ಶಿವಮೊಗ್ಗ ನಗರದ ಗೆಟ್ಟೇನಹಳ್ಳಿ ರಸ್ತೆಯಕೆ.ಹೆಚ್.ಬಿ.ಪ್ರೆಸ್ ಕಾಲೋನಿಯಲ್ಲಿರುವ
ದೊಡ್ಡಮ್ಮ ಚಾರಿಟಬಲ್ ಟ್ರಸ್ಟ್ ಇಲ್ಲಿ ಮೂರನೇ ಕೆಂಡದಾರ್ಚನೆ ಕಾರ್ಯಕ್ರಮ ಜ. 28 ಬುಧವಾರದಂದು ಬೆಳಿಗ್ಗೆ 7 ಗಂಟೆಯಿಂದ ಗಂಗಾ ಪೂಜೆಯಿಂದ ಪ್ರಾರಂಭವಾಗಲಿದೆ.
ಸುದ್ದಿ ಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಎಮ್ ಎನ್ ಸುಂದರರಾಜು, ಅಂದು ಬೆಳಗ್ಗೆ ದೊಡ್ಡಮ್ಮ ದೇವಿ ಉತ್ಸವ ಮೂರ್ತಿ ಮೆರವಣಿಗೆ ಇದೆ. ಬೆಳಿಗ್ಗೆ 9.30ಕ್ಕೆ ಸಾವಿರ ಮಹಿಳೆಯರಿಂದ ಆರತಿ ಮುಂಭಾಗದಲ್ಲಿ ಬೆಳಿಗ್ಗೆ 10 ರಿಂದ “ ಶ್ರೀ ದೊಡ್ಡಮ್ಮ ದೇವಿ ಕೆಂಡದಾರ್ಚನೆ” ಹಮ್ಮಿಕೊಳ್ಳಲಾಗಿದೆ.
ಕೆಂಡದಾರ್ಚನೆ ಸಂಬಂಧ 27 ರಂದು ಗಣಪತಿ ಪೂಜೆ, ಪುಣ್ಯಾಹವಾಚನ, ದೇವಿ ಆರಾಧನಾ ಪೂಜೆ ನಂತರ ಚಂಡಿಕಾ ಬೀಜಾಕ್ಷರ ಹೋಮವಿದೆ ಎಂದರು.
ಬೆಳಿಗ್ಗೆ 8 ಗಂಟೆಗೆ ಪೂರ್ಣಾಹುತಿ, ಮಹಾ ಮಂಗಳಾರತಿ, ನಂತರ ಪ್ರಸಾದ ವಿನಿಯೋಗ, ನಂತರ ಬೆಳಿಗ್ಗೆ 11 ಗಂಟೆಗೆ ರಾಧಾ ಎಂ. ಸಿದ್ಧಪ್ಪಾಜಿ ಸಂಗ್ರಹಿಸಿರುವ ಶ್ರೀ ಸಿದ್ಧಪ್ಪಾಜಿಯವರ ನುಡಿಮುತ್ತುಗಳ ಸಂಗ್ರಹ “ತಾಯಿನುಡಿ” ಕೃತಿ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಗಳಾಗಿ ಪ್ರೊ. ಶಾಂತಾರಾಮ ಪ್ರಭು, ನಿಟ್ಟೂರು ಇವರು ಆಗಮಿಸಲಿದ್ದಾರೆ. ಸಾಹಿತಿ ಎಂ.ಎನ್.ಸುಂದರ ರಾಜ್, ಉಪಸ್ಥಿತರಿರುತ್ತಾರೆ ಎಂದರು.
ಅಂದು ನಡೆಯುವ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಬಿ. ಶ್ರೀನಿವಾಸ ರೆಡ್ಡಿ, ಸಂಸ್ಥಾಪಕರು ರಮಣ ಮಹರ್ಷಿ ಆಶ್ರಮ, ಬೆಂಗಳೂರು, ಡಾ!! .ಪ್ರಸನ್ನ ಬಸವರಾಜಪ್ಪ, ಸರ್ಜಿಕಲ್ ಗ್ಯಾಸ್ಟ್ ಆಂಡೋಲಜಿಸ್ಟ್, ಮ್ಯಾಕ್ಸ್ ಆಸ್ಪತ್ರೆ, ಶಿವಮೊಗ್ಗ, ಡಿ.ಎಂ.ದೇವರಾಜ್, ಸಂಸ್ಥಾಪಕರು, ರಾಮಕೃಷ್ಣ ವಸತಿ ವಿದ್ಯಾಲಯ, ಎಂ.ಎಲ್.ಹಳ್ಳಿ, ವಾಸುದೇವ್, ಹಿರಿಯ ಭೂ ವಿಜ್ಞಾನಿಗಳು, ಬೆಂಗಳೂರು ಇವರಿಗೆ ಸನ್ಮಾನವಿದೆ. ಸಿದ್ಧಪ್ಪಾಜಿ, ದೇವಿ ಉಪಾಸಕರು, ಶಿವಮೊಗ್ಗ ಇವರು ಸಭೆಯ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಲಿದ್ದಾರೆ ಎಂದರು.
ಅಂದು ಬೆಳಿಗ್ಗೆ 8 ಗಂಟೆಯಿಂದ ದೇವಿ ಭಜನಾ ಕಾರ್ಯಕ್ರಮದಲ್ಲಿ ಗಾಯತ್ರಿ ಭಜನಾ ಮಂಡಳಿ ಶಿವಮೊಗ್ಗ, ಗಾಯತ್ರಿ ಭಜನಾ ಮಂಡಳಿ ಹೊನ್ನಾಳಿ, ಸಿರಿ ಭಜನಾ ಮಂಡಳಿ, ರಾಜೇಂದ್ರ ನಗರ, ಶಿವಮೊಗ್ಗ, ವಿದ್ಯಾ ಭಜನಾ ಮಂಡಳಿ, ವಿದ್ಯಾನಗರ ಶಿವಮೊಗ್ಗ, ಮೊದಲಾದವರಿಂದ ಭಜನೆ ನಡೆಯಲಿದೆ ಎಂದರು.
ಜ. 28ಕ್ಕೆ ಕೆಂಡದಾರ್ಚನೆ, ಕೃತಿ ಬಿಡುಗಡೆ ಕಾರ್ಯಕ್ರಮ
Sahyadri Narayan Multispeciality Hospital ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ಮತ್ತೊಂದು ಮೈಲಿಗಲ್ಲು: 1,000 ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆಗಳ ಯಶಸ್ವಿ ಪೂರ್ಣ
Sahyadri Narayan Multispeciality Hospital ಉನ್ನತ ಗುಣಮಟ್ಟದ ಮೂತ್ರಶಾಸ್ತ್ರ (Urology) ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಮಹತ್ವದ ಸಾಧನೆಯೊಂದನ್ನು ಮಾಡಿದೆ. ಪ್ರಾಸ್ಟೇಟ್ ಸಮಸ್ಯೆಗೆ ಪರಿಹಾರ ನೀಡುವ ಅತ್ಯಾಧುನಿಕ ‘ಟ್ರಾನ್ಸ್ಯುರೆಥ್ರಲ್ ರಿಸೆಕ್ಷನ್ ಆಫ್ ದಿ ಪ್ರಾಸ್ಟೇಟ್’ (TURP) ಶಸ್ತ್ರಚಿಕಿತ್ಸೆಯನ್ನು ಬರೋಬ್ಬರಿ 1,000 ರೋಗಿಗಳಿಗೆ ಯಶಸ್ವಿಯಾಗಿ ಪೂರೈಸುವ ಮೂಲಕ ಆಸ್ಪತ್ರೆ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ.
ಪ್ರಾಸ್ಟೇಟ್ ಗ್ರಂಥಿಯ ಹಿಗ್ಗುವಿಕೆಯಿಂದ ಉಂಟಾಗುವ ಮೂತ್ರದ ಸಮಸ್ಯೆಗಳಿಗೆ ಈ TURP ಶಸ್ತ್ರಚಿಕಿತ್ಸೆಯನ್ನು ಮಾಡಲಾಗುತ್ತದೆ. ಆಸ್ಪತ್ರೆಯ ಹಿರಿಯ ಮೂತ್ರಶಾಸ್ತ್ರ ತಜ್ಞರಾದ (Urologists) ಡಾ. ಪ್ರಭುಲಿಂಗ ಕೊಣ್ಣೂರು ಮತ್ತು ಡಾ. ಅವಿನಾಶ್ ಅವರ ನೇತೃತ್ವದ ತಂಡವು ಈ ಎಲ್ಲಾ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಿದೆ. ಇವೆಲ್ಲವೂ ಕನಿಷ್ಠ ಆಕ್ರಮಣಾಕಾರಿ ಶಸ್ತ್ರಚಿಕಿತ್ಸಾ ವಿಧಾನಗಳಾಗಿದ್ದು (Minimally Invasive), ಅತ್ಯುತ್ತಮ ಫಲಿತಾಂಶಗಳನ್ನು ಕಂಡಿವೆ ಮತ್ತು ರೋಗಿಗಳು ಕೂಡ ಶೀಘ್ರವಾಗಿ ಚೇತರಿಸಿಕೊಂಡಿದ್ದಾರೆ. ಈ ಸಾಧನೆಯು ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಪ್ರಾಸ್ಟೇಟ್ ಆರೈಕೆಗಾಗಿ ಈ ಆಸ್ಪತ್ರೆ ಪ್ರಮುಖ ಕೇಂದ್ರವಾಗಿರುವುದನ್ನು ಸಾಬೀತುಪಡಿಸಿದೆ.
ಆರಂಭದಲ್ಲಿ ಆಸ್ಪತ್ರೆಯು ಸಾಂಪ್ರದಾಯಿಕ ‘ಎಲೆಕ್ಟ್ರೋಕಾಟರಿ’ (electrocautery) ತಂತ್ರಜ್ಞಾನವನ್ನು ಬಳಸಿ ಈ ಶಸ್ತ್ರಚಿಕಿತ್ಸೆಗಳನ್ನು ನಡೆಸುತ್ತಿತ್ತು. ಕಾಲಕ್ಕೆ ತಕ್ಕಂತೆ ಬದಲಾಗಬೇಕು, ಆಧುನಿಕತೆಗೆ ತೆರೆದುಕೊಂಡ ಈ ಆಸ್ಪತ್ರೆಯು, ಇದೀಗ ಸುಧಾರಿತ ‘100-ವ್ಯಾಟ್ ಹೋಲ್ಮಿಯಂ ಲೇಸರ್’ (Holmium Laser) ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ.
ಈ ಬಗ್ಗೆ ಮಾತನಾಡಿದ ಕನ್ಸಲ್ಟೆಂಟ್ ಯೂರಾಲಜಿಸ್ಟ್ ಡಾ. ಪ್ರಭುಲಿಂಗ ಕೊಣ್ಣೂರು, “ನಮ್ಮ ವಿಭಾಗದ ಈ ಸಾಧನೆಗೆ ರೋಗಿಗಳ ನಂಬಿಕೆ ಮತ್ತು ನಮ್ಮ ತಂಡದ ಶ್ರಮವೇ ಕಾರಣ. 1,000 ಶಸ್ತ್ರಚಿಕಿತ್ಸೆಗಳನ್ನು ಪೂರೈಸಿರುವುದು ಕೇವಲ ಒಂದು ಸಂಖ್ಯೆ ಅಷ್ಟೇ ಅಲ್ಲ, ಬದಲಿಗೆ ರೋಗಿಗಳು ನಮ್ಮ ಮೇಲಿಟ್ಟಿರುವ ವಿಶ್ವಾಸದ ಪ್ರತೀಕವಾಗಿದೆ. ಹಳೆಯ ಎಲೆಕ್ಟ್ರೋಕಾಟರಿ ಪದ್ಧತಿ ಉತ್ತಮವಾಗಿದ್ದರೂ, ಹೋಲ್ಮಿಯಂ ಲೇಸರ್ ತಂತ್ರಜ್ಞಾನದ ಆಗಮನವು ಪ್ರಾಸ್ಟೇಟ್ ಚಿಕಿತ್ಸೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ಇದು ಹೆಚ್ಚು ನಿಖರ ಮತ್ತು ಸುರಕ್ಷಿತ,” ಎಂದು ಅಭಿಪ್ರಾಯಪಟ್ಟರು.
ಏನಿದು ಹೋಲ್ಮಿಯಂ ಲೇಸರ್ TURP?
ಇದನ್ನು ಲೇಸರ್ ಪ್ರಾಸ್ಟೇಟೆಕ್ಟಮಿ ಎಂದೂ ಕರೆಯುತ್ತಾರೆ. ಇದರಲ್ಲಿ ಶಕ್ತಿಶಾಲಿ ಲೇಸರ್ ಕಿರಣಗಳನ್ನು ಬಳಸಿ, ಅಡೆತಡೆ ಉಂಟುಮಾಡುವ ಮಾಂಸದ ಬೆಳವಣಿಗೆಯನ್ನು ನಿಖರವಾಗಿ ತೆಗೆದುಹಾಕಲಾಗುತ್ತದೆ. ಅದೇ ಸಮಯದಲ್ಲಿ ರಕ್ತನಾಳಗಳನ್ನು ಸೀಲ್ ಮಾಡುವುದರಿಂದ ರಕ್ತಸ್ರಾವ ತೀರಾ ಕಡಿಮೆ ಇರುತ್ತದೆ.
Sahyadri Narayan Multispeciality Hospital ಈ ಆಧುನಿಕ ವಿಧಾನದಿಂದ ಹಲವು ಪ್ರಯೋಜನಗಳಿವೆ. ರಕ್ತಸ್ರಾವ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಮತ್ತು ರಕ್ತ ತೆಳುವಾಗುವ ಮಾತ್ರೆಗಳನ್ನು ತೆಗೆದುಕೊಳ್ಳುವ ರೋಗಿಗಳಿಗೆ ಇದು ತುಂಬಾ ಸುರಕ್ಷಿತ. ರೋಗಿಗಳು ಬೇಗನೆ ಚೇತರಿಸಿಕೊಳ್ಳುತ್ತಾರೆ, ನೋವು ಕಡಿಮೆ ಇರುತ್ತದೆ, ಕೆಥೆಟರ್ ಅಳವಡಿಕೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ತಂಗುವ ಅವಧಿ ಕೂಡ ಕಡಿಮೆಯಾಗುತ್ತದೆ. ಅಷ್ಟೇ ಅಲ್ಲದೆ, ದೊಡ್ಡ ಗಾತ್ರದ ಪ್ರಾಸ್ಟೇಟ್ ಗ್ರಂಥಿಗಳಿಗೂ ಇದು ಪರಿಣಾಮಕಾರಿ ಚಿಕಿತ್ಸೆಯಾಗಿದೆ.
ಕನ್ಸಲ್ಟೆಂಟ್ ಯೂರಾಲಜಿಸ್ಟ್ ಡಾ. ಅವಿನಾಶ್ ಮಾತನಾಡಿ, “ಈ ಹೊಸ ಯಂತ್ರದ ಪ್ರಯೋಜನಗಳು ರೋಗಿಗಳ ಚೇತರಿಕೆಯಲ್ಲಿ ಸ್ಪಷ್ಟವಾಗಿ ಕಾಣುತ್ತಿವೆ. ನಿಖರವಾದ ಲೇಸರ್ ತಂತ್ರಜ್ಞಾನದಿಂದಾಗಿ ಅಡ್ಡಪರಿಣಾಮಗಳು ತೀರಾ ಕಡಿಮೆ. ರೋಗಿಗಳು ಶೀಘ್ರವಾಗಿ ತಮ್ಮ ದೈನಂದಿನ ಕೆಲಸಗಳಿಗೆ ಮರಳಬಹುದು ಮತ್ತು ಇಲ್ಲಿಯವರೆಗೆ ನಾವು ಕಂಡ ಫಲಿತಾಂಶಗಳು ಅತ್ಯಂತ ಆಶಾದಾಯಕವಾಗಿವೆ,” ಎಂದು ಹೇಳಿದರು.
ಮೂತ್ರ ವಿಸರ್ಜನೆಯಲ್ಲಿ ತೊಂದರೆ, ಮೂತ್ರದ ಹರಿವು ಕಡಿಮೆಯಾಗುವುದು (weak stream), ರಾತ್ರಿ ವೇಳೆ ಪದೇ ಪದೇ ಮೂತ್ರಕ್ಕೆ ಹೋಗುವುದು ಅಥವಾ ಮೂತ್ರಕೋಶ ಸಂಪೂರ್ಣ ಖಾಲಿಯಾಗದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಕಾಣುವಂತೆ ಇಬ್ಬರೂ ವೈದ್ಯರು ಸಲಹೆ ನೀಡಿದ್ದಾರೆ. ಆರಂಭದಲ್ಲೇ ರೋಗ ಪತ್ತೆಯಾದರೆ ಚಿಕಿತ್ಸೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ, ಎಂದು ತಿಳಿಸಿದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವರ್ಗೀಸ್ ಪಿ ಜಾನ್ ಮಾತನಾಡಿ, “ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಈಗ ಅತ್ಯಾಧುನಿಕ ಲೇಸರ್ ಶಸ್ತ್ರಚಿಕಿತ್ಸೆ ಲಭ್ಯವಿರುವುದರಿಂದ, ಮಲೆನಾಡು ಭಾಗದ ಮತ್ತು ನೆರೆಯ ಜಿಲ್ಲೆಗಳ ರೋಗಿಗಳು ಇನ್ಮುಂದೆ ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿನಂತಹ ಮಹಾನಗರಗಳಿಗೆ ಅಲೆಯಬೇಕಿಲ್ಲ,” ಎಂದು ತಿಳಿಸಿದರು.
ಹೊಸನಗರ : ಮೆಸ್ಕಾಂ ಜನ ಸಂಪರ್ಕ ಸಭೆ
ಹೊಸನಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜ. 29 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;.9448289517.
Karnataka Bala Vikas Academy ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Karnataka Bala Vikas Academy ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2024-25 ಮತ್ತು 2025-26ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೊಂದು ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಮಕ್ಕಳು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಅಥವಾ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಹೆಚ್.ಬಿ. ಕಾಲೋನಿ, ಲಕಮನಹಳ್ಳಿ, ಧಾರವಾಡ -580004 ಇಲ್ಲಿಂದ ಪಡೆದು, ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಮನವಿಯನ್ನು ಫೆ. 20 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0836-2465490/ 8050392209/ 7204396275/ 9448981944 ಗಳನ್ನು ಸಂಪರ್ಕಿಸುವುದು.
Karnataka Bala Vikas Academy ಮಕ್ಕಳ ಪುಸ್ತಕ ಚಂದಿರ” ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ
Karnataka Bala Vikas Academy ಕರ್ನಾಟಕ ಬಾಲವಿಕಾಸ ಅಕಾಡೆಮಿಯು ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ” ಗಾಗಿ 2024 ನೇ ಸಾಲಿನ ಹಾಗೂ 2025 ನೇ ಸಾಲಿನ ಜನವರಿ ಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾಸಂಕಲನ, ನಾಟಕ, ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ, ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಸೇರಿದಂತೆ ಒಟ್ಟು ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಿದೆ.
Karnataka Bala Vikas Academy ಆಸಕ್ತರು ಪ್ರಶಸ್ತಿಗಾಗಿ ಪರಿಗಣಿಸಲು / ಮೌಲ್ಯಮಾಪಾನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವಾರಗಳನ್ನೊಳಗೊಂಡ ಮನವಿಯೊಂದಿಗೆ ಪುಸ್ತಕಗಳನ್ನು ಯಾವ ಸಾಲಿಗೆ ಪರಿಗಣಿಸಬೇಕೆಂಬುದರ ಬಗ್ಗೆ ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಹೆಚ್.ಬಿ. ಕಾಲೋನಿ, ಲಕಮನಹಳ್ಳಿ, ಧಾರವಾಡ -580004 ಇಲ್ಲಿಗೆ ಫೆ. 20 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0836-2465490/ 8050392209/ 7204396275/ 9448981944 ಗಳನ್ನು ಸಂಪರ್ಕಿಸುವುದು.
Subhash Chandra Bose ವಿಧಾನಸೌಧದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ
Subhash Chandra Bose ನೇತಾಜಿ ಸುಭಾಷ್ ಚಂದ್ರ ಬೋಸ್ರವರ ಜನ್ಮದಿನ ಅಂಗವಾಗಿ ವಿಧಾನಸೌಧದ ಈಶಾನ್ಯ ದಿಕ್ಕಿನಲ್ಲಿ ಮರು ಸ್ಥಾಪನೆಯಾದ ನೇತಾಜಿ ಸುಭಾಷ್ ಚಂದ್ರ ಬೋಸ್ರವರ ಪ್ರತಿಮೆಯನ್ನು ಸಿದ್ದರಾಮಯ್ಯ ಅವರು ಅನಾವರಣಗೊಳಿಸಿ, ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
Thawar Chand Gehlot ರಾಜ್ಯಪಾಲರೊಂದಿಗೆ ಸಿಕ್ಕಿಂ ವಿದ್ಯಾರ್ಥಿಗಳ ಸಂವಾದ
Thawar Chand Gehlot ಭಾರತೀಯ ಸೇನೆಯ ಆಪರೇಷನ್ ಸದ್ಭಾವನ ಅಡಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಏಕೀಕರಣ ಪ್ರವಾಸದ ಭಾಗವಾಗಿ ಬೆಂಗಳೂರಿಗೆ ಭೇಟಿ ನೀಡಿದ್ದ ಸಿಕ್ಕಿಂನ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಂವಾದ ನಡೆಸಿದರು. ಈ ವೇಳೆ ಕ್ಯಾಪ್ಟನ್ ಧನಂಜಯ್ ಜಸ್ರೋಟಿಯಾ ಮತ್ತು ಅಧಿಕಾರಿಗಳು ಹಾಜರಿದ್ದರು.
MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ
MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ ಜ.23 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9480841339.
ಅಹೋರಾತ್ರಿ ಗಮಕ ವಾಚನದ ಮೂಲಕ ವಿಶ್ವ ದಾಖಲೆಗೆ ಸಿದ್ಧರಾದ ಪ್ರಸಾದ್ ಭಾರದ್ವಾಜ್
24 ಗಂಟೆಗಳ ಗಮಕ ವಾಚನ ಮಾಡುವ ಮೂಲಕ ವಿಶ್ವ ದಾಖಲೆಗೆ ಶಿವಮೊಗ್ಗ ಸಮೀಪದ ಹೊಸಹಳ್ಳಿಯು ಯುವ ಗಮಕಿ , ಪದ್ಮಶ್ರೀ ಗಮಕ ಗಂಧರ್ವ ಹೆಚ್.ಆರ್. ಕೇಶವಮೂರ್ತಿರವರ ಶಿಷ್ಯಪ್ರಸಾದ್ ಭಾರದ್ವಾಜ್ ಮುಂದಾಗಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜ. 24 ರ ಮಧ್ಯಾಹ್ನ 3:30ಕ್ಕೆ ಕಾರ್ಯಕ್ರಮ ರವೀಂದ್ರನಗರ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಉದ್ಘಾಟನೆಯಾಗಲಿದೆ. ಸಂಸದ ಬಿ. ವೈ. ರಾಘವೇಂದ್ರ ಉದ್ಘಾಟನೆ ನಡೆಸುವರು. ಮುಖ್ಯ ಅತಿಥಿಗಳಾಗಿ ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತೆ, , ಕರ್ನಾಟಕ ಗಮಕಕಲಾ ಪರಿಷತ್ ಮಾಜಿ ಅಧ್ಯಕ್ಷೆ ಬೆಂಗಳೂರು, ಗಂಗಮ್ಮ ಕೇಶವಮೂರ್ತಿ, ಬೆಂಗಳೂರು ಮತ್ತು ಕನ್ನಡ ಸಂಸ್ಕೃತಿ ಇಲಾಖೆ, ಶಿವಮೊಗ್ಗದ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ,
ಅಧ್ಯಕ್ಷತೆಯನ್ನು ಗಮಕ ಕಲಾ ಪರಿಷತ್, ಹೊಸಹಳ್ಳಿ ಇದರ ಅಧ್ಯಕ್ಷ ಹೆಚ್. ಎಸ್. ಸತ್ಯನಾರಾಯಣ ವಹಿಸುವರೆಂದರು.
24 ಗಂಟೆಗಳ ಗಮಕ ವಾಚನ ಮಾಡುವ ಮೂಲಕ ವಿಶ್ವ ದಾಖಲೆ ಮಾಡಲಾಗುವುದು ಸಂಜೆ 5 ಕ್ಕೆ ಗಮಕ ವಾಚನ ಆರಂಭವಾಗುವುದು. ಸಮಾರೋಪ ಸಮಾರಂಭ ಜನವರಿ 25 ಭಾನುವಾರ ಸಂಜೆ : 7-30ಕ್ಕೆ ನಡೆಯಲಿದೆ
ಅಧ್ಯಕ್ಷತೆಯನ್ನು ಸುಬ್ರಮಣ್ಯ ಶಾಸ್ತ್ರೀ, ಶಿವಮೊಗ್ಗ ಅಧ್ಯಕ್ಷರು, ಕರ್ನಾಟಕ ಗಮಕ ಕಲಾ ಪರಿಷತ್ (ರಿ.), ಬೆಂಗಳೂರು ಜಿಲ್ಲಾ ಶಾಖೆ, ಶಿವಮೊಗ್ಗ, ಮುಖ್ಯ ಅತಿಥಿಗಳಾಗಿ : ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಶಾಸಕರು, ಶಿವಮೊಗ್ಗ
ಹೆಚ್.ಎಸ್. ಗೋಪಾಲ, * ಹಿರಿಯ ವ್ಯಾಖ್ಯಾನಗಾರರು ಆಗಮಿಸುವರೆಂದರು.
ಶಿವಮೊಗ್ಗಕ್ಕೆ ತೆರಳಿದ್ದ ಟೆಕ್ನಿಷಿಯನ್ ನಾಪತ್ತೆ
ಹುಂಚಾ ಗ್ರಾಮದ ಮಾರ್ನಮಿ ಬೈಲು ನಿವಾಸಿ ಧನುಷ್ ಎನ್.ಡಿ (25) ಜ. 19 ರಂದು ಬೆಳಿಗ್ಗೆ ಮನೆಯಿಂದ ಶಿವಮೊಗ್ಗದ ಮಹೇಂದ್ರ ಶೋರೂಮ್ಗೆ ತೆರಳುವುದಾಗಿ ಹೇಳಿ ಹೊರಟು ಹೋಗಿದ್ದು, ನಂತರ ಮನೆಗೂ ವಾಪಸ್ ಬಾರದೇ ಕಾಣೆಯಾಗಿರುವ ಘಟನೆ ನಡೆದಿದೆ.
ಧನುಷ್ ಶಿವಮೊಗ್ಗಕ್ಕೆ ತೆರಳಿದ ಬಳಿಕ ಕಾಣೆಯಾಗಿದ್ದು, ಸಂಬಂಧಿಕರು ಹಾಗೂ ಕುಟುಂಬಸ್ಥರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಲಭಿಸಿಲ್ಲ. ಈ ಹಿನ್ನೆಲೆಯಲ್ಲಿ ಕಾಣೆಯಾದ ಯುವಕನ ತಂದೆ ದಿನೇಶ್ ಮರಗಿ ಬಿನ್ ನಾಗಪ್ಪ ಮರಗಿ ಅವರು ನೀಡಿದ ದೂರಿನ ಆಧಾರದಲ್ಲಿ ರಿಪ್ಪನಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 09/2026, ಮನುಷ್ಯ ಕಾಣೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
