Friday, February 13, 2026
Friday, February 13, 2026
Home Blog Page 109

R.M. Manjunatha Gowda ಸರ್ಕಾರದ ನಿಯಮಗಳಿಂದ ಸಹಕಾರ ಸಂಘಗಳ ಏಳಿಗೆಗೆ ಕಷ್ಟವಾಗುತ್ತಿದೆ- ಆರ್.ಎಂ.ಮಂಜುನಾಥ ಗೌಡ

0

R.M. Manjunatha Gowda ಕೊಟ್ಟ ಸಾಲ ವಸೂಲಾದಾಗ ಮಾತ್ರ ಸಹಕಾರ ಸೊಸೈಟಿಗಳು ಉಳಿಯಲು ಸಾಧ್ಯ ಎಂದು ಸಹಕಾರ ಕ್ಷೇತ್ರದ ದುರಿಣರಾದ ಎಂಎಡಿಬಿ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು.
ಅವರು ಭಾನುವಾರ ವಿದ್ಯಾನಗರದ ಚಂದ್ರಪ್ಪ ಕಾಂಪ್ಲೆಕ್ಸ್ ಸೊಸೈಟಿ ಆವರಣದಲ್ಲಿ ಆಯೋಜಿಸಿದ್ದ ವನ್ನಿಯಾರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಸೊಸೈಟಿಯನ್ನು ಉದ್ಘಾಟಿಸಿ ಮಾತನಾಡಿದರು.
ಸಹಕಾರ ಸಂಘಗಳು ಇಂದು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದೆ ಕಷ್ಟವಾಗಿದೆ. ಇಲ್ಲಿ ಸಾಲಗಾರರೇ ಬಹಳ ಮುಖ್ಯ. ಬಿಗಿ ಕ್ರಮ ಅಗತ್ಯ. ಸರ್ಕಾರದ ನಿಯಮಗಳು ಸಹಕಾರ ಸಂಘಗಳ ಏಳಿಗೆಗೆ ಕಷ್ಟವಾಗುತ್ತಿದೆ.ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು ಎಂದು ನಾವು ಹೇಳುತ್ತಲೇ ಬಂದಿದ್ದರೂ ಕೂಡ ಅದೇಕೋ ಗೊತ್ತಿಲ್ಲ. ಸರ್ಕಾರಗಳು ನಿಯಮಗಳನ್ನು ಕಠಿಣಗೊಳಿಸತ್ತಲೇ ಹೋಗಿವೆ ಎಂದರು.
ಇಲ್ಲಿ ಸಾಲಗಾರರೇ ಮುಖ್ಯ. ‘ಕೊಟ್ಟವನು ಕೋಡಂಗಿ, ಇಸ್ಕೊಂಡವನು ವೀರಭದ್ರ’ ಎಂಬ ಗಾದೆ ಸೊಸೈಟಿಗಳಿಗೆ ಸರಿ ಹೊಂದುತ್ತದೆ. ಸಾಲ ಪಡೆದವರು ನಾನಾ ಕಾರಣಗಳಿಂದ ಸಾಲ ವಾಪಸ್ ಮರು ಪಾವತಿ ಮಾಡುವುದಿಲ್ಲ. ಹಾಗಾಗಿ ಆಡಳಿತ ಮಂಡಳಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದರು.
ಸೊಸೈಟಿಯ ಅಧ್ಯಕ್ಷರಾದ ಜಿ.ವಿ. ಗಣೇಶಪ್ಪ ಅವರು ತುಂಬಾ ಕಷ್ಟದಿಂದ 6 ಜಿಲ್ಲೆಗಳಲ್ಲಿ ಸೊಸೈಟಿಯನ್ನು ವಿಸ್ತರಿಸಿದ್ದಾರೆ. ಸುಮಾರು 56 ಲಕ್ಷ ರೂ. ಷೇರು ಹಣ ಸಂಗ್ರಹಿಸಿದ್ದಾರೆ. ಇದು ಕಡಿಮೆಯೇನಲ್ಲ. ಮುಂದಿನ ದಿನಗಳಲ್ಲಿ ಇದು ದೊಡ್ಡ ಸೊಸೈಟಿಯಾಗಿ ಬೆಳೆಯಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾತನಾಡಿ, ಸಹಕಾರ ಕ್ಷೇತ್ರ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಭಾರತದ ಆರ್ಥಿಕ ಬಲವರ್ಧನೆಗೆ ಇದು ಸಹಕಾರಿಯಾಗಲಿದೆ. ಸುಮಾರು 40 ಕೋಟಿ ಜನರು ಇದರ ವ್ಯಾಪ್ತಿಗೆ ಬಂದಿದ್ದಾರೆ. ಪರಸ್ಪರ ಒಗ್ಗಟ್ಟಿನಿಂದ ಮಾತ್ರ ಸೊಸೈಟಿಗಳು ಉಳಿಯಲು ಸಾಧ್ಯ ಎಂದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ ಮಾತನಾಡಿ, ಸೊಸೈಟಿಗಳನ್ನು ನಡೆಸುವುದು ಬಹಳ ಕಷ್ಟ. ನಿಷ್ಟುರತೆ ಇರಬೇಕು. ಮುಲಾಜಿಗೆ ಅವಕಾಶ ಕೊಡಬಾರದು ಎಂದರು.
R.M. Manjunatha Gowda ಸಹಕಾರ ಯೂನಿಯನ್ ಅಧ್ಯಕ್ಷ ವಾಟಗೋಡು ಸುರೇಶ್ ಮಾತನಾಡಿ, ಸೊಸೈಟಿಯ ಉಪ ನಿಯಮಗಳ ರಚಿಸುವ ಅಧಿಕಾರ ಸದಸ್ಯರಿಗೆ ಇದೆ. ಸಹಕಾರ ಕ್ಷೇತ್ರಕ್ಕೆ ಸರ್ಕಾರದ ಹಸ್ತಕ್ಷೇಪ ಇರಬಾರದು ಎಂದರು.
ವನ್ನಿಯಾರ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಜಿ.ವಿ. ಗಣೇಶಪ್ಪ ಮಾತನಾಡಿ, ಈ ಸೊಸೈಟಿ ರಚಿಸಲು 11 ತಿಂಗಳು ಕಷ್ಟಪಡಬೇಕಾಯಿತು. ಷೇರುದಾರರು ನಮಗೆ ಸಹಕರಿಸಿದ್ದಾರೆ. ಸಹಕಾರ ಕ್ಷೇತ್ರದ ಧುರೀಣರ ಮಾರ್ಗದರ್ಶನವನ್ನು ಪಡೆದುಕೊಂಡು ಈ ಸೊಸೈಟಿ ಬೆಳೆಸುವುದರ ಜತೆಗೆ ವನ್ನಿಯಾರ್ ಸಮಾಜದ ಸಂಘಟನೆ ಕೂಡ ಮಾಡುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಡಿ ಸಿ ಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್ ಹಾಪ್ ಕಾಮ್ಸ್ ನೂತನ ನಿರ್ದೇಶಕ ಎಂ.ಪಿ. ದಿನೇಶ್ ಪಟೇಲ್, ನಿವೃತ್ತ ಪೊಲೀಸ್ ಅಧಿಕಾರಿ ಪಿ.ಒ. ಶಿವಕುಮಾರ್ ಎಂ.ಬಿ. ಹರಿಕೃಷ್ಣ ಸೇರಿದಂತೆ ಹಲವು ಮುಖಂಡರು ಸೊಸೈಟಿ ಕುರಿತಂತೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ಆರ್.ಎಂ. ಮಂಜುನಾಥಗೌಡ ಮತ್ತು ಡಾ. ಧನಂಜಯ ಸರ್ಜಿ ಅವರನ್ನು ಸನ್ಮಾನಿಸಿದ್ದಲ್ಲದೇ,ಇತರೇ ಎಲ್ಲಾ ಗಣ್ಯರನ್ನು ಸಹ ಸನ್ಮಾನಿಸಲಾಯಿತು ಮತ್ತು ಎಲ್ಲಾ ಪ್ರವರ್ತಕರು ಮತ್ತು ನಿರ್ದೇಶಕರಿಗೂ ಸಹ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಪ್ರಮುಖರಾದ ಪರಮೇಶ್, ಬಿಜೆಪಿ ಮುಖಂಡ ಹರಿಕೃಷ್ಣ, ಸೊಸೈಟಿ ಉಪಾಧ್ಯಕ್ಷರಾದ ರಮಣಿ, ರೊಟ್ಟಿ ಸುಬ್ಬಣ್ಣ, ಶಿವು ಮಠ, ಶಿವರಾಜ್ ಕುಮಾರ್, ದಂಡಪಾಣಿ, ವಿ. ಮುರುಗೇಶ್ ಮತ್ತು ಸೊಸೈಟಿ ನಿರ್ದೇಶಕರು ಮೊದಲಾವರಿದ್ದರು.

S N Channabasappa ರಾಗಿಗುಡ್ಡದಲ್ಲಿ ಸಕಲ ವಿಧಿವಿಧಾನಗಳಿಂದ ಶ್ರೀವಿಘ್ನೇಶ್ವರಸ್ವಾಮಿ ಪ್ರತಿಷ್ಠಾಪನೆ- ಶಾಸಕ ಚೆನ್ನಿ

0

S N Channabasappa ಕಳೆದ ಜೂನ್ 5ರಂದು ಶಿವಮೊಗ್ಗ ನಗರದ ರಾಗಿ ಗುಡ್ಡದಲ್ಲಿ ನಡೆದ ಮತಾಂದರ ಹೇಡಿ ಕೃತ್ಯದಿಂದಾಗಿ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ತೀವ್ರ ಧಕ್ಕೆಯುoಟು ಮಾಡಿತ್ತು. ಹಿಂದೂ ಸಮಾಜದ ಮೇಲೆ ನೂರಾರು ವರ್ಷಗಳಿಂದ ನಿರಂತರ ಆಕ್ರಮಣಗಳು ನಡೆಯುತ್ತಾ ಬಂದಿದ್ದರೂ, ಈ ಆಕ್ರಮಣಗಳನ್ನು ಎದುರಿಸಿ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿಕೊಂಡು ಬಂದಿದ್ದೇವೆ.

ಈ ಘಟನೆಯು ಮತ್ತೊಮ್ಮೆ ಅಖಂಡ ಭಾರತದ ಸಂಸ್ಕೃತಿ, ಪರಂಪರೆ ಮತ್ತು ಹಿಂದುತ್ವದ ಮೌಲ್ಯಗಳನ್ನು ಕಾಪಾಡಿಕೊಂಡು, ಧರ್ಮ ರಕ್ಷಣೆಗಾಗಿ ಹೋರಾಡುವ ನಮ್ಮ ಬದ್ಧತೆಯನ್ನು ಬಲಪಡಿಸಿದೆ. ಪ್ರತಿ ಆಕ್ರಮಣಕ್ಕೂ ನಮ್ಮ ಧರ್ಮ ಮತ್ತು ಸಂಸ್ಕೃತಿಯ ಪುನರುತ್ಥಾನವೇ ಸೂಕ್ತ ಉತ್ತರ. ಈ ನಿಟ್ಟಿನಲ್ಲಿ ಹಿಂದು ಸಂಘಟನೆಗಳು ಹಾಗೂ ಭಕ್ತರು ನಿರಂತರ ಹೋರಾಟ ನಡೆಸಿದ ಪರಿಣಾಮ ಇದರ ಜೊತೆಯಲ್ಲಿ ಸಾಮೂಹಿಕ ಪ್ರಯತ್ನ, ಸಾರ್ವಜನಿಕ ಏಕತೆಯ ಬಲ ಹಾಗೂ ಚುನಾಯಿತ ಪ್ರತಿನಿಧಿಗಳ ಬದ್ಧತೆಯ ಫಲವಾಗಿ ಇಂದು ರಾಗಿ ಗುಡ್ಡದ ದೇವಸ್ಥಾನವು ತನ್ನ ಮೂಲ ಪಾವಿತ್ರ್ಯತೆ ಮತ್ತು ವೈಭವವನ್ನು ಪುನಃ ಪಡೆದುಕೊಂಡಿದೆ.

S N Channabasappa ಇಂದು ದೇವಸ್ಥಾನದ ಆವರಣದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಸಕಲ ವಿಧಾನಗಳೊಂದಿಗೆ ಶ್ರೀ ವಿಘ್ನೇಶ್ವರನ ಪ್ರತಿಷ್ಠಾಪನ ಮಹೋತ್ಸವವು ಅದ್ದೂರಿಯಾಗಿ ನೆರವೇರಿದೆ.

ಈ ವಿಜಯವು ಕೇವಲ ಒಂದು ದೇವಸ್ಥಾನದ ಪುನರ್ನಿರ್ಮಾಣವಲ್ಲ — ಇದು ಧರ್ಮದ ರಕ್ಷಣೆಗೆ, ನಂಬಿಕೆಯ ಗೌರವಕ್ಕೆ ಮತ್ತು ಹಿಂದೂ ಸಮಾಜದ ಅಸ್ತಿತ್ವದ ಉಳಿವಿಗೆ ನಡೆದ ಹೋರಾಟದ ಸಂಕೇತವಾಗಿದೆ. ಹಿಂದು ಧರ್ಮದ ಗೌರವ ಉಳಿಸುವುದು ನಮ್ಮ ಕರ್ತವ್ಯ, ಅದಕ್ಕಾಗಿ ಹೋರಾಡುವುದು ನಮ್ಮ ಧರ್ಮ. ಎಸ್ ಎನ್ ಚನ್ನಬಸಪ್ಪ ಶಾಸಕರು, ಶಿವಮೊಗ್ಗ ನಗರ

Karnataka Rajyotsava ಕರವೇ ಸ್ವಾಭಿಮಾನಿ ಬಣದಿಂದ ಸಡಗರದ ರಾಜ್ಯೋತ್ಸವ ಆಚರಣೆ

0

Karnataka Rajyotsava ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಮೆಗನ್ ಆಸ್ಪತ್ರೆ ಮುಂಬಾಗದ ಶಾಶ್ವತ ದ್ವಜ ಸ್ಥಂಭದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾನೂನು ಸಲಹೆಗಾರರಾದ ಅನಿಲ್ ಕುಮಾರ್ ಟಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸುವುದರ ಮುಖಾಂತರ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕವಾಗಿ ಸಿಹಿ ವಿತರಿಸಲಾಯಿತು ಹಾಗೂ ವಿದ್ಯಾನಗರ ದಲ್ಲಿರುವ ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ಹಣ್ಣು ಹಂಪಲುಗಳನ್ನು ರಾಜ್ಯೋತ್ಸವದ ಪ್ರಯುಕ್ತ ವಿತರಿಸಲಾಯಿತು ಈ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಕಿರಣ್ ಕುಮಾರ್ ಎಚ್ ಎಸ್ ಜಿಲ್ಲಾ ಕಾರ್ಯಾಧ್ಯಕ್ಷರಾದ ಉಮೇಶ್ ಗದ್ದೆ ಮನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಜನಾರ್ಧನ್ ಜಿಲ್ಲಾ ಉಪಾಧ್ಯಕ್ಷರಾದ ವಿಜಯ್ Karnataka Rajyotsava ಕುಮಾರ್ ಹಾಗೂ ಜೈ ಕೃಷ್ಣ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೇಶವ ಜಿಲ್ಲಾ ಖಜಂಚಿ ಗಣೇಶ್ ನಗರಾಧ್ಯಕ್ಷರಾದ ಜೀವನ್ ಡಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎನ್, ಮಾಲತೇಶ್ ನಾಗರಾಜ್ ಮಹಮ್ಮದ್ ಶಫಿ ಪ್ರವೀಣ್ ಕುಮಾರ್ ಪ್ರದೀಪ್ ನವೀನ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾದ ಕವಿತಾ ಸಿ ಉಪಾಧ್ಯಕ್ಷರಾದ ಪದ್ಮ ಹಾಗೂ ಮಾಲತಿ ಪ್ರಧಾನ ಕಾರ್ಯದರ್ಶಿಯಾದ ಆರತಿ ತಿವಾರಿ ಮಹಿಳಾ ಘಟಕದ ಘಟಕದ ಪದಾಧಿಕಾರಿಗಳು ಜಿಲ್ಲಾ ಘಟಕದ ಪದಾಧಿಕಾರಿಗಳು ನಗರ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು

Women Cricket World Cup ಚೊಚ್ಚಲ ಏಕದಿನ ಮಹಿಳಾ ವಿಶ್ವಕಪ್ ಕ್ರಿಕೆಟ್ ಭಾರತ ಚಾಂಪಿಯನ್.ಭಾರತದ ವನಿತೆಯರೂ ಸ್ಟ್ರಾಂಗು ಗುರು..

0

Women Cricket World Cup ಮುಂಬೈ ಡಿ.ವೈ.ಪಾಟೀಲ್ ಕ್ರೀಡಾಂಗಣ ಎಂದೂ ಕಾಣದ ಸಂಭ್ರಮ ಸಡಗರ ಕಂಡಿತು.
ಹಿಂದೆ ಕಂಡಿತ್ತೋ ಏನೋ ಆದರೆ ಭಾರತದ ವನಿತೆಯರು
ದಕ್ಷಿಣ ಆಫ್ರಿಕಾ ಮಹಿಳಾ ತಂಡವನ್ನ 52 ರನ್ ಗಳ ಅಂತರದಲ್ಲಿ ಸೋಲಿಸಿ ದಾಖಲೆ ಬರೆದರು.

ಟಾಸ್ ಗೆದ್ದು ದಕ್ಷಿಣ ಆಫ್ರಿಕ
ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅವರಿಗೂ ಫೈನಲ್ಸ್ ಪ್ರವೇಶ
ಮೊದಲ ಬಾರಿಗೆ ಆಗಿತ್ತು.
ಕಡಿಮೆ ರನ್ ಗಳಿಗೆ ಭಾರತವನ್ನ ಓಟ್ ಮಾಡುವ ಹುನ್ನಾರ ಅವರದಾಗಿತ್ತು. ಆದರೆ ಶಿಪಾಲಿ ಅವರ ದಿಟ್ಟ ಬ್ಯಾಟಿಂಗ್ 87 ರನ್ ಗಳು ಆರಂಭಿಕವಾಗಿ ಉತ್ತಮ ಕೊಡುಗೆಯಾಗಿ ಬಂದಿತು.

ಭಾರತ ಮಹಿಳಾ ತಂಡವು ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ದೊಡ್ಡ ಬಹುಮಾನ ಮೊತ್ತ ₹ 39 ಕೋಟಿ ಯನ್ನು ತನ್ನ ಮಡಿಲಿಗೆ ಹಾಕಿ ಕೊಂಡಿದೆ. ಬಿಸಿಸಿಐ ಕೂಡ ಪುರುಷರ ತಂಡಕ್ಕೆ ನೀಡಿದಷ್ಟೇ ಬೋನಸ್ ನೀಡುವ ಸಾಧ್ಯತೆಯಿದೆ. ಮಾಧ್ಯಮಗಳಲ್ಲಿ ಪ್ರಕಟವಾದಂತೆ ₹ 125 ಕೋಟಿ ಬಹುಮಾನ ಘೋಷಿಸಿದೆ.
ಮಹಿಳೆಯರ ಕ್ರಿಕೆಟ್ ಬಗ್ಗೆ ಮೂಗುಮುರಿಯುತ್ತಿದ್ದವರೀಗ ಮೈಚಿವುಟಿಕೊಳ್ಳುವಂತೆ ಮಾಡಿದೆ.
ಇದು ಮಹಿಳಾ ಕ್ರಿಕೆಟ್‌ನ ಬೆಳವಣಿಗೆಯಲ್ಲಿ ಒಂದು ಮಹತ್ವದ ಕ್ಷಣವೆಂದು ಪರಿಗಣಿಸಬಹುದು.

Women Cricket World Cup ಬ್ಯಾಟಿಂಗ್ ಸಿಕ್ಕಿದ್ದು ಭಾಗ್ಯವೆಂದೇ ಭಾರತದ ತಂಡ ಆಡಿತು.
ಭಾರತ ತಂಡವು 7 ವಿಕೆಟ್ ಕಳೆದುಕೊಂಡು 298 ರನ್ ಗಳಿಸಿತು.
ಭಾರಿ ಮೊತ್ತವಲ್ಲ ಎಂಬಂತೆ ದಕ್ಷಿಣ ಆಫ್ರಿಕಾ ತನ್ನ ಪಾಳಿ ಆರಂಭಿಸಿತು.
ಈ ಮೊತ್ತವನ್ನು ಬೆಂಬತ್ತಿ ಹೊರಟ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ಗಳಲ್ಲಿ 246 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಹೀಗಾಗಿ
ಭಾರತ ತಂಡ 52 ರನ್ ಗಳ ಭರ್ಜರಿ ವಿಜಯ ದಾಖಲಿಸಿತು

ದೀಪ್ತಿ ಶರ್ಮ ಐದು ವಿಕೆಟ್ ಪಡೆದು ಯಶಸ್ವಿ ಬೌಲರ್ ಆದರು.
ದಕ್ಷಿಣ ಆಫ್ರಿಕ ತಂಡದ ನಾಯಕಿ ಲಾರಾ ವೋಲ್ವಾರ್ಡ್ತ್ ಶತಕ ಸಿಡಿಸಿದರು. ಹೀಗಾಗಿ ಭಾರತದ ಗೆಲುವಿಗೆ ತಡೆಗೋಡೆಯಾಗಿದ್ದರು. ಮೊದಲ ಓವರ್​ನಿಂದಲೇ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಲಾರಾ 98 ಎಸೆತಗಳಲ್ಲಿ ಶತಕ ಪೂರೈಸಿದರು.
ಆದರೆ ಅಮನಜಿತ್ ಅವರ ಅದ್ಭುತ ಕ್ಯಾಚ್ ಇಡೀ ಪಂದ್ಯದ ಅದೃಷ್ಟವನ್ನೇ ಬದಲಿಸಿತು. ಫೀಲ್ಡಿಂಗ್ ನಲ್ಲಿ ಕ್ಯಾಚ್ ಹಿಡಿದು ಜಾರಿ ಮತ್ತೆ ಹಿಡಿದು ಚೆಂಡನ್ನ ನೆಲಕ್ಕೆ ಬಿಡದೆ ಮತ್ತೆ ತಾವೇ ನೆಲಕ್ಕೆ ಬಿದ್ದು ಹಿಡಿದ ಪರಿ ರೋಚಕವಾಗಿತ್ತು.

Tulsi Vivah ಶಿವಮೊಗ್ಗದಲ್ಲಿ ತುಳಸಿ ಕಾರ್ತೀಕ ಸಂಭ್ರಮ

0

Tulsi Vivah ನಾಡಿನ ಪ್ರತಿ ಮನೆಮನೆಯಲ್ಲೂ ತುಳಸಿ ಕಟ್ಟೆಯನ್ನ ದೀಪಗಳಿಂದ ಸಿಂಗರಿಸುವ ಹಬ್ಬ. ಇದರ ಅಂಗವಾಗಿ ಶಿವಮೊಗ್ಗದಲ್ಲೂ ಎಲ್ಲೆಲ್ಲೂ ಸಂಭ್ರಮ ಮನೆಮಾಡಿತ್ತು.

Tulsi Vivah ಬಸವೇಶ್ವರನಗರದ. ವಿಮಲೇಶ್ವರ ನಿವಾಸದಲ್ಲಿ ವೀಣಾ ಗಣೇಶ್ .. ಶ್ರೀಮತಿ ಬಿಂದು ವಿಜಯ ಕುಮಾರ್. ಖುಷಿ ಕುಶಾಲ್ ಗೌರಿ. ಎಲ್ಲರೂ ಸೇರಿ ಸಡಗರ ಸಂಭ್ರಮದಿಂದ ತುಳಸಿ ಮದುವೆ ತುಳಸಿ ಕಾರ್ತಿಕವನ್ನು ಸಕಲ ಸಂಪ್ರದಾಯದಿಂದ ಆಚರಿಸಿ ಮುತ್ತೈದೆಯರಿಗೆ. ಅರಿಶಿಣ ಕುಂಕುಮದೊಂದಿಗೆ. ಉಡಿತುಂಬಿ ಉಡುಗೊರೆ ನೀಡಿ ಅವಲಕ್ಕಿ ಪ್ರಸಾದವನ್ನು ವಿತರಿಸಿ ಭಕ್ತಿ ಶ್ರದ್ಧೆಯಿಂದ ಆಚರಿಸಿದರು.

Shimoga News ಮೌಲ್ಯಗಳ ಬಗ್ಗೆ ಮಕ್ಕಳಿಗೆ ಮನೆಯಲ್ಲೇ ಹೇಳಬೇಕು- ಡಾ.ಹೆಚ್.ಬಿ.ಮಂಜುನಾಥ್. ದಾವಣಗೆರೆ.

0

Shimoga News “ಪ್ರೀತಿ ವಿಶ್ವಾಸ ಕೊಡುವುದು ಸಹಾ ಸಮಾಜ ಸೇವೆ”

-ಶ್ರೀ ನಿಮಿಷಾಂಬಾ ದೇವಿ ಮಹೋತ್ಸವದಲ್ಲಿ ಎಸ್ ಪಿ ಉಮಾ ಪ್ರಶಾಂತ್-

” ಮೌಲ್ಯಗಳ ಬಗ್ಗೆ ಮಕ್ಕಳಿಗೆ ಮನೆಯಲ್ಲಿ ಹೇಳಬೇಕು” -ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥ-

ದಾವಣಗೆರೆ.ನ. 3. ಪ್ರೀತಿ ವಿಶ್ವಾಸಗಳನ್ನು ಸಮಾಜಕ್ಕೆ ಕೊಡಬೇಕು, ಇದೂ ಸಹಾ ಸಮಾಜ ಸೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.

ಅವರು ನಿನ್ನೆ ಸಂಜೆ ಶ್ರೀ ನಿಮಿಷಾಂಬಾ ದೇವಿ ದೇವಸ್ಥಾನದ 67ನೇ ವಾರ್ಷಿಕ ಮಹೋತ್ಸವದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಮಹಿಳೆಯರಿಗೆ ಸಾಮಾಜಿಕ ಭದ್ರತೆ ದೊರೆತಾಗ ಅವರು ಮತ್ತಷ್ಟು ಉನ್ನತ ಸ್ಥಾನಕ್ಕೆ ಬರುತ್ತಾರೆ ಎಂದರು.

ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರಧಾನ ಭಾಷಣ ಮಾಡಿದ ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಭಾರತೀಯ ಮೌಲ್ಯಗಳು ವಿಶ್ವದಲ್ಲಿ ಉನ್ನತವಾಗಿದ್ದು ಇವುಗಳ ಮಹತ್ವವನ್ನು ಮನೆಯಲ್ಲಿನ ಹಿರಿಯರು ಮಕ್ಕಳಿಗೆ ಆಸಕ್ತಿದಾಯಕವಾಗಿ ಹೇಳುತ್ತಿರಬೇಕು, ಸನಾತನ ಧರ್ಮವು ಸಾಮರಸ್ಯದ ಬದುಕನ್ನೇ ಪ್ರತಿಪಾದಿಸುತ್ತಿದ್ದು ನಮ್ಮ ದೇವಾಲಯ ಸಂಸ್ಕೃತಿಯು ಕೇವಲ ಭಕ್ತಿ ಸಮರ್ಪಣೆಗೆ ಸೀಮಿತವಾಗದೆ ನಿತ್ಯವೂ ಅಧ್ಯಯನ, ಅಧ್ಯಾಪನ ಅಂದರೆ ಸದ್ವಿಚಾರಗಳ ಕಲಿಕೆ ಕಲಿಸುವಿಕೆ, ಸಂಗ್ರಹಣೆ ವಿತರಣೆ ಅಂದರೆ ಭಕ್ತರಿಂದ ಬಂದದ್ದನ್ನು ಅಗತ್ಯವಿರುವವರಿಗೆ ವಿತರಿಸುವುದು ಹಾಗೂ ತತ್ವಜ್ಞಾನ ಮತ್ತು ಸುಸಂಸ್ಕೃತ ಕಲೆಗಳ ರಚನೆ ಪ್ರಸ್ತುತಿ ಅಸ್ವಾದನೆಗೆ ಅವಕಾಶ ಮಾಡಿಕೊಡುವುದೇ ಆಗಮೋಕ್ತ ಸನಾತನ ದೇವಾಲಯ ಸಂಸ್ಕೃತಿಯ ಪರಮೋದ್ದೇಶವಾಗಿದೆ. ತಾಯಂದಿರು ಸಂಜೆ ವೇಳೆ ತಮ್ಮ ಬಿಡುವಿನ ಸಮಯದಲ್ಲಿ ಮಕ್ಕಳಿಗೆ ಬಾಯಿ ಪಾಠದ ರೂಪದಲ್ಲಿ ನಮ್ಮ ಸಂಸ್ಕೃತಿಯ ಪರಿಚಯ ಮಾಡಿಸುತ್ತಿರಬೇಕು ಎಂದು ಕರೆ ಕೊಟ್ಟರು.

Shimoga News ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರ್ ಮಾತನಾಡಿ ಛತ್ರಪತಿ ಶಿವಾಜಿ ಮಹಾರಾಜರ ಬದುಕಿನ ಆದರ್ಶಗಳನ್ನು ವಿವರಿಸಿದರು.

ಶ್ರೀ ಸೋಮ ವಂಶ ಆರ್ಯ ವಂಶ ಕ್ಷತ್ರಿಯ ಸಮಾಜ ಹಾಗೂ ಮಹಿಳಾ ಸಮಾಜಗಳ ವತಿಯಿಂದ ನೆರವೇರಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷ ಗಣೇಶ ರಾವ್ ಡೋಂಗರ್ ಸೋನೆ ವಹಿಸಿದ್ದರು. ಮಂಟಪ ಶಿಲ್ಪಿ ಹಾಗೂ ಸಾಧಕರಿಗೆ ಸನ್ಮಾನ, ಸಮಾಜದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಹಾಗೂ ಬಹುಮಾನ ವಿತರಣೆ, ಮಕ್ಕಳಿಂದ ಶಾಸ್ತ್ರೀಯ ನೃತ್ಯ ರೂಪಕ ಪ್ರದರ್ಶನ, ಸಹನಾ ಮಂಜುನಾಥ್ ಕವಿತಾ ಕಿರಣ್ ರಿಂದ ಗೀತ ಗಾಯನ ಮುಂತಾಗಿ ನೆರವೇರಿದ ಕಾರ್ಯಕ್ರಮದ ಪ್ರಾರ್ಥನೆಯನ್ನು ಕವಿತಾ ಕಿರಣ್ ಬಂಟ್ವಾಳ್ಕರ್ ಮಾಡಿದರೆ ಸ್ವಾಗತವನ್ನು ಸಮಾಜದ ಉಪಾಧ್ಯಕ್ಷ ಪಿಎಮ್ ಬಸವರಾಜ್ ಪೌರಾಣಕರ್ ಕೋರಿದರು. ಮಹಿಳಾ ಸಮಾಜದ ಅಧ್ಯಕ್ಷೆ ಇಂದುಮತಿ ಎಸ್ ಬಂಟ್ವಾಳಕರ್ ಪ್ರಾಸ್ತಾವಿಕ ನುಡಿಗಳನಾಡಿದರು. ಸೋಮ ವಂಶ ಆರ್ಯ ಕ್ಷತ್ರಿಯ ಸಮಾಜ ಹಾಗೂ ಮಹಿಳಾ ಸಮಾಜದ ಗೌರವಾಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ, ಕಾರ್ಯಕಾರಿ ಸದಸ್ಯರು ಮುಂತಾಗಿ ಎಲ್ಲರೂ ಉಪಸ್ಥಿತರಿದ್ದರು.ರೇಖಾ ವೈ ಶಂಕಪಾಳ್ ವಂದನೆ ಸಲ್ಲಿಸಿದರು.

Shimoga News ಗಾಂಧೀಜಿಯವರ ಚಿಂತನೆ & ರಾಜಕೀಯ ಪರಿಶುದ್ಧತೆ‌ ಎಲ್ಲರಿಗೂ ಮಾರ್ಗದರ್ಶಿ- ಎಂ.ಎನ್.ಸುಂದರ ರಾಜ್.

0

Shimoga News ಇಂದಿನ ಕಾಲಮಾನದಲ್ಲಿ ಮಹಾತ್ಮ ಗಾಂಧಿಯವರ ಸಾಮಾಜಿಕ ಕಲ್ಪನೆ ಆರ್ಥಿಕ ಚಿಂತನೆ ಮತ್ತು ರಾಜಕೀಯ ಪರಿಶುದ್ಧತೆ ಇವೆಲ್ಲವೂ ಎಲ್ಲರಿಗೂ ಮಾರ್ಗದರ್ಶಿ ಅವರ ತತ್ವಗಳನ್ನು ಪಾಲಿಸಿದರೆ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗುತ್ತದೆ ಆದರೆ ಇಂದಿನ ಜನಾಂಗ ಅದರಲ್ಲೂ ಮುಖ್ಯವಾಗಿ ಯುವಕರು ಗಾಂಧೀಜಿಯವರ ಆದರ್ಶಗಳನ್ನು ಅಲಕ್ಷಿಸಿರುವುದು ಒಂದು ದುರಂತವಾಗಿದೆ ಎಂದು ಕರ್ನಾಟಕ ಸಂಘದ ಪೂರ್ವಾಧ್ಯಕ್ಷ ಎಂ.ಎನ್.ಸುಂದರರಾಜ್ ತಿಳಿಸಿದ್ದಾರೆ

ಅವರು ಮುಂದುವರೆದು ಸ್ವತಂತ್ರ ಸಂಗ್ರಾಮದಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಮಹಾತ್ಮ ಗಾಂಧಿಯವರು ದೇಶಕ್ಕಾಗಿ ಸರ್ವವನ್ನು ತ್ಯಾಗ ಮಾಡಿ ಸರಳ ಜೀವನ ನಡೆಸಿ ಬೇರೆಯವರಿಗೆ ಮಾರ್ಗದರ್ಶಿಯಾಗಿದ್ದಾರೆ ಇದನ್ನು ನಾವು ಯಾರು ಮರೆಯಬಾರದು ಎಂದು ತಿಳಿಸಿದರು. ಅವರು ಬಸವೇಶ್ವರ ಕಾಲೇಜಿನಲ್ಲಿ ಏರ್ಪಡಿಸಿದ್ದ ಗಾಂಧಿ ಚಿಂತನೆ ಮತ್ತು ಮಕ್ಕಳಿಗೆ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಸರ್ವೋದಯ ಮಂಡಳಿ ರಾಜ್ಯಾಧ್ಯಕ್ಷರಾದ ಡಾ!! ಹೆಚ್ಎಸ್ ಸುರೇಶ್ ನೆರವೇರಿಸಿ ಗಾಂಧೀಜಿಯವರ ಮೌಲ್ಯಗಳು ಹಾಗೂ ಜೀವನದ ಯಶೋಗಾಥೆ ಮತ್ತು ಅವರ ತ್ಯಾಗ ಬಲಿದಾನ ದೇಶಪ್ರೇಮಾ ಇಂದಿನ ಮಕ್ಕಳಿಗೆ ಮಾರ್ಗದರ್ಶನವಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಮನೋಹರ್ ಅವರು ಮಾತನಾಡಿ ಜಿಲ್ಲೆಯಲ್ಲಿ ನಮ್ಮ ಸರ್ವೋದಯ ಮಂಡಳಿ ಹೆಚ್ಚು ಹೆಚ್ಚು ಗಾಂಧಿ ತತ್ವದ ಸರ್ವೋದಯ ಪ್ರೇರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

Shimoga News ಬಸವೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷ H V ಮಹೇಶ್ವರಪ್ಪ ಅವರು ಅಧ್ಯಕ್ಷತೆ ವಹಿಸಿ ಸರ್ವೋದಯ ಮಂಡಳಿಯ ತತ್ವ ಆದರ್ಶವನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು

ಸರ್ವೋದಯ ಮಂಡಳಿ ಜಿಲ್ಲಾ ಕಾರ್ಯದರ್ಶಿಯಾದ ಜಿ ವಿಜಯ್ ಕುಮಾರ್ ಮಾತನಾಡುತ್ತಾ
ಮಕ್ಕಳು ಗಾಂಧೀಜಿಯವರ ಲೇಖನಗಳನ್ನು ಪುಸ್ತಕಗಳನ್ನ ಓದುವುದರ ಮುಖಾಂತರ ತಮ್ಮ ಜ್ಞಾನವನ್ನು ವೃದ್ಧಿ ಮಾಡಿಕೊಳ್ಳಬೇಕು. ಅವರ ಸಾಧನೆ ಹಾಗೂ ಅವರ ತತ್ವ ಆದರ್ಶ ಗುಣಗಳು ಇಂದಿನ ಮಕ್ಕಳಿಗೆ ದಾರಿದೀಪವಾಗಬೇಕು ಇಂತಹ ಪುಸ್ತಕಗಳನ್ನು ಅಭ್ಯಾಸ ಮಾಡುವುದರಿಂದ ಮಕ್ಕಳಲ್ಲಿ ದೇಶಪ್ರೇಮ ವೃದ್ಧಿಯಾಗುತ್ತದೆ ಎಂದು ಸರ್ವೋದಯ ಮಂಡಳಿಯ ತತ್ವ ಆದರ್ಶದ ಬಗ್ಗೆ ಮಕ್ಕಳಿಗೆ ವಿವರಿಸಿದರು

ಬಸವೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜಗನಾಥ್, ಬಸವರಾಜಪ್ಪ ಕಂದಗಲ್, ಭಗವಂತ ರಾವ್ ಮತ್ತು ಸಹ ಕಾರ್ಯದರ್ಶಿ ಆರತಿ ತಿವಾರಿ ಹಾಗೂ ಕಾಲೇಜಿನ ಪ್ರಾಚಾರ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಕ್ಕಳಿಗೆ ಸ್ಫರ್ಧೆಗಳನ್ನು ಏರ್ಪಡಿಸಿ, ಬಹುಮಾನಗಳನ್ನು ವಿತರಿಸಲಾಯಿತು

Karnataka Rajyotsava ಸಾಧಕರು ಯುವಪೀಳಿಗೆಗೆ ಮಾರ್ಗದರ್ಶನ ನೀಡಬೇಕು- ಜಿ.ವಿಜಯ ಕುಮಾರ್.

0

Karnataka Rajyotsava  ನಿರಂತರ ಪರಿಶ್ರಮ ವಹಿಸಿ ಸಂಗೀತ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಸಾಧನೆ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.
ಸಮೀಪದ ಸೋಶಿಯಲ್ ಹರ್ಬರ್‌ನಲ್ಲಿ ಭಾವಗಾನ ಶಿವಮೊಗ್ಗ ಏರ್ಪಡಿಸಿದ್ದ 9ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಕನ್ನಡ ರಾಜ್ಯೋತ್ಸವ ಮತ್ತು ಸಂಗೀತ ಸಾಧಕ ಭದ್ರಾವತಿ ವಾಸು ಅವರ 75ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಗೀತ ಕಲಿಯಲು ಏಕಾಗ್ರತೆ ಮತ್ತು ಆತ್ಮವಿಶ್ವಾಸ ಬಹಳ ಮುಖ್ಯ. ಸಾಧಕರು ಯುವಪೀಳಿಗೆಗೆ ಮಾರ್ಗದರ್ಶನ ನೀಡುವ ಮೂಲಕ ಉನ್ನತ ಸಾಧನೆ ಮಾಡಲು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಸಂಗೀತ ಸಾಧಕನ ಸ್ವತ್ತು. ಸಂಗೀತದಿಂದ ಖಿನ್ನತೆ ದೂರವಾಗುವುದರ ಜೊತೆಗೆ ಜೀವನೋತ್ಸವ ಮೂಡುತ್ತದೆ. ಪ್ರತಿಭೆ ಅನಾವರಣಗೊಳ್ಳಲು ಸಹಕಾರಿಯಾಗುತ್ತದೆ. ಭದ್ರಾವತಿ ವಾಸು ಅವರು ತಮ್ಮ ವೃತ್ತಿಯ ಜೊತೆಗೆ ನೂರಾರು ಕಲಾವಿದರಿಗೆ ಸಂಗೀತವನ್ನು ಧಾರೆ ಎರೆಯುವುದರ ಮುಖಾಂತರ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ ಎಂದರು.
ಭಾವಗಾನ ಗೌರವಾಧ್ಯಕ್ಷ ಭದ್ರಾವತಿ ವಾಸು ಮಾತನಾಡಿ, ರಿಯಾಲಿಟಿ ಶೋಗಳಿಂದ ಮಕ್ಕಳ ಮನಸ್ಸು ತುಂಬಾ ಒತ್ತಡದಲ್ಲಿದೆ. ಸರಿಯಾಗಿ ಅಭ್ಯಾಸ ಮಾಡದೆ ಬೇಗಬೇಗನೆ ಕಲಿತು ವೇದಿಕೆಯಲ್ಲಿ ಹಾಡಿ ಹೆಸರು ಮಾಡಬೇಕು ಎಂಬ ಧಾವಂತದಲ್ಲಿ ಮುನ್ನುಗ್ಗಿ ನಿರಾಸೆಯಾಗುತ್ತಾರೆ. ಆದ್ದರಿಂದ ಸರಿಯಾದ ಗುರುಗಳಲ್ಲಿ ಅಭ್ಯಾಸ ಮಾಡಿ ಶ್ರದ್ಧೆಯಿಂದ ಕಲಿತರೆ ಸಂಗೀತ ಒಲಿಯುವುದರಲ್ಲಿ ಸಂದೇಹವೇ ಇಲ್ಲ ಎಂದು ಹೇಳಿದರು.
Karnataka Rajyotsava  ಭಾವಗಾನ ತಂಡದ ಅಧ್ಯಕ್ಷ ಬಿ.ಭುಜಂಗಪ್ಪ ಮಾತನಾಡಿ, ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದ್ದು, ಕನ್ನಡ ಗೀತೆಗಳು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ವಿಶೇಷ ಛಾಪು ಮೂಡಿಸಿದೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕರ್ನಾಟಕದಲ್ಲಿ ವಾಸವಿರುವ ಪ್ರತಿಯೊಬ್ಬನ ಕರ್ತವ್ಯ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಸಂಚಾಲಕ ಪ್ರಶಾಂತ್ ಹದಡಿ ಮಾತನಾಡಿ, ಕಾರ್ಯಕ್ರಮಗಳ ಆಯೋಜನೆಯಿಂದ ಪರಿಪಕ್ವತೆ ಸಾಧಿಸುವುದರ ಜೊತೆಗೆ ಪರಸ್ಪರ ಒಡನಾಟ ಹಚ್ಚಿ ನಕಾರಾತ್ಮಕ ಭಾವನೆಗಳು ದೂರವಾಗುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಹೇಮಂತ್, ಮಮತಾ ಪರಶುರಾಮ್, ನವೀನ್, ಬಸವರಾಜ್, ಪ್ರಮೋದ್, ರಾಜಶೇಖರ್ ಕಾಮತ್ ಹಾಗೂ ನೂರಾರು ಜನ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ತಂಡದ ಹಿರಿಯ ಗಾಯಕಿಯರಿಗೆ ಸನ್ಮಾನಿಸಲಾಯಿತು.

Sri. Manjunath Nayak ಗೌರವಾನ್ವಿತ ನ್ಯಾ.ಮಂಜುನಾಥ್ ನಾಯಕ್ ಅವರಿಗೆ ಬೆಳಗಾವಿಗೆ ವರ್ಗಾವಣೆ.

0

Sri. Manjunath Nayak ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಗೌರವಾನ್ವಿತ ಶ್ರೀ ಮಂಜುನಾಥ ನಾಯಕ್ ರವರನ್ನು ಬೆಳಗಾವಿ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಗೌರವಾನ್ವಿತ ಉಚ್ಚ ನ್ಯಾಯಾಲಯವು ವರ್ಗಾವಣೆ ಮಾಡಿ ದಿನಾಂಕ 30.10.2025 ರಂದು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಆದೇಶಿಸಿದೆ. ಶ್ರೀ ಮಂಜುನಾಥ್ ನಾಯಕ್ ರವರು 2023ರ ಜೂನ್ ತಿಂಗಳಿನಲ್ಲಿ ಬೆಂಗಳೂರಿನ ಗೌರವಾನ್ವಿತ ಉಚ್ಛ ನ್ಯಾಯಾಲಯದಲ್ಲಿ ನೇಮಕಾತಿ ನಿಭಂಧಕರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡು ಶಿವಮೊಗ್ಗದಲ್ಲಿ ಪದಗ್ರಹಣ ಮಾಡಿಕೊಂಡಿದ್ದರು. ಗೌರವಾನ್ವಿತ ನ್ಯಾಯಾಧೀಶರು ದಿನಾಂಕ 03.11.2025 ರಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರ ಪದದಿಂದ ಮುಕ್ತಗೊಂಡು ದಿನಾಂಕ 05.11.2025 ರಂದು ಬೆಳಗಾವಿಗೆ ತೆರಳಿ ಅಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರ ಪದಗ್ರಹಣವನ್ನು ಮಾಡಲಿದ್ದಾರೆ.

ಗೌರವಾನ್ವಿತ ನ್ಯಾಯಾಧೀಶರು ತಮ್ಮ ಸೇವಾ ಅವಧಿಯಲ್ಲಿ ಒಟ್ಟು 10 ರಾಷ್ಟ್ರೀಯ ಲೋಕ ಅದಾಲತ್ಗಳನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಿ ಶಿವಮೊಗ್ಗ ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದ ಒಟ್ಟು 1,21,499 ಪ್ರಕರಣಗಳು ರಾಜಿ ಸಂಧಾನದ ಮೂಲಕ ಅಂತಿಮವಾಗಿ ವಿಲೇವಾರಿ ಮಾಡಲು ನ್ಯಾಯಾಧೀಶರಿಗೆ, ನ್ಯಾಯಾಂಗ ಇಲಾಖೆಯ ಸಿಬ್ಬಂದಿ ವರ್ಗದವರಿಗೆ ಹಾಗೂ ನ್ಯಾಯವಾದಿಗಳಿಗೆ ಮತ್ತು ಪಕ್ಷಗಾರರಿಗೆ ಮಾರ್ಗದರ್ಶನ ನೀಡಿ ಬಹು ಮುಖ್ಯವಾದ ಪಾತ್ರವನ್ನು ನಿರ್ವಹಿಸುತ್ತಾರೆ.

ಗೌರವಾನ್ವಿತ ನ್ಯಾಯಾಧೀಶರು ತಮ್ಮ ಸೇವಾ ಅವಧಿಯಲ್ಲಿ ವಿವಿಧ ಹುದ್ದೆಗಳಿಗೆ 50ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನೇಮಕಾತಿ ಮಾಡಿರುತ್ತಾರೆ ಹಾಗೂ ಸೇವೆಯಲ್ಲಿದ್ದ 54 ಸಿಬ್ಬಂದಿಗಳ ಸೇವೆಯನ್ನು ಪರಿಶೀಲಿಸಿ ಅವರಿಗೆ ಮುಂಬಡ್ತಿಯನ್ನು ನೀಡಿರುತ್ತಾರೆ. ಅಲ್ಲದೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 69 ಸಿಬ್ಬಂದಿಗಳು ತೃಪ್ತಿಕರವಾಗಿ ಪ್ರೊಬೇಷನ್ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ ಎಂದು ಆದೇಶ ಹೊರಡಿಸಿ ಅಂತಹ ಸಿಬ್ಬಂದಿಗಳನ್ನು ಸಾರ್ವಜನಿಕ ಸೇವೆಯಲ್ಲಿ ಖಾಯಂಗೊಳಿಸಿ ಆದೇಶಿಸುತ್ತಾರೆ.

Sri. Manjunath Nayak ಪ್ರಮುಖವಾಗಿ ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಗೌರವಾನ್ವಿತರು ಪದಗ್ರಹಣ ಮಾಡಿದ ದಿನದಿಂದ ಈ ದಿನದವರೆಗೂ ಹಲವಾರು ಪ್ರಮುಖ ಪ್ರಕರಣಗಳಲ್ಲಿ ತೀರ್ಪು ನೀಡಿ ಗೌರವಾನ್ವಿತ ಉಚ್ಚ ನ್ಯಾಯಾಲಯ ನಿಗದಿಪಡಿಸಿದ ನಿಯಮಕ್ಕಿಂತ ಮೂರು ಪಟ್ಟು ಅಧಿಕ ಪ್ರಕರಣಗಳಲ್ಲಿ ಆದೇಶ ನೀಡುವುದರ ಮೂಲಕ ವಿಲೇಗೊಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಪ್ರಾಧಿಕಾರದ ವಿವಿಧ ಕಾನೂನು ಅರಿವು ಕಾರ್ಯಕ್ರಮಗಳು ಹಾಗೂ ಅಭಿಯಾನಗಳಲ್ಲಿ ಅನೇಕ ಸರಕಾರಿ ಇಲಾಖೆಗಳಿಗೆ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ಸಹಕಾರ ನೀಡುವ ಮೂಲಕ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾಮಾನ್ಯ ಜನರಿಗೆ ಕಾನೂನು ಅರಿವನ್ನು ನೀಡುವಲ್ಲಿ ಹಾಗೂ ಅರ್ಹ ವೆಕ್ತಿಗಳಿಗೆ ಕಾನೂನು ನೆರವನ್ನು ನೀಡುವಲ್ಲಿ ಮತ್ತು ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ವಿಚಾರಣಾ ಹಂತದ ವಿವಿಧ ಸ್ವರೂಪದ ಪ್ರಕರಣಗಳು ಅಂತಿಮವಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸುವಲ್ಲಿ ಅತ್ಯುನ್ನತ ಸೇವೆಯನ್ನು ಸಲ್ಲಿಸಿರುತ್ತಾರೆ.

ಗೌರವಾನ್ವಿತರ ಶ್ರೇಷ್ಠ ಸೇವೆ ಅತಿ ಹೆಚ್ಚು ಸಾರ್ವಜನಿಕರಿಗೆ ಲಭಿಸಲಿ ಮತ್ತು ಅವರು ವರ್ಗಾವಣೆಗೊಂಡು ತೆರಳುತ್ತಿರುವ ಸ್ಥಳದಲ್ಲಿ ಇನ್ನು ಹೆಚ್ಚಿನ ಸೇವಾ ಅವಕಾಶ ಲಭಿಸಲಿ ಎಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ನ್ಯಾಯವಾದಿಗಳು, ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಸಿಬ್ಬಂದಿ ವರ್ಗದವರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನೊಳಗೊಂಡಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ

Karnataka Rajyotsava 2025 ಕನ್ನಡವನ್ನು ಹೊಸತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು,ತಾಂತ್ರಿಕ ತಜ್ಞರು ಮುಂದಾಗಬೇಕು- ಸಿದ್ಧರಾಮಯ್ಯ.

0

Karnataka Rajyotsava 2025 ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಅನಿವಾರ್ಯತೆ ಮತ್ತು ಹೊಸ ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಕುರಿತು ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ. ಕನ್ನಡ ನಾಡಿನ ಇತಿಹಾಸ, ಪರಂಪರೆಗಳ ನೆನಪುಗಳನ್ನು ಹೊಸ ತಲೆಮಾರಿಗೆ ಉಳಿಸಿ ಬೆಳೆಸುವ ಹಾಗೂ ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇಂದು ನಗರದ ಶ್ರೀ ಕಂಠೀರಣ ಹೊರಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾವಿರಾರು ವರ್ಷಗಳಷ್ಟು ಹಳೆಯ ಇತಿಹಾಸವುಳ್ಳ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಾಗಿದೆ ಎಂದರು.

ಶಿಕ್ಷಣದಲ್ಲಿ ಕನ್ನಡ ಭಾಷೆಯ ನಿರ್ಲಕ್ಷ್ಯವು ಹಲವು ಸಮಸ್ಯೆಗಳನ್ನು ಹುಟ್ಟಿ ಹಾಕಿದೆ. ಜಗತ್ತಿನ ಮುಂದುವರೆದ ಭಾಷೆಗಳಿಗೆ ಇಲ್ಲದ ಬಿಕ್ಕಟ್ಟು ಇಂದು ಕನ್ನಡದಂಥ ಭಾಷೆಗೆ ಬಂದಿದೆ. ಮುಂದುವರೆದ ದೇಶಗಳ ಮಕ್ಕಳು ತಮ್ಮ ತಾಯಿ ನುಡಿಗಳಲ್ಲಿಯೆ ಯೋಚಿಸುತ್ತಾರೆ, ಕಲಿಯುತ್ತಾರೆ ಮತ್ತು ಕನಸು ಕಾಣುತ್ತಾರೆ. ಆದರೆ ನಮ್ಮಲ್ಲಿ ಇದಕ್ಕೆ ತದ್ವಿರುದ್ಧವಾದ ಪರಿಸ್ಥಿತಿಯಿದೆ. ಇಂಗ್ಲೀಷು, ಹಿಂದಿಯಂಥ ಭಾಷೆಗಳು ನಮ್ಮ ಮಕ್ಕಳ ಪ್ರತಿಭೆಯನ್ನು ಭಾಷೆಯ ಕಾರಣಕ್ಕೆ ದುರ್ಬಲಗೊಳಿಸುತ್ತಿವೆ. ಹಾಗಾಗಿ ಮಾತೃಭಾಷೆಯಲ್ಲಿಯೆ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸೂಕ್ತ ಕಾನೂನುಗಳನ್ನು ತರಬೇಕಾದ ಅಗತ್ಯವಿದೆ.

ನಮಗಿರುವ ಸವಾಲುಗಳನ್ನೆ ಅವಕಾಶವಾಗಿ ಮಾರ್ಪಡಿಸುವ ಶಕ್ತಿ ನಮ್ಮ ಯುವ ತಲೆಮಾರಿಗಿದೆ. ಯುವ ತಲೆಮಾರು ಎದ್ದು ನಿಂತು ಕನ್ನಡ ಮತ್ತು ಕರ್ನಾಟಕವನ್ನು ಜಗತ್ತಿನ ಮುಂದುವರೆದ ಸಮಾಜಗಳ ಮಟ್ಟಕ್ಕೆ ನಿಲ್ಲಿಸಬೇಕಾಗಿದೆ ಎಂದರು.

ಒಂದು ನಾಡನ್ನು ಕಟ್ಟುವುದು ಸರಳವಾದ ಸಂಗತಿಯಲ್ಲ. ನಾಡೊಂದರ ಸಮಗ್ರ ಅಭಿವೃದ್ಧಿಯೆಂದರೆ ರಸ್ತೆ, ಸೇತುವೆ, ವಿದ್ಯುತ್, ರೈಲು, ವಿಮಾನ, ಸುಸಜ್ಜಿತ ಕಟ್ಟಡಗಳಷ್ಟೇ ಅಲ್ಲ. ಆ ನಾಡಿನ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯ, ತಮ್ಮ ಜೊತೆಯಲ್ಲಿನ ಮಕ್ಕಳ ಭಾಷೆ, ಬದುಕು, ಧರ್ಮ, ಜಾತಿ ಹಾಗೂ ಇನ್ನಿತ್ಯಾದಿ ಭಿನ್ನತೆಗಳನ್ನು ಸಹನೆಯಿಂದ ನೋಡುವುದನ್ನು ಕಲಿಸುವುದೂ ಮುಖ್ಯ.

ಜಗತ್ತಿನ ಮುಖ್ಯ ದೇಶಗಳಲ್ಲಿ ನಡೆಯುತ್ತಿರುವ ವಿವಿಧ ರೀತಿಯ ಅನ್ವೇಷಣೆಗಳಿಗೆ ಸರಿಸಾಟಿಯಾಗಿ ನಿಲ್ಲುವಂಥ ರೀತಿಯಲ್ಲಿ ಆಲೋಚನೆಗಳನ್ನು ಕಲಿಸುವ ವಾತಾವರಣವೂ ಬಹಳ ಮುಖ್ಯ. ಈ ವರ್ಷ ಕನ್ನಡಕ್ಕೆ ಬೂಕರ್ ಪ್ರಶಸ್ತಿಯನ್ನು ಶ್ರೀಮತಿ ಬಾನು ಮುಸ್ತಾಕ್ ಮತ್ತು ದೀಪಾ ಭಾಸ್ತಿಯವರು ತಂದುಕೊಡುವ ಮೂಲಕ ನಮ್ಮ ಭಾಷೆಯ ಶಕ್ತಿಯನ್ನು ವಿಶ್ವ ವೇದಿಕೆಗೆ ಕೊಂಡೊಯ್ದಿದ್ದಾರೆ. ಅವರನ್ನೂ ಈ ಸಂದರ್ಭದಲ್ಲಿ ಹೃದಯ ಪೂರ್ವಕವಾಗಿ ಅಭಿನಂದಿಸಿದರು.

Karnataka Rajyotsava 2025 ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ನಮ್ಮ ಸರ್ಕಾರ ಬದ್ದ- ಸಿ.ಎಂ.ಸಿದ್ದರಾಮಯ್ಯ:

ಈ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಆರ್ಟಿಫಿಷಿಯಲ್ ತಂತ್ರಜ್ಞಾನದಿಂದ ಉದ್ಯೋಗ ನಷ್ಟವಾಗಬಹುದು ಎಂಬ ಆತಂಕ ಎದುರಾಗಿದೆ. ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ತಂತ್ರಜ್ಞಾನ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಕರೆ ನೀಡಿದರು.

1956 ರಂದು ಏಕೀಕರಣಗೊಂಡ ನಮ್ಮ ಕರ್ನಾಟಕ ರಾಜ್ಯ ಉದಯವಾಗಿ ನವೆಂಬರ್ 1, 2025 ಕ್ಕೆ 69 ವರ್ಷ ಪೂರೈಸಿ 70 ನೇ ವರ್ಷಕ್ಕೆ ಮುನ್ನಡೆಯುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ನಡೆಸಿದ ಎಲ್ಲ ಮಹನೀಯರನ್ನು ಸ್ಮರಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ. ಏಕೀಕರಣ ಹೋರಾಟದಲ್ಲಿ ಹುತಾತ್ಮರಾದ ಮೈಸೂರಿನ ವಿದ್ಯಾರ್ಥಿ ರಾಮಸ್ವಾಮಿ, ಬಳ್ಳಾರಿಯ ರಂಜಾನ್ ಸಾಬ್ ಮುಂತಾದವರಿಗೆ ತಲೆಬಾಗಿ ನಮಿಸುತ್ತೇನೆ. ಏಕೀಕರಣ ಚಳುವಳಿಯ ಬೀಜಗಳನ್ನು ಬಿತ್ತಿ, ಅದನ್ನು ಮುನ್ನಡೆಸಿದ ಆಲೂರು ವೆಂಕಟರಾಯರು, ಅಂದಾನಪ್ಪ ದೊಡ್ಡಮೇಟಿ, ಗುದ್ಲೆಪ್ಪ ಹಳ್ಳಿಕೇರಿ, ಸಿದ್ದಪ್ಪ ಕಂಬಳಿ, ಆರ್.ಎಚ್. ದೇಶಪಾಂಡೆ, ಕೌಜಲಗಿ ಶ್ರೀನಿವಾಸ ರಾವ್, ಕೆಂಗಲ್ ಹನುಮಂತಯ್ಯ ಮುಂತಾದ ಮಹನೀಯರನ್ನು ಹೃದಯ ತುಂಬಿ ಸ್ಮರಿಸಿ, ಇವರೆಲ್ಲರ ಹೋರಾಟದ ಫಲವೆ ಇಂದಿನ ಕರ್ನಾಟಕ. ‘ಮನುಷ್ಯ ಜಾತಿ ತಾನೊಂದೇ ವಲಂ’ ಎಂದ ಆದಿಕವಿ ಪಂಪನಿಂದ ಹಿಡಿದು ಇಲ್ಲಿಯವರೆಗೂ ಕನ್ನಡದ ಸಾಹಿತ್ಯ ಸಂಪತ್ತು ಸಾಕಷ್ಟು ಸಮೃದ್ಧಗೊಂಡಿದೆ. ನಮ್ಮ ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರಕಿದೆ.

ಶಿಕ್ಷಣ ಕ್ಷೇತ್ರದ ಬಲವರ್ಧನೆ- ಸಿ.ಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು 3000 ಸರ್ಕಾರಿ ಶಾಲೆಗಳಿವೆ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ 2,500 ಕೋಟಿ. ರೂ. ವೆಚ್ಚದಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಿ ಪ್ರತಿ ಶಾಲೆಯನ್ನು 4 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು ಎಂದರು.

ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜೊತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ರೂ.483 ಕೋಟಿ ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಶಿಕ್ಷಣ ಕ್ಷೇತ್ರದ ಬಲವರ್ಧನೆಗಾಗಿ ಈ ವರ್ಷ 65,000 ಕೋಟಿ ರೂ.ಗಳಿಗೂ ಹೆಚ್ಚಿನ ಸಂಪನ್ಮೂಲಗಳನ್ನು ನಮ್ಮ ಸರ್ಕಾರ ವಿನಿಯೋಗಿಸುತ್ತಿದೆ. ನಮ್ಮ ವಸತಿ ಶಾಲೆಗಳು, ವಸತಿ ನಿಲಯಗಳಲ್ಲಿ 8.36 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಹೊಸದಾಗಿ ವಸತಿ ಶಾಲೆಗಳು, ವಸತಿ ನಿಲಯಗಳನ್ನು ಸ್ಥಾಪಿಸುತ್ತಿದ್ದೇವೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಪ್ರತ್ಯೇಕ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಕ್ಯಾನ್ಸರ್ ನಿಂದ ಬಾಧಿತರಾದ ಮಕ್ಕಳಿಗೆ ವೈದ್ಯಕೀಯ ಬೆಂಬಲದೊಂದಿಗೆ ಶಿಕ್ಷಣವನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಕಾಲಕಾಲಕ್ಕೆ ಶಿಕ್ಷಕರ ನೇಮಕಾತಿ ಮತ್ತು ತರಬೇತಿಗಳನ್ನು ನಡೆಸಲಾಗುತ್ತಿದೆ. 2024ರಲ್ಲಿ 14,499 ಪದವಿ ಪ್ರಾಥಮಿಕ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಮತ್ತು ಇತರೆ ಪ್ರದೇಶಗಳಲ್ಲಿ 5,000 ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ. 800 ಹೊಸ ಪಿಯು ಉಪನ್ಯಾಸಕರ ನೇಮಕಾತಿ ಮಾಡಲಾಗಿದೆ. ಹೊಸದಾಗಿ 18000 ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಅನುದಾನಿತ ಶಾಲೆಗಳಿಗೆ 5,000 ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಲು ಅನುಮತಿ ನೀಡಲಾಗಿದೆ ಎಂದರು.
ಇತ್ತೀಚೆಗೆ ಪ್ರೊ.ಸುಖ್ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗವು ವರದಿಯನ್ನು ನೀಡಿದೆ. ವರದಿಯನ್ನು ಗಂಭೀರವಾಗಿ ಪರಿಶೀಲಿಸಿ ಅದರ ಪೂರ್ಣ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುವುದು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳ ಜೊತೆಗೆ ಮಕ್ಕಳ ಬದುಕು ರೂಪುಗೊಳ್ಳಲು ಪೋಷಕರ ಪಾತ್ರವೂ ಅಷ್ಟೇ ಮಹತ್ವದ್ದಾಗಿದೆ. ಹೊಸ ತಲೆಮಾರು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಸಂಕಷ್ಟಗಳನ್ನು ಎದುರಿಸುತ್ತಿದೆ. ಮೊಬೈಲ್ ಫೋನು, ಇಂಟರ್‍ನೆಟ್, ಆರ್ಟಿಫೀಷಿಯಲ್ ಇಂಟೆಲಿಜೆನ್ಸುಗಳು ಇಬ್ಬಾಯ ಖಡ್ಗದಂತೆ ಕೆಲಸ ಮಾಡುತ್ತಿವೆ.

ಫಾರಿನ್ ಡೈರೆಕ್ಟ್ ಇನ್ವೆಸ್ಟ್ ಮೆಂಟ್ ನಲ್ಲಿ 2024-25 ರಲ್ಲಿ ಕರ್ನಾಟಕವು ಮಹಾರಾಷ್ಟ್ರವನ್ನು ಹಿಂದೆ ಹಾಕಿ, ಮೊದಲ ಸ್ಥಾನಕ್ಕೆ ಏರಿದೆಯೆಂದು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಅಂಕಿ ಅಂಶಗಳು ಹೇಳುತ್ತಿವೆ. 50,107 ಕೋಟಿ ರೂ.ಗಳಿಗೂ ಹೆಚ್ಚಿನ ವಿದೇಶಿ ನೇರ ಹೂಡಿಕೆಯು ರಾಜ್ಯದಲ್ಲಿ ಆಗಿದೆ. ಇಡೀ ದೇಶದ ಹೂಡಿಕೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಪಾಲು ಶೇ.51 ರಷ್ಟಿದೆ. ಅದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದರು.

ಕನ್ನಡವನ್ನು ಇಂಗ್ಲಿಷ್ ಹಾಗೂ ಹಿಂದಿ ಭಾಷೆಯ ದಾಳಿಯಿಂದ ನಾವೆಲ್ಲರೂ ರಕ್ಷಿಸಬೇಕು- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕರ್ನಾಟಕ ಸಂಸ್ಕೃಯ ಬೀಡಾಗಿದ್ದು, ಕನ್ನಡ ಕೇವಲ ನುಡಿಯಲ್ಲ ನಮ್ಮ ಅಂತರಂಗದ ಮಾತು. ಕಲಿತವರಿಗೆ ಅಮೃತ, ನಡೆದವರಿಗೆ ನೆರಳು, ದಾರಿದೀಪ. ಕನ್ನಡ ಎನ್ನುವುದು ಜೀವನದ ವಿಧಾನ. ಇಂತಹ ಕನ್ನಡವನ್ನು ಇಂಗ್ಲೀಷ್ ಹಾಗೂ ಹಿಂದಿ ಭಾಷೆಯ ದಾಳಿಯಿಂದ ನಾವೆಲ್ಲರೂ ಕಾಪಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಆದಿಕವಿ ಪಂಪ, ಬಸವಣ್ಣ, ಅಲ್ಲಮಪ್ರಭು, ಕನಕದಾಸರು, ಪುರಂದರದಾಸರು, ಕುವೆಂಪು, ಬೇಂದ್ರೆ, ಮಾಸ್ತಿ ಹೀಗೆ ದೊಡ್ಡ ಪರಂಪರೆ ಹೊಂದಿರುವ ನಮ್ಮ ಸಾಹಿತ್ಯವನ್ನು ಇಂದಿನ ಮಕ್ಕಳು ಓದಬೇಕು ಎಂದರು.

ಕನ್ನಡಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಈ ನೆಲದಲ್ಲಿ ವೈಶಿಷ್ಟ್ಯ ಅಡಗಿದೆ. ಇಲ್ಲಿಗೆ ಬಂದವರು ಯಾವುದೇ ಕಾರಣಕ್ಕೂ ಮರಳಿ ಹೋಗುವುದಿಲ್ಲ. ಎಲ್ಲರನ್ನೂ ಒಳಗೊಂಡಿರುವ ನಮ್ಮ ಕರ್ನಾಟಕ ಶಾಂತಿಯಿಂದ ಕೂಡಿದೆ. ಹೊರಗಿನಿಂದ ಬಂದವರು ಸಹ ಊಟ, ವಸತಿ ಗಳಿಸಿಕೊಂಡಿದ್ದಾರೆ. ಇದೇ ನಮ್ಮ ಕನ್ನಡ ತಾಯಿ, ಭೂಮಿಯ ವಿಶೇಷ. ಕರ್ನಾಟಕದಲ್ಲಿರುವ ವಾತಾವರಣ ದೇಶದ ಯಾವ ಭಾಗದಲ್ಲಿಯೂ ಇಲ್ಲ. ನಮ್ಮ ಸಂಸ್ಕøತಿ ಹಾಗೂ ನೆಲ, ಜಲಕ್ಕೆ ಎಲ್ಲರನ್ನೂ ಆಕರ್ಷಿಸುವ ಗುಣವಿದೆ ಎಂದರು.

ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಲು ವಾಣಿಜ್ಯ ಮಳಿಗೆಗಳು, ಅಂಗಡಿಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಸಲು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ ಎಂದರು.

ಕನ್ನಡಿಗರ ತ್ಯಾಗ, ಬಲಿದಾನ, ಶ್ರಮವನ್ನು ನಾವು ಸ್ಮರಿಸಬೇಕು. ಅನೇಕ ಹಿರಿಯರು ಈ ನೆಲ, ಜಲ, ಭಾಷೆ, ಬಾವುಟದ ಗೌರವವನ್ನು ಕಾಪಾಡಿದ್ದಾರೆ. ದೇಶದ ಯಾವ ರಾಜ್ಯವೂ ಧ್ವಜ, ನಾಡಗೀತೆ ಹೊಂದಿಲ್ಲ. ಆದರೆ ನಾವು ಇವೆರಡನ್ನೂ ಹೊಂದಿದ್ದೇವೆ. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆಯನ್ನೂ ಸ್ಥಾಪಿಸಿರುವುದು ಹೆಮ್ಮೆಯ ವಿಷಯ ಎಂದರು.

ಕುವೆಂಪು ಅವರು ಹೇಳಿರುವಂತೆ ಕರ್ನಾಟಕ ಶಾಂತಿಯ ತೋಟ. ನಾವೆಲ್ಲರೂ ಜಾತಿ, ಧರ್ಮಗಳನ್ನು ಬಿಟ್ಟು ಸಹಬಾಳ್ವೆಯಿಂದ ಕರ್ನಾಟಕದ ಏಳಿಗೆಗೆ ದುಡಿಯಬೇಕು. ಜಾಗತಿಕವಾಗಿ ಬೆಂಗಳೂರು ಬೆಳೆಯುತ್ತಿದೆ. ಪ್ರಪಂಚದ ಜನರು ಕರ್ನಾಟಕವನ್ನು ಗಮನಿಸುತ್ತಿದ್ದಾರೆ. ಕನ್ನಡ, ಕರ್ನಾಟಕವನ್ನು ಜಾಗತಿಕ ಮಟ್ಟಕ್ಕೆ ನಾವೆಲ್ಲರೂ ಕೊಂಡೊಯ್ಯಬೇಕು ಎಂದು ಕರೆ ನೀಡಿದರು.

ಶಾಲಾ ಮಕ್ಕಳ ಪಥಸಂಚಲನ ನೋಡುತ್ತಿದ್ದರೆ ತಮ್ಮ ಬಾಲ್ಯದ ದಿನಗಳು ನೆನಪಾಗುತ್ತದೆ ಎಂದ ಅವರು ತಮ್ಮ ಪ್ರೌಢಶಾಲೆಯ ದಿನಗಳ ಮೆಲುಕು ಹಾಕುತ್ತಾ, ಕರ್ನಾಟಕದ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

ಕನ್ನಡ ಕೇವಲ ಒಂದು ಭಾಷೆಯಲ್ಲ. ಅದು ನಮ್ಮ ಸಂಸ್ಕøತಿ ನಮ್ಮ ಉಸಿರು- ಸಚಿವ ಮಧು ಬಂಗಾರಪ್ಪ:

ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಕನ್ನಡ ಭಾಷೆಯು ಒಂದು.. ಕನ್ನಡ ಕೇವಲ ಒಂದು ಭಾಷೆಯಲ್ಲ ಅದು ನಮ್ಮ ಸಂಸ್ಕøತಿ ನಮ್ಮ ಉಸಿರು. ಕನ್ನಡಕ್ಕೆ ಮಾತ್ರ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿಕ್ಷಣದ ಗುಣಮಟ್ಟ ಹೆಚ್ಚಿಸಲು 51,000 ಅತಿಥಿ ಶಿಕ್ಷಕರನ್ನು ಒಂದೇ ಬಾರಿಗೆ ನೇಮಕ ಮಾಡಿಕೊಳ್ಳಲಾಗಿದೆ. ಅತಿಥಿ ಶಿಕ್ಷಕರ ಗೌರವ ಧನವನ್ನು ರೂ. 2000/-ಗಳಿಗೆ ಹೆಚ್ಚಿಸಿದೆ. 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಮೂರು ಪರೀಕ್ಷಾ ಮಾದರಿಯನ್ನು ಪರಿಚಯಿಸಿದ್ದರಿಂದ ಶೇಕಡಾ 79.71ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪಿ.ಯು.ಸಿಯಲ್ಲಿ ಶೇಕಡಾ 85.19ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದರು.

ಶಾಲಾ ಕೊಠಡಿಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ರೂ, 850 ಕೋಟಿಗಳ ಕಾಮಗಾರಿಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಇಲಾಖೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಕ್ಕಳ ಹಿತದೃಷ್ಠಿಯಿಂದ ದಿನಾಂಕ: 14-11-2025ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮೆಗಾ ಪೋಷಕರ-ಶಿಕ್ಷಕರ ಸಭೆಯನ್ನು ಏಕಕಾಲಕ್ಕೆ ನಡೆಸಲಾಗುವುದು ಎಂದರು.

2026-27ನೇ ಶೈಕ್ಷಣಿಕ ಸಾಲಿನಿಂದ ಬೆಳಗಾವಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ 07 ಸರ್ಕಾರಿ ಶಾಲೆಗಳ ಆವರಣದಲ್ಲಿ ಹೆಚ್ಚುವರಿಯಾಗಿ ಕನ್ನಡ ಮಾಧ್ಯಮ ವಿಭಾಗಗಳನ್ನು ಪ್ರಾರಂಭಿಸಲು ಹಾಗೂ 02 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳಾಗಿ ಉನ್ನತೀಕರಿಸಲು ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಇತರೆ ಗಡಿಭಾಗಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಗೆ ಸಂಪೂರ್ಣ ಆದ್ಯತೆ ನೀಡಲಾಗುವುದು ಎಂದರು.

ವಿವಿಧ ಶಾಲಾ ಮಕ್ಕಳು ಪಥಸಂಚಲನ ಮಾಡಿ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪ್ರಮಾಣಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಸ್ವಾಗತಿಸಿದರು ಹಾಗೂ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ವಂದಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ರಿಜ್ವಾನ್ ಅರ್ಷದ್, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಬಿ.ಆರ್.ಪಾಟೀಲ್, ಗೋವಿಂದರಾಜು ಹಾಗೂ ಪೊಲೀಸ್ ಮಹಾನಿರ್ದೇಶಕ ಮತ್ತು ಆರಕ್ಷಕ ಮಹಾನಿರೀಕ್ಷರಾದ ಡಾ.ಎಂ.ಎ. ಸಲೀಂ ಮತ್ತಿತರರು ಉಪಸ್ಥಿತರಿದ್ದರು