ಶಿಕಾರಿಪುರ ವಲಯದ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಕಚೇರಿಯ ವಾಹನ ಚಾಲಕರಾದ ಸೋಮೇಶ್ವರ ಕೆ.ಎ ಅವರು ದಿ:26/8/2024 ರಂದು ಅನಧಿಕೃತವಾಗಿ ಗೈರು ಹಾಜರಾಗಿದ್ದು, ಸೇವೆಯಿಂದ ಅವಮಾನತ್ತು ಮಾಡಿ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಆದೇಶ ಹೊರಡಿಸಿದ್ದಾರೆ.
ಸೋಮೇಶ್ವರ್ ಕೆ.ಎ ಅವರಿಗೆ ಗೈರು ಹಾಜರಾದ ಕಾರಣ ಕೇಳಿ ಕಚೇರಿಯಿಂದ ಅಂತಿಮ ನೋಟಿಸ್ ನೀಡಲಾಗಿತ್ತು ಹಾಗೂ ಅವರ ವಾಸ ಸ್ಥಳವಾದ ಶಿವಮೊಗ್ಗ ನಗರದ ವಿನೋಬನಗರದ ವಿಳಾಸಕ್ಕೆ ತೆರಳಿ ಮನೆಯ ಮಾಲೀಕರಿಗೆ ಹಾಗೂ ನೆರೆಹೊರೆಯವರನ್ನು ವಿಚಾರಿಸಿದಾಗ ಆ ಸ್ಥಳದಲ್ಲಿ ವಾಸವಿರುವುದಿಲ್ಲ ಎಂದು ತಿಳಿದು ಬಂದಿದ್ದು, ಕೂಡಲೇ ಸ್ಥಳ ಮಜರ್ ಮಾಡಿ 15-7-2025 ರಂದು ಶಿಕಾರಿಪುರ ವಲಯದ ಅಬಕಾರಿ ನಿರೀಕ್ಷಕರಿಗೆ ವರದಿಯನ್ನು ಸಲ್ಲಿಸಲಾಗಿದೆ.
ವರದಿ ಆಧಾರದಿಂದ ಸೋಮೇಶ್ವರ ಅವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದ್ದು, ಈ ಪ್ರಕಟಣೆ ಹೊರಡಿಸಿದ 15 ದಿನದೊಳಗೆ ಕಚೇರಿ ಹಾಜರಾಗಿ, ಗೈರು ಹಾಜರಾಗಿದ್ದಕ್ಕೆ ಸೂಕ್ತ ವಿವರಣೆ ಸಲ್ಲಿಸಬೇಕು. ತಪ್ಪಿದಲ್ಲಿ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು-1957 ರ ನಿಯಮಗಳಡಿಯಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುತ್ತದೆ ಎಂದು ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕಾರಿಪುರ ಅಬಕಾರಿ ಕಛೇರಿ ವಾಹನ ಚಾಲಕ ಅಮಾನತ್ತು, ಸಾರ್ವಜನಿಕ ನೋಟೀಸ್ ಪ್ರಕಟಣೆ
ಮೇದಾರ ಸಮುದಾಯದವರಿಂದ ನಿಗಮಕ್ಕೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ
ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ದಿ ನಿಗಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೇದಾರ ಸಮುದಾಯದಿಂದ 5 ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ವಾಸಿಸುತ್ತಿರುವ ಮೇದಾರ ಸಮುದಾಯಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ನ.15 ರಂದು ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-200266 ಗೆ ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಪಂಪ್ ಸೆಟ್ ವಿದ್ಯುತ್ ಸಂಪರ್ಕ. ಶಿವಮೊಗ್ಗ ತಾಲ್ಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗದ ಪ್ರಕಟಣೆ
ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು (ಘಟಕ-2) ಶಾಖಾ ವ್ಯಾಪ್ತಿಗೆ ಒಳಪಡುವ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಹಾಗೂ ಈ ಹಿಂದೆ ಗಂಗಾಕಲ್ಯಾಣ ಮತ್ತು ಎಸ್ಸಿಪಿ/ಟಿಎಸ್ಪಿ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕ ಪಡೆಯದ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆರ್ಟಿಸಿ, ಆಧಾರ್ ಕಾಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಫೋಟೋ, ಬಿಪಿಎಲ್ ರೇಷನ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಜೇರಾಕ್ಸ್, ಬೋರವೆಲ್ ಜೊತೆ ರೈತರ ಜಿಪಿಎಸ್ ಪೋಟೋ ಮತ್ತು ಫೋನ್ ನಂ.ಗಳನ್ನು ಲಗತ್ತಿಸಿ ನ.15 ರೊಳಗಾಗಿ ಸಲ್ಲಿಸುವಂತೆ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ತೀರ್ಥಹಳ್ಳಿ ಮೂಲದ ಗೃಹಿಣಿ ಪೂಜಾ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವು., ಕೊಲೆ ಆಪಾದನೆ ಮೇರೆಗೆ ಪತಿಯ ಬಂಧನ
ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರ ಮೂಲದ ಗೃಹಿಣಿ ಅನುಮಾನ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನ ವಿಷ ಕೊಟ್ಟು ಕೊನೆಗೆ ಯತ್ನಿಸಿರುವ ಆರೋಪ ನಡೆದಿದ್ದು ಚಿಕಿತ್ಸೆ ಫಲಕಾರಿಯಾಗದೇ ಗೃಹಿಣಿ ಪೂಜಾ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಶಂಕರಹಳ್ಳಿ ಈಶ್ವರಪ್ಪ ಎಂಬುವವರ ಪುತ್ರಿ ಪೂಜಾ ಅವರು ಮೂರು ವರ್ಷಗಳ ಹಿಂದೆ ಎನ್ ಆರ್ ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ಶರತ್ ಎಂಬುವರೊಂದಿಗೆ ವಿವಾಹವಾಗಿದ್ದರು.
ದಂಪತಿಗಳಿಗೆ ಎರಡು ವರ್ಷದ ಗಂಡು ಮಗುವಿದೆ. ಶರತ್ ತಂದೆ, ತಾಯಿ, ಶರತ್ ನ ಸಹೋದರಿ ಶಬರಿ ಸೇರಿ ಪೂಜಾಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಪೂಜಾಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಚಿಕ್ಕಮಗಳೂರಿನ ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Yadav School of Chess Training Institute ಶಿವಮೊಗ್ಗದ ಯಾದವ ಚೆಸ್ ತರಬೇತಿ ಸಂಸ್ಥೆಯಿಂದ ನವೆಂಬರ್ 8 ರಿಂದ ಚೆಸ್ ತರಬೇತಿ ಆರಂಭ
Yadav School of Chess Training Institute ಶಿವಮೊಗ್ಗದ ರವೀಂದ್ರ ನಗರದ ಯಾದವ ಸ್ಕೂಲ್ ಆಫ್ ಚೆಸ್ ತರಬೇತಿ ಸಂಸ್ಥೆಯಿಂದ ನವೆಂಬರ್ ೮ರಿಂದ ೨೦೨೬ರ ಫೆಬ್ರವರಿವರೆಗೆ ಪ್ರತಿ ಬುಧವಾರ ಮತ್ತು ಗುರುವಾರ ಗಳಂದು ಸಂಜೆ 6 ಗಂಟೆಗೆ, ಶನಿವಾರ ಮಧ್ಯಾಹ್ನ 3 ಮತ್ತು 4:30ಕ್ಕೆ, ಸಂಜೆ 6 ಗಂಟೆಗೆ ಹಾಗೂ ಭಾನುವಾರ ಬೆಳಿಗ್ಗೆ 10,11:30, ಸಂಜೆ ೪ ಹಾಗೂ 5:30ಗಂಟೆಗೆ ಬೇರೆ ಬೇರೆ ಬ್ಯಾಚ್ ಗಳಾಗಿ ತರಬೇತಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಪ್ರಾಣೇಶ್ ಯಾದವ ಮೊ.9242401702 ಮತ್ತು 9743819678ರಲ್ಲಿ ಸಂಪರ್ಕಿಸಲು ಅವರು ಕೋರಿದ್ದಾರೆ.
DC Shivamogga ಹಾವು ಕಡಿತವಾಗಿ ವ್ಯಕ್ತಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಾಗ ವೈದ್ಯರ ಗೈರು, ನಿರ್ಲಕ್ಷ್ಯ ಅಮೂಲಾಗ್ರ ವರದಿಗೆ ಸೂಚನೆ- “ಡೀಸಿ” ಗುರುದತ್ತ ಹೆಗಡೆ.
DC Shivamogga ಅನೇಕ ಹಾವು ಕಡಿತ ಪ್ರಕರಣಗಳಲ್ಲಿ ಚಿಕಿತ್ಸಾಲಯಗಳಲ್ಲಿ ಕರ್ತವ್ಯದ ಅವಧಿಯಲ್ಲಿ ವೈದ್ಯರಿಲ್ಲದಿರುವುದು, ವೈದ್ಯರ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದ್ದು, ಅದನ್ನು ಅಮೂಲಾಗ್ರವಾಗಿ ಪರಿಶೀಲಿಸಿ, ವಿಸ್ತೃತ ವರದಿ ನೀಡುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸೇವಾ ಅವಧಿಯಲ್ಲಿ ವೈದ್ಯರ ನಿರ್ಲಕ್ಷ್ಯವನ್ನು ಸಹಿಸಿಕೊಳ್ಳಲಾಗದು ಎಂದ ಅವರು ಸೇವೆಯಲ್ಲಿ ಲೋಪ ಕಂಡುಬಂದಲ್ಲಿ ಅಂತಹ ವೈದ್ಯಾಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅನಿವಾರ್ಯವಾಗಲಿದೆ ಎಂದವರು ನುಡಿದರು.
ಯಾವುದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವಾನಿತರ ವೈದ್ಯರು ರಜೆಯ ಮೇಲೆ ತೆರಳಿದ್ದಾಗ ಆ ಸ್ಥಳಕ್ಕೆ ಪರ್ಯಾಯ ವೈದ್ಯರನ್ನು ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ನಗರದ ಸಂಪರ್ಕದಿಂದ ದೂರವಿರುವ ಗ್ರಾಮಗಳಲ್ಲಿ ಸಂಭವಿಸಬಹುದಾದ ಹಾವು ಕಡಿತ ಪ್ರಕರಣಗಳಿಗೆ ತಕ್ಷಣದ ಚಿಕಿತ್ಸೆಗೆ ಕೈಗೊಳ್ಳಬಹುದಾದ ಪರ್ಯಾಯ ಕ್ರಮಗಳ ಬಗ್ಗೆಯೂ ಜಿಲ್ಲಾ ವೈದ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಅಧೀನ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಅವರು ಸೂಚಿಸಿದರು.
ಹೊಸನಗರ ತಾಲೂಕಿನ ಮತ್ತೂರಿನಲ್ಲಿನ ಹಾವು ಕಡಿತ ವ್ಯಕ್ತಿಯ ಚಿಕಿತ್ಸೆಗಾಗಿ 108 ವಾಹನದ ಸಿಬ್ಬಂದಿಗೆ ಕರೆಮಾಡಿದಾಗಿ ಕರೆಯನ್ನು ನಿರ್ಲಕ್ಷ್ಯ ಮಾಡಿದ್ದಲ್ಲದೆ ಅಮೂಲ್ಯ ಜೀವ ಉಳಿಸುವಲ್ಲಿ ತೋರಿದ ಅಸಹಕಾರಕ್ಕಾಗಿ ಅವರ ವಿರುದ್ಧ ದೂರು ದಾಖಲಿಸುವಂತೆ ಸೂಚಿಸಿದ ಅವರು, ತುರ್ತು ಸಂದರ್ಭದಲ್ಲಿ ವೈದ್ಯರು ಜವಾಬ್ದಾರಿಯರಿತು ಕಾರ್ಯನಿರ್ವಹಿಸಬೇಕು. ಮರಣಶೈಯ್ಯೆಯಲ್ಲಿರುವಾಗ ವೈದ್ಯ ಸಿಬ್ಬಂಧಿ ಚಿಕಿತ್ಸೆಗೆ ಧಾವಿಸಿ, ಅಮೂಲ್ಯ ಜೀವ ಉಳಿಸುವಲ್ಲಿ ಶ್ರಮಿಸಬೇಕು. ವಿಶೇಷವಾಗಿ ಹಾವು ಕಡಿತ ಪ್ರಕರಣಗಳಲ್ಲಿ ವೈದ್ಯರು ತುರ್ತು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
DC Shivamogga ರೋಗಿಯು ಯಾವುದೇ ಪರಿಸ್ಥಿತಿ, ಸಂದರ್ಭ, ಆತಂಕದಲ್ಲಿದ್ದರೂ ವೈದ್ಯರು ತಕ್ಷಣದ ಚಿಕಿತ್ಸಾ ಕ್ರಮಕ್ಕೆ ಮುಂದಾಗಬೇಕು. ಶಿಕಾರಿಪುರ ತಾಲೂಕಿನ ಹರಿಗೆಯಲ್ಲಿ ಮೃತ ವ್ಯಕ್ತಿಯ ಕುರಿತು ಕೂಡಲೇ ವರದಿ ನೀಡುವಂತೆಯೂ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದ ಅವರು ಹಾವು ಕಡಿತ ಪ್ರಕರಣಗಳಲ್ಲಿ ನಾಟಿ ವೈದ್ಯರು ಚಿಕಿತ್ಸೆ ನೀಡಬಾರದು. ನೀಡಿದ್ದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಯುವಜನರಲ್ಲಿ ತಂಬಾಕು ಬಳಕೆಯನ್ನು ನಿಯಂತ್ರಿಸಲು, ವಿಶ್ವ ತಂಬಾಕು ಮುಕ್ತ ಯುವ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅವಧಿಯಲ್ಲಿ ಜಿಲ್ಲೆಯ ಸುಮಾರು 1000ಕ್ಕೂ ಹೆಚ್ಚಿನ ಶಾಲೆಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದ ಅವರು, ಸಮೀಪದ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರನ್ನು ಕರೆಸಿ, ಉಪನ್ಯಾಸ ಹಾಗೂ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವಂತೆ ಸೂಚಿಸಿದರು.
ಅಲ್ಲದೇ ಮಂಗನಕಾಯಿಲೆಯಿಂದ ಬಾದಿತರಾಗುವ ಪ್ರದೇಶಗಳಲ್ಲಿ ಶಿಕ್ಷಕರು ಶಾಲಾ ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಚನೆಗಳನ್ನು ನೀಡಬೇಕು. ಶೂ-ಸಾಕ್ಸ್ಗಳನ್ನು ಧರಿಸಿರುವಂತೆ ಹಾಗೂ ಮಂಗನ ಸಾವು ಕಂಡುಬರುವ ಪ್ರದೇಶದಲ್ಲಿ ಓಡಾಟ ನಡೆಸದಂತೆ ಸೂಚನೆ ನೀಡುವ ಮೂಲಕ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಈ ಸಂಬಂಧ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಶಿವಮೊಗ್ಗದ ವಿವಿಧ ರಕ್ತನಿಧಿ ಕೇಂದ್ರಗಳಲ್ಲಿ ಸಂಗ್ರಹಿಸಲಾಗುವ ರಕ್ತವನ್ನು ನೆರೆಯ ಜಿಲ್ಲೆಗಳಿಗೆ ರವಾನಿಸುತ್ತಿರುವ ಬಗ್ಗೆ ಮಾಹಿತಿ ಇದೆ. ಜಿಲ್ಲೆಯ ರೋಗಿಗಳ ಅಗತ್ಯಕ್ಕೆ ತಕ್ಕಂತೆ ರಕ್ತವನ್ನು ನೀಡಿ ಸಹಕರಿಸಬೇಕು. ಅನಗತ್ಯವಾಗಿ ಬೇರೆ ಜಿಲ್ಲೆಗಳಿಗೆ ರಕ್ತ ಸರಬರಾಜು ಮಾಡುವುದನ್ನು ನಿಯಂತ್ರಿಸಬೇಕು ಎಂದವರು ತಾಕೀತು ಮಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ನಡೆಯುತ್ತಿರುವ ಕುಷ್ಟರೋಗ ಪತ್ತೆ ಅಭಿಯಾನ, ರೇಬಿಸ್ಪ್ರಥಮ ಚಿಕಿತ್ಸೆ ಹಾಗೂ ತಂಬಾಕು ಮುಕ್ತ ಅಭಿಯಾನದ ಕುರಿತು ಬಿತ್ತಿಪತ್ರವನ್ನು ಮಾನ್ಯ ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಪ್ರೊಬೇಷನರ್ಐಎಎಸ್ಅಧಿಕಾರಿ ನಾಗೇಂದ್ರಬಾಬು, ಹೆಚ್ಚುವರಿ ಪೊಲೀಸ್ಅಧೀಕ್ಷಕ ರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಟರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ನಾಗರಾಜನಾಯ್ಕ್ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Kannada Rajyotsava ರಾಜ್ಯೋತ್ಸವ ವಿಶೇಷವಾಗಿ ಸೈಕಲ್ ಜಾಥಾ & ‘ಹಚ್ಚೇವು ಕನ್ನಡದ ದೀಪ’ ಸಮೂಹ ಗಾಯನ ಕಾರ್ಯಕ್ರಮ
Kannada Rajyotsava ಕನ್ನಡ ರಾಜ್ಯೋತ್ಸವ ಅಂಗವಾಗಿ ಎವಿಎಲ್ಜಿಐ ಸಂಸ್ಥೆ ಶಿವಮೊಗ್ಗ ವಿಂಗ್ ವತಿಯಿಂದ ನ.2ರಂದು ಬೆಳಗ್ಗೆ 10ಕ್ಕೆ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ವಿದ್ಯಾನಗರದಲ್ಲಿ ಬಿ.ಹೆಚ್. ರಸ್ತೆಯ ಫ್ಲೈಓವರ್ ಬಳಿಯ ಆಂಜನೇಯ ದೇವಾಲಯದಿಂದ ಬೈಕ್ ಜಾಥಾ ಹೊರಡಲಿದೆ. ಬೆಕ್ಕಿನ ಕಲ್ಮಠ, ಎಸ್ಪಿಎಂ ರಸ್ತೆ, ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ ಮೂಲಕ ಗೋಪಿ ವೃತ್ತದಲ್ಲಿ ಸಮಾರೋಪಗೊಳ್ಳಲಿದೆ. ಬಳಿಕ ಗೋಪಿ ವೃತ್ತದಲ್ಲಿ “ಹಚ್ಚೇವು ಕನ್ನಡದ ದೀಪ” ಎಂಬ ಸಮೂಹ ಗೀತಾ ಗಾಯನ ಕಾರ್ಯಕ್ರಮ ಲಕ್ಷ್ಮೀ ಮಹೇಶ್ ನೇತೃತ್ವದಲ್ಲಿ ಆಯೋಜಿಸಲಾಗಿದೆ ಎಂದು ಎವಿಎಲ್ಜಿಐ ಸಂಸ್ಥೆ ಶಿವಮೊಗ್ಗ ವಿಂಗ್ ಅಧ್ಯಕ್ಷೆ ಸುಷ್ಮಾ ಅರವಿಂದ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 7204200900, 7829567944 ಸಂಪರ್ಕಿಸಬಹುದಾಗಿದೆ.
Natanam Bala Natya Kendra ಶಿವಮೊಗ್ಗ “ನಟನಂ” ಕೇಂದ್ರದ ಗುರು ಡಾ.ಕೇಶವ ಕುಮಾರ ಪಿಳ್ಳೈ ಅವರಿಗೆ ಉಡುಪಿಯಲ್ಲಿ ಸನ್ಮಾನ
Natanam Bala Natya Kendra ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ ಗುರುಗಳಾದ ಕರ್ನಾಟಕ ಕಲಾಶ್ರೀ, ವಿದ್ವಾನ್ ಡಾ ಕೇಶವ್ ಕುಮಾರ ಪಿಳ್ಳೈ ಅವರ ಕಲಾ ಸೇವೆಯನ್ನು ಗುರುತಿಸಿ ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಸನ್ಮಾನಿಸಿದರು.
ಉಡುಪಿಯ ಮಠದ ಶ್ರೀ ರಾಜಾಂಗಣ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕೇಶವಕುಮಾರ ಪಿಳೈ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.
ಶಾಸ್ತ್ರ ಗ್ರಂಥಗಳೊಂದಿಗೆ ಅಲ್ಲಿನ ಭರತನಾಟ್ಯ ಕಲಾವಿಧರು, ಕಲಾಭಿಮಾನಿಗಳು, ವಿದ್ಯಾರ್ಥಿಗಳು, ಪೋಷಕರನ್ನು ಉಪಸ್ಥಿತರಿದ್ದ ಅಷ್ಟಮಠದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಅಂತೆಯೇ 23ನೇ ವರ್ಷದ ಭರತಮುನಿ ಜಯಂತೋತ್ಸವದ ಅಂಗವಾಗಿ ಅವರನ್ನು ಸನ್ಮಾನಿಸಲಾಯಿತು.
CM Siddharamaiah ಜನಸಾಮಾನ್ಯರ ಸಮಸ್ಯೆ ಪರಿಹರಿಸಲು 100 ಕಾನೂನುಗಳನ್ನ ಜಾರಿಗೆ ತರಲಾಗಿದೆ- ಸಿದ್ಧರಾಮಯ್ಯ
CM Siddharamaiah ಜನಸಾಮಾನ್ಯರ ಸಮಸ್ಯೆ ಪರಿಹರಿಸಲು 100 ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ವಿಕಾಸಸೌಧದಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಅವರು ಹಮ್ಮಿಕೊಂಡಿದ್ದ “ನೂರು ಕಾನೂನುಗಳು-ನೂರು ಅಭಿಮತಗಳು” ಮೂರು ಸಂಪುಟಗಳ ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಸರ್ಕಾರ ಬಂದ ಮೇಲೆ ಜನತೆಗೆ ಕೊಟ್ಟಿರುವ ಆಶ್ವಾಸನೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯವಾಗಿದೆ.
ಈ ನಿಟ್ಟಿನಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಎಚ್.ಕೆ ಪಾಟೀಲ್ ಅವರ ನೇತೃತ್ವದಲ್ಲಿ ಪರಿಣಿತ ತಜ್ಣರ ಅಭಿಮತ ಪಡೆದು ಸುಮಾರು “ನೂರು ಕಾನೂನು”ಗಳನ್ನು ಜಾರಿಗೊಳಿಸಿದ್ದೇವೆ. ನಾವು ಜಾರಿಗೊಳಿಸಿರುವ ಕಾನೂನುಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಜನಪರವಾಗಿರಬೇಕು. ಜನರಿಗೆ ಪರಿಹಾರವಾಗಿ ಕೆಲಸ ಮಾಡಬೇಕು.ಇಲ್ಲದಿದ್ದರೆ ಪ್ರಯೋಜನವಾಗುವುದಿಲ್ಲ. ಈ ಕಾನೂನುಗಳು ಜನರಿಗೆ ಮುಟ್ಟಬೇಕು. ಜನರು ಅವುಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಈ ಹಿಂದೆ ಮುಖ್ಯಮಂತ್ರಿ ಯಾಗಿದ್ದಾಗ ಮೌಢ್ಯಗಳ ಪ್ರತಿಬಂಧಕಾಜ್ಣೆ ಕುರಿತ ಕಾನೂನು ಜಾರಿ ಮಾಡಲಾಗಿತ್ತು. ಆದರೆ ಆ ಕಾನೂನು ಪರಿಣಾಮಕಾರಿಯಾಗಿ ಜಾರಿಯಾಗಲಿಲ್ಲ ಎಂಬ ವಸ್ತುಸ್ಥಿತಿ ಕಾಣುತ್ತಿದ್ದೇವೆ. ಕಾನೂನು ತಿಳುವಳಿಕೆ ಇರುವವರೆ ಮೌಢ್ಯ ಕಂದಾಚಾರವನ್ನು ಆಚರಿಸುತ್ತಾರೆ. ವಿದ್ಯಾವಂತರೆ ಮೂಡನಂಬಿಕೆ ಪಾಲಿಸುತ್ತಾರೆ. ಇನ್ನೂ ಜಾತಿಪದ್ಧತಿ ಜೀವಂತವಾಗಿದೆ. ಶೇ.76.ರಷ್ಟು ಜನ ವಿದ್ಯಾವಂತರಾಗಿದ್ದಾರೆ. ಶೇ.24 ರಷ್ಟು ಅವಿದ್ಯಾವಂತರಿದ್ದಾರೆ. ಎಲ್ಲರೂ ವಿದ್ಯಾವಂತರಾಗಿ ಅಸಮಾನತೆ ಹೋಗಲಾಡಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ” ಶಾಸನಾತ್ಮಕ (ಶಾಸನ ರಚನೆ) ಪ್ರಾರೂಪಣಾ ಕೈಪಿಡಿ ” ಬಿಡುಗಡೆ ಮಾಡಿದರು.
ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿ,ನಮ್ಮ ಮುಖ್ಯಮಂತ್ರಿಗಳು ವಿಶೇಷ ಕಾರ್ಯಕ್ರಮಗಳನ್ನು ಕರ್ನಾಟಕದ ಜನತೆಗೆ ನೀಡಿದ್ದಾರೆ. ಈಗ ಕಾನೂನುಗಳನ್ನು ಜಾರಿ ಮಾಡುವ ಮೂಲಕ ಕಾನೂನು ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಕಾರಣರಾಗಿದ್ದಾರೆ.
ವಿಧಾನಸಭೆ- ವಿಧಾನಪರಿಷತ್ ನಲ್ಲಿ ಕಾನೂನು ಮಂಡನೆ ಮಾಡಿ,ಅವುಗಳನ್ನು ಜನರ ಸೇವೆಗೆ ಲಭ್ಯಗೊಳಿಸಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ
ಕಾನೂನು ಸಂಶೋಧಕರು, ತಜ್ಞರು ಮತ್ತು ಪ್ರವರ್ತಕರು ರಚಿಸಿದ 105 ಕರಡು ಮಾದರಿ ಮಸೂದೆಗಳನ್ನು ಮುಖ್ಯಮಂತ್ರಿಗಳಿಗೆ ಅರ್ಪಿಸಿದರು.
CM Siddharamaiah ವಿಧಾನ ಪರಿಷತ್ ಸಭಾಪತಿಯವರಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಕರ್ನಾಟಕದಲ್ಲಿ ಇದು ಅತ್ಯಂತ ಶ್ರೇಷ್ಠವಾದ ಕೆಲಸ. ವಿಧಾನಮಂಡಲಗಳು ಅತ್ಯಧಿಕ ಶಾಸನಾತ್ಮಕ ಕಾನೂನು ನಿರ್ವಹಿಸಿದೆ. ಸರ್ಕಾರ ಕಾನೂನನ್ನು ಪರಿಷ್ಕರಿಸಿ ತನ್ನ ಉದ್ದೇಶವನ್ನು ಅತ್ಯುತ್ತಮವಾಗಿ ನೆರವೇರಿಸಿದೆ. ಸಮಾಜವು ವೇಗವಾಗಿ ಬದಲಾಗುತ್ತಿರುವುದರಿಂದ ಕಾನೂನು ಸಹ ಅದರೊಂದಿಗೆ ಹೆಜ್ಜೆ ಹಾಕಬೇಕು. ನಮ್ಮಲ್ಲಿರುವ ಕಾನೂನು ಮತ್ತು ತಜ್ಞರು ಬೇರೆ ಯಾವುದೇ ದೇಶದಲ್ಲಿ ಇಲ್ಲ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಅಶೋಕ್ ಬಿ. ಹಿಂಚಿಗೇರಿ,ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್, ಕರ್ನಾಟ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಸಂಶೋಧನಾ ಮುಖ್ಯಸ್ಥರಾದ ಡಾ.ರೇವಯ್ಯ ಒಡೆಯರ್, ನಿರ್ದೇಶಕರಾದ ಪ್ರೊ.ಸಿ.ಎಸ್.ಪಾಟೀಲ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
Karnataka Academy of Science and Technology ನವೆಂಬರ್ 11 ರಿಂದ ಸಂಶೋಧನೆ ಮತ್ತು ದತ್ತಾಂಶ ವಿಶ್ಲೇಷಣೆ ಕುರಿತು ಕಾರ್ಯಾಗಾರ, ಆಸಕ್ತರು ನ.5 ರೊಳಗೆ ನೋಂದಣಿ ಮಾಡಬಹುದು
Karnataka Academy of Science and Technology ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಅಕಾಡೆಮಿ ಕಚೇರಿಯಲ್ಲಿ ನ.11 ರಿಂದ 15 ರವರೆಗೆ “ಸಂಶೋಧನೆ, ಪ್ರಕಟಣೆ ನೀತಿಶಾಸ್ತ್ರ ಮತ್ತು ದತ್ತಾಂಶ ವಿಶ್ಲೇಷಣೆ” ಕುರಿತು 5 ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದು, ಆಸಕ್ತ ವಿಜ್ಞಾನ ಪದವಿ, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು/ಪ್ರಾಧ್ಯಾಪಕರು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಬಹುದಾಗಿದ್ದು, ಆಸಕ್ತರು ನ.05 ರೊಳಗೆ https://forms.gle/UNrBg9wiBzgQBMVD6 ಮೂಲಕ ನೊಂದಾಯಿಸಿಕೊಳ್ಳುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್.ಆರ್ ತಿಳಿಸಿದ್ದಾರೆ.
Karnataka Academy of Science and Technology ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರ ಸಂಯೋಜಕ ಶ್ರೀನಿವಾಸು ವಿ.ಕೆ- ದೂ.ಸಂ;9620767819 ಅಥವಾ ವೆಬ್ಸೈಟ್ https://kstacademy.in ಸಂಪರ್ಕಿಸುವುದು.
