Friday, May 15, 2026
Friday, May 15, 2026
Home Blog Page 108

Shivamogga Police ಕಾಣೆಯಾಗಿದ್ದಾರೆ : ಸುಳಿವು ನೀಡಲು ಮನವಿ

0

Shivamogga Police ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ದಿನಾಂಕಗಳAದು ನಾಲ್ವರು ಕಾಣೆಯಾಗಿದ್ದು, ವಿವರ ಕೆಳಕಂಡಂತಿವೆ.
ನಗರದ ಹೊಸಮನೆ ಬಲಭಾಗದ 2ನೇ ಕ್ರಾಸ್ ವಾಸಿ ಸ್ವಾಮಿ ಎಂಬುವವರ ತಮ್ಮ ಶಿವು ಜಿ. ಬಿನ್ ಗಂಗಾ ಭೋವಿ ಎಂಬ 29 ವರ್ಷದ ವ್ಯಕ್ತಿ ಮೇ 2025 ರಲ್ಲಿ ಮನೆಯಿಂದ ಜೆಸಿಬಿ ಡ್ರೈವರ್ ಕೆಲಸಕ್ಕೆಂದು ಹೋದವರು ಈವರೆಗೆ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.6 ಅಡಿ ಎತ್ತರ, ಕೋಲುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ.
ನಗರದ ಬಸವನಗಂಗೂರು ವಾಸಿ ಹಾಲೇಶಪ್ಪ ಎಂಬುವವರ ಮಗ ನ್ಯೂಮಂಡ್ಲಿ ವಾಸಿ ಲೋಹಿತ ಎಂಬ 36 ವರ್ಷದ ವ್ಯಕ್ತಿ ಆಗಸ್ಟ್ 2025 ರಲ್ಲಿ ಟೈಲ್ಸ್ ಕೆಲಸಕ್ಕೆಂದು ಮನೆಯಿಂದ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.6 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿರುತ್ತಾರೆ.
Shivamogga Police ಬೊಮ್ಮನಕಟ್ಟೆ ಕೊನೆ ಬಸ್ ನಿಲ್ದಾಣದ ಹತ್ತಿರ ಶ್ರೀ ಮಲ್ಲಿಕಾರ್ಜುನ ನಿಲಯ, ಇ ಬ್ಲಾಕ್ ವಾಸಿ ಬಿ.ಎಂ. ಸಿದ್ದಯ್ಯ ಬಿನ್ ಮಲ್ಲಯ್ಯ ಎಂಬ 64 ವರ್ಷದ ವ್ಯಕ್ತಿ ಫೆಬ್ರವರಿ 2025ರಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆಂದು ಮನೆಯಿಂದ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.3 ಅಡಿ ಎತ್ತರ, ಕೋಲುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ.
ಗಾಡಿಕೊಪ್ಪ ಗಂಧರ್ವ ಬಾರ್ ಹಿಂಭಾಗ ವಾಸಿ ಸಚಿನ್ ಈ ಬಿನ್ ಈಶ್ವರ ಎಂ. ಹೆಚ್. ಎಂಬ 19 ವರ್ಷದ ಯುವಕ ಸೆಪ್ಟಂಬರ್ 2024 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈ ವ್ಯಕ್ತಿಯ ಚಹರೆ 5.4 ಅಡಿ ಎತ್ತರ, ದುಂಡುಮುಖ, ಗೋಧಿಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ.
ಈ ಮೇಲ್ಕಂಡ 4 ಜನ ವ್ಯಕ್ತಿಗಳ ಸುಳಿವು ದೊರೆತಲ್ಲಿ ಪೊಲೀಸ್ ಕಂಟ್ರೋಲ್ ರೂಂ ನಂ.: 100 ಅಥವಾ ದೂ.ಸಂ.: 08182-261400 261424/ 9480803308/ 9480803373 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

Kateel Ashok Pai Memorial College ಮುಂಡಘಟ್ಟದಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಅದ್ಧೂರಿ ಚಾಲನೆ

0

Kateel Ashok Pai Memorial College ಕುವೆಂಪು ವಿಶ್ವವಿದ್ಯಾಲಯ, ಮಾನಸ ಟ್ರಸ್ಟ್ (ರಿ), ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಮುಂಡಘಟ್ಟದಲ್ಲಿ ಚಾಲನೆ ನೀಡಲಾಯಿತು. “ಯುವಶಕ್ತಿಯಿಂದ ಡಿಜಿಟಲ್ ಸಾಕ್ಷರತೆ” ಎಂಬ ಆಶಯದೊಂದಿಗೆ ಹಮ್ಮಿಕೊಂಡಿರುವ ಈ ಶಿಬಿರವು ಗ್ರಾಮದ ಸಾಂಸ್ಕೃತಿಕ ಕೇಂದ್ರದಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಾಟೀಲ್ ರೈಸ್ ಮಿಲ್ ಮಾಲೀಕರಾದ ಶ್ರೀ ನಂಜಪ್ಪ ಗೌಡ್ರು, “ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಹಬಾಳ್ವೆಯನ್ನು ಕಲಿಸುವುದೇ ಎನ್ ಎಸ್ ಎಸ್ ನ ಮುಖ್ಯ ಉದ್ದೇಶ. ಸ್ವಯಂಸೇವಕರು ಶಿಬಿರದ ಅವಧಿಯಲ್ಲಿ ಈ ಮೌಲ್ಯಗಳನ್ನು ಮನನ ಮಾಡಿಕೊಂಡು, ಜೀವನದ ಅತ್ಯಮೂಲ್ಯ ಅನುಭವಗಳನ್ನು ಪಡೆದುಕೊಳ್ಳಬೇಕು” ಎಂದು ಕರೆ ನೀಡಿದರು.

ಮುಂಡಘಟ್ಟದ ಮುಖಂಡರಾದ ಶ್ರೀ ಸುರೇಶ್ ಸಿಂಗನಳ್ಳಿ ಮಾತನಾಡಿ, “ನಮ್ಮ ಹಳ್ಳಿಯಲ್ಲಿ ನಡೆಯುತ್ತಿರುವ ಈ ಶಿಬಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ವಿದ್ಯಾರ್ಥಿಗಳಿಗೆ ಶಿಬಿರದ ಅವಧಿಯಲ್ಲಿ ಯಾವುದೇ ಸಹಾಯ ಬೇಕಾದಲ್ಲಿ ಗ್ರಾಮಸ್ಥರು ಸದಾ ಸಿದ್ಧರಿದ್ದೇವೆ” ಎಂದು ಆಶ್ವಾಸನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಪರ ಪ್ರಾಂಶುಪಾಲರಾದ ಡಾ.ಅರ್ಚನಾ.ಕೆ.ಭಟ್ ರವರು ತಮ್ಮ ವೈಯಕ್ತಿಕ ಅನುಭವಗಳನ್ನು ಹಂಚಿಕೊಳ್ಳುತ್ತಾ “ನಾನು ಸತತವಾಗಿ 15 ಎನ್ ಎಸ್ ಎಸ್ ಶಿಬಿರಗಳಲ್ಲಿ ಭಾಗವಹಿಸಿದ್ದೇನೆ. ಇಂದು ನಾನು ಜೀವನದಲ್ಲಿ ಏನಾದರೂ ಸಾಧಿಸಿದ್ದರೆ ಮತ್ತು ಸ್ವತಂತ್ರವಾಗಿ ನಿಲ್ಲಲು ಶಕ್ತಳಾಗಿದ್ದರೆ ಅದಕ್ಕೆ ಎನ್ ಎಸ್ ಎಸ್ ನೀಡಿದ ತರಬೇತಿಯೇ ಬೆನ್ನೆಲುಬು. ಇದು ಕೇವಲ ನನಗಷ್ಟೇ ಅಲ್ಲ, ನೀವು ಕೂಡ ಇದನ್ನು ಸರಿಯಾಗಿ ಬಳಸಿಕೊಂಡರೆ ಜೀವನದ ಉತ್ತುಂಗಕ್ಕೇರಲು ಸಾಧ್ಯ” ಎಂದು ಸ್ವಯಂಸೇವಕರಿಗೆ ಸ್ಫೂರ್ತಿ ತುಂಬಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಬೋರಪ್ಪ, ನಿವೃತ್ತ ಸಹಕಾರಿ ಬ್ಯಾಂಕ್ ಇನ್ಸ್ಪೆಕ್ಟರ್ ಶ್ರೀ ಧರ್ಮಪ್ಪ, ಬಸವೇಶ್ವರ ಸ್ವಾಮಿ ದೇವಸ್ಥಾನದ ಸದಸ್ಯರಾದ ಶ್ರೀ ರಾಜಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Kateel Ashok Pai Memorial College ಶಿಬಿರದ ಯಶಸ್ಸಿಗಾಗಿ ಎನ್ ಎಸ್ ಎಸ್ ಘಟಕ-1ರ ಕಾರ್ಯಕ್ರಮಾಧಿಕಾರಿ ಡಾ.ಸುಕೀರ್ತಿ ಮತ್ತು ಘಟಕ-2 ರ ಕಾರ್ಯಕ್ರಮಾಧಿಕಾರಿ ಶ್ರೀ ಮೋಹನ್ ಕುಮಾರ್ ಅವರು ಮಾರ್ಗದರ್ಶನ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಮಂಡಘಟ್ಟದ ಗ್ರಾಮಸ್ಥರು, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು.

CM Siddharamaiah ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

0

CM Siddharamaiah ಚಲನಚಿತ್ರಗಳು ಮನರಂಜನೆಗೆ ಮಾತ್ರ ಸೀಮಿತವಾಗದೆ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಅಸಮಾನತೆ, ಬಡತನ, ಸಿರಿತನ, ದಲಿತರು, ಹಿಂದುಳಿದವರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾಾತರು, ಮಹಿಳೆಯರು ಕುರಿತಾಗಿ ಚಿತ್ರಗಳನ್ನು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನಗರದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು 17ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು. ಕನ್ನಡದ ಮಟ್ಟಿಗೆ ಡಾ. ರಾಜಕುಮಾರ್ ಸಿನಿಮಾಗಳಲ್ಲಿ ಇವೆಲ್ಲವನ್ನೂ ನೋಡುವುದಕ್ಕೆ ಸಾಧ್ಯವಿತ್ತು ಎಂದು ಹೇಳಿದರು.

ಈ ಚಿತ್ರೋತ್ಸವಗಳಿಂದ ಬೇರೆ ದೇಶಗಳ ಜನರ ಜೀವನ, ರಾಜಕೀಯ ಮತ್ತು ಸಮಾಜ ಅರ್ಥವಾಗುತ್ತದೆ. ಅಸಮಾನತೆ, ಸಮಾನತೆ ಅರ್ಥ ಮಾಡಿಕೊಳ್ಳುರವುದು ಅವಶ್ಯಕ. ಅದಕ್ಕೆ ಚಿತ್ರೋತ್ಸವ ಸುವರ್ಣಾವಕಾಶ ಒದಗಿಸುತ್ತದೆ. ಅದನ್ನು ಉಪಯುಕ್ತವಾಗಿ ಬಳಸಿಕೊಂಡು ಸಮಾಜದಲ್ಲಿ ಬದಲಾವಣೆ ತರಬೇಕು. ಬದಲಾವಣೆ ಆಗದಿದ್ದರೆ, ಸಿನಿಮಾ ಬರೀ ಮನರಂಜನೆಗೆ ಸೀಮಿತ ಆಗುತ್ತದೆ.

ನಾವು ಮನುಷ್ಯರು, ನಾವು ಮಾನವರಾಗಿ ಬಾಳುವುದು ಅವಶ್ಯಕ. ಪ್ರತಿ ವ್ಯಕ್ತಿಯನ್ನು ಪ್ರೀತಿಯಿಂದ, ಸ್ನೇಹದಿಂದ ಕಾಣಬೇಕು. ಆಗ ಮಾತ್ರ ಸಮಸಮಾಜ ಕಟ್ಟುವುದಕ್ಕೆ ಸಾಧ್ಯ. ಬೇಧ, ಭಾವ, ಅಸಮಾನತೆ ಹೋಗಲಾಡಿಸುವ ಕೆಲಸ ಸಿನಿಮಾದ ಮೂಲಕ ಮಾಡಬೇಕು. ನಮ್ಮ ಸರ್ಕಾರ ಚಲನಚಿತ್ರ ಅಭಿವೃದ್ಧಿಗೆ ಸಹಕಾರ, ಬೆಂಬಲ ಕೊಡುತ್ತದೆ. ಬದುಕನ್ನು ಹಸನು ಮಾಡುವ ಕೆಲಸ ಚಲನ ಚಿತ್ರಗಳು ಮಾಡಲಿ ಎಂದು ಚಿತ್ರೋತ್ಸವಕ್ಕೆ ಶುಭ ಹಾರೈಸಿದರು.

ಇಂದಿನಿಂದ ಫೆಬ್ರವರಿ 6 ರ ವರೆಗೆ ನಡೆಯಲಿರುವ ಈ ಚಿತ್ರೋತ್ಸವದಲ್ಲಿ ಸುಮಾರು 70 ದೇಶಗಳ ಆಯ್ದ ಸುಮಾರು 240 ಸಿನಿಮಾ ಪ್ರದರ್ಶನ ನಡೆಯಲಿದ್ದು, ದೇಶ-ವಿದೇಶಗಳ ಅಪರೂಪದ ಈ ಚಲನಚಿತ್ರಗಳನ್ನು ವೀಕ್ಷಿಸುವ ಅವಕಾಶವಿದೆ. ಜಗತ್ತಿನ ಪ್ರಸಿದ್ಧ ಜನಮನ್ನಣೆಗಳಿಸುರುವ 100 ಕ್ಕೂ ಹೆಚ್ಚು ವಿದೇಶಿ ಚಲನಚಿತ್ರಗಳು ಹಾಗೂ 30 ಕ್ಕೂ ಹೆಚ್ಚು ವಿವಿಧ ಭಾರತೀಯ ಭಾಷೆಗಳ ಚಲನಚಿತ್ರ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.

ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಾತನಾಡಿ ಇಡಿ ದೇಶದಲ್ಲಿ ಹೆಮ್ಮೆ ಪಡುವಂತ ಕಾರ್ಯಕ್ರಮ ಈ ಚಲನಚಿತ್ರೋತ್ಸವ, ಕಲಾವಿದರ ಕುರಿತು ಮುಖ್ಯಮಂತ್ರಿಗಳಿಗೆ ಹೆಚ್ಚಿನ ಕಾಳಜಿ ಇದೆ. ಸಿನಿಮಾ ನೋಡುವಾಗ ಕನಿಷ್ಟ ನಾವು ನೆಮ್ಮದಿಯಿಂದ ಮೂರು ತಾಸು ಕಳೆಯುತ್ತೇವೆ, ಟಿವಿ ಮೋಬೈಲ್ ಗಳ ಹಾವಳಿಯಿಂದ ಇಂದು ಸಿನಿಮಾ ಕ್ಷೇತ್ರ ಸಮಸ್ಯೆಯಲ್ಲಿದೆ ಎಂದು ಹೇಳಿ ಹಳೆ ಸಿನಿಮಾಗಳನ್ನು ಸ್ಮರಿಸಿಕೊಂಡ ಅವರು ಈ ಚಿತ್ರೋತ್ಸದಲ್ಲಿ ಸಿನಿಮಾಗಳ ಪ್ರದರ್ಶನದ ಜೊತೆ ಸಿನಿಮಾ ಸಮಸ್ಯೆಗಳ ಕುರಿತು ಚರ್ಚೆಗಳು ನಡೆಯಲಿ ಎಂದರು.

ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾಧ್ಯವಾದ ಸಹಾಯವನ್ನು ಹಾಗೂ ಸಹಕಾರವನ್ನು ನೀಡಲಾಗುವುದು. ಇಂತಹ ಕಾರ್ಯಕ್ರಮಗಳಲ್ಲಿ ನಡೆಯುವ ವಿಚಾರಗಳಿಗೆ ಸ್ಪಂದಿಸಲಾಗುವುದು, ಕಾರ್ಯಕ್ರಮ ಸಾರ್ಥಕತೆಗೆ ಶ್ರಮಿಸುವಂತೆ ಸಿನಿಮಾಸಕ್ತರಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ಅವರು ಮಾತನಾಡಿ ನಮ್ಮ ಸರ್ಕಾರದವತಿಯಿಂದ ಅದ್ಭುತವಾದ ಚಲನಚಿತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿದೆ, ಸಿನಿಮಾ ಸಮಾಜದ ಒಂದು ಭಾಗ, ಪ್ರತಿ ವಿಷಯದಲ್ಲಿ ಸಿನಿಮಾ ಕೊಡುಗೆ ಅಪಾರವಾಗಿದೆ, ಎಷ್ಟೇ ಕಷ್ಟದಲ್ಲಿದ್ದರು ಸಹ ಜನರಿಗೆ ಸಿನಿಮಾ ಮನರಂಜನೆ ನೀಡುತ್ತದೆ, ಇದೊಂದು ಅತ್ಯಂತ ಪ್ರಭಾವಶಾಲಿ ಮಾಧ್ಯಮ ಆಗಿದ್ದು, ಸಿನಿಮಾ ಮುಖಾಂತರ ಮನುಷ್ಯ ಮತ್ತು ಮನುಷ್ಯತ್ವವನ್ನು ಬೆಸೆಯುವ ಕೆಲಸವಾಗಬೇಕು, ಸಿನಿಮಾ ಕ್ಷೇತ್ರ ಮರೆತಿರುವುದನ್ನು ಮತ್ತೇ ಮರುಕಳಿಸಲಿ, ಪ್ರಕಾಶ್ ರೈ ಕೇವಲ ನಟರಲ್ಲ ಅವರೊಬ್ಬ ಮಾನವೀಯ ಕಾಳಜಿಯುಳ್ಳ ಜವಾಬ್ಧಾರಿ ಯುತ ನಾಗರೀಕ ಎಂದು ಹೇಳಿದರು.

CM Siddharamaiah ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಈ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ಸುಮಾರು 255 ಚಿತ್ರಗಳು ಪ್ರದರ್ಶನ ಹಮಿಕೊಂಡಿದ್ದು ಅದರಲ್ಲಿ 65 ಮಹಿಳಾ ನಿರ್ದೇಶಕರ ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಚಿತ್ರೋತ್ಸವವನ್ನು ಮಹಿಳೆಯರಿಗೆ ಅರ್ಪಿಸಿರುವುದು ಅತ್ಯಂತ ಗೌರವಯುತ ಕಾರ್ಯವಾಗಿದೆ. ಸರ್ಕಾರ ಚಿತ್ರದ್ಯೋಮಕ್ಕೆ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ ಅದರಲ್ಲಿ ಮುಖ್ಯವಾಗಿ ಮೈಸೂರಿನಲ್ಲಿ ಚಲನಚಿತ್ರ ನಗರಿ, ಅಕಾಡೆಮಿ ಕಟ್ಟಡದಲ್ಲಿ ಮಲ್ಟಿಫ್ಲೆಕ್ಸ್ ಚಿತ್ರಮಂದಿರ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಯೋಜನೆ , ಕನ್ನಡ ಚಿತ್ರಗಳಿಗಾಗಿ ಓಟಿಟಿ ಸೇರಿದಂತೆ ಚಲನ ಚಿತ್ರ ಕಾರ್ಮಿಕರಿಗಾಗಿ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿರುದಕ್ಕೆ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.

ಈ ಬಾರಿಯ ವಿಶೇಷವೆಂದರೆ ಲುಲು ಮಾಲ್ ಆವರಣದಲ್ಲಿ ಪ್ರತಿದಿನಸಂಜೆ 7 ಗಂಟೆಗೆ ಟೆಂಟ್ ಸಿನಿಮಾ ಮಾದರಿಯಲ್ಲಿ ಓಪನ್ ಏರ್ ಥೇಟರ್ ನಲ್ಲಿ ಸಿನಿಮಾ ಪ್ರದರ್ಶನ ನಡೆಯಲಿದೆ. ಚಲನ ಚಿತ್ರ ನಿರ್ಮಾಣ ಹಾಗೂ ಚಿತ್ರೀಕರಣಕ್ಕಾಗಿ ಸಂಬಂಧಿಸಿದಂತೆ ಅನುಮೋದನೆಗಳನ್ನು ಪಡೆಯಲು ಸಿಂಗಲ್ ವಿಂಡೋ ಯೋಜನೆ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿದರು.

ಚಲನ ಚಿತ್ರೋತ್ಸವ ಕಲಾತ್ಮಕ ನಿರ್ದೇಶಕರಾದ ಮುರಳಿ ಅವರು ಮಾತನಾಡಿ ಈ ಬಾರಿಯ ವಿಶೇಷತೆಗಳನ್ನು ವಿವರಿಸಿದರು. ಕನ್ನಡ ಚಲನಚಿತ್ರದ ಸಾಧಕರ ಸಿನಿಮಾಯಾನವನ್ನು ಸಹ ಈ ಚಲನಚಿತ್ರೋತ್ಸವದಲ್ಲಿ ಸಂಭ್ರಮಿಸಲಾಗುತ್ತಿದೆ. ಇದೊಂದು ಸಿನಿಮಾ ಹಬ್ಬವಾಗಿದ್ದು ಎಲ್ಲರೂ ಭಾಗವಹಿಸಿ ಎಂದು ಹೇಳಿದರು.

ಈ ಬಾರಿಯ ಚಲನ ಚಿತ್ರೋತ್ಸವದ ರಾಯಭಾರಿ ಹಿರಿಯ ನಟ ಪ್ರಕಾಶ್ ರೈ ಮಾತನಾಡಿ ಸುಮಾರು 16 ವರ್ಷಗಳ ಹಿಂದೆ ನಾನು ಈ ಚಲನಚಿತ್ರೋತ್ಸವವನ್ನು ಉದ್ಘಾಟನೆ ಮಾಡಿದ್ದೆ ಎಂದು ಸ್ಮರಿಸಿಕೊಂಡ ಅವರು ಇದೊಂದು ರಂಗನತಿಟ್ಟು ಇದ್ದಂತೆ, ಅಲ್ಲಿಯಂತೆಯೇ ಇಲ್ಲಿ ರಾಷ್ಟ್ರೀಯ-ಅಂತರಾಷ್ಟ್ರೀಯ ಸಿನಿಮಾ ಪಕ್ಷಿಗಳು ಸೇರುವುದು ವಿಶೇಷ ಎಂದರು.

ಅಂತರಾಷ್ಟ್ರೀಯ ಚಿತ್ರೋತ್ಸವ ಅಥವಾ ಸಾಹಿತ್ಯೋತ್ಸವಗಳು ಜನರ ಬದುಕು ಹಾಗೂ ಮನುಷ್ಯತ್ವವನ್ನು ಹಂಚಿಕೊಳ್ಳುವ ವೇದಿಕೆಗಳು. ಇಂತಹ ವೇದಿಕೆಗಳಿಗೆ ರಾಜಕೀಯ ಪ್ರವೇಶವಾಗಿರುವುದು ದುರಂತ, ಕೆಲದೇಶದ ಸಿನಿಮಾಗಳ ಪ್ರದರ್ಶನ ವನ್ನು ಕೇಂದ್ರ ಸರ್ಕಾರ ಅನುವ ಮಾಡಿಕೊಡದಿರುವುದನ್ನು ರಾಜ್ಯ ಸರ್ಕಾರ ಖಂಡಿಸಬೇಕು ಹಾಗೂ ಅದನ್ನು ವಿರೋಧಿಸುವ ಮೂಲಕ ನಮ್ಮ ಚಿತ್ರೋತ್ಸವಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು.

ಪ್ಯಾಲೇಸ್ತೀನಿ ಸಿನಿಮಾಗಳನ್ನು ಬೆಂಬಲಿಸಿ ಕವನ ವಾಚನ ಮಾಡಿದ ಅವರು ವಿಜಯನಗರ ಜಿಲ್ಲೆಯ ಅಂಕಸಮುದ್ರ ಪಕ್ಷಿದಾಮವನ್ನು ಹೋಲಿಸಿ ಮಾತನಾಡಿ ಇಂತಹ ಸಾಂಸ್ಕೃತಿಕ ವಿನಿಮಯದ ಕಾರ್ಯಕ್ರಮದಲ್ಲಿ ರಾಜಕೀಯ ಮಾಡದಂತೆ ಪ್ರತಿರೋಧವನ್ನು ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಈ ಬಾರಿಯ ಚಲನಚಿತ್ರೋತ್ಸವದ ಸಿಗ್ನೇಚರ್ ಫಿಲ್ಮ್ ಬಿಡುಗಡೆ ಮಾಡಿದರು.

ಕಾಂತರ ಸಿನಿಮಾ ಖ್ಯಾತಿಯ ನಟಿ ರುಕ್ಮಿಣಿ ವಸಂತ ಅವರು ಮಾತನಾಡಿ ಇಷ್ಟು ದೊಡ್ಡ ಕಾರ್ಯಕ್ರಮಕ್ಕೆ ನನ್ನಂತ ಯುವನಟಿಯನ್ನು ಆಹ್ವಾನಿಸಿರುವುದು ನನಗೆ ಸಿಕ್ಕ ಸೌಭಾಗ್ಯ, ಬೆಂಗಳೂರು ಎಲ್ಲಾ ಕಲೆಗಳ ನೆಲೆ, ಸಿನಿಮಾ ಎಲ್ಲಾ ಕಲೆಯನ್ನು ಬಳಸಿಕೊಳ್ಳುವ ಮಾಧ್ಯಮ, ಎಲ್ಲಾ ರಾಷ್ಟ್ರಗಳ ಸಿನಿಮಾಗಳನ್ನು ನೋಡುವ ಮೂಲಕ ಸಿನಿಮಾಸಕ್ತರು ಕಲಿಯಲು ಇದೊಂದು ವೇದಿಕೆ. ಮುಖ್ಯವಾಗಿ ತಂತ್ರಜ್ಞರ ಹಾಗೂ ಸಿನಿಮಾ ಪ್ರಿಯರ ಸಿನಿಮಾ ವಿಷಯಗಳ ವಿನಿಮಯ ಅತ್ಯಂತ ಸಹಾಯಕವಾಗಲಿದೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶ್ರೀಮತಿ ಬಿ.ಬಿ.ಕಾವೇರಿ ಅವರು ಸ್ವಾಗತ ಮಾಡಿ ಮಾತನಾಡಿ ವಿಶ್ವದ ಅತ್ಯುತ್ತಮ ಸಿನಿಮಾಗಳನ್ನು ವೀಕ್ಷಿಸಲು ಕಾತರಿಸಿದ ಎಲ್ಲಾ ವೀಕ್ಷಕರು ಆನಂದಿಸುತ್ತಿದ್ದಾರೆ ಎನ್ನುವ ಭರವಸೆ ಇದೆ , ಚಲನಚಿತ್ರೋತ್ಸವಕ್ಕೆ ಆಯ್ಕೆ ಮಾಡಲಾದ ಸಿನಿಮಾಗಳ ಕುರಿತು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯೆ. ಹಿರಿಯ ನಟಿ ಹಾಗೂ ಮಾಜಿ ಸಚಿವರಾದ ಶ್ರೀಮತಿ ಉಮಾಶ್ರೀ ಹಾಗೂ ಹಿರಿಯ ನಟಿ ಮತ್ತು ಮಾಜಿ ಸಚಿವೆ ಡಾ. ಜಯಮಾಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ ನಿಂಬಾಳ್ಕರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ವಿನೋದ್ ಚಂದ್ರ, ವಾರ್ತಾ ಇಲಾಖೆಯ ಚಲನಚಿತ್ರ ಶಾಖೆಯ ಜಂಟಿ ನಿರ್ದೇಶಕ ಮಂಜುನಾಥ್ ಡೊಳ್ಳಿನ್ , ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು, ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು, ಮುಖ್ಯಮಂತ್ರಿ ಚಂದ್ರು, ಚೇತನ್ ಅಹಿಂಸ, ಪೂಜಾ ಗಾಂಧಿ, ಶ್ರೀನಗರ ಕಿಟ್ಟಿ, ಶರತ್ ಲೋಹಿತಾಶ್ವ, ಅನು ಪ್ರಭಾಕರ್, ರಘು ಮುಖರ್ಜಿ, ರಾಕ್ಲೈನ್ ವೆಂಕಟೇಶ್, ಸುಂದರ್ ರಾಜ್ ಮುಂತಾದವರು ಹಾಜರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಡಾ. ಜ್ಯೋತ್ಸ್ನಾ ಶ್ರೀಕಾಂತ್ ಅವರ ನೇತೃತ್ವದಲ್ಲಿ 35 ಕಲಾವಿದರಿಂದ ‘ವಿಶ್ವ ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಚಿತ್ರೋತ್ಸವದ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ಉದ್ಘಾಟನಾ ವೇದಿಕೆಯಲ್ಲಿ ನೆದರ್ಲ್ಯಾಂಡ್ ದೇಶದ ‘ಪೋರ್ಟ್ ಬ್ಯಾಗೇಜ್’ ಚಿತ್ರವು ಉದ್ಘಾಟನಾ ಚಿತ್ರವಾಗಿ ಪ್ರದರ್ಶನವಾಯಿತು.

ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

0

2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಲ್ಲಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಎಲ್ಲಾ ವರ್ಗಗಳ ಆಸಕ್ತ ರೈತರಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ.
ಈ ಯೋಜನೆಯಡಿ 5 ಎಕರೆವರೆಗಿನ ಪ್ರದೇಶಕ್ಕೆ ಶೇಕಡಾ 90% ರಷ್ಟು ಸಹಾಯಧನ ಹಾಗೂ ಮೇಲ್ಪಟ್ಟ ಪ್ರದೇಶಕ್ಕೆ ಶೇಕಡಾ 45% ರ ದರದಂತೆ ಸಹಾಯಧನವನ್ನು ಒಟ್ಟಾರೆ ಗರಿಷ್ಠ 12.50 ಎಕರೆ ಪ್ರದೇಶದವರೆಗೆ ನೀಡಲು ಅವಕಾಶವಿದ್ದು, ಈಗಾಗಲೇ 7 ವರ್ಷಗಳ ಹಿಂದೆ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ಸಹಾಯಧನ ಪಡೆದಿರುವ ರೈತರು ಅವುಗಳು ಹಾಳಾಗಿದ್ದಲ್ಲಿ ಪುನಃ ಸೂಕ್ಷ್ಮ ನೀರಾವರಿ ಅಳವಡಿಸಿಕೊಂಡಲ್ಲಿ ಅವರೂ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. ಸಹಾಯಧನವನ್ನು ಯೋಜನೆಯ ಮಾರ್ಗಸೂಚಿ ಹಾಗೂ ಅನುದಾನ ಲಭ್ಯತೆ ಮತ್ತು ಜೇಷ್ಠತೆಯ ಅನುಸಾರ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹೋಬಳಿ/ತಾಲೂಕು ಮಟ್ಟದ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸುವAತೆ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿರುತ್ತಾರೆ.

Agricultural University ಕೃಷಿ ವಿವಿಯಲ್ಲಿ ರೇಂಜರ್, ರೋವರ್ ಘಟಕ ಉದ್ಘಾಟನೆ

0

Agricultural University ಕೃಷಿ ವಿಶ್ವವಿದ್ಯಾಲಯದಲ್ಲಿ ರೇಂಜರ್, ರೋವರ್ ಘಟಕ ಘಟಕ ಸ್ಥಾಪನೆ ಆಗುತ್ತಿರುವುದು ವಿಶೇಷ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಅರ್.ಸಿಂಧಿಯಾ ಹೇಳಿದರು.
ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಅಡಿಯಲ್ಲಿ ರೇಂಜರ್ ಮತ್ತು ರೋವರ್ ಘಟಕ ಉದ್ಘಾಟಿಸಿ ಮಾತನಾಡಿ, ಕೃಷಿ ವಿವಿಯ ಪರಿಸರ ಹೊಸ ಕಲಿಕೆಯ ಅನುಭವ ನೀಡುತ್ತದೆ. ಕೃಷಿ ವಿವಿಯಲ್ಲಿ ಕ್ಯಾಂಪ್ ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.
ಕುಲಸಚಿವ ಡಾ. ಕೆ.ಸಿ.ಶಶಿಧರ ಮಾತನಾಡಿ, ಕೃಷಿ ವಿವಿಗಳಲ್ಲಿ ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ಈಗಾಗಲೇ ಪಠ್ಯದಲ್ಲಿ ಇವೆ. ಅದೇ ಮಾದರಿಯಲ್ಲಿ ರೇಂಜರ್ ಮತ್ತು ರೋವರ್ ಸೇರಿಸಲು ಸಾಧ್ಯ. ಈ ಬಗ್ಗೆ ಪ್ರಯತ್ನ ಮಾಡಲಾಗುವುದು ಎಂದರು.
ಕುಲಪತಿ ಡಾ. ಆರ್.ಸಿ.ಜಗದೀಶ ಮಾತನಾಡಿ, ನಾಯಕತ್ವ ಗುಣ ಬೆಳಸುವಲ್ಲಿ ರೇಂಜರ್ ಮತ್ತು ರೋವರ್ ಅತ್ಯುತ್ತಮ ಪಾತ್ರ ವಹಿಸಲಿದೆ. ನಮ್ಮ ವಿದ್ಯಾರ್ಥಿಗಳಿಗೆ ಇಂತಹ ಅವಕಾಶ ಕೊಡಬೇಕು ಎನ್ನುವದೇ ನನ್ನ ಗುರಿ ಎಂದರು.
ರೋವರ್ ಘಟಕದ ಮುಖ್ಯಸ್ಥರಾಗಿ ಡಾ. ಸತೀಶ್ ವೈ ಹಾಗೂ ರೇಂಜರ್ ಘಟಕದ ಮುಖ್ಯಸ್ಥರಾಗಿ ಡಾ. ಬಸಮ್ಮ ಆಲದ ಕಟ್ಟಿ ಅವರನ್ನು ವಿಶ್ವವಿದ್ಯಾಲಯ ನೇಮಕ ಮಾಡಿತು. ಬಸಮ್ಮ ಕಾರ್ಯಕ್ರಮ ಸಂಘಟಿಸಿದರು.
Agricultural University ಡಾ. ಹೇಮ್ಲಾನಾಯಕ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಶಿವಮೊಗ್ಗ ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್, ಜಿಲ್ಲಾ ಆಯುಕ್ತ (ರೋವರ್ ವಿಭಾಗ) ಕೆ.ರವಿ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ ಕೆ.ವಿ., ವಿಜಯಕುಮಾರ್, ವಿಶ್ವವಿದ್ಯಾಲಯದ ಡಾ ಸಿ.ಜೆ. ಶ್ರೀಧರ, ಡಾ. ರವಿಕುಮಾರ್ ಡಾ. ರಾಮಕೃಷ್ಣ ಹೆಗ್ಗಡೆ, ನಮ್ರತ, ಮಾನ್ಯ, ರಕ್ಷಿತ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಉಪಸ್ಥಿತರಿದ್ದರು.

Sri Kshetra Dharmasthala Village Development Yojana Trust ಮಾನವೀಯ ಮೌಲ್ಯಗಳ ಅರಿವಿಲ್ಲದ ಅಭಿವೃದ್ಧಿ ನಿರರ್ಥಕ :ಹೆಬ್ಬಾಳು ಶ್ರೀ-

0

ದಾವಣಗೆರೆ

Sri Kshetra Dharmasthala Village Development Yojana Trust ಮಾನವೀಯ ಮೌಲ್ಯಗಳ ಅರಿವಿಲ್ಲದ ಅಭಿವೃದ್ಧಿಯು ನಿರರ್ಥಕ, ಸಮಾಜದ ಹಿತ ಬಯಸುವುದರಲ್ಲಿ ಮಾನವೀಯ ಮೌಲ್ಯಗಳಿವೆ ಎಂದು ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಮಹಾ ಸ್ವಾಮಿಗಳು ಹೇಳಿದರು.

ಅವರಿಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಹೆಬ್ಬಾಳು ವಿರಕ್ತಮಠದಲ್ಲಿ ನೆರವೇರಿದ ಸಾಮೂಹಿಕ ಸಹಸ್ರ ಬಿಲ್ವಾರ್ಚನೆ, ಧಾರ್ಮಿಕ ಸಭಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಟ್ಟರೆ ಸಾಲದು ಸಂಸ್ಕೃತಿ ಸಂಸ್ಕಾರವನ್ನು ಕೊಡಬೇಕು ಇದರಲ್ಲಿ ತಾಯಂದಿರ ಪಾತ್ರ ಮಹತ್ತರವಾಗಿದೆ ಎಂದರು.

ಧಾರ್ಮಿಕ ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಜೀವನೋದ್ಧಾರಕ್ಕೆ ಆರ್ಥಿಕ ನೆರವು ಅವಶ್ಯ ಆದರೆ ಆತ್ಮೋದ್ಧಾರಕ್ಕೆ ಧಾರ್ಮಿಕ ಅರಿವು ಅವಶ್ಯ. ಧಾರ್ಮಿಕ ಅರಿವು ಎಂದರೆ ಸಮಾಜದಲ್ಲಿ ಅಹಂಕಾರದಿಂದ ಬೀಗದೆ ಸಂಸ್ಕಾರದಿಂದ ಬಾಗುವುದು. ಸಾಮೂಹಿಕವಾದ ಧಾರ್ಮಿಕ ಆಚರಣೆಗಳಲ್ಲಿ ‘ನಾನು’ ಎಂಬುವ ಅಹಂಭಾವ ದೂರವಾಗಿ ‘ನಾವು’ ಎಂಬುವ ವಿಶಾಲಭಾವ ಮೂಡುತ್ತದೆ ಎಂಬುದನ್ನು ಸ್ವಾರಸ್ಯಕರ ನಿದರ್ಶನಗಳ ಮೂಲಕ ವಿವರಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದಾವಣಗೆರೆ ಅಧ್ಯಕ್ಷ ಎಸ್ ಕೆ ಚಂದ್ರಶೇಖರ್ ಧಾರ್ಮಿಕ ಸಭಾದ ಉದ್ಘಾಟನೆ ನೆರವೇರಿಸಿದರು. ಗ್ರಾಮಾಭಿವೃದ್ಧಿ ಯೋಜನೆ ಯ ಜಿಲ್ಲಾ ನಿರ್ದೇಶಕ ಎಂ ಲಕ್ಷ್ಮಣ್ ಪ್ರಾಸ್ತಾವಿಕ ನುಡಿಗಳ ನಾಡಿದರು. ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಅಣಬೇರು ಮಂಜಣ್ಣ, ಎಂ ರುದ್ರಪ್ಪ, ನರೇಂದ್ರಬಾಬು, ಆನಂದಪ್ಪ, ಮಹಾ ರುದ್ರಯ್ಯ, ರುದ್ರಮುನಿ, ಮಹೇಂದ್ರಪ್ಪ, ಮಹಾಂತೇಶ, ಬಸವರಾಜಪ್ಪ, ಶಶಿಕಲಾ, ಬಸಮ್ಮ, ಚಂದ್ರಕಲಾ ಹಾಗೂ ಕೊಡಗನೂರು ವಲಯ ಪದಾಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದು ಯೋಜನಾಧಿಕಾರಿ ಸತೀಶ್ ಸ್ವಾಗತ ಕೋರಿದರು. ಶಾಲಾ ಮಕ್ಕಳು ಸಾಂಪ್ರದಾಯಿಕ ನೃತ್ಯಗಳನ್ನು ಪ್ರಸ್ತುತಪಡಿಸಿದರು.

Chamber Of Commerce Shivamogga ಕೈಗಾರಿಕೆ, ತರಬೇತಿ ಸಂಸ್ಥೆಗಳ ನಡುವೆ ನೇರ ಸಂಬಂಧವಿರಲಿ : ಬಿ.ಗೋಪಿನಾಥ್

0

Chamber Of Commerce Shivamogga ಕೌಶಲ್ಯಗಳ ಅಸಮಾನತೆಯಿಂದ ಉದ್ಯೋಗ ಭರ್ತಿ ಮಾಡುವುದು ಸವಾಲಿನ ಕೆಲಸವಾಗಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ ಕಾಸ್ಟ್ ಸಭಾಂಗಣದಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಅಧಿಕಾರಿಗಳು, ಜಿಲ್ಲೆಯ ಎಲ್ಲ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಏರ್ಪಡಿಸಿದ್ದ ಕೌಶಲ್ಯ ಅಂತರ ಅಧ್ಯಯನ, ವಿವಿಧ ಉದ್ಯಮ ಹಾಗೂ ಕೈಗಾರಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ಬೇಕಾಗಿರುವ ವಿವಿಧ ಕೌಶಲ್ಯಗಳ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಂತ್ರಿಕ ಜ್ಞಾನ ಮತ್ತು ಉದ್ಯೋಗದ ಅವಶ್ಯಕತೆಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಕೌಶಲ್ಯ ಅವಶ್ಯಕ. ಉದ್ಯೋಗದಾತರು ನಿರೀಕ್ಷಿಸುವ ಕೌಶಲ್ಯಗಳು ಮತ್ತು ಉದ್ಯೋಗಿಗಳು ಹೊಂದಿರುವ ನಿಜವಾದ ಕೌಶಲ್ಯಗಳ ನಡುವಿನ ಅಸಮಾನತೆ ಇದ್ದು, ಕೌಶಲ್ಯ ಕಲಿಯಲು ಪ್ರೋತ್ಸಾಹಿಸಬೇಕಿದೆ ಎಂದು ತಿಳಿಸಿದರು.

ವೃತ್ತಿಗಳನ್ನು ಗುರಿಯಾಗಿಸಿ ಮತ್ತು ಅವರಿಗೆ ಅಗತ್ಯವಾದ ತರಬೇತಿ ಒದಗಿಸಬೇಕು. ಉದ್ಯೋಗಗಳಿಗೆ ಸಂಬಂಧಿಸಿದ ಉದ್ಯಮದ ಅವಶ್ಯಕತೆಗಳನ್ನು ಪೂರೈಸುವ ಸಾಮರ್ಥ್ಯಗಳಿಗೆ ಒತ್ತು ನೀಡಬೇಕು. ಪಠ್ಯಕ್ರಮವನ್ನು ನವೀಕರಿಸಲು ಮತ್ತು ಪ್ರಾಯೋಗಿಕ ತರಬೇತಿಯನ್ನು ನೀಡಲು ಉದ್ಯಮ ಸಮೂಹಗಳನ್ನು ಬಳಸುವುದು ಇಂದಿನ ಅತ್ಯವಶ್ಯಕವಾಗಿದೆ ಎಂದರು.

ಕೈಗಾರಿಕೆಗಳಲ್ಲಿ ಕಾರ್ಮಿಕರ ಕೊರತೆ ಇದೆ ಎಂಬುದು ರಹಸ್ಯವಲ್ಲ. ತಾಂತ್ರಿಕ ಕೆಲಸಗಳಿಗೆ ಕೌಶಲ್ಯವಿಲ್ಲದ ಜನರನ್ನು ನೇಮಿಸಿಕೊಳ್ಳಲು ಸಾಧ್ಯವಿಲ್ಲ. ಸಾಂಪ್ರದಾಯಿಕ, ಕಡಿಮೆ ಬೇಡಿಕೆಯ ಕೌಶಲ್ಯಗಳಿಗಿಂತ ಮುಂದುವರಿದ ವಲಯಗಳ ಮೇಲೆ ಕೇಂದ್ರೀಕರಿಸುವ ಗುರಿಯನ್ನು ಕೈಗಾರಿಕಾ ತರಬೇತಿ ಸಂಸ್ಥೆಗಳು ಹೊಂದಬೇಕು ಎಂದು ತಿಳಿಸಿದರು.

ಮಾಚೇನಹಳ್ಳಿ ಕೈಗಾರಿಕಾ ಸಂಘದ ಕಾರ್ಯದರ್ಶಿ ರಾಜೇಶ್ ಮಾತನಾಡಿ, ಟ್ರೇಡ್ ಸ್ಕೂಲ್ ಕೌಶಲ್ಯ ಅಂತರವನ್ನು ನಿವಾರಿಸಲು ವಿದ್ಯಾರ್ಥಿಗಳು ತಮ್ಮ ಕ್ಷೇತ್ರವನ್ನು ಆಳವಾಗಿ ಅರ್ಥಮಾಡಿಕೊಳ್ಳಬೇಕು ಎಂದರು

Chamber Of Commerce Shivamogga ಮೂಲಭೂತ ಸೌಕರ್ಯಗಳ ಸಮಿತಿ ಚೇರ್ಮನ್ ಗಣೇಶ್ ಎಂ ಅಂಗಡಿ ಮಾತನಾಡಿ, ಐಟಿಐ ತರಬೇತುದಾರರ ಗುಣಮಟ್ಟ ಹೆಚ್ಚಿಸಿಕೊಳ್ಳಬೇಕು. ಕೆಲಸಗಾರರು ನೇಮಕಗೊಳ್ಳುವ ಮೊದಲು ತಮ್ಮ ಕೆಲಸಗಳಿಗೆ ಜ್ಞಾನ ಮತ್ತು ಕೌಶಲ್ಯಗಳನ್ನು ಹೊಂದಿರಬೇಕು ಎಂದು ತಿಳಿಸಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ನಿರ್ದೇಶಕರಾದ ಎಸ್.ಎಸ್.ಉದಯಕುಮಾರ್, ಪ್ರದೀಪ್ ವಿ ಎಲಿ, ಎಸ್.ಪಿ.ಶಂಕರ್, ಸಿ.ಎ.ಶರತ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಅಧಿಕಾರಿಗಳು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲರು ಇತರರು ಭಾಗವಹಿಸಿದ್ದರು.

Karnataka State Commission for Protection of Child Rights ವಿಶೇಷಚೇತನ ಮಕ್ಕಳಿಗೆ ಸಾಮಾನ್ಯ ಶಾಲೆಯಲ್ಲಿ ದಾಖಲಾತಿ ನೀಡಬೇಕು : ಅಪರ್ಣಾ ಕೊಳ್ಳ

0

Karnataka State Commission for Protection of Child Rights ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಶಾಲೆಯಲ್ಲಿ ಓದಲು ಅವಕಾಶ ನೀಡಬೇಕು. ಹಾಗೂ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕಾರ್ಯಕರ್ತರಿಗೆ ಪೋಕ್ಸೋ, ಬಾಲ್ಯ ವಿವಾಹ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತರಬೇತಿ ನೀಡುವುದು ಅತ್ಯವಶ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ ಕೊಳ್ಳ ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಜಿಲ್ಲಾ ಡಯಟ್ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು(ವಿಆರ್‌ಡಬ್ಲುö್ಯ) ಮತ್ತು ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್‌ಡಬ್ಲುö್ಯ) ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು(ಎಂಆರ್ ಡಬ್ಲುö್ಯ) ಗಳಿಗೆ ಬಾಲ್ಯ ವಿವಾಹ, ಪೋಕ್ಸೋ ಮತ್ತು ಮಕ್ಕಳ ರಕ್ಷಣೆ ಕುರಿತು ಏರ್ಪಡಿಸಿದ್ದ ಅರಿವು/ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಶೇಷ ಮಕ್ಕಳ ರಕ್ಷಣೆ ಕುರಿತು ಆಯೋಜಿಸಿರುವ ವಿಶೇಷ ತರಬೇತಿ ಇದು. ರಾಜ್ಯದಲ್ಲಿ 10 ಲಕ್ಷ ಜನ ವಿಶೇಷ ಚೇತನರಿದ್ದು ಶೇ.5 ರಿಂದ 7 ರಷ್ಟಿದ್ದಾರೆ. ಇದರಲ್ಲಿ ಶೇ.40 ಮಕ್ಕಳು ಇದ್ದಾರೆ. ಆದ್ದರಿಂದ ಇವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು, ಹಕ್ಕುಗಳು ಲಭಿಸುತ್ತಿವೆಯೇ ಎಂದು ಪರಿಶೀಲಿಸುವ ಅವಶ್ಯಕತೆ ಇದೆ.
ವಿಶೇಷ ಚೇತನ ಎಲ್ಲ ಮಕ್ಕಳಿಗೆ ಅಗತ್ಯವಾಗಿ ಶಿಕ್ಷಣ ನೀಡಬೇಕು. ಶ್ರವಣ ಮತ್ತು ಕಣ್ಣಿನ ದೋಷ ಹೊರತುಪಡಿಸಿ ಉಳಿದ ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಶಾಲೆಗಳಲ್ಲಿ ದಾಖಲಾತಿ ಸಿಗಬೇಕು. ಕೆಲವು ಶಾಲೆಗಳಲ್ಲಿ ದಾಖಲಾತಿ ನೀಡುತ್ತಿಲ್ಲ್ಲ ಎಂಬ ದೂರು ಇದ್ದು, ಇದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯುಡಿಐಡಿ ಕಾರ್ಡ್ ಸೇರಿದಂತೆ ಸರ್ಕಾರಿ ಸೌಲಭ್ಯಗಳು ಸಮರ್ಪಕವಾಗಿ ಸಿಗುವಂತೆ ವಿಶೇಷ ಚೇತನರ ಪರವಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರು ನಿಗಾ ವಹಿಸಬೇಕು. ಶೇ.70 ರಷ್ಟು ವಿಶೇಷಚೇತನರು ಗ್ರಾಮೀಣ ಭಾಗದಲ್ಲಿದ್ದು, ಮನೆಯಲ್ಲಿರುವ ವಿಶೇಷ ಮಕ್ಕಳಿಗೆ ಲಭಿಸಬೇಕಾದ ಸೌಲಭ್ಯಗಳ ಬಗ್ಗೆ ಗಮನ ಹರಿಸಬೇಕು. ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ, ಪೋಕ್ಸೊ ಹೆಚ್ಚಾಗಿದ್ದು, ತಡೆಯಲು ಜಾಗೃತಿ ಹೆಚ್ಚಿಸಬೇಕು, ವಿಶೇಷ ಚೇತನ ಮಕ್ಕಳಲ್ಲಿ ಮಕ್ಕಳ ಸಹಾಯವಾಣಿ 1098 ಬಗ್ಗೆಯೂ ಜಾಗೃತಿ ಮೂಡಿಸಬೇಕು.
ಬಾಲ್ಯ ವಿವಾಹಕ್ಕೆ ಸಂಬAಧಿಸಿದAತೆ ಮಕ್ಕಳ ನಿಶ್ಚಿತಾರ್ಥ ಆದರೂ ಕೂಡ ಎಫ್‌ಐಆರ್ ದಾಖಲಿಸಿ ಕ್ರಮ ವಹಿಸಬಹುದಾಗಿದ್ದು ಈ ಬಗ್ಗೆಯೂ ಜಾಗೃತಿ ಮೂಡಿಸಿ ಕ್ರಮ ಜರುಗಿಸಬೇಕೆಂದರು.

Karnataka State Commission for Protection of Child Rights ಹಾಗೂ ವಿಶೇಷ ಚೇತನರ ಮಾಹಿತಿ ಅಪ್‌ಡೇಟ್ ಮಾಡುವ ಪಂಚತAತ್ರ ತಂತ್ರಾAಶದ ಬಗ್ಗೆ ವಿಆರ್‌ಡಬ್ಲುö್ಯ, ಯುಆ ರ್‌ಡಬ್ಲುö್ಯ, ಎಂಆರ್‌ಡಬ್ಲುö್ಯ ಗಳಿಗೆ ತರಬೇತಿ ನೀಡಬೇಕು ಎಂದು ಸೂಚಿಸಿದ ಅವರು ಕಾರ್ಯಕರ್ತರಿಂದ ತಾಲ್ಲೂಕುವಾರು ಸಮಸ್ಯೆಗಳ ಕುರಿತು ಆಲಿಸಿ, ಸಂವಾದ ನಡೆಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ಮಾತನಾಡಿ, ಕಾಯ್ದೆ-ಕಾನೂನುಗಳನ್ನು ತಿಳಿಯುವ ಜೊತೆಗೆ ಕಾರ್ಯಗತಗೊಳಿಸುವುದು ಬಹಳ ಮುಖ್ಯವೆಂದು ಆಯೋಗದ ಸದಸ್ಯರು ನಮ್ಮನ್ನು ‘ಆ್ಯಕ್ಷನ್ ಮೋಡ್’ ಗೆ ತಂದ ಕಾರಣ ಪೋಕ್ಸೋ, ಬಾಲ್ಯವಿವಾಹ ತಡೆಯಲು ಜಿಲ್ಲೆಯಾದ್ಯಂತ ಮಿಷನ್ ಸುರಕ್ಷಾ ಅಭಿಯಾನವನ್ನು ಅತ್ಯಂತ ಪರಿಣಾಮಕಾರಿಗೊಳಿಸಲಾಗಿದೆ. ಅಭಿಯಾನದ ನಂತರ ಕಳೆದ ಸಾಲಿಗಿಂತ ಈ ಬಾರಿ ಹೆಚ್ಚಿನ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಬಹುದಾಗಿದ್ದು ಇದಕ್ಕೆ ಕಾರಣ ಜಾಗೃತಿ ಮತ್ತು ಅರಿವು ಮೂಡಿಸಿರುವುದಾಗಿದೆ.
ಕಾವಲು ಸಮಿತಿಯ ಮೂಲಕ ಗ್ರಾ.ಪಂ ಮಟ್ಟದಲ್ಲಿ ಗ್ರಾ.ಪಂ ಅಧ್ಯಕ್ಷರು, ಪಿಡಿಓ ಮತ್ತು ಇತರೆ ಅಧಿಕಾರಿ ಸಿಬ್ಬಂದಿಗಳೊಡನೆ ಸಭೆಗಳನ್ನು ನಡೆಸಿ ಅಲ್ಲಿ ಶಾಲೆ ಬಿಟ್ಟ ಮಕ್ಕಳೊಂದಿಗೆ ಸಂವಾದ ನಡೆಸಲಾಗಿದೆ. ಅನಾರೋಗ್ಯ, ಏಕ ಪೋಷಕ ಮತ್ತಿತರೆ ಕಾರಣಗಳಿಂದ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿದ್ದು ಮರಳಿ ಶಾಲೆಗೆ ಕರೆ ತರಲಾಗುತ್ತಿದೆ. ಹಾಗೂ ಮುಂದಿನ ದಿನಗಳಲ್ಲಿ ಬಾಲ್ಯ ವಿವಾಹ, ಪೋಕ್ಸೊ ಪ್ರಕರಣ ನಿಯಂತ್ರಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಜಿಲ್ಲೆಯ 1234 ಶಾಲೆಗಳಲ್ಲಿ ಕಾನೂನಿನ ಕುರಿತು, ಬಾಲ್ಯ ವಿವಾಹ, ಪೋಕ್ಸೋ, ಮಕ್ಕಳ ಹಕ್ಕುಗಳ ಕುರಿತು ಶಿಕ್ಷಕರು ಮತ್ತು ಮಕ್ಕಳಿಂದಲೇ ಜಾಗೃತಿ ಮೂಡಿಸುವ, ಚರ್ಚಿಸುವ ಸಾಕ್ಷರತಾ ಕ್ಲಬ್‌ಗಳನ್ನು ಆರಂಭಿಸಲಾಗಿದೆ ಎಂದರು.
ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸುವರ್ಣ ನಾಯಕ್ ಮಾತನಾಡಿ, ಇಲಾಖೆಯ ಸೂಚನೆ ಮೇರೆಗೆ ವಿಆರ್‌ಡಬ್ಲುö್ಯ, ಯುಆರ್‌ಡಬ್ಲುö್ಯ, ಎಂಆರ್‌ಡಬ್ಲುö್ಯ ಗಳಿಗೆ ತರಬೇತಿ ನೀಡಲಾಗುತ್ತಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ತಿಳಿಸಿದಂತೆ ಜಿಲ್ಲೆಯ ಏಳೂ ತಾಲ್ಲೂಕುಗಳಲ್ಲಿ ಪಂಚತAತ್ರ ತಂತ್ರಾAಶದ ಬಳಕೆ ಬಗ್ಗೆ ಅವರಿಗೆ ತರಬೇತಿ ನಿಡಲಾಗುವುದು. ವಿಶೇಷ ಚೇತನ ಮಕ್ಕಳಿಗೆ ಲಭಿಸಬೇಕಾದ ಸರ್ಕಾರದ ಸೌಲಭ್ಯಗಳು, ಶಿಕ್ಷಣ ಮತ್ತು ರಕ್ಷಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕವೂ ಜೊತೆಗಿದ್ದು ಅವರ ಸಮನ್ವಯದೊಂದಿಗೆ ಕೆಲಸ ಮಾಡೋಣ ಎಂದರು.
ಜಿಲ್ಲೆಯಲ್ಲಿ 3085 ವಿಶೇಷ ಮಕ್ಕಳಿದ್ದು 2194 ಮಕ್ಕಳು ಸಾಮಾನ್ಯ ಶಾಲೆಯಲ್ಲಿ ಮತ್ತು 423 ವಿಶೇಷ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 7 ವಿಶೇಷ ಶಾಲೆಗಳಿವೆ. ಯಾವುದೇ ವಿಶೇಷ ಮಗು ಶಿಕ್ಷಣ, ಶಾಲೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು, ಅವರಿಗೆ ಲಭಿಸಬೇಕಾದ ಸೌಲಭ್ಯಗಳನ್ನು ನೀಡಲು ಕಾರ್ಯಕರ್ತರು ಮುತುವರ್ಜಿ ವಹಿಸಿ ಕೆಲಸ ಮಾಡಬೇಕೆಂದರು.
ಮಹಿಳಾ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಭರತ್ ಕುಮಾರ್ ಮಾತನಾಡಿ, ಪೋಕ್ಸೋ, ಬಾಲ್ಯ ವಿವಾಹಗಳನ್ನು ತಡೆಯುವಲ್ಲಿ ಜನ ಸಾಮಾನ್ಯರು, ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ. ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಿದರೆ ಪ್ರಕರಣಗಳನ್ನು ತಡೆಯಬಹುದು. ಗ್ರಾಮೀಣ ಮತ್ತು ನಗರ ಭಾಗದಲ್ಲಿ ಪ್ರಕರಣಗಳ ಸರಿಯಾದ ಮಾಹಿತಿ ನೀಡಬೇಕು. ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ಸಹಾಯವಾಣಿ 1098 ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ ಕಾನೂನಾತ್ಮಕ ಸಮಸ್ಯೆಗಳಿದ್ದಾಗ ವಿಶೇಷಚೇತನರಿಗೆ ಠಾಣೆಗೆ ಬರಲು ಕಾರ್ಯಕರ್ತರು ಸಹಾಯ ಮಾಡಬೇಕೆಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್.ಆರ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶೇಷಚೇತನರಿಗೆ ಸಹಕರಿಸಲು ಸೇವೆ ಸಲ್ಲಿಸುತ್ತಿರುವ ವಿಆರ್‌ಡಬ್ಲುö್ಯ, ಯುಆರ್‌ಡಬ್ಲುö್ಯ, ಎಂಆರ್‌ಡಬ್ಲುö್ಯ ಗಳಿಗೆ ಬಾಲ್ಯ ವಿವಾಹ, ಪೋಕ್ಸೋ ಮತ್ತು ಮಕ್ಕಳ ರಕ್ಷಣೆ ಕುರಿತು ತರಬೇತಿ ನೀಡುವುದು ಅಗತ್ಯವಾಗಿದೆ. ಏಕೆಂದರೆ ಪೋಕ್ಸೋ ಪ್ರಕರಣದಲ್ಲಿ ವಿಶೇಷ ಚೇತನ ಮಕ್ಕಳೂ ಸಹ ಇದ್ದಾರೆ.
ಜಿಲ್ಲೆಯಲ್ಲಿ 214 ಪೋಕ್ಸೋ ಹಾಗೂ 54 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ಇಲಾಖೆಯು ಏಪ್ರಿಲ್‌ನಿಂದ ಡಿಸೆಂಬರ್ ವರೆಗೂ 60 ಬಾಲ್ಯವಿವಾಹಗಳನ್ನು ತಡೆಗಟ್ಟಿದೆ. ಮಿಷನ್ ಸುರಕ್ಷಾ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದ್ದು, ಕಾವಲು ಸಮಿತಿ ಸಭೆಗಳನ್ನು ಮಾಡಲಾಗುತ್ತಿದೆ. ಮುಂದಿನ ಆರು ತಿಂಗಳಲ್ಲಿ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯೆ ರೇಖಾ.ಜಿ.ಎಂ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಖಾನ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಶಿವಮೊಗ್ಗ ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ನಲ್ಲಿ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ತಪಾಸಣಾ ಶಿಬಿರ

0

ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಎಲ್ಲರಿಗೂ ಉಚಿತವಾಗಿ ದೊರೆಯುವಂತಾಗಬೇಕೆಂದು ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ತಜ್ಞ ಡಾ.ಚಂದ್ರಶೇಖರ್ ಹೇಳಿದರು.

ದುರ್ಗಿಗುಡಿಯ ತೃಪ್ತಿ ಹೆಲ್ತ್ ಕೇರ್ ಜೆಸಿಐ ಶಿವಮೊಗ್ಗ ರಾಯಲ್ಸ್ ಸದಸ್ಯರಿಗೆ ಇಂದು ಹಮ್ಮಿಕೊಂಡಿದ್ದ ಕಿಡ್ನಿ ಮತ್ತು ಮೂತ್ರಕೋಶ ರೋಗಗಳ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಿ ಮಾತನಾಡಿದ ಅವರು, ಸಾರ್ವಜನಿಕರಲ್ಲಿ ಆರೋಗ್ಯದ ಜಾಗೃತಿ ಮೂಡಿಸುವುದು ಈ ಸಂದರ್ಭದ ತುರ್ತು ಅಗತ್ಯ ಎಂದರು.

ಜೆಸಿಐ ಸಂಸ್ಥೆಯ ಅಧ್ಯಕ್ಷೆ ಗಾನವಿ, ಕಾರ್ಯದರ್ಶಿ ತೇಜಸ್ವಿನಿ, ತಾಯಿಮನೆಯ ಸುದರ್ಶನ್, ಸಾಧನ ಟ್ರೇಡಿಂಗ್ಸ್ ನ ರಂಗನಾಥ್, ಚಿತ್ರಕೂಟ ಶ್ರೀನಿವಾಸ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿದ್ದರು.

40 ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆಯನ್ನು ಡಾ.ಚಂದ್ರಶೇಖರ್ ಮಾಡಿದರು.

Karnataka Sanga Shivamogga ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ವಸುಧಾ-ವೈಶಾಲಿ ಜನ್ಮದಿನ ಕಲಾ ಸನ್ಮಾನ ಕಾರ್ಯಕ್ರಮ

0

Karnataka Sanga Shivamogga ಕಳೆದ ನಲವತ್ತು ವರ್ಷಗಳ೦ತೆ ಈ ವರ್ಷವೂ ಕೂಡ ವಸುಧಾ-ವೈಶಾಲಿ ಜನ್ಮದಿನ ಸಮಿತಿಯು ಸ್ವಯಂ ಸಂಘ ಸಂಸ್ಥೆ “ಸಮಾನಸ” (ರಿ.) ದ ಸಹಯೋಗದೊ೦ದಿಗೆ ದಿನಾ೦ಕ 01-02-2026 ರವಿವಾರ ಸ೦ಜೆ 5 ಘ೦ಟೆಗೆ ಸರಿಯಾಗಿ ಶಿವಮೊಗ್ಗ ಕರ್ನಾಟಕ ಸಂಘದ ಹಸೂಡಿ ವೆ೦ಕಟ ಶಾಸ್ತ್ರಿ ಸಾಹಿತ್ಯ ಭವನದಲ್ಲಿ ಕಲಾ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿದೆ.

ಕಿತ್ತೂರು ರಾಣಿಚೆನ್ನಮ್ಮ ರಾಜ್ಯ ಪ್ರಶಸ್ತಿ ವಿಜೇತರೂ, ಶ್ರೀವಿದ್ಯಾ ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಶ್ರೀಮತಿ ಪೂಜಾ ರರಘುನಂದನ್, ಹಾಸನ ಇವರನ್ನು ಈ ವರ್ಷದ ಕಲಾ ಸನ್ಮಾನಿತರಾಗಿ ಆಮ೦ತ್ರಿಸಲಾಗಿದೆ. ಸನ್ಮಾನ ಸಮಾರ೦ಭದ ನ೦ತರ ಸನ್ಮಾನಿತರಿ೦ದ “ತಾಯಿಯಾಗುವುದೆ೦ದರೆ” ಎ೦ಬ “ಏಕವ್ಯಕ್ತಿ ರ೦ಗಪ್ರದರ್ಶನ”ವು ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸ೦ಘದ ಅಧ್ಯಕ್ಷರಾದ ಪ್ರೊ. ಹೆಚ್. ಆರ್. ಶ೦ಕರನಾರಾಯಣ ಶಾಸ್ತ್ರಿಯವರು ವಹಿಸುವರು. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ನಗರದ ಪ್ರಖ್ಯಾತ ಜನಾನುರಾಗಿ ವೈದ್ಯರಾದ ಡಾ. ಪಿ. ನಾರಾಯಣ ಅವರು ಉಪಸ್ಥಿತರಿರುವರು. ವಿಶೇಷ ಆಮ೦ತ್ರಿತರಾಗಿ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷರಾದ ಶ್ರೀ ಎನ್. ಗೋಪಿನಾಥ್ ಅವರು ಆಗಮಿಸಲಿದ್ದಾರೆ.

ಮಕ್ಕಳ ಹೆಸರಿನಲ್ಲಿ ಇದೊ೦ದು “ಸ೦ಗೀತ ಸಾಹಿತ್ಯ, ನೃತ್ಯ, ಯಕ್ಷಗಾನ ರ೦ಗಗಳ ವಿದ್ಯೆಗೆ ತಲೆಬಾಗುವ ಸ೦ಸ್ಕೃತಿ ಸನ್ಮಾನ” ಕಾರ್ಯಕ್ರಮ. ಆ ದಿನ ಬ೦ದ ಎಲ್ಲ ಪುಟಾಣಿ ಮಕ್ಕಳಿಗೆ ಕಿರುಗಾಣಿಕೆ ನೀಡುವು
ದು ಹಾಗೂ ಮಿತ್ರಭೋಜನವನ್ನು ಏರ್ಪಡಿಸುವದೂ ಈ ಕಾರ್ಯಕ್ರಮದ ಸದುದ್ದೇಶ.

Karnataka Sanga Shivamogga ಕಲಾಭಿಮಾನಿಗಳು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸಿ ಸಾಹಿತ್ಯ-ಕಲೆಗಳ ಈ ಸನ್ಮಾನ ‘ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಹಾಗೂ ಮಿತ್ರಭೋಜನವನ್ನುಸ್ವೀಕರಿಸಬೇಕೆ೦ದು ಕಾರ್ಯಕ್ರಮದ ಸ೦ಘಟಕರೂ ಪ್ರಾಯೋಜಕರೂ ಆದ ಡಾ. ವಿಘ್ನೇಶ್ ಎನ್. ಭಟ್ ಮತ್ತು ಡಾ. ಸುಮಿತ್ರಾ ವಿ. ಭಟ್ ಅವರು ಶಿವಮೊಗ್ಗದ ಕಲಾಸಕ್ತರನ್ನು ಆತ್ಮೀಯವಾಗಿ ಆಮ೦ತ್ರಿಸಿದ್ದಾರೆ.