಹಾತ್ಮಾ ಗಾಂಧಿ ಅವರ ಮಾರ್ಗದರ್ಶಿ ತತ್ವಗಳು ಮತ್ತು ಭಾರತದ ಸ್ವಾತಂತ್ರ‍್ಯ ಚಳವಳಿಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದರು. ಗ್ರಾಮಾಂತರ ವಿದ್ಯಾಭಿವೃದ್ಧಿ ಸಂಸ್ಥೆ ಖಜಾಂಚಿ ಸುರೇಶ್ ಶೆಟ್ಟಿ, ನಿರ್ದೇಶಕರಾದ ಬಸವರಾಜಪ್ಪ, ಕೃಷ್ಣಮೂರ್ತಿ, ನಾಗೇಶ್ವರಪ್ಪ, ಜ್ಞಾನೇಶ್ವರ್, ವಿಜಯಲಕ್ಷ್ಮೀ, ಕಾಳಿಮುತ್ತು, ಸೀನ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಕ್ಕಳಿಗೆ ಸ್ಫರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು.

Eshwaravana Charitable Trust ಅನ್ನ ದಾಸೋಹ ಸೇವೆ ಮಾಡಬೇಕು: ಡಾ. ಧನಂಜಯ ಸರ್ಜಿ

0

Eshwaravana Charitable Trust ಮನುಷ್ಯ ಜೀವನದಲ್ಲಿ ಸದಾ ಚಿಂತೆಯಲ್ಲೇ ಮುಳುಗಿರುತ್ತಾನೆ. ಅದರಿಂದ ಹೊರಗೆ ಬರಬೇಕಾದರೆ ಅನ್ನದಾಸೋಹದಂತಹ ಸೇವೆಯನ್ನು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದ್ದಾರೆ.

ಅವರು ಇಂದು ಮೆಗ್ಗಾನ್ ಬೋಧನಾ ಆಸ್ಪತ್ರೆಯ ಆವರಣದಲ್ಲಿ ನವ್ಯಶ್ರೀ ಈಶ್ವರವನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೋಗಿಗಳು ಮತ್ತು ಸಂಬಂಧಿಕರಿಗೆ ವಾರದಲ್ಲಿ ಎರಡು ದಿನ ಅನ್ನದಾನ ಮಾಡುತ್ತಿದ್ದು, ಇಂದು ನವ್ಯಶ್ರೀ ಅನ್ನದಾನ-100ರ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಅನ್ನವನ್ನು ಯಾರೂ ಕೂಡ ಚಲ್ಲಿಬಾರದು. ಪ್ರಪಂಚದಲ್ಲಿ ಏಳುಬಿಲಿಯನ್ ಜನರಿದ್ದು, 64 ಕೋಟಿ ಜನ ಹಸಿವಿನಿಂದ ಬಳಲುತ್ತಿದ್ದಾರೆ. ನಮ್ಮ ದೇಶದಲ್ಲಿ ಒಂದು ವರ್ಷಕ್ಕೆ ಒಂದು ಕೋಟಿಗೂ ಹೆಚ್ಚು ಸಮಾರಂಭಗಳು ನಡೆಯುತ್ತಿದ್ದು, ಸುಮಾರು ಶೇ.20ರಷ್ಟು ಆಹಾರ ವ್ಯರ್ಥವಾಗುತ್ತಿದೆ. 7.82 ಕೋಟಿ ಟನ್ ಆಹಾರ ಚಲ್ಲಲಾಗುತ್ತಿದೆ. ಅದರ ಮೌಲ್ಯ ಅಂದಾಜು 1 ಲಕ್ಷ ಕೋಟಿ ರೂ. ಆಗುತ್ತದೆ. ನಮ್ಮ ಸರ್ಕಾರದ ಬಜೆಟ್‌ನ 25ರಷ್ಟು ಆಹಾರ ಪೋಲಾಗುತ್ತಿದ್ದು, ಇದನ್ನು ಉಳಿಸಿದಲ್ಲಿ ಪ್ರತಿನಿತ್ಯ 26 ಕೋಟಿ ಜನರಿಗೆ ಅನ್ನದಾನ ಮಾಡಬಹುದಾಗಿದೆ. ಜೀವನದಲ್ಲಿ ಬೇಕು ಬೇಕು ಎನ್ನುವವರೇ ಬಹಳಮಂದಿ ಇದ್ದಾರೆ. ಬೇಡ ಬೇಡ ಎನ್ನುವವರು ನಮಗೆ ಬೇಕಾಗಿದ್ದಾರೆ. ಭಗವಂತನ ಅಕೌಂಟ್‌ನಲ್ಲಿ ನೀವು ಎಷ್ಟು ಸತ್ಕರ‍್ಯದ ಫಲಗಳನ್ನು ಠೇವಣಿ ಇಟ್ಟಿದ್ದೀರಿ ಎಂಬುದು ಮುಖ್ಯವಾಗುತ್ತದೆ. ಹಸಿದವರಿಗೆ ಅನ್ನ ಕೊಡುವುದರಲ್ಲಿ ಸಿಗುವ ಆತ್ಮತೃಪ್ತಿ ಬೇರೆ ಎಲ್ಲಿಯೂ ಸಿಗುವುದಿಲ್ಲ ಎಂದರು.

ಮೆಗ್ಗಾನ್ ಆವರಣದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ನಿರಂತರವಾಗಿ ನಡೆಯಲು ಮತ್ತು ರೋಗಿಗಳ ಸಂಬAಧಿಕರಿಗೆ ಉಳಿದುಕೊಳ್ಳಲು ಶೌಚಾಲಯ ಹಾಗೂ ಶಾಶ್ವತ ವಿಶ್ರಾಂತಿ ಹಾಲ್ ನಿರ್ಮಾಣಕ್ಕೆ ಎಲ್ಲಾ ಜನಪ್ರತಿನಿಧಿಗಳ ಒತ್ತಡದಿಂದಾಗಿ 5 ಕೋಟಿ ರೂ. ಅನುದಾನ ಸರ್ಕಾರದಿಂದ ಮಂಜೂರಾಗಿದ್ದು, 2 ಕೋಟಿ ರೂ. ಬಿಡುಗಡೆಯಾಗಿದೆ. ನವ್ಯಶ್ರೀ ಸಂಸ್ಥೆ ಹಸಿರು ಮತ್ತು ಹಸಿವು ಎರಡೂ ಸಿದ್ಧಾಂತಗಳೊAದಿಗೆ ಕಾರ್ಯಾಚರಿಸುತ್ತಿರುವುದು ಶ್ಲಾಘನೀಯ ಎಂದರು.

Eshwaravana Charitable Trust ಯೋಗ ಗುರು ರುದ್ರಾರಾಧ್ಯ ಮಾತನಾಡಿ, ವಿದ್ಯಾದಾನಕ್ಕಿಂತ ಅನ್ನದಾನವೇ ಶ್ರೇಷ್ಠ. ಶರೀರಕ್ಕೆ ಅನ್ನ ಸಿಕ್ಕಿದಾಗ ಮಾತ್ರ ಶಕ್ತಿ ಬರುತ್ತದೆ. ಶಕ್ತಿ ಇದ್ದಾಗ ಮಾತ್ರ ಜ್ಞಾನ ಪಡೆಯಲು ಸಾಧ್ಯ. ನಿವೃತ್ತ ಎಸ್ಪಿ ನಾಗರಾಜ್ ಅವರು 93ನೇ ಇಸವಿಯಲ್ಲಿ ನಮಗೆಲ್ಲರಿಗೂ ಪೊಲೀಸ್ ಕೆಲಸ ನೀಡಿದ್ದಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಲುವಾಗಿ ನಿವೃತ್ತ ಪೊಲೀಸ್ ಅಧಿಕಾರಿಗಳೆಲ್ಲರೂ ಸೇರಿ ಇಂದಿನ ಅನ್ನದಾನದ ವ್ಯವಸ್ಥೆ ಮಾಡಿದ್ದಾರೆ. ನಿರಂತರವಾಗಿ ಅವರು ಕೈಜೋಡಿಸುತ್ತಿದ್ದಾರೆ. ಹಿರಿಯ ಅಧಿಕಾರಿಯೊಬ್ಬರ ಉಪಕಾರ ಸ್ಮರಣೆಗಾಗಿ ಈ ಕಾರ್ಯ ಹಮ್ಮಿಕೊಂಡಿದ್ದಾರೆ. ಇದು ಎಲ್ಲರಿಗೂ ಮಾದರಿಯಾಗಲಿ ಎಂದರು.

ಈ ಸಂದರ್ಭದಲ್ಲಿ ರೋಟರಿ ಗರ‍್ನರ್ ಕೆ.ಪಿ. ಶೆಟ್ಟಿ, ನವ್ಯಶ್ರೀ ನಾಗೇಶ್, ಶ್ರೀಕಾಂತ್, ಶರಣ್ಯ ಮಂಜುನಾಥ್, ರೋ.ವಿಜಯಕುಮಾರ್, ಆರ್‌ಎಸ್‌ಎಸ್ ಮುಖಂಡ ರಂಗನಾಥ್, ನಾಗರಾಜ್ ಶೆಟ್ಟರ್, ಸಂತೋಷ್ ಎಲಿಗಾರ್, ನವ್ಯಶ್ರೀ ಈಶ್ವರವನ ಚಾರಿಟೇಬಲ್ ಟ್ರಸ್ಟ್ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಸುಮಾರು 350ಕ್ಕೂ ಹೆಚ್ಚು ಜನರಿಗೆ ಅನ್ನದಾನ ವ್ಯವಸ್ಥೆ ಕಲ್ಪಿಸಲಾಗಿತ್ತು.

Purandara Dasa ಆರಗ ಸ್ಥಳವನ್ನು ಪುರಂದರದಾಸರ ಹುಟ್ಟೂರು ಎಂದು ಪರಿಗಣಿಸಿ, ಅಭಿವೃದ್ಧಿಪಡಿಸಿ- ಶ್ರೀಪ್ರಸನ್ನನಾಥಶ್ರೀ

0

Purandara Dasa ತ್ಯಾಗಮಯ ಜೀವನದ ಮೂಲಕ ದಾಸರು ನಮಗೆ ಮುಕ್ತಿ ಮಾರ್ಗ ತೋರಿಸಿದ್ದಾರೆ. ಅವರ ಕೀರ್ತನೆಗಳು ಇಂದಿಗೂ ಪ್ರಸ್ತುತವಾಗಿವೆ. ಆರಗವನ್ನು ಪುರಂದರದಾಸರ ಹುಟ್ಟೂರು ಎಂದು ಗುರುತಿಸಿ ಅಭಿವೃದ್ಧಿಪಡಿಸಬೇಕು ಎಂದು ಶ್ರೀಗಳು ಹೇಳಿದರು.
ಆರಗದಲ್ಲಿ ನಡೆದ ಪುರಂದರದಾಸರ ಕೀರ್ತನೋತ್ಸವದಲ್ಲಿ ಆದಿಚುಂಚನಗಿರಿ ಶ್ರೀಗಳು ಮಾತನಾಡಿದರು.

ಆರಗದಲ್ಲಿ ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಶ್ರೀಪ್ರಸನ್ನನಾಥ ಸ್ವಾಮಿಗಳು, 35ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ದಾಸವರೇಣ್ಯ ಪುರಂದರ ದಾಸರ ಕೀರ್ತನೋತ್ಸವದ ಸಾನ್ನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.

Purandara Dasa ಸಾಮಾನ್ಯ ಸೂತ್ರದಡಿ ಜೀವನ ಕಂಡುಕೊಳ್ಳುವ ಪ್ರಯತ್ನ ನಮ್ಮದಾದರೆ ಭಕ್ತಿ ಮೂಲಕ ಮುಕ್ತಿ ಪಡೆಯಲು ಸಾಧ್ಯವಾಗುತ್ತದೆ. ಭಗವಂತ ಅನೇಕ ಅವತಾರಗಳಲ್ಲಿ ಜಗತ್ತಿನಲ್ಲಿಕಾಣಿಸಿಕೊಂಡಿದ್ದು, ಸರಳವಾದ ಬದುಕಿಗೆ ಶಕ್ತಿ ಇದೆ ಎಂಬುದನ್ನು ನಾವುಗಳು ಗೊತ್ತು ಮಾಡಿಕೊಳ್ಳಬೇಕು. ನವಕೋಟಿ ನಾರಾಯಣ ಹೆಸರಲ್ಲಿ ಶ್ರೀಮಂತಿಕೆ ಹೊಂದಿದ್ದ ಶ್ರೀನಿವಾಸ ನಾಯಕನಿಗೆ ಸತ್ಯ ದರ್ಶನವಾದಾಗ ಭಕ್ತಿಯ ಮಹತ್ವ ಅರಿತ ಎಂದರು.

CM Siddharamaiah ಆಯಾ ವರ್ಷದ ಪ್ರಶಸ್ತಿ ವಿಜೇತ ಸಿನಿಮಾಗಳಿಗೆ ಮರು ವರ್ಷವೇ ಪ್ರಶಸ್ತಿ ವಿತರಣೆ ಸೂಕ್ತ- ಸಿದ್ಧರಾಮಯ್ಯ

0

CM Siddharamaiah ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಪ್ರಶಸ್ತಿ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಹಿಂದಿನ ಸರ್ಕಾರ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೆ 2018ನೇ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಎರಡು ವರ್ಷದ ಪ್ರಶಸ್ತಿಗಳನ್ನು ಈಗ ನೀಡಿದ್ದೇವೆ. ಕೆಲವೇ ದಿನಗಳಲ್ಲಿ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

CM Siddharamaiah ಅಂತಾರಾಷ್ಟ್ರೀಯ ಕ್ರೀಡಾಕೂಟದ ಪದಕ ವಿಜೇತರಿಗೆ ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಶೇ.3 ಮೀಸಲಾತಿ – ಸಿದ್ಧರಾಮಯ್ಯ

0

CM Siddharamaiah ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್‌ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್‌ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Mango Leaf Holidays ನಿದಿಗೆಯಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

0

Mango Leaf Holidays ಶಿವಮೊಗ್ಗ ನಗರದ ಹೊರಭಾಗದಲ್ಲಿರುವ ನಿಧಿಗೆ ಗ್ರಾಮದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆ ವತಿಯಿಂದ 105 ವಿದ್ಯಾರ್ಥಿಗಳಿಗೆ ಉಚಿತ ಟ್ರ್ಯಾಕ್ ಶೂಟ್‌ಗಳನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವವನ್ನು ಬೆಳೆಸುವ ಹಾಗೂ ದೈಹಿಕ ಚಟುವಟಿಕೆಗಳ ಬಗ್ಗೆ ಸ್ಪೂರ್ತಿ ಮೂಡಿಸುವ ಉದ್ದೇಶದಿಂದ ಈ ಸಾಮಾಜಿಕ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆಯ ಮುಖ್ಯಸ್ಥ ಮಂಜುನಾಥ್, ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮಣಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ್ ಕೆ., ವೆಂಕಟಾಚಲ ಗೌಡ್ರು, ನಾಗರಾಜ್ ಎಂ.ಜಿ., ಮಂಜುನಾಥ್ ಗೌಡ್ರು, ಆನಂದ್ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆಯ ಮುಖ್ಯಸ್ಥ ಮಂಜುನಾಥ್ ಅವರು ಹೇಳಿದರು —

Mango Leaf Holidays “ನಮ್ಮ ಸಂಸ್ಥೆ ಸಮಾಜಮುಖಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಬೆಳವಣಿಗೆಗೆ ಸಹಕಾರ ನೀಡುವುದೇ ಧ್ಯೇಯ. ಸರ್ಕಾರಿ ಹಾಗೂ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಮೆರೆದಾಡಬೇಕು ಎಂಬ ಆಶಯದಿಂದ ಈ ಟ್ರ್ಯಾಕ್ ಶೂಟ್ ವಿತರಣೆ ಕಾರ್ಯ ಕೈಗೊಂಡಿದ್ದೇವೆ,” ಎಂದು ಹೇಳಿದರು…….

ಕಾರ್ಯಕ್ರಮದ ಅಂತ್ಯದಲ್ಲಿ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.

ಪರಿರಾಸಕ್ತರ ದುಂಡು ಮೇಜಿನ ಸಭೆಯ ತೀರ್ಮಾನ, ಪಶ್ಚಿಮಘಟ್ಟಗಳ ಮೇಲೆ ದುಷ್ಪರಿಣಾಮ ಬೀರುವ ಯೋಜನೆಗಳಿಗೆ ಅನುವು ಮಾಡಿದರೆ ಹಾನಿಕಟ್ಟಿಟ್ಟ ಬುತ್ತಿ

0

ಪಶ್ಚಿಮಘಟ್ಟಗಳ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಯೋಜನೆಗೆ ಇನ್ನು ಮುಂದೆಯೂ ಅವಕಾಶ ನೀಡಿದಲ್ಲಿ ಸಕಲ ಜೀವಗಳಿಗೂ ಹಾನಿ ಕಟ್ಟಿಟ್ಟ ಬುತ್ತಿ. ಸರ್ಕಾರ ಹಠಕ್ಕೆ ಬಿದ್ದು ಕಾರವಾರ ಜಿಲ್ಲೆ ಹಾಗೂ ಶಿವಮೊಗ್ಗ ಜಿಲ್ಲೆಗಳ ಸೂಕ್ಷ್ಮ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲು ಮುಂದಾಗಿರುವುದು ಅಪಾಯದ ಮುನ್ಸೂಚನೆ ಎಂಬ ಆತಂಕಗಳ ಚರ್ಚೆಯೊಂದಿಗೆ ಶರಾವತಿ ಪಂಪ್ಡ್ ಸ್ಟೋರೇಜ್ ಜಾರಿಗೆ ಪ್ರಬಲ ವಿರೋಧ ಬೆಂಗಳೂರಿನ ಗಾಂಧಿಭವನದಲ್ಲಿ ನಡೆದ ಪರಿಸರಾಸಕ್ತರ ದುಂಡುಮೇಜಿನ ಸಭೆಯಲ್ಲಿ ವ್ಯಕ್ತವಾಯಿತು.

ಮಾಜಿ ಶಾಸಕ, ಪರಿಸರ ಸಂಘಟನೆಯ ರಾಜ್ಯ ಅಧ್ಯಕ್ಷ ಎ.ಟಿ.ರಾಮಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯೋಜನೆಯ ವಿರೋಧವಾಗಿ ಮುಂದೆ ತೆಗೆದುಕೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಗಹನ ಮಾತುಕತೆ ನಡೆಯಿತು.

ಚಳುವಳಿಗಳ ಜೊತೆಯಲ್ಲಿಯೇ ಮುಖ್ಯಮಂತ್ರಿಗಳು, ಸಚಿವರು, ಶಾಸಕರುಗಳ ಜೊತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಎದುರಾಗುವ ದುಷ್ಪರಿಣಾಮಗಳ ಕುರಿತು ಮನವಿ ಸಹಿತ ಮುಕ್ತವಾಗಿ ಸಮಾಲೋಚನೆ ನಡೆಸಬೇಕು.
ಕಾನೂನು ಹೋರಾಟವೂ ಅನಿವಾರ್ಯವಾದರೆ ಪರಿಸರಾಸಕ್ತರು ದೆಹಲಿಯ ಹಸಿರು ಪೀಠದ ಮುಂದೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಪ್ರಕರಣ ದಾಖಲಿಸಿ ಅಗತ್ಯ ಕಾನೂನು ಪ್ರಕಾರ ವಾದ ಮಂಡಿಸಲು ಕಾನೂನು ಪರಿಣಿತರುಗಳ ತಂಡವನ್ನೇ ರಚಿಸಬೇಕು.

ಜನಪರ ಮತ್ತು ಪರಿಸರದ ಪರವಾಗಿ ಚಳುವಳಿಗಳು ಸಾಗರದಲ್ಲಿ, ಶಿವಮೊಗ್ಗದಲ್ಲಿ, ಬೆಂಗಳೂರಿನಲ್ಲಿ ಮತ್ತು ದೆಹಲಿಯ ಜಂತರ್‌ಮಂತರ್‌ನಲ್ಲಿಯೂ ಹಮ್ಮಿಕೊಳ್ಳಬೇಕು.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಸ್ಥಳಿಯರು ಹೆಚ್ಚು ಆಸಕ್ತಿಯಿಂದ ಹೋರಾಟಕ್ಕೆ ಇಳಿಯುವಂತಾಗಬೇಕು. ಜನ ವಿರೋಧಿ ಮತ್ತು ಪರಿಸರ ವಿರೋಧಿ ಯೋಜನೆಯ ಕುರಿತು ವ್ಯಾಪಕ ಸುದ್ದಿ ಹರಡಬೇಕು ಮುಂತಾದ ಮುಂದಿನ ಕ್ರಮಗಳ ಬಗ್ಗೆ ಒಕ್ಕೊರಲ ದನಿ ಪ್ರಕಟವಾಯಿತು.

ಪಾಂಡೋಮಟ್ಟಿ ಮಠದ ಸ್ವಾಮಿಗಳು, ಹುಕ್ಕೇರಿ ನಡೆಸೋಷಿ ಮಠದ ನೀಜಲಿಂಗೇಶ್ವರ ಸ್ವಾಮಿಗಳು,
ಕಪ್ಪತಗುಡ್ಡ ನಂದಿವೇರಿಮಠದ ಸ್ವಾಮಿಗಳು,
ವಿಜ್ಞಾನಿ ಟಿ.ವಿ.ರಾಮಚಂದ್ರ, ಡಾ.ಪ್ರಕಾಶ್ ಕಮ್ಮರಡಿ,
ಡಾ.ರಾಮ ಕೃಷ್ಣಪ್ಪ, ವೆಂಕಟೇಶ್ ಹೆಚ್.ಎಂ., ಶಿವಮೊಗ್ಗ ಜಿಲ್ಲಾ ರೈತ ಸಂಘದ ಅಧ್ಯಕ್ಷ ದಿನೇಶ್ ಶಿರವಾಳ, ಕವಿತಾ ದಾರವಾಡ, ಮಾಜಿ ಸಚಿವ ಹೆಚ್.ಹಾಲಪ್ಪ, ರೈತ ನಾಯಕ ಕೆ.ಟಿ.ಗಂಗಾಧರ, ಕರಿಬಸಪ್ಪಗೌಡ, ಸಂತೋಷ್ ಮೇಲುಕೋಟೆ, ಪಾರ್ವತಿ ಶಿವರಾಮ್, ಶ್ರೀಪಾದ ಬಿಚ್ಚುಗತ್ತಿ, ಶಿವಕುಮಾರ್ ಚಿಕ್ಕಮಗಳೂರು, ಮಂಜು ಬೆಳಗಾವ್, ಮಂಜುನಾಥ ಹಾವೇರಿ, ಕೆ.ಆರ್.ಮಂಜುನಾಥ್ ಶಿವಮೊಗ್ಗ, ಶೇಖರ್‌ಪಾಟಿಲ್, ರಮೇಶ್ ಶಿವಮೊಗ್ಗ, ರೈತ ಸಂಘದ ಸಂತೋಷ್‌ಕುಮಾರ್, ಜಯಶಂಕರ್ ಮಂಡ್ಯ, ಹಿತಕರ್ ಜೈನ್ ಸಾಗರ, ಜಯದೇವಮೂರ್ತಿ ಚಿತ್ರದುರ್ಗ, ಶಿವರಾಮೆಗೌಡ, ಶೈಲಜಾ, ಮುಂತಾದವರಿದ್ದರು.

ಈ ಸಭೆಯಲ್ಲಿ ವಿವಿಧ ಸ್ತರಗಳ ಕುರಿತು ಅಧ್ಯಯನಿಸುವ ತಜ್ಞರ, ರೈತ ಸಂಘಟಕರ, ನ್ಯಾಯಾಧೀಶರು, ಪರಿಸರ ಹೋರಾಟಗಾರರ, ವಿವಿಧ ಪ್ರಮುಖರುಗಳು ಉತ್ತಮ ಸಲಹೆಗಳನ್ನು ನೀಡಿರುವುದು ಮುಂದಿನ ಹೋರಾಟಗಳ ರೂಪುರೇಷೆಗಳಿಗೆ ಸಹಕಾರಿಯಾಗಲಿವೆ.
-ಎ.ಟಿ.ರಾಮಸ್ವಾಮಿ, ಮಾಜಿ ಶಾಸಕರು.

ಪಶ್ಚಿಮಘಟ್ಟಗಳ ಶರಾವತಿ, ಬೇಡ್ತಿ, ಅಘನಾಶಿನಿ, ವರದಾ, ಯೋಜನೆ, ನದಿ ತಿರುವು, ಇಲ್ಲಿನ ಸೂಕ್ಷ್ಮ ಪ್ರದೇಶಗಳಿಗೆ ಆಗುತ್ತಿರುವ ದುಷ್ಪರಿಣಾಮಗಳನ್ನು ಗಮನಿಸಿ ಹೋರಾಟ ತೀವ್ರಗೊಳಿಸುವ ಮೂಲಕ ವಿರೋಧಿಸಬೇಕು ಎಂದು ವೃಕ್ಷಲಕ್ಷ ಆಂದೋಲನದ ಅನಂತ ಹೆಗಡೆ ಅಶಿಸರ ಅವರು ಹೇಳಿದರು.

ಜನವಿರೋಧಿ ಮತ್ತು ಪರಿಸರ ವಿರೋಧಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಯಾಗಬಾರದು ವಿಶ್ರಾಂತ ನ್ಯಾಯಮೂರ್ತಿಗಳಾದ ಗೋಪಾಲಗೌಡರು ತಿಳಿಸಿದರು.

ನಮ್ಮ ಹೋರಾಟ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಸ್ಥಗಿತಗೊಳಿಸುವ ತನಕ ಹೋರಾಟದಲ್ಲಿ ವಿಶ್ವಾಸವಿಟ್ಟು ಗಟ್ಟಿಯಾಗಿರಬೇಕು ಎಂದು ಭ್ರಷ್ಟಾಚಾರ ಮತ್ತು ಭೂಕಬಳಿಕೆಗಳ ವಿರುದ್ಧದ ಹೋರಾಟಗಾರರಾದ ಎಸ್.ಆರ್. ಹಿರೇಮಠ ಅವರು ತಿಳಿಸಿದರು.

MESCOM ನ. 9 ಮಂಡ್ಲಿ ಭಾಗದ ಇಲಿಯಾಜ್ ನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ ಮೆಸ್ಕಾಂ ಪ್ರಕಟಣೆ

0

MESCOM ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ನ.09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಇಲಿಯಾಜ್ ನಗರ 11 ರಿಂದ 14ನೇ ಕ್ರಾಸ್, ಇತಿಹಾದ್ ಲೇಔಟ್, ಹೆನ್ರಿ ತೋಟ, ಕಲ್ಲೂರ್ ಮಂಡ್ಲಿ ಇಂಡಸ್ಟ್ರೀಯಲ್ಏರಿಯಾ, ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದ ನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.